ಚುನಾವಣಾ ಕಣದಿಂದ ಹಿಂದೆ ಸರಿಯಲ್ಲ… ಏ.18ಕ್ಕೆ ನಾಮಪತ್ರ ಸಲ್ಲಿಕೆ: Dingaleshwar Swamiji
Team Udayavani, Apr 11, 2024, 6:56 PM IST
ಹುಬ್ಬಳ್ಳಿ: ನನ್ನನ್ನು ಚುನಾವಣಾ ಕಣದಿಂದ ಹಿಂದೆ ಸರಿಸುವ ವ್ಯಕ್ತಿ ಭೂಮಿ ಮೇಲೆ ಹುಟ್ಟಿಲ್ಲ. ಏಪ್ರಿಲ್ 18 ರಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲು ನಿರ್ಧಾರ ಮಾಡಿದ್ದೇನೆ ಎಂದು ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ಗುರುವಾರ ಇಲ್ಲಿನ ನೆಹರು ಮೈದಾನದಿಂದ ಹಮ್ಮಿಕೊಂಡಿದ್ದ ಮೆರವಣಿಗೆಗೂ ಮುಂಚೆ ಮಾಧ್ಯಮದವರೊಂದಿಗೆ ಮಾತನಾಡಿ, ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರೆ, ಸರಿಸುತ್ತಾರೆ ಎಂಬುದು ಕೇವಲ ಊಹಾಪೋಹಗಳಷ್ಟೇ. ನಾನು ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮಗೆ ಎಲ್ಲಾ ಪಕ್ಷಗಳು ಒಂದೇ. ಎಲ್ಲಾ ಪಕ್ಷದ ಪ್ರಮುಖರು ನನ್ನೊಂದಿಗೆ ಮಾತನಾಡಿದ್ದಾರೆ. ಅವೆಲ್ಲವನ್ನು ಇಲ್ಲಿ ಹೇಳಲು ಸಾಧ್ಯವಿಲ್ಲ. ಸಮಯ ಬಂದಾಗ ಇದನ್ನು ಬಹಿರಂಗಪಡಿಸುತ್ತೇನೆ ಎಂದರು.
ಯಾವುದಾದರೂ ಪಕ್ಷದಿಂದ ಸ್ಪರ್ಧಿಸಬೇಕು ಎನ್ನುವ ಚಿಂತನೆ ಇಲ್ಲ. ಸದ್ಯಕ್ಕೆ ನಾನು ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಪಕ್ಷದಿಂದ ನಿಲ್ಲಬೇಕು ಎಂದರೆ ಅದನ್ನು ಸಾರ್ವಜನಿಕರ ಮುಂದೆ ಇಡುತ್ತೇನೆ. ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ಆದರೆ ಚುನಾವಣಾ ಅಖಾಡದಿಂದ ಹಿಂದೆ ಸರಿಯುವ ಮಾತಿಲ್ಲ. ಕಾಂಗ್ರೆಸ್ ಪಕ್ಷದವರು ಏನು ಚರ್ಚೆ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ