ವೀರಶೈವ-ಲಿಂಗಾಯತ ಎರಡೆಂಬ ಭಾವ ಬೇಡ

ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿ ಪುಣ್ಯಸ್ಮರಣೆ

Team Udayavani, May 27, 2022, 10:08 AM IST

3

ಹುಬ್ಬಳ್ಳಿ: ವೀರಶೈವ ಹಾಗೂ ಲಿಂಗಾಯತ ಎರಡು ಎನ್ನುವ ಭಾವನೆ ಬೇಡ. ಬಸವೇಶ್ವರ ತತ್ವ ಮತ್ತು ಶಿವಾಚಾರ್ಯರು ನಮಗೆ ಎರಡು ಕಣ್ಣುಗಳು ಇದ್ದಂತೆ ಎಂದು ವಿಧಾನ ಪರಿಷತ್ತು ಮಾಜಿ ಸಭಾಪತಿ ವೀರಣ್ಣ ಮತ್ತೀಕಟ್ಟಿ ಹೇಳಿದರು.

ಗುರುವಾರ ಮೂರುಸಾವಿರ ಮಠದ ವಿದ್ಯಾವರ್ಧಕ ಸಂಘದ ಮೂಜಗಂ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜಗದ್ಗುರು ಶ್ರೀ ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿಯವರ 19ನೇ ಪುಣ್ಯಸ್ಮರಣೆ ಹಾಗೂ ಮೂಜಗಂ ಸಾಹಿತ್ಯ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ವೀರಶೈವ ಹಾಗೂ ಲಿಂಗಾಯತ ಎನ್ನುವ ಬೇಧ ಇರಲಿಲ್ಲ. ಆದರೆ ಕೆಲವರು ಇದನ್ನು ಸ್ವಹಿತಾಸಕ್ತಿ ಹಾಗೂ ರಾಜಕೀಯ ಕಾರಣಕ್ಕೆ ಬಳಸಿಕೊಂಡರು. ಜನರಲ್ಲಿ ಇಬ್ಭಾಗದ ಭಾವನೆ ಮೂಡಿಸದಂತೆ ಮನವಿ ಮಾಡಿದ್ದೆ. ಈ ಬೆಳವಣಿಗೆಯಿಂದಾಗಿ ಸಮಾಜದ ದೃಷ್ಟಿಯಲ್ಲಿ ಕೆಟ್ಟದಾಗಿ ಕಾಣುತ್ತಿದೆ. ಈ ಭಾಗದಲ್ಲಿ ಮೂರುಸಾವಿರ ಮಠ, ಗದುಗಿನ ಪಂಚಾಕ್ಷರಿ ಗವಾಯಿಗಳ ಆಶ್ರಮ, ಶಿವಯೋಗಮಂದಿರ ಸಮಾಜವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವಂತಹ ವಟುಗಳನ್ನು ತಯಾರಿಸುವ ಪವಿತ್ರ ಕೇಂದ್ರಗಳಾಗಿವೆ ಎಂದರು.

ಜಗದ್ಗುರು ಡಾ| ಶ್ರೀ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಆಶೀರ್ವಚನ ನೀಡಿ, ಜ್ಞಾನ ಗಳಿಸಬೇಕು. ಪಡೆದ ಜ್ಞಾನವನ್ನು ಇನ್ನೊಬ್ಬರಿಗೆ ನೀಡಬೇಕು. ವಿನಯ ಇದ್ದಾಗ ಮಾತ್ರ ಪಡೆದ ವಿದ್ಯೆಗೆ ಗೌರವ ಬರುತ್ತದೆ. ಮೂಜಗಂ ಪ್ರಶಸ್ತಿಗೆ ಚಂದ್ರಶೇಖರ ಅವರು ಸೂಕ್ತ ವ್ಯಕ್ತಿಯಾಗಿದ್ದು, ವಚನ ಸಾಹಿತ್ಯಕ್ಕೆ ನೀಡಿದ ಸೇವೆ ದೊಡ್ಡದು ಎಂದು ಹೇಳಿದರು.

ವಿಧಾನ ಪರಿಷತ್ತು ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಮಾತನಾಡಿ, ನಾಯಕನಾದವನು ನ್ಯಾಯದ ಕಡೆ ಇರಬೇಕು. ಅದನ್ನು ಮರೆತರೆ ಅವನು ನಾಯಿಗಿಂತ ಕಡೆ. ಇಂದಿನ ಪರಿಸ್ಥಿತಿಯಲ್ಲಿ ಇದನ್ನು ಅರಿತುಕೊಳ್ಳುವ ಅಗತ್ಯವಿದೆ. ಮೂಜಗಂ ಶ್ರೀಗಳು ಸಮಾನತೆಗೆ ಹೆಚ್ಚಿನ ಒತ್ತು ನೀಡಿದವರು. ಮಹಿಳಾ ವಿಶ್ವವಿದ್ಯಾಲಯ ಸ್ಥಾಪನೆಯ ಗುರಿ ಹೊಂದಿದ್ದರು. ಕೊನೆಗೆ ಮಹಿಳಾ ಕಾಲೇಜು ಆರಂಭಿಸಿದರು. ಇದರೊಂದಿಗೆ ಸಾಹಿತ್ಯದ ಬಗ್ಗೆ ಅಪಾರ ಒಲವು ಹೊಂದಿದ್ದರು ಎಂದರು.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಇಂದಿನ ದಿನಗಳಲ್ಲಿ ಸಮಾಜಗಳನ್ನು ಒಡೆಯುವ ಕೆಲಸ ಆಗುತ್ತಿದೆ. ಎಚ್ಚೆತ್ತುಕೊಂಡು ಒಗ್ಗೂಡಿಕೊಂಡು ಜೀವನ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸ್ವಾಮೀಜಿಗಳು ಸಮಾಜಕ್ಕೆ ತಿಳಿಹೇಳುವ ಕಾರ್ಯ ಮಾಡಬೇಕಾಗಿದೆ. ಮೂಜಗಂ ಅವರ ಪುಣ್ಯಸ್ಮರಣೆ ಮೂಲಕ ಅವರು ಸಮಾಜಕ್ಕೆ ಕೊಟ್ಟ ಕೊಡುಗೆ ಚರ್ಚೆಯಾಗಬೇಕು. ಕೇವಲ ಧಾರ್ಮಿಕ, ದಾಸೋಹಕ್ಕೆ ಸೀಮಿತವಾಗದೆ ಶಿಕ್ಷಣ, ಸಾಹಿತ್ಯ, ಸಮಾಜದಲ್ಲಿ ಸಾಮರಸ್ಯ ಶಾಂತಿ ಮೂಡಿಸುವ ಕೆಲಸ ಅವರಿಂದ ಆಗಿದೆ ಎಂದು ಹೇಳಿದರು.

ಹಾವೇರಿಯ ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿದರು. ಎರಡೆತ್ತಿನ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಬೈಲಹೊಂಗಲ ಮೂರುಸಾವಿರ ಮಠದ ಶಾಖಾ ಮಠದ ಶ್ರೀ ನೀಲಕಂಠ ಸ್ವಾಮೀಜಿ, ನರಗುಂದ ವಿರಕ್ತಮಠದ ಶ್ರೀ ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೆಎಲ್‌ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ವಿದ್ಯಾವರ್ಧಕ ಸಂಘದ ಚೇರ್ಮೆನ್‌ ಅಧ್ಯಕ್ಷ ಅರವಿಂದ ಕುಬಸದ, ಕಾಂಗ್ರೆಸ್‌ ಮುಖಂಡ ಪ್ರಕಾಶ ಬುರಬುರೆ ಇನ್ನಿತರರಿದ್ದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.