ಮನುಕುಲದ ಉದ್ಧಾರಕ್ಕೆ ಭಜನೆ ಶ್ರೇಷ್ಠ ಸಾಧನ: ನ್ಯಾ| ಅಡಿಗ

ಸಿದ್ಧಾರೂಢ ಮಠದಲ್ಲಿ ರಾಜ್ಯಮಟ್ಟದ ಭಜನಾ ಸ್ಪರ್ಧೆಗೆ ಚಾಲನೆ

Team Udayavani, Apr 5, 2022, 12:33 PM IST

7

ಹುಬ್ಬಳ್ಳಿ: ಮನುಕುಲದ ಉದ್ಧಾರಕ್ಕೆ ಭಜನೆ ಶ್ರೇಷ್ಠವಾದ ಸಾಧನವೆಂದು ಶ್ರೀಮಠದ ಮುಖ್ಯ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಹೇಳಿದರು.

ಸಿದ್ಧಾರೂಢಸ್ವಾಮಿ ಮಠದಲ್ಲಿ ಸೋಮವಾರ ಸಿದ್ಧಾರೂಢ ಸ್ವಾಮಿಯವರ 186ನೇ ಜಯಂತ್ಯುತ್ಸವ ನಿಮಿತ್ತ 7ನೇ ವರ್ಷದ ರಾಜ್ಯಮಟ್ಟದ ಭಜನಾ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಕಲಿಯುಗದಲ್ಲಿ ನಾಮ ಸಂಕೀರ್ತನೆ, ಭಜನೆ ಮೋಕ್ಷಕ್ಕೆ ಸುಲಭವಾದ ಸಾಧನಗಳಾಗಿವೆ. ಈ ರೀತಿಯಾದ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿರುವ ಧರ್ಮದರ್ಶಿಗಳು ಹಾಗೂ ರಾಜ್ಯ ಮಟ್ಟದ ಸ್ಪರ್ಧೆಯ ಅಧ್ಯಕ್ಷ ಶಾಮಾನಂದ ಪೂಜೇರಿ ಅವರ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯ ಎಂದರು.

ಅಣ್ಣಿಗೇರಿ ದಾಸೋಹ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಆಶೀರ್ವಚನ ನೀಡಿ, ಭಜನೆ ಬ್ರಹ್ಮಾನಂದ ವನ್ನು ತಂದು ಕೊಡುವ ಕಲಿಯುಗದ ಏಕೈಕ ಸಾಧನೆ. ಸಿದ್ಧಾರೂಢರ ಮಠ ಭಜನೆ, ಶಾಸ್ತ್ರ, ಪುರಾಣ, ಕೀರ್ತ ನೆಗಳಿಗೆ ಮೀಸಲಾಗಿಟ್ಟ ಪವಿತ್ರವಾದ ಕ್ಷೇತ್ರ. ಈ ಕ್ಷೇತ್ರದಲ್ಲಿ ವರ್ಷಕ್ಕೆ ಒಂದು ಬಾರಿಯಾದರೂ ಇಂತಹ ಭಜನಾ ಸ್ಪರ್ಧೆ ನಡೆಯಲೇಬೇಕು. ಭಜನೆ ಮಾಡುವುದರಿಂದ ತನು, ಮನ ಪರಿಶುದ್ಧವಾಗುತ್ತದೆ ಎಂದು ಹೇಳಿದರು.

ನಿಜಗುಣರ ಕೈವಲ್ಯ ಪದಗಳು ಉತ್ತರ ಕರ್ನಾಟಕದಲ್ಲಿ ಮಾತ್ರ ಪ್ರಚಲಿತವಾಗಿವೆ. ಆದ ಕಾರಣ ಇದನ್ನು ಇಡೀ ರಾಜ್ಯದ ತುಂಬೆಲ್ಲಾ ಪ್ರಚಾರ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯವಾದ ವಿಷಯವೆಂದರು.

ಶ್ರೀಮಠದ ಚೇರ್ಮೇನ್‌ ಡಿ.ಡಿ. ಮಾಳಗಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಶಿವಬಸವ ಸ್ವಾಮೀಜಿ, ಹಿರಿಯ ದಿವಾಣಿ ನ್ಯಾಯಾಧೀಶ ರವಿ ಆರಿ, ವೈಸ್‌ಚೇರ್ಮೇನ್‌ ಡಾ| ಗೋವಿಂದ ಮಣ್ಣೂರ, ಗೌರವ ಕಾರ್ಯದರ್ಶಿ ಜಗದೀಶ ಮಗಜಿಕೊಂಡಿ, ಧರ್ಮದರ್ಶಿಗಳಾದ ಪ್ರಕಾಶ ಉಡಿಕೇರಿ, ಜಿ.ಎಸ್‌. ನಾಯಕ, ಮಹೇಶಪ್ಪ ಹನಗೋಡಿ, ಧರಣೇಂದ್ರ ಜವಳಿ, ಕೆ.ಕೆ. ತೆರಗುಂಟಿ, ಮಠದ ವ್ಯವಸ್ಥಾಪಕ ಈರಣ್ಣ ತುಪ್ಪದ ಮೊದಲಾದವರಿದ್ದರು.

ರಾಜ್ಯಮಟ್ಟದ ಭಜನಾ ಸ್ಪರ್ಧೆಯ ಅಧ್ಯಕ್ಷ ಶಾಮಾನಂದ ಪೂಜೇರಿ ಸ್ವಾಗತಿಸಿದರು. ಧರ್ಮದರ್ಶಿ ಎಸ್‌.ಐ. ಕೋಳಕೂರ ನಿರೂಪಿಸಿದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.