ಪತಿ ವಿರುದ್ದ ಪಾಲಿಕೆ ಸದಸ್ಯೆ ದೂರು

ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾಗಿ ದೂರು ; ಗರ್ಭಿಣಿ ಎಂಬುದನ್ನು ಲೆಕ್ಕಿಸದೆ ಕಾಲಿನಿಂದ ಒದ್ದಿದ್ದಾಗಿ ಆರೋಪ

Team Udayavani, Jun 28, 2022, 1:10 PM IST

10

ಹುಬ್ಬಳ್ಳಿ: ಮಹಾನಗರ ಪಾಲಿಕೆ ಸದಸ್ಯೆಯ ಜತೆ ಅವರ ಪತಿ ಜಗಳ ಮಾಡಿದ್ದಲ್ಲದೆ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಸದಸ್ಯೆ ಕೇಶ್ವಾಪುರ ಠಾಣೆಯಲ್ಲಿ ಪತಿ ವಿರುದ್ಧ ದೂರು ಸಲ್ಲಿಸಿದ್ದಾರೆ.

ಪಾಲಿಕೆಯ 58ನೇ ವಾರ್ಡ್‌ನ ಸದಸ್ಯೆ ಶ್ರುತಿ ಚಲವಾದಿ ಪತಿಯಿಂದ ಹಲ್ಲೆಗೊಳಗಾದವರು.

ಇವರ ಪತಿ ಸಂತೋಷ ಚಲವಾದಿ ಅನ್ಯ ಮಹಿಳೆಯೊಂದಿಗೆ ಮಾತನಾಡುವುದು, ಚಾಟ್‌ ಮಾಡುತ್ತಿರುವ ವಿಷಯವಾಗಿ ದಂಪತಿ ಮಧ್ಯೆ ಆಗಾಗ ವಾಗ್ವಾದ ನಡೆಯುತ್ತಿತ್ತು. ರವಿವಾರ ಬೆಳಗ್ಗೆ ಸಹ ಇದೇ ವಿಷಯವಾಗಿ ಜಗಳವುಂಟಾದಾಗ ರೂಮ್‌ನಿಂದ ಹೊರಗೆ ಹೋಗದಂತೆ ತಡೆಗಟ್ಟಿ ಮನಬಂದಂತೆ ಹಲ್ಲೆ ಮಾಡಿ, ಗರ್ಭಿಣಿ ಎಂಬುದನ್ನು ಲೆಕ್ಕಿಸದೆ ಕಾಲಿನಿಂದ ಒದ್ದಿದ್ದಾಗಿ ಆರೋಪಿಸಲಾಗಿದೆ.

ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಯಾವ ಪೊಲೀಸ್‌ ಠಾಣೆಗೆ, ಅಧಿಕಾರಿ ಬಳಿ ಹೋಗು. ನನಗೆ ಜೈಲು, ಸ್ಟೇಶನ್‌ ಹೊಸದಲ್ಲ. ಹೊರಗಿನ ಹುಡುಗರನ್ನು ಕರೆಯಿಸಿ ನಿನ್ನನ್ನು ಮತ್ತು ನಿಮ್ಮ ಅಣ್ಣನನ್ನು ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಕುತ್ತಿಗೆ ಹಿಚುಕಿ ಕೊಲೆಗೆ ಯತ್ನಿಸಿದ್ದಾಗಿ ಶ್ರುತಿ ಅವರು ಪೊಲೀಸ್‌ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ದೂರಿನನ್ವಯ ಕೇಶ್ವಾಪುರ ಠಾಣೆ ಪೊಲೀಸರು ಸಂತೋಷನನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಸಂತೋಷ ಚಲವಾದಿ ಕೇಶ್ವಾಪುರದ ವಿನಯ ಪಿಳ್ಳೆ ಮತ್ತು ಕುಮಾರ ಪಿಳ್ಳೆ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ಇತ್ತೀಚೆಗಷ್ಟೆ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗೆ ಬಂದಿದ್ದ.

ಅಪಹರಣದ ಮಾಸ್ಟರ್‌ಮೈಂಡ್‌ ಪಾಲಿಕೆ ಸದಸ್ಯ: ಸಹನಾ

ನನ್ನನ್ನು ನನ್ನ ತಂದೆ-ತಾಯಿ ಮುಖಾಂತರ ಅಪಹರಿಸಿಕೊಂಡು ಮೂರು ಪ್ರತ್ಯೇಕ ವಾಹನಗಳ ಮೂಲಕ ಗೋವಾಕ್ಕೆ ಕರೆದೊಯ್ದಿದ್ದರು. ಇದರೆಲ್ಲದರ ಮಾಸ್ಟರ್‌ಮೈಂಡ್‌ ಪಾಲಿಕೆ ಸದಸ್ಯ ಚೇತನ ಹಿರೇಕೆರೂರ ಆಗಿದ್ದು, ಆತ ನನ್ನ ತಂದೆಯನ್ನು ಈ ಪ್ರಕರಣದಲ್ಲಿ ಸಿಕ್ಕಿ ಹಾಕಿಸಿ ತಾನು ರಾಜಕೀಯದಲ್ಲಿ ಬೆಳೆಯಲು ಮಾಡಿದ ಪ್ಲಾನ್‌ ಆಗಿದೆ ಎಂದು ಸಹನಾ ದಾಂಡೇಲಿ ಆರೋಪಿಸಿದ್ದು, ಪೊಲೀಸರು ಚೇತನನ್ನು ಬಂಧಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಪಹರಣದಲ್ಲಿ ತಂದೆಯ ಯಾವ ಪಾತ್ರವಿಲ್ಲ. ಚೇತನ ಅವರನ್ನು ಬಳಸಿಕೊಂಡು ತನ್ನ ಸಹಚರರೊಂದಿಗೆ ಈ ಕೃತ್ಯ ಮಾಡಿದ್ದಾನೆ. ಪೊಲೀಸರು ಸಹಿತ ತಪ್ಪಿತಸ್ಥರಿಗೆ ಶಿಕ್ಷೆ ಕೊಡಬೇಕೇ ವಿನಃ ಅನ್ಯಾಯಕ್ಕೊಳಗಾದವರ ಮೇಲೆ ದಬ್ಟಾಳಿಕೆ ಮಾಡಬಾರದು. ಆತನಿಗೆ ಶಿಕ್ಷೆ ಆಗಬೇಕು. ನಮಗೆ ನ್ಯಾಯ ಒದಗಿಸಬೇಕು ಎಂದು ಸಹನಾ ಆಗ್ರಹಿಸಿದ್ದಾರೆ.

ತನ್ನ ಪತ್ನಿಯನ್ನು ಪಾಲಿಕೆ ಸದಸ್ಯ ಚೇತನ ಹಿರೇಕೆರೂರ ಚಿತಾವಣೆಯಿಂದ ಅಪಹರಿಸಲಾಗಿದೆ ಎಂದು ಗೋಕುಲ ರೋಡ್‌ ಠಾಣೆಯಲ್ಲಿ ನಿಖೀಲ ದಾಂಡೇಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪೊಲೀಸರು ಸಹನಾರನ್ನು ಗೋವಾದಲ್ಲಿ ರಕ್ಷಿಸಿ, ನಗರಕ್ಕೆ ಕರೆ ತಂದು ಪತಿಯ ಮನೆಗೆ ಕಳುಹಿಸಿದ್ದರು. ಸೋಮವಾರ ಗೋಕುಲ ರೋಡ್‌ ಪೊಲೀಸರು ಸಹನಾರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರು ನ್ಯಾಯಾಧೀಶರ ಎದುರು ತಮ್ಮ ಹೇಳಿಕೆ ಕೊಟ್ಟಿದ್ದಾರೆ. ಪೊಲೀಸರು ಅವರ ಹೇಳಿಕೆ ಆಧರಿಸಿ ಮುಂದಿನ ತನಿಖೆ ಕೈಗೊಳ್ಳಲು ಮುಂದಾಗಿದ್ದಾರೆ.

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.