ಬಿಜೆಪಿಯಲ್ಲಿ ಗರಿಗೆದರಿದ ಚಟುವಟಿಕೆ

ಮಹಾಪೌರ-ಉಪಮಹಾಪೌರ ಆಯ್ಕೆಗೆ ಮುಹೂರ್ತ ಫಿಕ್ಸ್

Team Udayavani, May 12, 2022, 10:04 AM IST

1

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆ ಫಲಿತಾಂಶ ಬಂದು ಸುಮಾರು ಏಳು ತಿಂಗಳ ನಂತರದಲ್ಲಿ ಸದಸ್ಯರಿಗೆ ಅಧಿಕಾರ ಭಾಗ್ಯ ದೊರೆಯುತ್ತಿದೆ. ಮೀಸಲಾತಿ ಗೊಂದಲ, ತಾಂತ್ರಿಕ ಸಮಸ್ಯೆ, ರಾಜಕೀಯ ಒಳಸುಳಿ ಹೀಗೆ ವಿವಿಧ ಕಾರಣಗಳಿಂದ ಮುಂದೂಡಿಕೆಗೆ ಸಿಲುಕಿದ್ದ ಮಹಾಪೌರ-ಉಪಮಹಾಪೌರ ಆಯ್ಕೆಗೆ ಚುನಾವಣೆ ಮುಹೂರ್ತ ನಿಗದಿಯಾಗುತ್ತಿದ್ದಂತೆಯೇ ಅಧಿಕಾರಕ್ಕೆ ಮರಳಲಿರುವ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರುತ್ತಿವೆ.

ಆಕಾಂಕ್ಷಿಗಳು ತಮ್ಮದೇ ನಿಟ್ಟಿನ ತಯಾರಿಗೆ ಮುಂದಾಗುತ್ತಿದ್ದಾರೆ. ಒಂದು ಕಡೆ ರಾಜ್ಯ ಸಚಿವ ಸಂಪುಟದ ವಿಸ್ತರಣೆಯೋ, ಪುನರಚನೆಯೋ ಎಂಬ ಗೊಂದಲದ ಸ್ಥಿತಿ, ಇನ್ನೊಂದು ಕಡೆ ವಿಧಾನಸಭೆಯಿಂದ ವಿಧಾನ ಪರಿಷತ್ತುಗೆ ಆಯ್ಕೆ ಪ್ರಕ್ರಿಯೆ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗಳ ನಡುವೆ ರಾಜ್ಯದ ಎರಡನೇ ಅತಿ ದೊಡ್ಡ ಮಹಾನಗರ ಪಾಲಿಕೆಯ ಮಹಾಪೌರ-ಉಪ ಮಹಾಪೌರ ಆಯ್ಕೆಗೆ ಮೇ 28ರಂದು ಚುನಾವಣೆ ನಿಗದಿಪಡಿಸಲಾಗಿದೆ.

ಚುನಾವಣೆ ಚರ್ಚೆ, ಚಿಂತನೆ ಶುರು ಆಗಬೇಕಾಗಿದೆಯಾದರೂ ಬಿಜೆಪಿಯ ನಾಯಕರು ರಾಜ್ಯ ರಾಜಕೀಯ ವಿದ್ಯಮಾನ ಹಿನ್ನೆಲೆಯಲ್ಲಿ ದೆಹಲಿ, ಬೆಂಗಳೂರಿನಲ್ಲಿರುವುದರಿಂದ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ.

ಬಿಜೆಪಿಗಿದೆ ಬಹುಮತ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್‌ಗಳ ಪುನರ್‌ ವಿಂಗಡಣೆ ಪ್ರಕ್ರಿಯೆ ಕೈಗೊಂಡ ನಂತರ ಚುನಾವಣೆಗೆ ಕೆಲವೊಂದು ಗೊಂದಲ, ಆಕ್ಷೇಪಗಳು ಶುರುವಾಗಿದ್ದವು. ಹಳೇ ವಾರ್ಡ್‌ ಆಧಾರದಲ್ಲಿ ಚುನಾವಣೆ ನಡೆಸಬೇಕೋ, ಹೊಸ ವಾರ್ಡ್‌ ಆಧಾರದಲ್ಲಿ ಚುನಾವಣೆ ಕೈಗೊಳ್ಳಬೇಕೆಂಬ ಗೊಂದಲದಲ್ಲಿಯೇ ಸರಿಸುಮಾರು ಎರಡು ವರ್ಷ ಕಳೆದಾಯಿತು.

ಇದರ ನಡುವೆ ಕೋವಿಡ್‌ ಅಬ್ಬರ, ವಾರ್ಡ್‌ ಮೀಸಲಾತಿ ಗೊಂದಲಗಳು ಕಂಡು ಬಂದಿತ್ತು. ಕೊನೆಗೂ ಕೋರ್ಟ್‌ ಸೂಚನೆಯಂತೆ ಹಳೆಯ 67 ವಾರ್ಡ್‌ಗಳ ಬದಲಾಗಿ ವಾರ್ಡ್‌ ಪುನರ್‌ ವಿಂಗಡಣೆಯಂತೆ 82 ವಾರ್ಡ್‌ಗಳಿಗೆ ಚುನಾವಣೆ ನಡೆಸಲು ತೀರ್ಮಾನಿಸಿ, ಕಳೆದ ವರ್ಷ ಅಕ್ಟೋಬರ್‌- ಸೆಪ್ಟಂಬರ್‌ನಲ್ಲಿ ಕೋವಿಡ್‌ ಆತಂಕದ ನಡುವೆಯೇ ಚುನಾವಣೆ ಮುಗಿದಿತ್ತು.

ಇನ್ನೇನು ಪಾಲಿಕೆಗೆ ಆಡಳಿತ ಮಂಡಳಿ ಇಲ್ಲದ ಸುಮಾರು ಎರಡು ವರ್ಷಗಳ ವನವಾಸ ಅಂತ್ಯವಾಗುತ್ತಿದೆ ಎಂಬ ನಿರೀಕ್ಷೆ ಹುಸಿಯಾಯಿತು. ಆಯ್ಕೆಯಾದರೂ ಅಧಿಕಾರ ಸ್ವೀಕಾರ ಭಾಗ್ಯ ನೂತನ ಸದಸ್ಯರಿಗಿಲ್ಲವಾಗಿತ್ತು. ಆಯ್ಕೆಯಾಗಿ ಏಳು ತಿಂಗಳು ಕಳೆದರೂ ಸದಸ್ಯತ್ವ ಅಧಿಕಾರ ಅನುಭವಿಸದೆ, ವಾರ್ಡ್‌ ಜನರ ಸಮಸ್ಯೆಗಳಿಗೆ ಸಮರ್ಪಕ ರೀತಿಯಲ್ಲಿ ಸ್ಪಂದಿಸಲಾಗದೆ ನೂತನ ಸದಸ್ಯರು ಸಂಕಷ್ಟ ಪಡುವಂತಾಗಿತ್ತು.

ಹು.ಧಾ. ಮಹಾನಗರ ಪಾಲಿಕೆಯ 82 ವಾರ್ಡ್‌ ಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ 39 ಸ್ಥಾನಗಳನ್ನು ಗೆದ್ದುಕೊಂಡರೆ, ಪ್ರಮುಖ ವಿಪಕ್ಷ ಕಾಂಗ್ರೆಸ್‌ 33, ಜೆಡಿಎಸ್‌ 1, ಎಐಎಂಐಎಂ ಪಕ್ಷ 3, ಪಕ್ಷೇತರರು 6 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಸರಳ ಬಹುಮತಕ್ಕೆ 42 ಸದಸ್ಯ ಬಲ ಅಗತ್ಯವಾಗಿದೆ. 39 ಸ್ಥಾನ ಗೆದ್ದಿರುವ ಬಿಜೆಪಿಗೆ ಸರಳ ಬಹುಮತಕ್ಕೆ ಯಾವುದೇ ತೊಂದರೆ ಇಲ್ಲವಾಗಿದೆ. ಪಕ್ಷೇತರ ಅಭ್ಯರ್ಥಿಯೊಬ್ಬರು ಈಗಾಗಲೇ ಬಿಜೆಪಿ ಸೇರ್ಪಡೆಯಾಗಿದ್ದು, ಬಿಜೆಪಿ ಬಲ 40 ಕ್ಕೇರಿದೆ.

ಜತೆಗೆ ಒಬ್ಬರು ಸಂಸದರು, ಮೂವರು ಶಾಸಕರು, ಇಬ್ಬರು ವಿಧಾನ ಪರಿಷತ್ತು ಸದಸ್ಯರು ಬಿಜೆಪಿಯವರಾಗಿದ್ದಾರೆ. ಅಲ್ಲಿಗೆ ಬಿಜೆಪಿ ಸಂಖ್ಯಾಬಲ 46 ಆಗಲಿದೆ. ಇತ್ತೀಚೆಗಿನ ರಾಜಕೀಯ ಬೆಳವಣಿಗೆಯಲ್ಲಿ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರಲು ಮುಂದಾಗಿದ್ದು, ಅವರು ಸಹ ಬಿಜೆಪಿ ಅಭ್ಯರ್ಥಿ ಬೆಂಬಲಿಸಲು ಮುಂದಾದರೆ ಬಿಜೆಪಿ ಸಂಖ್ಯಾಬಲ 47 ಆಗಲಿದೆ. ಜತೆಗೆ ಒಂದಿಬ್ಬರು ಪಕ್ಷೇತರ ಸದಸ್ಯರು ಸಹ ಬಿಜೆಪಿಗೆ ಸೇರ³ಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ವಿಪಕ್ಷ ಕಾಂಗ್ರೆಸ್‌ 33 ಸದಸ್ಯ ಬಲ ಹೊಂದಿದ್ದು, ಒಬ್ಬರು ಶಾಸಕರಿದ್ದು, ಅಲ್ಲಿಗೆ ಸಂಖ್ಯಾ ಬಲ 34 ಆಗಲಿದೆ. ಒಂದಿಬ್ಬರು ಪಕ್ಷೇತರರು ಕಾಂಗ್ರೆಸ್‌ ಕಡೆ ವಾಲುವ ಸಾಧ್ಯತೆ ಇದೆ. ಒಂದು ವೇಳೆ ಮೂವರು ಸದಸ್ಯ ಬಲದ ಎಐಎಂಐಎಂನ ಮೂವರು ಸದಸ್ಯರು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದರೂ ಸರಳ ಬಹುತಕ್ಕೆ ಸಂಖ್ಯಾಬಲ ಸರಿ ಹೋಗದು.

ಬಿಜೆಪಿಯಲ್ಲಿ 8 ಜನ ಆಕಾಂಕ್ಷಿಗಳು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಳೆದ ಸುಮಾರು ಒಂದೂವರೆ ದಶಕದಿಂದ ಅಧಿಕಾರ ಹಿಡಿದಿರುವ ಬಿಜೆಪಿ, ಇದೀಗ ಮತ್ತೂಮ್ಮೆ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ. ಪಾಲಿಕೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ 2018ರಲ್ಲಿ ಮಹಾನಗರ ಪಾಲಿಕೆಯ 21ನೇ ಅವಧಿಗೆ ನಿಗದಿಪಡಿಸಿದ ಮೀಸಲಾತಿಯನ್ನೇ ನಿಗದಿಪಡಿಸಿ ಮಹಾಪೌರ ಸ್ಥಾನ ಸಾಮಾನ್ಯ, ಉಪ ಮಹಾಪೌರ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ. ಮೀಸಲಾತಿ ಸಾಮಾನ್ಯ ಬಂದಿರುವುದರಿಂದ ಸಹಜವಾಗಿಯೇ ಆಕಾಂಕ್ಷಿಗಳ ಸಂಖ್ಯೆಯಲ್ಲಿಯೂ ಅಧಿಕವಾಗಲಿದೆ. ಮೇಲ್ನೋಟಕ್ಕೆ ಬಿಜೆಪಿಯಲ್ಲಿ ಸುಮಾರು 8 ಜನರು ಮಹಾಪೌರ ಸ್ಥಾನಕ್ಕೆ ತಮ್ಮದೇಯಾದ ಯತ್ನಕ್ಕೆ ಮುಂದಾಗಿದ್ದಾರೆ.

ಪ್ರಸ್ತುತ ಬಿಜೆಪಿಯಲ್ಲಿ ಮಹಾಪೌರ ಸ್ಥಾನಕ್ಕೆ ಮಾಜಿ ಮಹಾಪೌರ ವೀರಣ್ಣ ಸವಡಿ, ವೀರೇಶ ಅಂಚಟಗೇರಿ, ಶಿವು ಮೆಣಸಿನಕಾಯಿ, ರಾಮಣ್ಣ ಬಡಿಗೇರ, ವಿಜಯಾನಂದ ಶೆಟ್ಟಿ, ಶಿವು ಹಿರೇಮಠ, ತಿಪ್ಪಣ್ಣ ಮಜ್ಜಗಿ, ರಾಜಣ್ಣ ಕೊರವಿ ಅವರು ತಮ್ಮದೇಯಾದ ನಿಟ್ಟಿನಲ್ಲಿ ಬೇಡಿಕೆ ಸಲ್ಲಿಕೆ, ನಾಯಕರ ಮನವೊಲಿಕೆ, ಒತ್ತಡದ ಯತ್ನಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ವೀರಣ್ಣ ಸವಡಿ ಈಗಾಗಲೇ ಮಹಾಪೌರರಾಗಿದ್ದರೂ, ಆಡಳಿತದ ಅನುಭವ, ಕಳೆದ ಸುಮಾರು ಮೂರು ವರ್ಷಗಳಿಂದ ಪಾಲಿಕೆಯಲ್ಲಿ ಆಡಳಿತ ಮಂಡಳಿ ಇಲ್ಲದ್ದರಿಂದ ಆಡಳಿತದ ಸಮರ್ಪಕ ನಿರ್ವಹಣೆ, ರಾಜ್ಯ ಸರಕಾರದೊಂದಿಗೆ ಸಂವಹನ, ಪಕ್ಷದ ನಾಯಕರೊಂದಿಗೆ ನೇರ ಸಂಪರ್ಕ, ಸ್ಮಾರ್ಟ್‌ಸಿಟಿ ಯೋಜನೆ ಅನುಷ್ಠಾನ ಇನ್ನಿತರೆ ಅಂಶಗಳಡಿ ಅನುಭವಿಗಳ ಅವಶ್ಯಕತೆ ಇದ್ದು, ಈ ಎಲ್ಲ ಮಾನದಂಡಗಳಡಿ ವೀರಣ್ಣ ಸವಡಿ ಅವರು ತಮಗೆ ಮತ್ತೂಂದು ಅವಕಾಶ ನೀಡುವಂತೆ ಪಕ್ಷದ ಎಲ್ಲ ನಾಯಕರಿಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇನ್ನುಳಿದ ಏಳು ಜನ ಆಕಾಂಕ್ಷಿಗಳು ತಮಗೊಂದು ಅವಕಾಶ ನೀಡಬೇಕು. ಮೀಸಲಾತಿ ಸಾಮಾನ್ಯ ಬಂದಿರುವುದರಿಂದ ನಮಗೆ ಅವಕಾಶ ಇದ್ದು, ಮುಂದೆ ಮೀಸಲಾತಿ ಬದಲಾದರೆ ನಮಗೆ ಆ ಅವಕಾಶ ದೊರೆಯುದಿಲ್ಲ ಎಂದು ತಮ್ಮದೇ ಒತ್ತಡ ತರುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಮಹಾಪೌರ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿರುವುದರಿಂದ ಲಿಂಗಾಯತ ಸಮುದಾಯಕ್ಕೆ ಸೇರಿದವರನ್ನೇ ಮಹಾಪೌರರನ್ನಾಗಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಗಂಭೀರ ಚಿಂತನೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಿಜೆಪಿಯಲ್ಲಿ ಆಕಾಂಕ್ಷಿಗಳು ಎಷ್ಟೇ ಇದ್ದರೂ, ಏನೇ ಒತ್ತಡ ತಂತ್ರಕ್ಕೆ ಮುಂದಾದರೂ, ಪಕ್ಷದ ನಾಯಕರು ಮಹಾಪೌರ- ಉಪಮಹಾಪೌರ ಚುನಾವಣೆಯ ಒಂದು ದಿನ ಮೊದಲು ಕೋರ್‌ ಕಮಿಟಿ ಸಭೆ ನಡೆಸಿ ಬಹುತೇಕ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ, ಚುನಾವಣೆ ದಿನ ನಾಮಪತ್ರ ಸಲ್ಲಿಕೆಗೆ ಕೆಲ ಹೊತ್ತಿನ ಮೊದಲು ಅದನ್ನು ಬಹಿರಂಗ ಪಡಿಸುವ ಪರಿಪಾಠವನ್ನು ಕೆಲ ವರ್ಷಗಳಿಂದ ಕೈಗೊಳ್ಳುತ್ತ ಬಂದಿದ್ದು, ಈ ಬಾರಿಯೂ ಅದನ್ನೇ ಮುಂದುವರಿಸುವ ಸಾಧ್ಯತೆ ಇಲ್ಲದಿಲ್ಲ.

ಸರಿ ಸುಮಾರು ಮೂರು ವರ್ಷಗಳ ನಂತರ ಅಧಿಕಾರ ಹಿಡಿಯಲಿರುವ ಆಡಳಿತ ಮಂಡಳಿಯಲ್ಲಿ ಬಿಜೆಪಿಯಿಂದ ಮಹಾಪೌರ ಗೌನ್‌ ಧರಿಸುವ ಭಾಗ್ಯ ಯಾರಿಗೆ ಬರಲಿದೆ ಎಂಬುದನ್ನು ಕಾದು ನೋಡಬೇಕು.

28ರಂದು ಮೇಯರ್‌-ಉಪ ಮೇಯರ್‌ ಚುನಾವಣೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21ನೇ ಅವ ಧಿಯ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಮೇ 28ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್‌ ಆದಿತ್ಯ ಬಿಸ್ವಾಸ್‌ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಹಾಪೌರ ಸ್ಥಾನವು ಸಾಮಾನ್ಯ ವರ್ಗ, ಉಪ ಮಹಾಪೌರ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮೇ 28ರಂದು ಚುನಾವಣೆ ನಡೆಯಲಿದೆ. ಅಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 3:00 ಗಂಟೆಗೆ ಸಭೆ ಆರಂಭವಾಗುವುದು. ನಾಮಪತ್ರಗಳ ಪರಿಶೀಲನೆ ನಂತರ ಉಮೇದುವಾರರ ಘೋಷಣೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗುವುದು. ಅಗತ್ಯವಿದ್ದರೆ ಕೈ ಎತ್ತುವ ಮೂಲಕ ಮತದಾನ ನಡೆಸಿ ಮಹಾಪೌರ ಹಾಗೂ ಉಪ ಮಹಾಪೌರರನ್ನು ಚುನಾಯಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.