ದೇವಾಲಯ-ಹೋಟೆಲ್‌ ಪುನಾರಂಭ

ದುರ್ಗಾಂಬಿಕಾ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಸಿ

Team Udayavani, Jun 9, 2020, 3:14 PM IST

ದೇವಾಲಯ-ಹೋಟೆಲ್‌ ಪುನಾರಂಭ

ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನ ಸೋಮವಾರದಿಂದ ಪುನಾರಂಭಗೊಂಡಿದ್ದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಪೂಜೆ ಸಲ್ಲಿಸಿದರು.

ದಾವಣಗೆರೆ: ಕೋವಿಡ್ ವೈರಸ್‌ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ 5.0 ನಡುವೆ ಸೋಮವಾರದಿಂದ ದೇವಸ್ಥಾನ, ಹೋಟೆಲ್‌, ರೆಸ್ಟೋರೆಂಟ್‌
ಪುನಾರಂಭಗೊಂಡವು. ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನ, ಹಳೇಪೇಟೆಯ ಶ್ರೀ ವೀರಭದ್ರಸ್ವಾಮಿ ದೇವಸ್ಥಾನ, ದೊಡ್ಡಪೇಟೆಯ ಐತಿಹಾಸಿಕ ವಿರಕ್ತ ಮಠ, ನಿಟುವಳ್ಳಿ ಗ್ರಾಮ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನ, ಕೆ.ಬಿ. ಬಡಾವಣೆ, ವಿನೋಬ ನಗರ 2ನೇ ಮುಖ್ಯ ರಸ್ತೆಯಲ್ಲಿನ ಶ್ರೀ ಗಣೇಶ ದೇವಸ್ಥಾನ ಒಳಗೊಂಡಂತೆ ಅನೇಕ ದೇವಸ್ಥಾನಗಳು ಭಕ್ತರ ದರ್ಶನಕ್ಕೆ ಸಜ್ಜಾಗಿವೆ. ದುಗ್ಗಮ್ಮನ ದೇವಸ್ಥಾನದಲ್ಲಿ ಬೆಳಗ್ಗೆ ಪಂಚಾಮೃತಾಭಿಷೇಕ, ವಿಶೇಷ ಪೂಜೆ-ಪುನಸ್ಕಾರ ನೆರವೇರಿಸಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ವಿಶೇಷ ಪೂಜೆ ಸಲ್ಲಿಸಿ, ಕೊರೊನಾ ನಿರ್ಮೂಲನೆಗೆ ಪ್ರಾರ್ಥಿಸಿದರು. ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಪತ್ನಿ ಡಾ| ಪ್ರಭಾ ಮಲ್ಲಿಕಾರ್ಜುನ್‌ ಒಳಗೊಂಡಂತೆ ಅನೇಕರು ದೇವಿಯ ದರ್ಶನ ಪಡೆದರು.

ಕೊರೊನಾ ವೈರಸ್‌ ವ್ಯಾಪಿಸುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಕ್ ಧರಿಸಿದವರಿಗೆ ಮಾತ್ರವೇ ದೇವಸ್ಥಾನದ ಪ್ರವೇಶಕ್ಕೆ ಅವಕಾಶ ನೀಡಲಾಯಿತು. ಮಾಸ್ಕ್ ಇಲ್ಲದವರಿಗೆ ಅವಕಾಶ
ನೀಡದೆ ವಾಪಸ್‌ ಕಳುಹಿಸಲಾಯಿತು. ದಾವಣಗೆರೆಯಲ್ಲಿ ಬಹು ದಿನಗಳ ನಂತರ ಹೋಟೆಲ್‌, ರೆಸ್ಟೋರೆಂಟ್‌ ಪುನಾರಂಭಗೊಂಡವು. ಶರಭೇಶ್ವರ ಊಟದ  ಹೋಟೆಲ್‌ ಒಳಗೊಂಡಂತೆ ಎಲ್ಲಾ ಕಡೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಾಗಿತ್ತು. ಬಂದಂತಹ ಗ್ರಾಹಕರ ಟೆಂಪರೇಚರ್‌ ಚೆಕ್‌ ಮಾಡಿ, ಹೆಸರು, ವಿಳಾಸ, ಮೊಬೈಲ್‌ ನಂಬರ್‌ ಮಾಹಿತಿ ಬರೆದುಕೊಂಡ ನಂತರವೇ ಹೋಟೆಲ್‌ ಒಳಗೆ ಬಿಡಲಾಯಿತು. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಶರಭೇಶ್ವರ ಹೋಟೆಲ್‌ನಲ್ಲಿ ಗಾಜಿನ ವ್ಯವಸ್ಥೆ ಮಾಡಲಾಗಿದೆ. ಗ್ರಾಹಕರ ಆರೋಗ್ಯ, ಸುರಕ್ಷತೆಯೇ ಮುಖ್ಯ. ಸಾಮಾಜಿಕ ಅಂತರ ಒಳಗೊಂಡಂತೆ ಎಲ್ಲಾ ಅಗತ್ಯ ಸುರಕ್ಷಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮಾಲೀಕ ಬಸವರಾಜಯ್ಯ ಮಾಹಿತಿ ನೀಡಿದರು.

ದೇವಿ ದರ್ಶನ ನಿಂತ ನಿದರ್ಶನ ಇರಲಿಲ್ಲ
ತಮ್ಮ ಅನುಭವದಲ್ಲೇ 76 ದಿನಗಳಷ್ಟು ದೀರ್ಘ‌ಕಾಲ ದೇವಿಯ ದರ್ಶನ ನಿಂತಿದ್ದ ಉದಾಹರಣೆಯೇ ಇರಲಿಲ್ಲ. ಇದೇ ಮೊದಲ ಬಾರಿಗೆ ದೇವಿಯ ದರ್ಶನಕ್ಕೆ ಅವಕಾಶ ಇರಲಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಅನಿವಾರ್ಯ. ಮುಂದೆ ಹೊಂದಿಕೊಂಡೇ ಹೋಗಬೇಕಾಗಿದೆ. ಎಲ್ಲರಿಗೂ ಒಳ್ಳೆಯದಾಗಲಿ. ಮಹಾಮಾರಿ ಕೋವಿಡ್ ಮುಕ್ತ ವಾತಾವರಣ ನಿರ್ಮಾಣವಾಗಲಿ ಎಂದು ಪ್ರಾರ್ಥಿಸಿ, ಪೂಜೆ ನೆರವೇರಿಸಲಾಯಿತು ಎಂದು ಅರ್ಚಕರಾದ ಜೀವನ್‌, ಚನ್ನೇಶ್‌, ವಿಶ್ವನಾಥ್‌ ಶಾಸ್ತ್ರಿ ತಿಳಿಸಿದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.