ಅಧಿಕಾರ ಹಸ್ತಾಂತರಿಸದ ಕಾಂಗ್ರೆಸ್; ಸಾಂಕೇತಿಕ ಪ್ರತಿಭಟನೆ
ಕಾಂಗ್ರೆಸ್ ಸದಸ್ಯರು ಒಪ್ಪಂದದಂತೆ ಬಿಜೆಪಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡಿ ಮಾತು ಉಳಿಸಿಕೊಳ್ಳಬೇಕು.
Team Udayavani, Mar 18, 2022, 5:30 PM IST
ನವಲಗುಂದ: ಅವಧಿ ಮುಗಿದು ಎರಡು ತಿಂಗಳು ಗತಿಸಿದರೂ ಹೊಂದಾಣಿಕೆಯಂತೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಅಧಿಕಾರ ಹಸ್ತಾಂತರಿಸುತ್ತಿಲ್ಲ, ಮಾತಿನಂತೆ ನಡೆದುಕೊಳ್ಳುತ್ತಿಲ್ಲವೆಂದು ಬಿಜೆಪಿಯ ಆರು ಜನ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಗುರುವಾರ ಪುರಸಭೆ ಅಧ್ಯಕ್ಷರ ಕಾರ್ಯಾಲಯ ಮುಂದೆ ಗಾಂ ಧೀಜಿಯವರ ಭಾವಚಿತ್ರವಿಟ್ಟು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.
ಆಶ್ರಯ ಸಮಿತಿ ಸದಸ್ಯ ರಾಯನಗೌಡ ಪಾಟೀಲ ಮಾತನಾಡಿ, ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ 7 ಜನ ಕಾಂಗ್ರೆಸ್ ಸದಸ್ಯರು, 6 ಜನ ಬಿಜೆಪಿ ಸದಸ್ಯರು ಸೇರಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನವನ್ನು ಅವರಿಗೆ ಬಿಟ್ಟು ಕೊಟ್ಟು ಇನ್ನು ಕೇವಲ ಸ್ಥಾಯಿ ಸಮಿತಿ ಸ್ಥಾನ ಮಾತ್ರ ಬಿಜೆಪಿ ನಿರ್ವಹಿಸಿ ಈಗ ಅವಧಿ ಮುಗಿದರೂ ಅಧಿಕಾರ ಹಸ್ತಾಂತರಿಸದೇ ಕುಂಟು ನೆಪ ಹೇಳುತ್ತಿದ್ದಾರೆ. ಕಾಂಗ್ರೆಸ್ ಸದಸ್ಯರು ಒಪ್ಪಂದದಂತೆ ಬಿಜೆಪಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡಿ ಮಾತು ಉಳಿಸಿಕೊಳ್ಳಬೇಕು.ಇಲ್ಲವಾದರೆ ಮಾ-21ರಂದು ಪುರಸಭೆ ಕಾರ್ಯಾಲಯ ಮುಂದೆ ನಿರಂತರ ಧರಣಿ ಹಮ್ಮಿಕೊಳ್ಳಲಾಗುವುದೆಂದು ಹೇಳಿದರು.
ಕಾಂಗ್ರೆಸ್ ತಾಲೂಕಾ ಬ್ಲಾಕ್ ಅಧ್ಯಕ್ಷರಾದ ವರ್ಧಮಾನಗೌಡ ಹಿರೇಗೌಡರ ಗಮನಕ್ಕೂ ತಂದರೂ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು. ಪುರಸಭೆಯ ಬಿಜೆಪಿ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು ಹಾಗೂ ಆಶ್ರಯ ಸಮಿತಿ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಸದಸ್ಯರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಅಣ್ಣಪ್ಪ ಬಾಗಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಕಟ್ಟಿಮನಿ, ಪುರಸಭೆ ಸದಸ್ಯರಾದ ಶರಣಪ್ಪ ಹಕ್ಕರಕಿ, ಮಹಾಂತೇಶ ಕಲಾಲ, ವಿಜಯಾ ಕಲಾಲ, ಸುಮಂಗಲಾ ಬೆಂಡಿಗೇರಿ, ಜ್ಯೋತಿ ಗೊಲ್ಲರ, ಪ್ರಭು ಇಬ್ರಾಹಿಂಪೂರ, ಬಸವರಾಜ ಕಾತರಕಿ, ಎಮ್.ಪಿ.ತೋಟಿ, ಅಡಿವೆಪ್ಪ ಶಿರಸಂಗಿ, ಗೀತಾ ಜಿನ್ನರ, ನಾಗೇಶ ಬೆಂಡಿಗೇರಿ, ಸಿದ್ದಪ್ಪ ಜಿನ್ನರ, ರಾಜು ಜಾಲಿಹಾಳ, ಮಾರುತಿ ಗೊಲ್ಲರ, ಶಮಸುದ್ದೀನ ಕಿರೇಸೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ