ಜಲಮೂಲ ಸಂರಕ್ಷಿಸಲು ಜಾಗೃತಿ ಅವಶ್ಯ

55 ಜನರಿಂದ ಬೈಕ್‌ ರ್ಯಾಲಿ-ವಾಕಥಾನ್‌

Team Udayavani, Mar 28, 2022, 11:05 AM IST

4

ಹುಬ್ಬಳ್ಳಿ: ನಮ್ಮ ಭೂಮಿಯಲ್ಲಿ ಶೇ.3 ಮಾತ್ರ ಕುಡಿಯುವ ನೀರು ಇದೆ. ನೀರು ವ್ಯರ್ಥ ಮಾಡಬಾರದು. ಮುಂದಿನ ಜನಾಂಗಕ್ಕೆ ನಾವು ನೀರು ಉಳಿಸಿಕೊಡಬೇಕು. ಪ್ರತಿಯೊಬ್ಬರೂ ನೀರಿನ ಬಗ್ಗೆ ಜಾಗೃತಿ ವಹಿಸುವ ಅಗತ್ಯವಿದೆ ಎಂದು ಸಂಕೇಶ್ವರ ವೆಂಚರ್ಸ್‌ (ಇಂಡಿಯಾ) ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಸಂಕೇಶ್ವರ ಹೇಳಿದರು.

ನೀರು ಉಳಿಸಿ, ಭೂಮಿ ಸಂರಕ್ಷಿಸಿ ಅಭಿಯಾನದಡಿ ಸಂಕೇಶ್ವರ ವೆಂಚರ್ಸ್‌ ಕಂಪನಿ, ರೋಟರಿ ಕ್ಲಬ್‌ ಆಫ್‌ ಹುಬ್ಬಳ್ಳಿ ಪರಿವಾರ, ಯಂಗ್‌ ಇಂಡಿಯಾ, ಹುಬ್ಬಳ್ಳಿ ಬೈಸಿಕಲ್‌ ಕ್ಲಬ್‌, ಇನ್ನರ್‌ವೀಲ್‌ ಮಹಿಳಾ ಕ್ಲಬ್‌, 99 ಕೆನ್ನಾಸ್‌ ಮೋಟರ್‌ ಸೈಕಲ್‌ ಕ್ಲಬ್‌, 98.3 ಎಫ್‌ಎಂ (ರೇಡಿಯೋ ಮಿರ್ಚಿ) ಸಹಭಾಗಿತ್ವದಲ್ಲಿ ನಗರದಲ್ಲಿ ರವಿವಾರ ಹಮ್ಮಿಕೊಂಡಿದ್ದ ಜಲಸಂರಕ್ಷಣೆಗಾಗಿ ಜಾಗೃತಿ ರ್ಯಾಲಿಯಲ್ಲಿ ಅವರು ಮಾತನಾಡಿದರು.

ಭಾರತದಲ್ಲಿ 7 ಮಿನರಲ್‌ ವಾಟರ್‌ ಪೂರೈಕೆ ಮಾಡುವ ಏಕೈಕ ಸಂಸ್ಥೆ “ಓಂಕಾರ’. ಒಂದು ಲೀಟರ್‌ ನೀರು ಹೊರಬರಲು 2 ಲೀಟರ್‌ ನೀರು ರಿಚಾರ್ಜ್‌ ಮಾಡಲಾಗುತ್ತಿದೆ. ನೀರಿನ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ ಎಂದರು.

ಹು-ಧಾ ಮಹಾನಗರ ಪಾಲಿಕೆ ಉಪ ಆಯುಕ್ತ ಮಾಧವರಾವ್‌ ಗಿತ್ತೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿ, ನೀರನ್ನು ಹಿತಮಿತವಾಗಿ ಬಳಸಬೇಕು. ನೀರು ನಮ್ಮ ಬದುಕಿನ ಅವಿಭಾಜ್ಯ ಅಂಗ. ನಾವು ಭೂಮಿಯ ಮೇಲೆ ಜೀವಂತವಿರಲು ನೀರು ಅಗತ್ಯ. ಜನರಿಗೆ ಈಗಾಗಲೇ ಇದರ ಮಹತ್ವ ಅರಿವಾಗುತ್ತಿದೆ. ಜಲಮೂಲಗಳನ್ನು ಸಂರಕ್ಷಿಸಲು ಇನ್ನಷ್ಟು ಜಾಗೃತಿ ವಹಿಸುವ ಅವಶ್ಯವಿದೆ ಎಂದರು.

ರೋಟರಿ ಪರಿವಾರದ ಇವೆಂಟ್‌ ಚೇರ್ಮನ್‌ ವಿಜಯ ಹಟ್ಟಿಹೊಳಿ, ಅನೀಸ ಖೋಜೆ, ಕೌಸ್ತುಭ ಸಂಶೀಕರ, ಶಂಕರ ಹಿರೇಮಠ, ರಾಜೇಶ ತೋಳನವರ, ಗುರು ಕಲ್ಮಠ, ಸಂಜೀವ ಭಾಟಿಯಾ, ಇಮಾಮ ಕೋಳೂರು, ಗುರುಮೂರ್ತಿ, ಡಾ. ನಾಗೇಶ ನಾಯಕ, ಆರ್‌ಜೆ ಶಾರೂಖ್‌ ಮೊದಲಾದವರಿದ್ದರು.

ನೀರಿನ ಸದ್ಬಳಕೆಗೆ ಜಾಗೃತಿ ರ್ಯಾಲಿ: ತೋಳನಕೆರೆಯಿಂದ ರಂಭಾಪುರಿ ಕಲ್ಯಾಣ ಮಂಟಪ, ಬಿವಿಬಿ ಕಾಲೇಜು, ಹೊಸೂರು ವೃತ್ತ, ಚನ್ನಮ್ಮ ವೃತ್ತ ಮಾರ್ಗವಾಗಿ ಗೋಕುಲ ರಸ್ತೆ, ತತ್ವದರ್ಶ ಆಸ್ಪತ್ರೆ ಮುಖಾಂತರ ಮರಳಿ ತೋಳನಕೆರೆ ವರೆಗೆ ಸೈಕಲ್‌ ರ್ಯಾಲಿ ನಡೆಯಿತು. 55 ಜನರು ಬೈಕ್‌ ಮೂಲಕ ತೋಳನಕೆರೆಯಿಂದ ಪ್ರಸಿಡೆಂಟ್‌ ಹೋಟೆಲ್‌, ಸಾಯಿನಗರ ರಸ್ತೆ, ಜೆ.ಕೆ. ಸ್ಕೂಲ್‌, ರಮೇಶ ಭವನ, ಮಧುರಾ ಎಸ್ಟೇಟ್‌, ಸವೊìàದಯ ವೃತ್ತ, ರೈಲ್ವೆ ಸ್ಟೇಷನ್‌, ಚನ್ನಮ್ಮ ವೃತ್ತ, ಹಳೇ ಹುಬ್ಬಳ್ಳಿ, ಸಿದ್ದಾರೂಢ ಮಠ, ಅಕ್ಷಯ ಪಾರ್ಕ್‌, ವಿಮಾನ ನಿಲ್ದಾಣ ಮೂಲಕ ಮರಳಿ ತೋಳನಕೆರೆ ತಲುಪಿದರು. ತೋಳನಕೆರೆಯಿಂದ ಕಾಡಸಿದ್ದೇಶ್ವರ ಕಾಲೇಜುವರೆಗೆ ವಾಕಥಾನ್‌ ನಡೆಯಿತು. ಜೊತೆಗೆ ಆಟೋ ರಿಕ್ಷಾಗಳ ಮೂಲಕವು ನೀರಿನ ಸದ್ಬಳಕೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪ್ರತಿ ಪಾಯಿಂಟ್‌ನಲ್ಲಿ ನೀರು, ಹಣ್ಣು-ಹಂಪಲು ವಿತರಿಸಲಾಯಿತು.

ಟಾಪ್ ನ್ಯೂಸ್

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.