ಈದ್ಗಾದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಿ
ಮತ್ತೇ ಮನವಿ ಸಲ್ಲಿಸುವ ಮೂಲಕ ಮಹಾನಗರ ಪಾಲಿಕೆಗೆ ಮೂರು ದಿನಗಳ ಗಡುವು ನೀಡಲಾಗಿದೆ.
Team Udayavani, Aug 18, 2022, 4:30 PM IST
ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು ಹಾಗೂ ಮೂರು ದಿನಗಳಲ್ಲಿ ಸ್ಪಷ್ಟ ಹೇಳಿಕೆ ನೀಡಬೇಕೆಂದು ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ಬುಧವಾರ ಮಹಾಪೌರರು ಹಾಗೂ ಪಾಲಿಕೆ ಆಯುಕ್ತರಿಗೆ ಮರು ಮನವಿ ಸಲ್ಲಿಸಿದರು.
ಈದ್ಗಾ ಮೈದಾನದಲ್ಲಿ ಕಳೆದ ಕೆಲವು ವರ್ಷಗಳಿಂದ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಮನವಿ ಸಲ್ಲಿಸುತ್ತಿದ್ದರೂ ಇದುವರೆಗೆ ಮಹಾನಗರ ಪಾಲಿಕೆಯಿಂದ ಯಾವುದೇ ಅಭಿಪ್ರಾಯ ವ್ಯಕ್ತವಾಗಿಲ್ಲ. ಈ ಕುರಿತು ಪಾಲಿಕೆ ಆಯುಕ್ತರಿಗೆ, ಮಹಾಪೌರರಿಗೆ ಸೇರಿದಂತೆ ಹಲವರಿಗೆ ವಿವಿಧ ಹಿಂದೂಪರ ಸಂಘಟನೆಗಳಿಂದ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಇದೀಗ ಮತ್ತೇ ಮನವಿ ಸಲ್ಲಿಸುವ ಮೂಲಕ ಮಹಾನಗರ ಪಾಲಿಕೆಗೆ ಮೂರು ದಿನಗಳ ಗಡುವು ನೀಡಲಾಗಿದೆ. ಅಷ್ಟರಲ್ಲಿ ಮಹಾನಗರ ಪಾಲಿಕೆ ಆಯುಕ್ತರು ನಮಗೆ ಸ್ಪಷ್ಟತೆ ನೀಡಬೇಕು. ಇಲ್ಲದಿದ್ದಲ್ಲಿ ಮುಂದಿನ ಹೋರಾಟದ ರೂಪರೇಷೆ ಸಿದ್ಧಪಡಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ, ಹಿಂದೂ ಜಾಗರ ವೇದಿಕೆ, ಶ್ರೀರಾಮ ಸೇನೆ ಹಾಗೂ ವಿವಿಧ ಗಣೇಶ ಉತ್ಸವ ಮಂಡಳಿಗಳಿಂದ ಮನವಿ ಸಲ್ಲಿಸಲಾಯಿತು. ಸಮಿತಿ ಸಂಚಾಲಕ ಹನಮಂತಸಾ ನಿರಂಜನ ಮಾತನಾಡಿದರು. ಸದಸ್ಯರಾದ ವಿಶ್ವನಾಥ ಕುಲಕರ್ಣಿ, ಸಂತೋಷ ಕಠಾರೆ, ರಾಘವೇಂದ್ರ ಕಠಾರೆ, ರಾಜಶ್ರೀ ಜಡಿ, ಸಾಗರ ಪವಾರ, ಅಭಿಷೇಕ ನಿರಂಜನ ಮೊದಲಾದವರಿದ್ದರು.
ಪಾಲಿಕೆ ಆಯುಕ್ತ ಡಾ|ಬಿ.ಗೋಪಾಲಕೃಷ್ಣ ಪ್ರತಿಕ್ರಿಯಿಸಿ, ಈದ್ಗಾ ಮೈದಾನ ಪಾಲಿಕೆ ಆಸ್ತಿಯಾಗಿದೆ. ಗಣೇಶ ಆಚರಣೆ ಅವಕಾಶ ಕೇಳಿದ್ದಾರೆ. ಪರಿಸ್ಥಿತಿ ಅರಿತು ಪಾಲಿಕೆ ಎಲ್ಲ ಚುನಾಯಿತ ಸದಸ್ಯರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ವಿಚಾರವಾಗಿ ಯಾವುದೇ ಒತ್ತಡವಿಲ್ಲ. ಇದು ಕರ್ತವ್ಯದ ಒಂದು ಭಾಗವಾಗಿದೆ ಎಂದರು.
ಪಾಲಿಕೆ ಆಯುಕ್ತರು ಹಾಗೂ ಸರ್ವ ಸದಸ್ಯರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಂಡು ನಂತರ ತಿಳಿಸಲಾಗುವುದು ಎಂದು ಮನವಿ ಸ್ವೀಕರಿಸಿದ ಮಹಾಪೌರ ಈರೇಶ ಅಂಚಟಗೇರಿ ಪ್ರತಿಭಟನಾಕಾರರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ