ಮೀಸಲು ಕಿತ್ತುಕೊಳ್ಳುವ ಅಗತ್ಯ ನಮಗಿಲ್ಲ; ದಾರಕೇಶ್ವರಯ್ಯ

ಗಂಧಂ, ಭೂತಂ, ತೂರಪತಿ ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ.

Team Udayavani, Mar 29, 2022, 6:24 PM IST

ಮೀಸಲು ಕಿತ್ತುಕೊಳ್ಳುವ ಅಗತ್ಯ ನಮಗಿಲ್ಲ; ದಾರಕೇಶ್ವರಯ್ಯ

ದಾವಣಗೆರೆ: ಸಂವಿಧಾನ, ಕಾನೂನುಬದ್ಧವಾಗಿಯೇ ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆಯಲಾಗಿದೆ ಎಂದು ಅಖಿಲ ಕರ್ನಾಟಕ ಡಾ| ಅಂಬೇಡ್ಕರ್‌ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಡಾ| ಎಂ.ಪಿ. ದಾರಕೇಶ್ವರಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಪಟ್ಟಿಗಳ ಕಲಂ 9ರಲ್ಲಿ ಬೇಡ ಜಂಗಮ ಇರುವ ಪ್ರಕಾರವೇ ಜಾತಿ ಪ್ರಮಾಣಪತ್ರ ಪಡೆಯಲಾಗಿದೆ. ನಾವು ಯಾರ ಮೀಸಲಾತಿ, ಸೌಲಭ್ಯವನ್ನೂ ಕಿತ್ತುಕೊಳ್ಳುತ್ತಿಲ್ಲ. ಜಂಗಮ ಸಮುದಾಯ 1921ನೇ ಸಾಲಿನಲ್ಲಿ ಖನ್ನತೆಗೆ ಒಳಗಾದ ವರ್ಗದ ಪಟ್ಟಿಯಲ್ಲಿದೆ.

1936ನೇ ಸಾಲಿನಲ್ಲಿ ಜಂಗಮ ಸಮುದಾಯ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ. ಭಿಕ್ಷಾಟನೆ, ಮತ್ತಿತರ ಕುಲಕಸುಬು ಆಧಾರದಲ್ಲಿ ಬೇಡ (ಬುಡ್ಗ) ಜಂಗಮ ಸಮುದಾಯವನ್ನು ಸೇರ್ಪಡೆ ಮಾಡಲಾಗಿತ್ತು. 1953, ಅ.8ರಂದು ಅಂದಿನ ಬಳ್ಳಾರಿ ಜಿಲ್ಲಾಧಿಕಾರಿ, ಚಿಗಟೇರಿ ಗ್ರಾಮದ ಗುರುಮೂರ್ತಿ ಶಿವಾಚಾರ್ಯ ಎಂಬುವರಿಗೆ ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡಿದ್ದಾರೆ ಎಂದರು.

ಕುಲಕಸುಬು ಅರಿವೆ ಬೇಡುವುದು, ಕಣಿ ಹೇಳುವುದು. ಇವರನ್ನು ಗಂಧಂ, ಭೂತಂ, ತೂರಪತಿ ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ. ಹಾಗಾಗಿ ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡಬಾರದು ಎಂಬುದಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಹೊರಡಿಸಿದ್ದ ಮೂರು ಸುತ್ತೋಲೆಗಳನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್‌ ಎಸ್‌ಡಬ್ಲ್ಯೂಡಿ 328 ಎಸ್‌ಎಡಿ 95 ಸುತ್ತೋಲೆ ಹಿಂಪಡೆದು ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡುವಾಗ ಯಾವುದೇ ಕಾರಣಕ್ಕೂ ಎಸ್‌ಡಬ್ಲ್ಯೂಡಿ 328 ಎಸ್‌ಎಡಿ 95 ಸುತ್ತೋಲೆ ಅನುಸರಿಸಕೂಡದು ಎಂದು ಕಟ್ಟುನಿಟ್ಟಿನ ಆದೇಶ ನೀಡಿದೆ.

ಅದರಂತೆ ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆಯಲಾಗಿದೆ. ಉತ್ಛ ನ್ಯಾಯಾಲಯವೇ ಆದೇಶದಲ್ಲಿ ಜಾತಿ ಪ್ರಮಾಣಪತ್ರಗಳಿಗೆ ಮಾನ್ಯತೆ ನೀಡುವ ಜತೆಗೆ ಕುಂದು ಕೊರತೆಗಳಿಗೆ ಸಂಪೂರ್ಣ ಪರಿಹಾರ ನೀಡಿದೆ. ಹಾಗಾಗಿ ನನ್ನ ತಮ್ಮ ರೇಣುಕಾಚಾರ್ಯ ಪುತ್ರಿ ಚೇತನಾ ಪಡೆದಿರುವ ಜಾತಿ ಪ್ರಮಾಣಪತ್ರ ರದ್ದುಪಡಿಸಲು ಬರುವುದಿಲ್ಲ ಎಂದರು. ಡಾ|ಅಂಬೇಡ್ಕರ್‌ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸಿದ್ದಲಿಂಗಸ್ವಾಮಿ ಇತರರಿದ್ದರು.

ಸಹೋದರನ ಮಗಳಲ್ಲ
ಮಾಜಿ ಸಿಎಂ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಮಾಜಿ ಸಚಿವ ಎಚ್‌.ಆಂಜನೇಯ ಅವರು ಎಂ.ಪಿ.ಚೇತನಾಗೆ 45 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಹೇಳುತ್ತಿದ್ದಾರೆ. ಅವರು ನನ್ನ ತಮ್ಮ ಎಂ.ಪಿ. ರೇಣುಕಾಚಾರ್ಯ ಪುತ್ರಿ ಎಂ.ಪಿ. ಚೇತನಾ ಅಲ್ಲ, ಧಾರವಾಡದ ಎಂ.ಪಿ. ಚೇತನ್‌ ಹಿರೇಮಠ್ ಆದರೂ ಸುಳ್ಳು ಹೇಳುತ್ತಿದ್ದಾರೆ. ಎಂ.ಪಿ.ರೇಣುಕಾಚಾರ್ಯಗೆ ಬೇಡಜಂಗಮ ಜಾತಿ ಪ್ರಮಾಣಪತ್ರದ ಬಗ್ಗೆ ಗೊತ್ತಿರಲಿಲ್ಲ. ಆ ಬಗ್ಗೆ ಅರಿವೂ ಇರಲಿಲ್ಲ. ನಾವು ಜಾತಿ ಪ್ರಮಾಣಪತ್ರ ಪಡೆದಿದ್ದೇವೆ. ಆದರೆ ಯಾವುದೇ ಸೌಲಭ್ಯ ಪಡೆದಿಲ್ಲ. ಇನ್ನೊಬ್ಬರ ಸೌಲಭ್ಯ ಕಿತ್ತುಕೊಳ್ಳುವುದೂ ಇಲ್ಲ ಎಂದು ದಾರಕೇಶ್ವರಯ್ಯ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.