150ಕ್ಕೂಹೆಚ್ಚು ಶಿಕ್ಷಕಿಯರಿಗೆ ಕ್ಯಾನ್ಸರ್ ತಪಾಸಣೆ
Team Udayavani, Jan 24, 2021, 11:58 AM IST
ಹುಬ್ಬಳ್ಳಿ: ಅವ್ವ ಸೇವಾ ಟ್ರಸ್ಟ್ ಹಾಗೂ ಎಚ್ಸಿಜಿ-ಎನ್ಎಂಆರ್ ಕ್ಯಾನ್ಸರ್ ಕೇಂದ್ರದ ಸಹಯೋಗದಲ್ಲಿ ಶಿಕ್ಷಕಿ ಯರಿಗೆ ಗರ್ಭ ಕೊರಳಿನ ಕ್ಯಾನ್ಸರ್ ತಪಾಸಣಾ ಶಿಬಿರ ಲ್ಯಾಮಿಂಗ್ಟನ್ ಬಾಲಕಿ ಯರ ಪ್ರೌಢಶಾಲೆ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಟ್ರಸ್ಟ್ ಸಂಸ್ಥಾಪಕ ಹಾಗೂ ವಿಧಾನ ಪರಿಷತ್ತು ಸದಸ್ಯ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಕ ಸಮುದಾಯ ನನ್ನ ಮೇಲಿಟ್ಟಿರುವ ಪ್ರೀತಿ-ವಿಶ್ವಾಸಕ್ಕೆ ಋಣಿಯಾಗಿದ್ದೇನೆ. ಕ್ಯಾನ್ಸರ್ ರೋಗ ತಪಾಸಣೆ ಶಿಬಿರವನ್ನು ಕಳೆದ 10 ವರ್ಷಗಳಿಂದ ಅವ್ವ ಸೇವಾ ಟ್ರಸ್ಟ್ನಿಂದ ಹಮ್ಮಿಕೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಎಲ್ಲ ಶಿಕ್ಷಕಿಯರಿಗೆ ತಪಾಸಣೆ ಹಾಗೂ ರೋಗದ ತಡೆ ಲಸಿಕೆಯನ್ನು ಮೂರು ಹಂತದಲ್ಲಿ ನೀಡುವ ಬೃಹತ್ ಆರೊಗ್ಯ ಶಿಬಿರಗಳನ್ನು ಟ್ರಸ್ಟ್ ಹಮ್ಮಿಕೊಳ್ಳಲಿದೆ ಎಂದರು.
ಇದನ್ನೂ ಓದಿ:ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ : ಸೈಫ್ ಅಲಿಖಾನ್ ಸೇರಿ 5 ಮಂದಿ ವಿರುದ್ಧ ಕೇಸ್
ಎಚ್ಸಿಜಿ ಕ್ಯಾನ್ಸರ್ ಕೇಂದ್ರದ ಹಿರಿಯ ತಜ್ಞ ಡಾ| ರವಿ ಕಲಘಟಗಿ ಹಾಗೂ ಹಿರಿಯ ಪ್ರಸೂತಿ ತಜ್ಞೆ ಡಾ| ಮೀನಾ ಕಲಘಟಗಿ ನೇತೃತ್ವದಲ್ಲಿ, ಕ್ಯಾನ್ಸರ್ ರೋಗ ತಜ್ಞರಾದ ಡಾ| ವಿನಯಕುಮಾರ ಮುತ್ತಗಿ, ಡಾ| ಜಯಕಿಶನ್ ಇನ್ನಿತರ ತಜ್ಞರು ಸುಮಾರು 150ಕ್ಕೂ ಹೆಚ್ಚು ಶಿಕ್ಷಕಿಯರಿಗೆ ತಪಾಸಣೆ ನಡೆಸಿದರು. ಅವ್ವ ಸೇವಾ ಟ್ರಸ್ಟ್ ಕಾರ್ಯದರ್ಶಿ ಶಶಿ ಸಾಲಿ ಪ್ರಾಸ್ತಾವಿಕ ಮಾತನಾಡಿದರು. ಶ್ರೀಪಾದ ರಾಣೆ, ಡಿ.ಬಿ. ಮಾಸೂರ ಇನ್ನಿತರರಿದ್ದರು. ಶಿಕ್ಷಕ ಎಸ್.ವಿ. ಪಟ್ಟಣಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು