ಮಹಾತ್ಮರ ಜಯಂತಿ ವಿಜೃಂಭಣೆಯ ಆಚರಣೆಗೆ ನಿರ್ಧಾರ
ಸಂವಿಧಾನ ಕುರಿತು ತಿಳಿಸುವುದಕ್ಕಾಗಿ ಪಾಲಿಕೆಯಿಂದ ಜಯಂತಿ ಸಪ್ತಾಹ: ಡಾ| ಗೋಪಾಲಕೃಷ್ಣ
Team Udayavani, Mar 31, 2022, 10:45 AM IST
ಹುಬ್ಬಳ್ಳಿ: ಡಾ| ಬಿ.ಆರ್.ಅಂಬೇಡ್ಕರ್ ಹಾಗೂ ಡಾ| ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಪಾಲಿಕೆ ಆಯುಕ್ತ ಡಾ|ಬಿ. ಗೋಪಾಲಕೃಷ್ಣ ಹೇಳಿದರು.
ಬುಧವಾರ ಇಲ್ಲಿನ ಪಾಲಿಕೆ ಆಯುಕ್ತರ ಸಭಾಂಗಣದಲ್ಲಿ ಡಾ| ಬಿ.ಆರ್.ಅಂಬೇಡ್ಕರ್, ಡಾ| ಬಾಬು ಜಗಜೀವನರಾಮ್ ಅವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಆಡಂಬರಿಕೆ ಸೀಮಿತವಾಗದೆ ಮಹಾನ್ ವ್ಯಕ್ತಿಗಳ ಮಾರ್ಗ, ಜನರಿಗೆ ಸಂವಿಧಾನ ಕುರಿತು ತಿಳಿಸುವುದಕ್ಕಾಗಿ ಪಾಲಿಕೆಯಿಂದ ಜಯಂತಿ ಸಪ್ತಾಹ ಆಚರಿಸಲಾಗುವುದು ಎಂದು ಹೇಳಿದರು.
ಅಂಬೇಡ್ಕರ್, ಜಗಜೀವನರಾಮ್ ಹಾಗೂ ಸಂವಿಧಾನ ಕುರಿತ ಉಪನ್ಯಾಸ ಮತ್ತು ಸರ್ವರಿಗೂ ಸಂವಿಧಾನ ನಾಟಕವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಪ್ರದರ್ಶನ ಮಾಡಲಾಗುವುದು. ಹೆಗ್ಗೇರಿಯ ಅಂಬೇಡ್ಕರ್ ಕ್ರೀಡಾಂಗಣದಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಯಲಿದ್ದು, ಸ್ಥಳೀಯ ಇನ್ನಷ್ಟು ಕಲಾ ತಂಡಗಳಿಗೆ ಅವಕಾಶ ನೀಡಲಾಗುವುದು. ಪ್ರತಿಯೊಂದು ವಲಯ ಕಚೇರಿಗಳಿಂದ ಸ್ತಬ್ದ ಚಿತ್ರಗಳು ಇರಲಿವೆ ಎಂದರು. ಮುಖಂಡ ಗುರುನಾಥ ಉಳ್ಳಿಕಾಶಿ, ನ್ಯಾಯವಾದಿ ಲಕ್ಷ್ಮಣ ಬೀಳಗಿ ಮಾತನಾಡಿದರು.
ಪಾಲಿಕೆ ಹೆಚ್ಚುವರಿ ಆಯುಕ್ತ ಮಾದವ ಗಿತ್ತೆ, ತಹಶೀಲ್ದಾರ್ ಶಶಿಧರ ಮಾಡ್ಯಾಳ, ಮುಖ್ಯ ವೈದ್ಯಾಧಿಕಾರಿ ಶ್ರೀಧರ ದಂಡಪ್ಪನವರ, ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಸಿ.ಬೇವೂರು, ಮಾಜಿ ಸಂಸದ ಐ.ಜಿ.ಸನದಿ, ಮುಖಂಡರಾದ ಪ್ರೇಮನಾಥ ಚಿಕ್ಕತುಂಬಳ, ಪ್ರಕಾಶ ಕ್ಯಾರಕಟ್ಟಿ, ಶಶಿಕಾಂತ ಬಿಜವಾಡ, ಬಸವರಾಜ ಬಮ್ಮನಾಳ, ಪ್ರಕಾಶ ಬುರಬುರೆ, ಮಾರುತಿ ದೊಡ್ಡಮನಿ ಸಭೆಯಲ್ಲಿ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ