ಕುರುಬ ಸಮಾಜದ ಇತಿಹಾಸ ಅರ್ಥೈಸುವಿಕೆ ಅಗತ್ಯ; ಶಾಸಕ ಎಸ್‌. ರಾಮಪ್ಪ

ಜಾಗತೀಕರಣದ ಸಂದರ್ಭದಲ್ಲಿ ಕುಲ ಚಿನ್ಹೆಗಳನ್ನು ಉಳಿಸಿಕೊಳ್ಳಬೇಕಾಗಿದೆ.

Team Udayavani, Jul 18, 2022, 6:09 PM IST

ಕುರುಬ ಸಮಾಜದ ಇತಿಹಾಸ ಅರ್ಥೈಸುವಿಕೆ ಅಗತ್ಯ; ಶಾಸಕ ಎಸ್‌. ರಾಮಪ್ಪ

ದಾವಣಗೆರೆ: ರಾಜ್ಯದಲ್ಲಿ ಮೂರನೇ ಅತಿ ದೊಡ್ಡ ಹಿಂದುಳಿದ ಸಮಾಜವಾಗಿರುವ ಕುರುಬ ಸಮಾಜದ ಇತಿಹಾಸದ ಬಗ್ಗೆ ಈಗಿನ ಪೀಳಿಗೆಗೆ ತಿಳಿಸಲು ಗ್ರಂಥಗಳ ಅಧ್ಯಯನದ ಅಗತ್ಯವಿದೆ ಎಂದು ಹರಿಹರ ಶಾಸಕ ಎಸ್‌. ರಾಮಪ್ಪ ಹೇಳಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಕುರುಬರ ಸಾಂಸ್ಕೃತಿಕ ಪರಿಷತ್ತು ಹಾಗೂ ಜಿಲ್ಲಾ ಕುರುಬ ಸಮಾಜದ ಎಲ್ಲ ಸಂಘಟನೆಗಳ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಕುರುಬರ ಸಂಸ್ಕೃತಿ ದರ್ಶನ ಮಾಲಿಕೆಯ 13 ಗ್ರಂಥಗಳ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುರುಬ ಸಮಾಜದ ಅನೇಕರಿಗೆ ಸಮಾಜದ ಇತಿಹಾಸ ಅಷ್ಟಾಗಿ ಗೊತ್ತಿಲ್ಲ. ನಮ್ಮ ಸಮಾಜದ ಇತಿಹಾಸ, ಪುರಾಣ, ದೇವರು, ಸಾಮಾಜಿಕ ಕೊಡುಗೆ ಇತರೆ ಮುಖ್ಯವಾದ ವಿಚಾರಗಳನ್ನು ತಿಳಿಸಬೇಕಾಗಿದೆ ಎಂದರು.

ಕುರುಬ ಸಮಾಜದ ಅನೇಕ ಜನರಿಗೆ ಇತಿಹಾಸವೇ ತಿಳಿದಿಲ್ಲ. 12 ವರ್ಷಗಳ ಬಳಿಕ ಹೊರ ಬಂದಿರುವ ಎಲ್ಲ 13 ಗ್ರಂಥಗಳನ್ನು ಸಮಾಜದ ಪ್ರತಿಯೊಬ್ಬರೂ ಓದಬೇಕು. ಸಮಾಜದ ಸಾಧನೆಯನ್ನು ಮಕ್ಕಳಿಗೂ ಮುಟ್ಟಿಸಬೇಕು. ಕುರುಬ ಸಮಾಜದಲ್ಲಿ ಕಾಳಿದಾಸ, ಕನಕದಾಸ ಹಾಗೂ ಸಂಗೊಳ್ಳಿ ರಾಯಣ್ಣ ಮೊದಲಾದ ಸಮಾಜದ ಪ್ರಮುಖರು ಕುರುಬರನ್ನು ಮಾತ್ರವಲ್ಲದೆ ಇತರೆ ಸಮಾಜದವರನ್ನೂ ಎಚ್ಚರಿಸಿದ್ದಾರೆ ಹಾಗೂ ಮಾರ್ಗದರ್ಶನ ನೀಡಿದ್ದಾರೆ.

ಅಂತಹ ಎಲ್ಲ ಮಹನೀಯರು, ಇತಿಹಾಸ ತಿಳಿಸಲು ಗ್ರಂಥಗಳು ಬಹಳ ಪ್ರಯೋಜನಕಾರಿ ಎಂದು ಅಭಿಪ್ರಾಯಪಟ್ಟರು. ದಾವಣಗೆರೆಯಲ್ಲಿ ಆ. 3ರಂದು ನಡೆಯಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನದ ಅಮೃತಮಹೋತ್ಸವದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಜಾನಪದ ತಜ್ಞ ಡಾ| ಮಲ್ಲಿಕಾರ್ಜುನ ಕಲಮರಹಳ್ಳಿ ಮಾತನಾಡಿ, ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮ ಸಮುದಾಯಗಳ ಸಮನ್ವಯತೆಗೆ ಸಾಕ್ಷಿಯಾಗಿದೆ. ಕುರುಬ ಸಮಾಜದ 10 ಸಂಪುಟದಲ್ಲಿ ಕುಲದ ಚರಿತ್ರೆ ಅನಾವರಣಗೊಳಿಸಿರುವುದು ಪ್ರತಿ ಸಂಸ್ಕೃತಿಯ ನಿರ್ಮಾಣವಾಗಿದೆ. ಎಲ್ಲ ತಳ ಸಮುದಾಯಗಳು ತಮ್ಮ ಕುಲದ ಚರಿತ್ರೆಯನ್ನು ಕಟ್ಟಿಕೊಳ್ಳಬೇಕಾದ ಅನಿವಾರ್ಯತೆ ಇದೆ.

ಜಾಗತೀಕರಣದ ಸಂದರ್ಭದಲ್ಲಿ ಕುಲ ಚಿನ್ಹೆಗಳನ್ನು ಉಳಿಸಿಕೊಳ್ಳಬೇಕಾಗಿದೆ. ಕಂಬಳಿ ಎಂಬುದು ತುಪ್ಪಳದ ವಸ್ತು ಮಾತ್ರವಲ್ಲ. ಸಾಂಸ್ಕೃತಿಕ ಗುರುತು. ದಾವಣಗೆರೆಯಲ್ಲಿ ತಯಾರಾಗುತ್ತಿದ್ದ ಕಂಬಳಿ ಈಸ್ಟ್‌ ಇಂಡಿಯಾ ಕಂಪನಿಗೂ ರವಾನೆಯಾಗುತ್ತಿತ್ತು ಎಂಬುದಾಗಿ 200 ವರ್ಷದ ಹಿಂದೆ ದಾವಣಗೆರೆಗೆ ಭೇಟಿ ನೀಡಿದ್ದ ಫ್ರಾನ್ಸಿಸ್‌ ಬುಕನನ್‌ ವಿವರಿಸಿದ್ದಾರೆ. ಸಮಾಜದ ಸಾಂಸ್ಕೃತಿಕ ಬೇರನ್ನು ಗುರುತಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಕುರುಬರ ಸಾಂಸ್ಕೃತಿಕ ಪರಿಷತ್ತು ಅಧ್ಯಕ್ಷ, ಮಾಜಿ ಸಚಿವ ಎಚ್‌.ಎಂ. ರೇವಣ್ಣ ಅಧ್ಯಕ್ಷತೆ ವಹಿಸಿದ್ದರು. ಕುಲಗುರುಗಳಾದ ಡಾ| ನಾ. ಲೋಕೇಶ್‌ ಒಡೆಯರ್‌, ಡಾ| ಉದಯಶಂಕರ್‌ ಒಡೆಯರ್‌, ಜಿಪಂ ಮಾಜಿ ಅಧ್ಯಕ್ಷ ಜಿ. ದ್ಯಾಮಪ್ಪ, ಡಾ| ಎ.ಬಿ. ರಾಮಚಂದ್ರಪ್ಪ, ಡಾ| ದಾದಾಪೀರ್‌ ನವಿಲೇಹಾಳ್‌, ಕಾ.ತ. ಚಿಕ್ಕಣ್ಣ, ಪಿ. ರಾಜಕುಮಾರ್‌ ಇತರರು ಇದ್ದರು.

ದಾವಣಗೆರೆ: ರಾಜ್ಯದಲ್ಲಿ ಮೂರನೇ ಅತಿ ದೊಡ್ಡ ಹಿಂದುಳಿದ ಸಮಾಜವಾಗಿರುವ ಕುರುಬ ಸಮಾಜದ ಇತಿಹಾಸದ ಬಗ್ಗೆ ಈಗಿನ ಪೀಳಿಗೆಗೆ ತಿಳಿಸಲು ಗ್ರಂಥಗಳ ಅಧ್ಯಯನದ ಅಗತ್ಯವಿದೆ ಎಂದು ಹರಿಹರ ಶಾಸಕ ಎಸ್‌. ರಾಮಪ್ಪ ಹೇಳಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಕುರುಬರ ಸಾಂಸ್ಕೃತಿಕ ಪರಿಷತ್ತು ಹಾಗೂ ಜಿಲ್ಲಾ ಕುರುಬ ಸಮಾಜದ ಎಲ್ಲ ಸಂಘಟನೆಗಳ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಕುರುಬರ ಸಂಸ್ಕೃತಿ ದರ್ಶನ ಮಾಲಿಕೆಯ 13 ಗ್ರಂಥಗಳ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುರುಬ ಸಮಾಜದ ಅನೇಕರಿಗೆ ಸಮಾಜದ ಇತಿಹಾಸ ಅಷ್ಟಾಗಿ ಗೊತ್ತಿಲ್ಲ. ನಮ್ಮ ಸಮಾಜದ ಇತಿಹಾಸ, ಪುರಾಣ, ದೇವರು, ಸಾಮಾಜಿಕ ಕೊಡುಗೆ ಇತರೆ ಮುಖ್ಯವಾದ ವಿಚಾರಗಳನ್ನು ತಿಳಿಸಬೇಕಾಗಿದೆ ಎಂದರು.

ಕುರುಬ ಸಮಾಜದ ಅನೇಕ ಜನರಿಗೆ ಇತಿಹಾಸವೇ ತಿಳಿದಿಲ್ಲ. 12 ವರ್ಷಗಳ ಬಳಿಕ ಹೊರ ಬಂದಿರುವ ಎಲ್ಲ 13 ಗ್ರಂಥಗಳನ್ನು ಸಮಾಜದ ಪ್ರತಿಯೊಬ್ಬರೂ ಓದಬೇಕು. ಸಮಾಜದ ಸಾಧನೆಯನ್ನು ಮಕ್ಕಳಿಗೂ ಮುಟ್ಟಿಸಬೇಕು. ಕುರುಬ ಸಮಾಜದಲ್ಲಿ ಕಾಳಿದಾಸ, ಕನಕದಾಸ ಹಾಗೂ ಸಂಗೊಳ್ಳಿ ರಾಯಣ್ಣ ಮೊದಲಾದ ಸಮಾಜದ ಪ್ರಮುಖರು ಕುರುಬರನ್ನು ಮಾತ್ರವಲ್ಲದೆ ಇತರೆ ಸಮಾಜದವರನ್ನೂ ಎಚ್ಚರಿಸಿದ್ದಾರೆ ಹಾಗೂ ಮಾರ್ಗದರ್ಶನ ನೀಡಿದ್ದಾರೆ.

ಅಂತಹ ಎಲ್ಲ ಮಹನೀಯರು, ಇತಿಹಾಸ ತಿಳಿಸಲು ಗ್ರಂಥಗಳು ಬಹಳ ಪ್ರಯೋಜನಕಾರಿ ಎಂದು ಅಭಿಪ್ರಾಯಪಟ್ಟರು. ದಾವಣಗೆರೆಯಲ್ಲಿ ಆ. 3ರಂದು ನಡೆಯಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನದ ಅಮೃತಮಹೋತ್ಸವದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಜಾನಪದ ತಜ್ಞ ಡಾ| ಮಲ್ಲಿಕಾರ್ಜುನ ಕಲಮರಹಳ್ಳಿ ಮಾತನಾಡಿ, ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮ ಸಮುದಾಯಗಳ ಸಮನ್ವಯತೆಗೆ ಸಾಕ್ಷಿಯಾಗಿದೆ. ಕುರುಬ ಸಮಾಜದ 10 ಸಂಪುಟದಲ್ಲಿ ಕುಲದ ಚರಿತ್ರೆ ಅನಾವರಣಗೊಳಿಸಿರುವುದು ಪ್ರತಿ ಸಂಸ್ಕೃತಿಯ ನಿರ್ಮಾಣವಾಗಿದೆ. ಎಲ್ಲ ತಳ ಸಮುದಾಯಗಳು ತಮ್ಮ ಕುಲದ ಚರಿತ್ರೆಯನ್ನು ಕಟ್ಟಿಕೊಳ್ಳಬೇಕಾದ ಅನಿವಾರ್ಯತೆ ಇದೆ.

ಜಾಗತೀಕರಣದ ಸಂದರ್ಭದಲ್ಲಿ ಕುಲ ಚಿನ್ಹೆಗಳನ್ನು ಉಳಿಸಿಕೊಳ್ಳಬೇಕಾಗಿದೆ. ಕಂಬಳಿ ಎಂಬುದು ತುಪ್ಪಳದ ವಸ್ತು ಮಾತ್ರವಲ್ಲ. ಸಾಂಸ್ಕೃತಿಕ ಗುರುತು. ದಾವಣಗೆರೆಯಲ್ಲಿ ತಯಾರಾಗುತ್ತಿದ್ದ ಕಂಬಳಿ ಈಸ್ಟ್‌ ಇಂಡಿಯಾ ಕಂಪನಿಗೂ ರವಾನೆಯಾಗುತ್ತಿತ್ತು ಎಂಬುದಾಗಿ 200 ವರ್ಷದ ಹಿಂದೆ ದಾವಣಗೆರೆಗೆ ಭೇಟಿ ನೀಡಿದ್ದ ಫ್ರಾನ್ಸಿಸ್‌ ಬುಕನನ್‌ ವಿವರಿಸಿದ್ದಾರೆ. ಸಮಾಜದ ಸಾಂಸ್ಕೃತಿಕ ಬೇರನ್ನು ಗುರುತಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಕುರುಬರ ಸಾಂಸ್ಕೃತಿಕ ಪರಿಷತ್ತು ಅಧ್ಯಕ್ಷ, ಮಾಜಿ ಸಚಿವ ಎಚ್‌.ಎಂ. ರೇವಣ್ಣ ಅಧ್ಯಕ್ಷತೆ ವಹಿಸಿದ್ದರು. ಕುಲಗುರುಗಳಾದ ಡಾ| ನಾ. ಲೋಕೇಶ್‌ ಒಡೆಯರ್‌, ಡಾ| ಉದಯಶಂಕರ್‌ ಒಡೆಯರ್‌, ಜಿಪಂ ಮಾಜಿ ಅಧ್ಯಕ್ಷ ಜಿ. ದ್ಯಾಮಪ್ಪ, ಡಾ| ಎ.ಬಿ. ರಾಮಚಂದ್ರಪ್ಪ, ಡಾ| ದಾದಾಪೀರ್‌ ನವಿಲೇಹಾಳ್‌, ಕಾ.ತ. ಚಿಕ್ಕಣ್ಣ, ಪಿ. ರಾಜಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.