ಶಿಕ್ಷಕರ ರಜಾ ನೆಮ್ಮದಿಗೆ ತರಬೇತಿ ಭಂಗ!


Team Udayavani, Apr 15, 2022, 10:53 AM IST

3

ದಾವಣಗೆರೆ: ಶಿಕ್ಷಣ ಇಲಾಖೆ ಮುಂದಿನ ಶೈಕ್ಷಣಿಕ ಸಾಲಿನಿಂದ “ಕಲಿಕಾ ಚೇತರಿಕೆ’ ಕಾರ್ಯಕ್ರಮ ಅನುಷ್ಠಾನಗೊಳಿಸಲು ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಇದರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಈ ಬಾರಿ “ಬೇಸಿಗೆ ರಜೆಯ ನೆಮ್ಮದಿ’ ಇಲ್ಲದಂತಾಗಿದೆ.

ಕೊರೊನಾ ಕಾರಣದಿಂದ ಕಳೆದೆರಡು ವರ್ಷ ಬೇಸಿಗೆ ರಜಾ ಅವಧಿಯಲ್ಲಿ ಎಲ್ಲಿಯೂ ಯಾರಿಗೂ ಮುಕ್ತವಾಗಿ ಪ್ರವಾಸ ಕೈಗೊಳ್ಳಲಾಗಿಲ್ಲ. ಇದಕ್ಕೆ ಶಿಕ್ಷಕ ವರ್ಗವೂ ಹೊರತಾಗಿಲ್ಲ. ಈ ಸಲದ ರಜೆಯಲ್ಲಾದರೂ ಮಕ್ಕಳು, ಕುಟುಂಬಸ್ಥರು, ಬಂಧು, ಸ್ನೇಹಿತರೊಂದಿಗೆ ಪ್ರವಾಸ ಕೈಗೊಳ್ಳಬೇಕೆಂದುಕೊಂಡ ಶಿಕ್ಷಕರ ಯೋಜನೆಗೆ “ಕಲಿಕಾ ಚೇತರಿಕೆ’ ತರಬೇತಿ ತಣ್ಣೀರೆರಚಿದಂತಾಗಿದೆ.

ಶಿಕ್ಷಣ ಇಲಾಖೆ ಹಮ್ಮಿಕೊಂಡ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕಾಗಿ ಇಲಾಖೆ ಈ ವರ್ಷ 15 ದಿನ ಮೊದಲೇ ಶೈಕ್ಷಣಿಕ ವರ್ಷ ಆರಂಭಿಸಲು ನಿರ್ಧರಿಸಿದೆ. ಶಾಲಾ ರಜೆಗೂ ಮುನ್ನವೇ ರಾಜ್ಯ ಮಟ್ಟದಲ್ಲಿ ಉಪನಿರ್ದೇಶಕರು (ಅಭಿವೃದ್ಧಿ ಮತ್ತು ಆಡಳಿತ), ಡಯಟ್‌ನ ಕಲಿಕಾ ಚೇತರಿಕೆ ನೋಡಲ್‌ ಅಧಿಕಾರಿಗಳಿಗೆ, ಶಾಲಾ ಶಿಕ್ಷಕರ ಸಂಘಗಳ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳಿಗೆ, ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಲಾಗಿದೆ. ಆದರೆ ಈಗಿನ ಶಾಲಾ ರಜೆ ಅವಧಿಯಲ್ಲಿ ಜಿಲ್ಲಾ ಹಂತ ಹಾಗೂ ಬ್ಲಾಕ್‌ ಹಂತದ ತರಬೇತಿ ನಡೆಸಲು ಮುಂದಾಗಿರುವುದು ರಜೆಯ ಮೂಡ್‌ನ‌ಲ್ಲಿದ್ದ ಶಿಕ್ಷಕರಿಗೆ ನಿರಾಸೆ ಮೂಡಿಸಿದೆ.

ರಾಜ್ಯದ ಪತ್ರಿಯೊಂದು ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರಿಗೆ ಮೇ 10ರೊಳಗೆ ತರಬೇತಿ ನೀಡಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಯೋಜನೆ ಹಾಕಿಕೊಂಡಿದೆ. 40 ಶಿಕ್ಷಕರನ್ನು ಒಂದು ತಂಡ ಮಾಡಿ ಸಂಪನ್ಮೂಲ ವ್ಯಕ್ತಿಗಳ ಮೂಲಕ ಎರಡು ದಿನಗಳ ತರಬೇತಿ ನೀಡಲು ಇಲಾಖೆ ಏ.13ರಂದು ಸ್ಪಷ್ಟ ಮಾರ್ಗದರ್ಶಿ ನಿರ್ದೇಶನವನ್ನೂ ನೀಡಿದೆ. ತರಬೇತಿ ಕೇವಲ ಎರಡೇ ದಿನಗಳದ್ದಾದರೂ ಯಾವ ಶಿಕ್ಷಕರಿಗೆ ಯಾವ ದಿನ ತರಬೇತಿ ಬರುತ್ತದೆ ಎಂಬುದು ಇನ್ನಷ್ಟೇ ತರಬೇತಿ ದಿನಾಂಕ ಪಟ್ಟಿ ಸಿದ್ಧವಾಗಬೇಕಿದೆ. ಆದ್ದರಿಂದ ಶಿಕ್ಷಕರು ರಜೆಯ ನೆಮ್ಮದಿ ಇಲ್ಲದೇ ತರಬೇತಿಯ ದಿನಾಂಕದ ನಿರೀಕ್ಷೆಯಲ್ಲೇ ದಿನ ಕಳೆಯುವಂತಾಗಿದೆ.

ತರಬೇತಿ ದಿನಾಂಕವಾದರೂ ತಕ್ಷಣ ನಿಗದಿಪಡಿಸಿದರೆ ಆ ದಿನಾಂಕ ಬಿಟ್ಟು ತಮ್ಮ ರಜೆಯ ವೇಳಾಪಟ್ಟಿ ಹಾಕಿಕೊಳ್ಳಬಹುದು ಎಂದು ಕೆಲ ಶಿಕ್ಷಕರು ಅಪೇಕ್ಷಿಸಿದರೆ, ಇನ್ನು ಕೆಲವು ಶಿಕ್ಷಕರು ಶಾಲಾ ವೇಳೆಯಲ್ಲೇ ಮಾಡಿದರೆ ಒಳಿತು ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಮತ್ತೆ ಕೆಲವರು ಶಾಲಾ ಪುನಾರಂಭದ ಕೊನೆಯ ಎರಡು ದಿನ ತರಬೇತಿ ದಿನಾಂಕ ನಿಗದಿಪಡಿಸಿದರೆ ಅಲ್ಲಿವರೆಗಾದರೂ ನೆಮ್ಮದಿಯಿಂದ ರಜೆ ಕಳೆಯಬಹುದು ಎನ್ನುತ್ತಿದ್ದಾರೆ.

ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಶಿಕ್ಷಕರಿಗೆ ಅಗತ್ಯ ತರಬೇತಿಯನ್ನು ಶಾಲಾ ಅವಧಿಯಲ್ಲೇ ನೀಡಬೇಕಿತ್ತು. ರಜಾ ದಿನದ ತರಬೇತಿಯಲ್ಲಿ ಶಿಕ್ಷಕರು ದೈಹಿಕವಾಗಿ ಭಾಗವಹಿಸಿದರೂ ಮಾನಸಿಕವಾಗಿ ಖುಷಿಯಾಗಿ ಭಾಗವಹಿಸುವುದಿಲ್ಲ. ಈ ವರ್ಷ 15 ದಿನ ಮೊದಲೇ ಶಾಲೆ ಪುನಾರಂಭ ಮಾಡುವ ಜತೆಗೆ ರಜೆಯಲ್ಲಿಯೇ ತರಬೇತಿಯನ್ನೂ ಹಮ್ಮಿಕೊಂಡಿರುವುದು ಸರಿಯಲ್ಲ. ಇದರಿಂದ ಶಿಕ್ಷಕರಿಗೆ ರಜೆ ಇದ್ದೂ ಇಲ್ಲದಂತಾಗುತ್ತದೆ. ● ಹೆಸರು ಹೇಳಲಿಚ್ಛಿಸದ ಶಿಕ್ಷಕ

ಇದು ಇಡೀ ರಾಜ್ಯದಲ್ಲಿರುವ ಎಲ್ಲ ಶಿಕ್ಷಕರ ಸಮಸ್ಯೆ. ಮೇ 10ರೊಳಗೆ ಎಲ್ಲ ಶಿಕ್ಷಕರಿಗೆ ತರಬೇತಿ ನೀಡಲು ಡಯಟ್‌ನವರು ಯೋಜನೆ ಹಾಕಿಕೊಂಡಿದ್ದಾರೆ. ಇದರಿಂದ ತಮ್ಮ ಊರಿಗೆ, ಪ್ರವಾಸಕ್ಕೆ ತೆರಳಿರುವ ಶಿಕ್ಷಕರಿಗೆ, ತೆರಳಲು ಯೋಜನೆ ಹಾಕಿಕೊಂಡಿರುವ ಶಿಕ್ಷಕರಿಗೆ ತೊಂದರೆಯಾಗುತ್ತದೆ. ● ರವಿ ಗೋಣೆಪ್ಪನವರ, ಜಿಲ್ಲಾ ಕಾರ್ಯದರ್ಶಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಹಾವೇರಿ

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.