ಪಾಲಿಕೆಗೆ ಕಳಚಿತು ಜಾಹೀರಾತು ಬಾಕಿ ಉರುಳು

ರಿಟ್‌ ಅರ್ಜಿ ವಜಾಗೊಳಿಸಿದ ಉಚ್ಚ ನ್ಯಾಯಾಲಯ

Team Udayavani, May 16, 2022, 11:28 AM IST

3

ಹುಬ್ಬಳ್ಳಿ: ಜಾಹೀರಾತು ಫಲಕಗಳ ಪರವಾನಗಿ ಶುಲ್ಕ (ಹೋರ್ಡಿಂಗ್ಸ್‌) ಪಾವತಿಯಲ್ಲಿ ಜಿಎಸ್‌ಟಿ ವಿಧಿಸುತ್ತಿರುವ ಕುರಿತ ರಿಟ್‌ ಅರ್ಜಿಗೆ ಹೈಕೋರ್ಟ್‌ ಇತಿಶ್ರೀ ಹಾಡಿದ್ದು, ಕಳೆದ ಐದು ವರ್ಷಗಳಿಂದ ಉಳಿಸಿಕೊಂಡ ಬಾಕಿ ವಸೂಲಿಗೆ ಪಾಲಿಕೆ ಮುಂದಾಗಿದೆ. ಹೈಕೋರ್ಟ್‌ನಲ್ಲಿ ದಾಖಲಾಗಿದ್ದ ಅರ್ಜಿಯ ನೆಪದಲ್ಲಿ ಬಾಕಿ ಉಳಿಸಿಕೊಂಡಿದ್ದವರು ಇದೀಗ ಕೋಟಿಗಟ್ಟಲೆ ಪಾವತಿ ಮಾಡುವ ಪರಿಸ್ಥಿತಿ ಎದುರಾಗಿದೆ.

ಜಾಹೀರಾತುದಾರರು ಹಾಗೂ ಪಾಲಿಕೆ ನಡುವೆ ಒಂದಲ್ಲಾ ಒಂದು ಸಂಘರ್ಷ ನಡೆಯುತ್ತಿದೆ. ಶುಲ್ಕ ಹೆಚ್ಚಳಕ್ಕೆ ವಿರೋಧ ನಂತರದಲ್ಲಿ ತೆರಿಗೆ ಹೀಗೆ ಒಂದಲ್ಲಾ ಒಂದು ಕಾರಣದಿಂದ ಪಾಲಿಕೆಗೆ ಪ್ರತಿವರ್ಷ ಸಂದಾಯವಾಗಬೇಕಾದ ಶುಲ್ಕ ಅಥವಾ ತೆರಿಗೆ ಪಾವತಿಯಾಗುತ್ತಿಲ್ಲ. ಕೆಲ ಜಾಹೀರಾತುದಾರರು ಸಕಾಲಕ್ಕೆ ತೆರಿಗೆ ಪಾವತಿ ಮಾಡುತ್ತಿದ್ದಾರೆ. ಆದರೆ ಬಹುತೇಕರು ನಾನಾ ಕಾರಣಗಳಿಟ್ಟುಕೊಂಡು ಪ್ರತಿವರ್ಷ ಪಾವತಿಗೆ ಮುಂದಾಗುತ್ತಿಲ್ಲ. ಹೀಗಾಗಿ ಹುಬ್ಬಳ್ಳಿಯಲ್ಲಿ 272 ಹಾಗೂ ಧಾರವಾಡದಲ್ಲಿ 63 ಜಾಹೀರಾತು ಫಲಕಗಳಿಂದ ಪಾಲಿಕೆಗೆ ಪ್ರತಿವರ್ಷ ಬರಬೇಕಾದ ಸುಮಾರು 2.30 ಕೋಟಿ ರೂ. ಸಂದಾಯವಾಗುತ್ತಿಲ್ಲ. ಆದರೆ ಜಾಹೀರಾತು ಫಲಕಗಳಿಂದ ಬರುವ ಆದಾಯವನ್ನು ಪರವಾನಗಿದಾರರು ಪಡೆಯುತ್ತಿದ್ದಾರೆ. ಹೀಗಾಗಿ ಕಳೆದ ಐದು ವರ್ಷದಲ್ಲಿ ಪಾಲಿಕೆಗೆ ಸಂದಾಯವಾಗಬೇಕಾದ ಶುಲ್ಕದಲ್ಲಿ ಬರೋಬ್ಬರಿ 9.72 ಕೋಟಿ ರೂ. ಬಾಕಿ ಉಳಿದುಕೊಂಡಿದೆ.

ವಿವಾದ ಏನು?

ಕಳೆದ ಐದು ವರ್ಷಗಳ ಹಿಂದೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಾಯ್ದೆ ಜಾರಿಯಾದ ನಂತರ ಬಹುತೇಕ ಪರವಾನಗಿದಾರರು ತೆರಿಗೆ ಪಾವತಿ ಮಾಡಲಿಲ್ಲ. ಜಿಎಸ್‌ಟಿ ಜಾರಿಯಾದ ನಂತರ ಪಾಲಿಕೆಯಿಂದ ದುಬಾರಿ ತೆರಿಗೆ ವಿಧಿಸಲಾಗುತ್ತಿದೆ. ಜಾಹೀರಾತು ಹೋರ್ಡಿಂಗ್‌ಗಳಿಗೆ ಅನುಮತಿ ನೀಡಲು ಜಾಹೀರಾತು ಏಜೆನ್ಸಿಗಳಿಗೆ ಜಾಹೀರಾತು ತೆರಿಗೆ ಅಥವಾ ಶುಲ್ಕ ವಿಧಿಸಲು ಪಾಲಿಕೆಗೆ ಅಧಿಕಾರವಿಲ್ಲ ಎಂಬುದು ಜಾಹೀರಾತುದಾರರ ಸಂಘದ ವಾದವಾಗಿತ್ತು. ಹೀಗಾಗಿ ಕೆಲವರು ಕಳೆದ ಐದು ವರ್ಷಗಳಿಂದ ಶುಲ್ಕ ಬಾಕಿ ಉಳಿಸಿಕೊಂಡಿದ್ದರು. ಕಳೆದ ವರ್ಷ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಎರಡು ವರ್ಷಗಳಿಂದ ಬಹುತೇಕ ಶುಲ್ಕ ಪಾವತಿ ಸ್ಥಗಿತಗೊಂಡಿತ್ತು. ಇದೀಗ ಹೈಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿ ಪಾಲಿಕೆ ನಿರ್ಧಾರವನ್ನು ಎತ್ತಿಹಿಡಿದಿದೆ. ಹೀಗಾಗಿ ಕೋರ್ಟ್‌ ನೆಪವಿಟ್ಟುಕೊಂಡು ಕೋಟಿಗಟ್ಟಲೆ ಬಾಕಿ ಉಳಿಸಿಕೊಂಡವರು ಪಾವತಿ ಮಾಡಲೇಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಪಾಲಿಕೆ

ಶುಲ್ಕ ಪಾವತಿ ಮಾಡದವರ ಫಲಕಗಳ ಮೇಲಿನ ಜಾಹೀರಾತು ತೆರವಿಗೆ ಪಾಲಿಕೆ ಮುಂದಾಗಿದೆ. ಪಾಲಿಕೆಗೆ ನೂತನವಾಗಿ ಆಗಮಿಸಿದ್ದ ಕಂದಾಯ ವಿಭಾಗದ ಉಪ ಆಯುಕ್ತರು ಬಾಕಿ ಪಾವತಿ ಮಾಡಬೇಕು. ಮುಂದೆ ಹೈಕೋರ್ಟ್‌ ನೀಡುವ ಆದೇಶದ ಪ್ರಕಾರ ಪಾಲಿಕೆ ನಡೆದುಕೊಳ್ಳುತ್ತದೆ ಎಂದು ಎಲ್ಲಾ ಪರವಾನಗಿದಾರರಿಗೆ ನೋಟಿಸ್‌ ಜಾರಿ ಮಾಡಿದ್ದರು. ಇದರಿಂದಾಗಿ ಕೆಲವರು ಪಾವತಿಗೆ ಮುಂದಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಒಂದಿಷ್ಟು ಶುಲ್ಕ ಪಾವತಿಯಾಗಿದೆ. ಪಾಲಿಕೆಯಲ್ಲಿ ಹಿಂದಿದ್ದ ಅಧಿಕಾರಿಗಳು ಕಳೆದ ಐದು ವರ್ಷಗಳಲ್ಲಿ ಈ ಕಾರ್ಯ ಮಾಡಿದ್ದರೆ ಇಷ್ಟೊಂದು ಹೊರೆಯಾಗುತ್ತಿರಲಿಲ್ಲ ಎನ್ನುವುದು ಅಧಿಕಾರಿಗಳ ಅಭಿಪ್ರಾಯವಾಗಿದೆ.

ಯಾರ್ಯಾರಿಂದ ಎಷ್ಟೆಷ್ಟು ಬಾಕಿ?

ಬಾಕಿ ಉಳಿಸಿಕೊಂಡವರು ನವೀಕರಣ, ಬಾಕಿ, ಚಾಲ್ತಿ ಹಾಗೂ ಬಾಕಿ ಉಳಿದಿರುವ ಪ್ರತಿ ತಿಂಗಳಿಗೆ ಶೇ. 1.5 ನೋಟಿಸ್‌ ಫೀ ಕೂಡ ಪಾವತಿ ಮಾಡಬೇಕಾಗಿದೆ. ಅರಿಹಂತ ಆ್ಯಡ್ಸ್‌ -1,28,94,348 ರೂ., ತಿರುಮಲಾ ಆ್ಯಡ್ಸ್‌-1,22,07,184 ರೂ., ಕಲರ್‌ ಪಾಯಿಂಟ್ಸ್ -78,61,946 ರೂ., ಪೂರ್ಣಿಮಾ ಆರ್ಟ್ಸ್-53,47,435 ರೂ., ಕ್ರಿಯೇಟಿವ್‌ ಆ್ಯಡ್ಸ್‌-34,59,107 ರೂ., ದಿ ಪ್ರಿಸಂ ಅಡ್ವರ್ಟೈಸರ್ -8,70,857 ರೂ., ಇತರೆ ಪರವಾನಗಿದಾರರ ಬಾಕಿ ಸೇರಿದಂತೆ ಒಟ್ಟು ಬರೋಬ್ಬರಿ 9,72,94,019 ರೂ. ಪಾಲಿಕೆಗೆ ಸಂದಾಯವಾಗಬೇಕಾಗಿದೆ. ಕೆಲವರು ಐದು ವರ್ಷಗಳಿಂದಲೂ ಬಾಕಿ ಉಳಿಸಿಕೊಂಡಿದ್ದಾರೆ. ಇದೀಗ 2022-23ನೇ ಸಾಲಿನ ಶುಲ್ಕವೂ ಪಾವತಿ ಮಾಡಬೇಕಾಗಿದೆ.

ಬಾಕಿ ವಸೂಲಿಗೆ ಕ್ರಮ

ಹೈಕೋರ್ಟ್‌ ಅರ್ಜಿಯನ್ನು ವಜಾ ಮಾಡುತ್ತಿದ್ದಂತೆ ಎಲ್ಲಾ ಪರವಾನಗಿದಾರರಿಗೆ ಕಂದಾಯ ವಿಭಾಗದಿಂದ ಚಲನ್‌ ನೀಡಲಾಗಿದ್ದು, ನೋಟಿಸ್‌ ಜಾರಿ ಮಾಡಿ ಬಾಕಿ ಪಾವತಿ ಮಾಡುವಂತೆ ಎಚ್ಚರಿಕೆ ನೀಡಲಾಗುತ್ತಿದೆ. ಪಾಲಿಕೆ ನಿಯಮಾವಳಿ ಪ್ರಕಾರ ಮೂರು ನೋಟಿಸ್‌ ಜಾರಿ ಮಾಡಿದ ನಂತರ ಬಾಕಿ ಉಳಿಸಿಕೊಳ್ಳುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ. ರಿಟ್‌ ಅರ್ಜಿ ವಜಾಗೊಂಡ ನಂತರ ನೋಟಿಸ್‌ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವರು ಬಾಕಿ ಪಾವತಿಗೆ ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಬಾಕಿ ಉಳಿಯದಂತೆ ವಸೂಲು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಪಾಲಿಕೆ ನಿಯಮಗಳ ಪ್ರಕಾರ ಕಳೆದ ಮೂರ್‍ನಾಲ್ಕು ತಿಂಗಳಿನಿಂದ ಬಾಕಿ ವಸೂಲಿಗೆ ನೋಟಿಸ್‌ ಜಾರಿ ಮಾಡಲಾಗುತ್ತಿದೆ. ಈಗಾಗಲೇ ಬಾಕಿ ಉಳಿಸಿಕೊಂಡವರ ಜಾಹೀರಾತುಗಳನ್ನು ನಿಯಮಗಳ ಪ್ರಕಾರ ತೆರವುಗೊಳಿಸುವ ಕೆಲಸ ಆಗುತ್ತಿದೆ. ಅವರಿಗೆ ಮನವರಿಕೆ ಮಾಡುವ ಕೆಲಸ ಪಾಲಿಕೆಯಿಂದ ಆಗಲಿದೆ. ಇಷ್ಟಕ್ಕೂ ಬಾಕಿ ವಸೂಲಿ ಆಗದಿದ್ದರೆ ಪಾಲಿಕೆ ನಿಯಮಗಳ ಪ್ರಕಾರ ಯಾವ ಕ್ರಮ ಕೈಗೊಳ್ಳಬಹುದು ಎಂಬುದನ್ನು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಡಾ| ಬಿ.ಗೋಪಾಲಕೃಷ್ಣ, ಆಯುಕ್ತರು, ಮಹಾನಗರ ಪಾಲಿಕೆ

ಸರಕಾರದ ಆದೇಶದಲ್ಲಿ ಜಾಹೀರಾತು ತೆರಿಗೆ ರದ್ದು ಮಾಡಿದ್ದರೂ ಪಾಲಿಕೆಯಿಂದ ನಮ್ಮ ಮೇಲೆ ಹೇರುತ್ತಿದ್ದಾರೆ. ಇದನ್ನು ಖಂಡಿಸಿ ರಿಟ್‌ ಅರ್ಜಿ ಹಾಕಿದ್ದೆವು. ನಮ್ಮ ವಿರುದ್ಧವಾಗಿ ಆದೇಶ ಬಂದಿದ್ದು, ಎಲ್ಲರೊಂದಿಗೆ ಚರ್ಚಿಸಿ ಮೇಲ್ಮನವಿ ಹೋಗುವ ಬಗ್ಗೆ ನಿರ್ಧರಿಸಲಾಗುವುದು. ಜಾಹೀರಾತು ತೆರವುಗೊಳಿಸುವ ಪಾಲಿಕೆ ಕೆಲಸ ನಷ್ಟಕ್ಕೆ ಕಾರಣವಾಗುತ್ತಿದೆ. ಇದೀಗ ನೀಡಿರುವ ಚಲನ್‌ನಲ್ಲಿ ಸಾಕಷ್ಟು ನ್ಯೂನತೆಗಳಿವೆ. ಇವುಗಳ ಬಗ್ಗೆ ಕೇಳಿದರೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಇಂತಹ ಅಸಡ್ಡೆ ಹಾಗೂ ನಿಯಮ ವಿರೋಧಿ ನಿರ್ಧಾರಗಳಿಂದಾಗಿ ಪಾಲಿಕೆ ವಿರುದ್ಧ ಕೋರ್ಟ್‌ ಮೆಟ್ಟಿಲೇರುವಂತಾಗಿದೆ. –ಸಂದೀಪ ರೋಖಡೆ, ಅಧ್ಯಕ್ಷ, ಹು-ಧಾ ಜಾಹೀರಾತುದಾರರ ಸಂಘ

ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದವರು ಕೆಲವರು ಮಾತ್ರ. ಆದರೆ ಇದನ್ನೇ ನೆಪವಾಗಿಟ್ಟುಕೊಂಡು ಹಲವರು ಶುಲ್ಕ ಪಾವತಿ ಮಾಡಿಲ್ಲ. ಕೆಲವರು ಐದು ವರ್ಷಗಳಿಂದ ಜಾಹೀರಾತು ತೆರಿಗೆ ಪಾವತಿ ಮಾಡಿಲ್ಲ. ಇದೀಗ ಘನ ನ್ಯಾಯಾಲಯ ರಿಟ್‌ ಅರ್ಜಿ ವಜಾಗೊಳಿಸಿದೆ. ಸುಮಾರು 9.72 ಕೋಟಿ ರೂ. ಪಾಲಿಕೆಗೆ ಬರಬೇಕಾಗಿದೆ. ವಸೂಲಾತಿಗೆ ಯಾವುದೇ ಕಾರಣಕ್ಕೂ ವಿಳಂಬ ಮಾಡುವ ಪ್ರಶ್ನೆಯಿಲ್ಲ. –ಆನಂದ ಕಲ್ಲೋಳಿಕರ, ಉಪ ಆಯುಕ್ತ, ಕಂದಾಯ ವಿಭಾಗ            

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.