ಸಂಕ್ರಾಂತಿಯೊಳಗೆ ಅಣ್ಣಿಗೇರಿಗೆ 24×7 ನೀರು: ಮುನೇನಕೊಪ್ಪ

ಬಸಾಪುರ ಬಳಿ ನೂತನವಾಗಿ ನಿರ್ಮಿಸಿರುವ ಕೆರೆ ; ಮಲಪ್ರಭೆ ಕಾಲುವೆ ನೀರು ತುಂಬಿಸುವುದಕ್ಕೆ ಚಾಲನೆ ; ದಶಕಗಳ ಸಮಸ್ಯೆಗೆ ಮುಕ್ತಿ ಕಾಲ

Team Udayavani, Nov 1, 2022, 12:01 PM IST

9

ಹುಬ್ಬಳ್ಳಿ: ಕೆರೆ ನಿರ್ಮಾಣದಿಂದ ಕಳೆದ ಮೂರ್‍ನಾಲ್ಕು ದಶಕಗಳಿಂದ ಅಣ್ಣಿಗೇರಿ ಜನರು ಅನುಭವಿಸುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರಕಿದಂತಾಗಿದ್ದು, ಸಂಕ್ರಾಂತಿಯೊಳಗೆ ಪಟ್ಟಣದ ಜನತೆಗೆ ನಿರಂತರ ಕುಡಿಯುವ ನೀರು ಸರಬರಾಜು ಆಗಲಿದೆ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಸೋಮವಾರ ಅಣ್ಣಿಗೇರಿ ತಾಲೂಕಿನ ಬಸಾಪುರ ಬಳಿ 34.88 ಕೋಟಿ ರೂ. ವೆಚ್ಚದಲ್ಲಿ ಅಣ್ಣಿಗೇರಿ ಪಟ್ಟಣಕ್ಕೆ 24×7 ನಿರಂತರ ಕುಡಿಯುವ ನೀರು ಸರಬರಾಜು ಕೆರೆಗೆ ಮಲಪ್ರಭಾ ಕಾಲುವೆ ಮೂಲಕ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೆರೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ನಿರಂತರ ನೀರು ಪೂರೈಕೆಗೆ ಅಗತ್ಯ ಇರುವ ಪೈಪ್‌ಲೈನ್‌ ಕಾಮಗಾರಿ ಮುಗಿಯುವ ಹಂತದಲ್ಲಿದೆ. ಸಂಕ್ರಾಂತಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾಮಗಾರಿ ವೇಗ ಕೂಡ ಹಚ್ಚಾಗಿದ್ದು, ಸಂಕ್ರಾಂತಿ ವೇಳೆಗೆ ಕೆರೆಯ ನೀರು ಅಣ್ಣಿಗೇರಿ ಪಟ್ಟಣದ ಜನತೆಗೆ ದೊರೆಯಲಿದ್ದು, ನಂತರ ಅತೀ ಶೀಘ್ರದಲ್ಲಿ ನಿರಂತರ ನೀರು ದೊರೆಯಲಿದೆ ಎಂದರು.

ಆರಂಭದಲ್ಲಿ ಮಲಪ್ರಭಾ ಕಾಲುವೆಯಿಂದ ಪಂಪ್‌ಸೆಟ್‌ಗಳ ಮೂಲಕ ತುಂಬಿಸುವ ಯೋಜನೆ ರೂಪಿಸಲಾಗಿತ್ತು. ಇದು ಅತ್ಯಂತ ಖರ್ಚುದಾಯಕವಾಗಿದ್ದು, ವಿದ್ಯುತ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಮಾಡಿಕೊಳ್ಳಬೇಕಾಗಿತ್ತು. ಇದು ಪುರಸಭೆಗೆ ಹೊರೆಯಾಗುತ್ತಿತ್ತು. ಆದರೆ ಇದೀಗ ನೇರವಾಗಿ ಕಾಲುವೆಯಿಂದ ಕೆರೆಗೆ ನೈಸರ್ಗಿಕವಾಗಿ ನೀರು ತುಂಬಿಸುವ ವ್ಯವಸ್ಥೆ ಯಶಸ್ವಿಯಾಗಿದೆ. ಇದರಿಂದ 45 ದಿನಗಳಲ್ಲಿ ಇಡೀ ಕೆರೆ ಭರ್ತಿಯಾಗಲಿದೆ. ಒಂದು ವೇಳೆ ಪಂಪ್‌ ಸೆಂಟ್‌ಗಳ ಮೂಲಕ ತುಂಬಿಸುವುದಾಗಿದ್ದರೆ 3-4 ತಿಂಗಳು ಬೇಕಾಗಿತ್ತು. ಈ ಕೆರೆಯನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಚಿಂತನೆಯಿದೆ. ಅಣ್ಣಿಗೇರಿ ಪಟ್ಟಣದಲ್ಲಿ ಕೋರ್ಟ್‌, ನ್ಪೋರ್ಟ್ಸ್ ಪಾರ್ಕ್‌ ಸೇರಿದಂತೆ ವಿವಿಧ ತಾಲೂಕು ಮಟ್ಟದ ಕಚೇರಿ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ ಮಾತನಾಡಿ, ನಿರಂತರ ನೀರು ಹಾಗೂ ಕೆರೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದೀಗ 10 ದಿನಗಳಿಗೊಮ್ಮೆ ನೀರು ದೊರೆಯುತ್ತಿದೆ. ಕಾಮಗಾರಿ ಪೂರ್ಣಗೊಂಡ ನಂತರ ನಿರಂತರ ನೀರು ದೊರೆಯಲಿದೆ. ಒಮ್ಮೆ ಕೆರೆ ತುಂಬಿಸಿದರೆ ಆರು ತಿಂಗಳ ಕಾಲ ನೀರು ಪಡೆಯಬಹುದಾಗಿದೆ ಎಂದರು.

ಲಡ್ಡು ಮುತ್ಯಾ ಅಜ್ಜನವರು ಸಾನ್ನಿಧ್ಯ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಗಂಗಾ ಕರೆಟ್ಟನವರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಜಯಲಕ್ಷ್ಮೀ ಜಕರಡ್ಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಬಾಜಾನ ಮುಲ್ಲಾನವರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಭಿಯಂತ ರವಿಕುಮಾರ, ಬಿಜೆಪಿ ಮುಖಂಡ ಷಣ್ಮುಖಪ್ಪ ಗುರಿಕಾರ, ಮಾಬುಬಿ ನವಲಗುಂದ, ಮಂಜುಳಾ ರೋಣದ ಇನ್ನಿತರರಿದ್ದರು.

ಸರಕಾರ ಕೆರೆ ನಿರ್ಮಾಣ ಯಶಸ್ವಿಯಾಗಿ ನಿರ್ವಹಿಸಿದೆ. ನೀರನ್ನು ಪ್ರತಿಮನೆಗೆ ತಲುಪಿಸುವ ಜವಾಬ್ದಾರಿ ಪುರಸಭೆಯದ್ದಾದರೆ, ಸದ್ವಿನಿಯೋಗ ಹೊಣೆ ಜನರದ್ದಾಗಿದೆ. ಕೆರೆ ನಿರ್ಮಾಣ ನಿಟ್ಟಿನಲ್ಲಿ ಬಸಾಪುರ ಜನತೆಯ ತ್ಯಾಗ ದೊಡ್ಡದು. ಜಿಲ್ಲೆಯಲ್ಲಿ ಎರಡು ಸಕ್ಕರೆ ಕಾರ್ಖಾನೆ, ನವಲಗುಂದ ಕ್ಷೇತ್ರ ವ್ಯಾಪ್ತಿಯಲ್ಲಿ ಎಥೆನಾಲ್‌ ತಯಾರಿಸುವ ಘಟಕ ತರಲಾಗುವುದು. ಈಗಾಗಲೇ ಜಿಲ್ಲೆಗೆ ಜವಳಿ ಪಾರ್ಕ್‌ ಮಂಜೂರಾಗಿದ್ದು, ನೇರವಾಗಿ 5 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಪರೋಕ್ಷವಾಗಿ 25 ಸಾವಿರ ಜನರಿಗೆ ಅನುಕೂಲವಾಗಲಿದೆ.  -ಶಂಕರ ಪಾಟೀಲ ಮುನೇನಕೊಪ್ಪ

ಕಳೆದ 50 ವರ್ಷಗಳಿಂದ ನೀರಿಗಾಗಿ ಸಮಸ್ಯೆ ಹೇಳತೀರದು. ನೀರನ್ನು ಹೆಬಸೂರು ಗ್ರಾಮಕ್ಕೆ ಹೋಗಿ ತರಬೇಕಾಗಿತ್ತು. ಆದರೆ ಇದೀಗ ಈ ಯೋಜನೆಯಿಂದ ಬಹು ವರ್ಷದ ಸಮಸ್ಯೆಗೆ ಪರಿಹಾರ ದೊರೆತಂತಾಗಿದೆ.  -ಅಬ್ದುಲ್‌ಸಾಬ್‌ ನಡಕಟ್ಟಿ

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.