ರಾಜ್ಯದಲ್ಲೇ ಮೊದಲ ಆನ್ಲೈನ್ ಸಮಾಲೋಚನೆ ಕೇಂದ್ರ ಉದ್ಘಾಟನೆ
Team Udayavani, Apr 7, 2020, 1:41 PM IST
ಧಾರವಾಡ: ಡಿಮಾನ್ಸ್ ಸಂಸ್ಥೆ ಆವರಣದಲ್ಲಿ ಆರಂಭಿಸಿರುವ ಆನ್ಲೈನ್ ಸಮಾಲೋಚನೆ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಉದ್ಘಾಟಿಸಿದರು.
ಧಾರವಾಡ: ಕೋವಿಡ್ ಕುರಿತು ಮಾನಸಿಕ ಸಮಸ್ಯೆಗಳಿಗೆ ಸಂಬಂ ಧಿಸಿದಂತೆ ರಾಜ್ಯದಲ್ಲೆ ಮೊದಲ ಆನ್ಲೈನ್ ಸಮಾಲೋಚನೆ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಸೋಮವಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೋವಿಡ್ -19 ಕೊರೊನಾ ವೈರಸ್ನಿಂದ ಅನೇಕರು ಗೊಂದಲ, ಮಾನಸಿಕ ತೋಳಲಾಟ, ಸಮಸ್ಯೆಗಳಿಗೆ ಒಳಗಾಗುತ್ತಿದ್ದು, ಅವರ ನೆರವಿಗಾಗಿ ಜಿಲ್ಲಾಡಳಿತ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಡಿಮಾನ್ಸ್ ಸಂಸ್ಥೆ ಆವರಣದಲ್ಲಿ ಇದನ್ನು ಆರಂಭಿಸಲಾಗಿದ್ದು, ರಾಜ್ಯದ ಯಾವುದೇ ಮೂಲೆಯಿಂದ ಜನ ದೂರವಾಣಿ ಅಥವಾ ವಿಡಿಯೋ ಮೂಲಕ ಕರೆ ಮಾಡಿದರೆ ಇಲ್ಲಿನ ತಜ್ಞ ವೈದ್ಯರು ಸೂಕ್ತ ಪರಿಹಾರ-ಸಲಹೆ ನೀಡಲಿದ್ದಾರೆ. ಈ ಸೌಲಭ್ಯ ದಿನದ 24 ಗಂಟೆ ಲಭ್ಯವಿರುತ್ತದೆ ಎಂದರು.
ಲಾಕ್ಡೌನ್, ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಜನರಿಗೆ ಕೊರೊನಾ ಕುರಿತ ತಮ್ಮ ಸಂಶಯ, ಗೊಂದಲ, ಪರಿಹಾರ ಪಡೆಯಲು ಆಸ್ಪತ್ರೆಗಳಿಗೆ ಭೇಟಿ ನೀಡಲು ಅನುಕೂಲವಾಗುತ್ತಿಲ್ಲ. ಐಸೊಲೇಶನ್ ವಾರ್ಡ್ಗಳಲ್ಲಿ, ಕ್ವಾರಂಟೈನ್ ಗಳಲ್ಲಿ ಇರುವವರಿಗೆ ಹೊರಗಡೆ ಬರಲು ಸಾಧ್ಯವಿಲ್ಲ. ಅವರು ಸಹ ಕೊರೊನಾ ವೈರಸ್ ಕುರಿತ ಅನೇಕ ತಪ್ಪು ಮಾಹಿತಿ, ಸಂದೇಶಗಳಿಂದ ಭಯಗೊಂಡಿರುತ್ತಾರೆ. ಅವರು ಸಹ ಕರೆ ಮಾಡಿ ಸಂಶಯಗಳಿಗೆ ಮಾನಸಿಕ ತಜ್ಞ ವೈದ್ಯರಿಂದ ಪರಿಹಾರ, ತಿಳಿವಳಿಕೆ ಪಡೆಯಬಹುದು ಎಂದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಶಂಕರ ಪಾಟೀಲ್ ಮುನೇನಕೊಪ್ಪ,
ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ್, ಡಿಸಿ ದೀಪಾ ಚೋಳನ್ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ