ಕಾಂಗ್ರೆಸ್ಗೆ ತಾಕತ್ತು ಇದ್ದರೆ ಮೀಸಲು ನಿಲುವು ಸ್ಪಷ್ಟಪಡಿಸಲಿ: Basavaraj Bommai ಸವಾಲು
Team Udayavani, Apr 7, 2023, 7:48 AM IST
ಹುಬ್ಬಳ್ಳಿ: ಕಾಂಗ್ರೆಸ್ಗೆ ತಾಕತ್ತು ಇದ್ದರೆ ತಾನು ಮೀಸಲು ಹೆಚ್ಚಳ ಹಾಗೂ ಒಳ ಮೀಸಲಾತಿಯ ಪರವೋ, ವಿರೋಧವೋ ಎಂಬ ನಿಲುವನ್ನು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲೆಸೆದರು.
ಮೀಸಲಾತಿ ಹೆಚ್ಚಳ-ಒಳ ಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಒಕ್ಕೂಟ ನಗರದಲ್ಲಿ ಗುರುವಾರ ಆಯೋಜಿಸಿದ್ದ ಅಭಿನಂದನ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ಇದು ಪರೀಕ್ಷೆ ಕಾಲ. ಇಲ್ಲಿಯವರೆಗೂ ದಲಿತರನ್ನು ಮತ ಬ್ಯಾಂಕ್ ಆಗಿಸಿಕೊಂಡು ಅಧಿಕಾರ ಅನುಭವಿಸುತ್ತಾ ಬಂದಿತ್ತು. ಮೀಸಲು ಹೆಚ್ಚಳ ಹಾಗೂ ಒಳ ಮೀಸಲಾತಿ ವಿಚಾರದಲ್ಲೂ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿತ್ತು. ಕಾಂಗ್ರೆಸ್ ಅಸಾಧ್ಯವೆಂದು ರಾಜಕೀಯವಾಗಿ ವ್ಯಾಖ್ಯಾನಿಸುತ್ತಿದ್ದ ಮೀಸಲು ಹೆಚ್ಚಳ ಹಾಗೂ ಒಳಮೀಸಲು ನೀಡಿಕೆಯನ್ನು ಬಿಜೆಪಿ ಸರಕಾರ ಸಾಧ್ಯವಾಗಿಸಿದೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ತಾವು ಮೀಸಲು ಹೆಚ್ಚಳ ಹಾಗೂ ಒಳಮೀಸಲು ಪರ ಅಥವಾ ವಿರೋಧವೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಬಂಜಾರ, ಭೋವಿ ಸೇರಿದಂತೆ ಆರು ಸಮಾಜದವರನ್ನು ಮೀಸಲಾತಿ ಪಟ್ಟಿಯಿಂದ ತೆಗೆಯದ ರೀತಿಯಲ್ಲಿ ಆಜ್ಞೆ ಹೊರಡಿಸಿದ್ದೇನೆ ಎಂದು ಸಿಎಂ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?