ಡೆಂಘೀ ನಿಯಂತ್ರಣಕ್ಕೆ ವರ್ಷ ಪೂರ್ತಿ ಸರ್ವೇ
ಡೆಂಘೀ ರೋಗ ನಿಯಂತ್ರಣಾ ದಿನಾಚರಣೆ-ಕಾರ್ಯಾಗಾರ
Team Udayavani, Jun 5, 2020, 11:43 AM IST
ಸಾಂದರ್ಭಿಕ ಚಿತ್ರ
ವಿಜಯಪುರ: ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣದ ಜೊತೆಗೆ ಜಿಲ್ಲೆಯಲ್ಲಿ ಡೆಂಘೀ ರೋಗ ನಿಗ್ರಹಕ್ಕಾಗಿ ಆರೋಗ್ಯ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ|
ಜೇಬುನ್ನಿಸಾಬೇಗಂ ಬೀಳಗಿ ಹೇಳಿದರು.
ಗುರುವಾರ ನಗರದ ಡಿಎಚ್ಒ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಡೆಂಘೀ ರೋಗ ನಿಯಂತ್ರಣಾ ದಿನಾಚರಣೆ ನಿಮಿತ್ತ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಡೆಂಘೀ ರೋಗ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿವುದು ಅತ್ಯಗತ್ಯ. ಇದಕ್ಕಾಗಿ ಆಶಾ ಕಾರ್ಯಕರ್ತೆಯರಿಂದ ಮನೆ-ಮನೆಗೆ ತೆರಳಿ ಲಾರ್ವಾ ಸಾಂದ್ರತೆ ಸಮೀಕ್ಷೆ ನಡೆಸುವ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ ಎಂದರು.
ಕೋವಿಡ್-19 ಸಮೀಕ್ಷೆಯಂತೆ ಡೆಂಘೀ ರೋಗದ ಕುರಿತು ವರ್ಷದ 12 ತಿಂಗಳು ಆಶಾ ಕಾರ್ಯಕರ್ತೆಯರು, ಕಿರಿಯ ಆರೋಗ್ಯ ಸಹಾಯಕಿಯರು ಮನೆ ಮನೆಗೆ ತೆರಳಿ ಸಮಗ್ರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಡೆಂಘೀ ರೋಗದ ಲಕ್ಷಣ, ನಿಯಂತ್ರಣ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯ ಭಿತ್ತಿಪತ್ರ ಹಾಗೂ ಬ್ಯಾನರ್ಗಳನ್ನು ಅಳವಡಿಸಲಾಗುತ್ತಿದೆ ಎಂದರು.
ಹಿಂದಿನ ದಾಖಲೆ ಆಧಾರದಲ್ಲಿ ಡೆಂಘೀ ರೋಗ ಹೆಚ್ಚಿರುವ ಹಾಗೂ ಕೊಳಚೆ ಪ್ರದೇಶದಲ್ಲಿ ಆದ್ಯತೆ ನೀಡಿ ಸಮೀಕ್ಷೆ ನಡೆಸಲಾಗುತ್ತಿದೆ. ಜೊತೆಗೆ ಸೊಳ್ಳೆ ಪರದೆ ವಿತರಣೆ, ಧೂಮಿಕರಣ ಮಾಡಲಾಗುತ್ತಿದೆ. ಸೊಳ್ಳೆ ಸಂತಾನೊತ್ಪತ್ತಿ ನಿರ್ಮೂಲೆನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ಜನೇವರಿ ತಿಂಗಳಿಂದ ಮೇ ತಿಂಗಳವರೆಗೆ 310 ರಕ್ತ ಸಂಗ್ರಹಿಸಿದ್ದು, 102 ಜನರಲ್ಲಿ ಡೆಂಘೀ ರೋಗ ದೃಢಪಟ್ಟಿದೆ. 2019ರಲ್ಲಿ 271 ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷಿಸಿದ್ದು 77 ಜನರಿಗೆ ಡೆಂಘೀ ರೋಗ ದೃಢಪಟ್ಟಿದೆ ಎಂದು ವಿವರಿಸಿದರು.
ರೋಗಕಾರಕ ಸೊಳ್ಳೆಗಳು ಹುಟ್ಟಿದಂತೆ ಸ್ಥಳೀಯ ಆಡಳಿತಗಳು ಒಳಚರಂಡಿ ಹಾಗೂ ಕೊಳಚೆ ಪ್ರದೇಶ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮಹಾನಗರ ಪಾಲಿಕೆ ವತಿಯಿಂದ ಸೊಳ್ಳೆ ನಾಶಕ್ಕೆ ವಾರಕ್ಕೊಮ್ಮೆ ಸೂಕ್ತ ಕೀಟನಾಶಕ ದ್ರಾವಣ ಸಿಂಪಡನೆ ಹಾಗೂ ಧೂಮಿಕರಣ ಕೈಗೊಳ್ಳಲಾಗುತ್ತಿದೆ. ಸೊಳ್ಳೆ ರಹಿತ ಓವರ್ ಹೆಡ್ ಟ್ಯಾಂಕ್, ಅಂಡರ್ಗ್ರೌಂಡ್ ಟ್ಯಾಂಕ್ ನಿರ್ಮಿಸಲು ಸೂಚಿಸಲಾಗಿದೆ. ನೀರು ಸರಬರಾಜಿಗೆ ಮುನ್ನ ಸೂಕ್ತ ಕ್ಲೋರಿನೇಷನ್ ಮಾಡಲಾಗುತ್ತಿದೆ. ಜೊತೆಗೆ ನೀರು ಸರಬರಾಜು ಮಾಡುವ ಪೈಪುಗಳಲ್ಲಿ ಸೋರಿಕೆ ತಡೆಗಟ್ಟಲಾಗುತ್ತಿದೆ ಎಂದು ವಿವರಿಸಿದರು.
ಡೆಂಘೀಕಾರಕ ಲಾರ್ವಾಹಾರಿ ಶಪ್ಪಿ ಮತ್ತು ಗ್ಯಾಂಬ್ಯುಸಿಯಾ ಮೀನುಗಳನು ಬೆಳೆಸಿ ಜಿಲ್ಲೆಯಾದ್ಯಂತ ಅಗತ್ಯ ಇರುವಲ್ಲಿ ನೀಡಲಾಗುತ್ತಿದೆ. ಕರೆ, ಬಾವಿ, ಕೊಳ್ಳಗಳಲ್ಲಿ ಜಿಲ್ಲಾವಾರು ಜಿಐಎಸ್ ನಕ್ಷೆ ತಯಾರಿಕೆ, ಮಾಹಿತಿ ನೀಡಿಕೆ ಕುರಿತು ಆರೋಗ್ಯ ಇಲಾಖೆಗೆ ಕ್ರಮ ಕೈಗೊಂಡಿದೆ ಎಂದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್ವರಿ ಗೋಲಗೇರಿ, ಜಿಲ್ಲಾ ಕೀಟಶಾಸ್ತ್ರಜ್ಞ ಡಾ| ರಿಯಾಝ್ ದೇವಳ್ಳಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ