ಎರಡೇ ದಿನಕ್ಕೆ 201 ಮನೆ ಆಪೋಶನ

1044 ವಿದ್ಯುತ್‌ ಕಂಬ, 22 ಟಿಸಿಗೆ ಹಾನಿ

Team Udayavani, May 22, 2022, 11:12 AM IST

2

ಹುಬ್ಬಳ್ಳಿ: ಜಿಲ್ಲಾದ್ಯಂತ ಕಳೆದೆರಡು ದಿನಗಳ ಅವಧಿಯಲ್ಲಿ ಸುರಿದ ಭಾರೀ ಮಳೆಗೆ ಸುಮಾರು 201 ಮನೆಗಳು, 1044 ವಿದ್ಯುತ್‌ ಕಂಬಗಳು, 22 ವಿದ್ಯುತ್‌ ಪರಿವರ್ತಕಗಳು ಹಾನಿಯಾದ ಬಗ್ಗೆ ವರದಿಗಳು ಬಂದಿವೆ. ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್‌ ಹೇಳಿದರು.

ಅತಿವೃಷ್ಟಿಯಿಂದ ಬಾಧಿತವಾಗಿರುವ ಹಳೇಹುಬ್ಬಳ್ಳಿ ಆನಂದನಗರ ರಸ್ತೆಯ ಗಣೇಶ ಕಾಲೋನಿ, ನೇಕಾರ ನಗರ, ಟಿಪ್ಪು ನಗರ, ರಾಜನಾಲಾ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ, ಸ್ಥಳೀಯರಿಂದ ಅಹವಾಲುಗಳನ್ನು ಆಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ 8 ತಾಲೂಕುಗಳಲ್ಲಿ ಅತ್ಯಧಿಕ ಮಳೆಯಾಗಿದೆ. ತೋಟಗಾರಿಕೆ ಇಲಾಖೆಯಲ್ಲಿ ಸುಮಾರು 101 ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಅಂದಾಜು 71 ಹೆಕ್ಟೇರ್‌ ಹಾನಿಯಾಗಿದೆ. ಎನ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ ಸುಮಾರು 96 ಲಕ್ಷ ರೂ. ಹಾನಿಯ ಅಂದಾಜು ಮಾಡಲಾಗಿದೆ. ರೈತ ಸಹಾಯವಾಣಿ ಪ್ರಾರಂಭಿಸಲಾಗಿದೆ. ಅತಿವೃಷ್ಟಿ ಸಂದರ್ಭದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಆಯುಕ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ನಗರ ಪ್ರದೇಶದಲ್ಲಿ ಕಾಮಗಾರಿಗಳು ನಡೆಯುತ್ತಿರುವ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ತೊಂದರೆ ಎದುರಾಗಿದೆ. ಸೂಕ್ತ ಮಾರ್ಪಾಟು ಮಾಡಿಕೊಳ್ಳಲು ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ ಎಂದರು.

ಶಾಸಕ ಪ್ರಸಾದ ಅಬ್ಬಯ್ಯ ಅವರು ನೇಕಾರ ನಗರ, ಟಿಪ್ಪುನಗರ, ರಾಜನಾಲಾ ಸುತ್ತಲಿನ ಪ್ರದೇಶದ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ತ್ವರಿತ ಪರಿಹಾರಕ್ಕೆ ಆಗ್ರಹ: ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಮಾತನಾಡಿ, ಅತಿವೃಷ್ಟಿಗೆ ಈ ಬಾರಿ ಕುಂದಗೋಳ ತಾಲೂಕಿನಾದ್ಯಂತ ಅಧಿಕ ಹಾನಿಯಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ಮನವಿ ಮಾಡಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹು-ಧಾ ಮಹಾನಗರ ಪೊಲೀಸ್‌ ಆಯುಕ್ತ ಲಾಭೂ ರಾಮ, ಎಸ್ಪಿ ಪಿ. ಕೃಷ್ಣಕಾಂತ, ಜಿಪಂ ಸಿಇಒ ಡಾ| ಸುರೇಶ ಇಟ್ನಾಳ, ಮಹಾನಗರ ಪಾಲಿಕೆ ಆಯುಕ್ತ ಡಾ| ಬಿ. ಗೋಪಾಲಕೃಷ್ಣ ಸೇರಿದಂತೆ ಇತರೆ ಅಧಿಕಾರಿಗಳು ಸಚಿವರಿಗೆ ಅತಿವೃಷ್ಟಿಯ ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ಅಶೋಕ ತೇಲಿ, ತಹಶೀಲ್ದಾರರಾದ ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ, ಡಾ| ಸಂತೋಷಕುಮಾರ ಬಿರಾದಾರ, ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ, ಅಲ್ತಾಫ ಕಿತ್ತೂರ, ಮೋಹನ ಅಸುಂಡಿ ಮೊದಲಾದವರಿದ್ದರು.

ಮಳೆಗಾಲದ ಪೂರ್ವದಲ್ಲಿ ತಯಾರಿಯಾಗಬೇಕು. ಯಾವುದೇ ವರ್ಷ ಮೇ ತಿಂಗಳಲ್ಲಿ ಈ ಪ್ರಮಾಣದಲ್ಲಿ ಮಳೆಯಾಗಿರಲಿಲ್ಲ. ಆದರೆ ಈ ಬಾರಿಯಾಗಿದೆ. ಇದು ಸರಕಾರಕ್ಕೆ ಒಂದು ಪಾಠವಾಗಲಿದೆ. ಎಲ್ಲಿ ಈ ರೀತಿ ಸಮಸ್ಯೆಯಾಗಿದೆಯೋ ಅಲ್ಲಿ ಬಗೆಹರಿಸುವುದರ ಜೊತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸಣ್ಣ ಸಮಸ್ಯೆಗಳಿದ್ದರೂ ತಿದ್ದುಕೊಳ್ಳಬೇಕು. ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟವಾಗಿ ನಿರ್ದೇಶಿಸಲಾಗುವುದು. –ಹಾಲಪ್ಪ ಆಚಾರ್‌, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.