ಭೀಕರ ಜಲಕ್ಷಾಮ: ಹಿಪ್ಪರಗಿ ಜಲಾಶಯ ಖಾಲಿ!


Team Udayavani, May 14, 2019, 12:24 PM IST

bag-3

ಬನಹಟ್ಟಿ: ಜನರ ಜೀವನಾಡಿಯಾಗಿರುವ ಕೃಷ್ಣೆಯ ಒಡಲು ಸಂಪೂರ್ಣವಾಗಿ ಬರಿದಾಗಿದ್ದು, ಕುಡಿಯುವ ನೀರಿಗಾಗಿ ಹಾಹಾಕಾರ ಆರಂಭಗೊಂಡಿದೆ. ಕೊಡಗಳನ್ನು ಹಿಡಿದ ಮಹಿಳೆಯರು, ಹಿರಿಯರು, ಮಕ್ಕಳು ಸರದಿಯಲ್ಲಿ ನಿಲ್ಲುವ ದೃಶ್ಯಗಳು ಸಾಮಾನ್ಯವಾಗಿವೆ. ಅಲ್ಲದೇ ಬಿಸಿಲಿನ ತಾಪವೂ ಕೂಡಾ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದೆಡೆ ನೀರಿಗಾಗಿ ಪರದಾಟ, ಇನ್ನೊಂದೆಡೆ ಬಿಸಿಲಿನ ತಾಪದಿಂದ ಜನ ಕಂಗೆಟ್ಟು ಹೋಗಿದ್ದಾರೆ.

ಹಿಪ್ಪರಗಿ ಜಲಾಶಯ ಮುಂಭಾಗ ಸಂಪೂರ್ಣ ಬರಿದಾಗಿ ಸಂಪೂರ್ಣ ಆಟದ ಬಯಲಿನಂತೆ ಕಾಣುತ್ತಿತ್ತು. ಹಿಂಭಾಗದ ತಗ್ಗು ಪ್ರದೇಶದಲ್ಲಿ ನಿಂತ ನೀರನ್ನು ರೈತರು ತಮ್ಮ ತೋಟಗಳಿಗೆ ತೆಗೆದುಕೊಂಡು ಹೋಗಿ ಉಳಿದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ. ಮೂರು ಜಿಲ್ಲೆಗಳನ್ನು ಅವಲಂಬಿಸಿರುವ ಕೃಷ್ಣಾ ನದಿಯಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಲಿದೆ.

ಕೃಷ್ಣಾ ನದಿ ಬತ್ತಿ ತಿಂಗಳಿಗಿಂತ ಹೆಚ್ಚು ಕಾಲವಾಗಿದೆ. ಈ ಭಾಗದ ಆಡಳಿತ ಮತ್ತು ವಿರೋಧ ಪಕ್ಷದ ಜನಪ್ರತಿನಿಧಿಗಳು ಮಹಾರಾಷ್ಟ್ರಕ್ಕೆ ಹೋಗಿ ಮುಖ್ಯಮಂತ್ರಿಗಳಿಗೆ ಮತ್ತು ಸಂಬಂಧಪಟ್ಟ ಸಚಿವರಿಗೆ ನೀರು ಬಿಡುವಂತೆ ಮನವಿ ಮಾಡಲಾಗಿದೆ. ಆದರೆ, ಇದುವರೆಗೂ ನೀರು ಬಂದಿಲ್ಲ.

ರಬಕವಿ-ಬನಹಟ್ಟಿ ಹಾಗೂ ಕೃಷ್ಣಾ ನದಿ ತೀರದ ಲಕ್ಷಾಂತರ ಜನ ಮತ್ತು ಜಾನುವಾರುಗಳು ನೀರಿಗಾಗಿ ಪರದಾಡುತ್ತಿದ್ದಾರೆ. ಕೊಯ್ನಾ ಜಲಾಶಯದಿಂದ ನೀರು ಬಂತು ಎಂಬ ಮಾತುಗಳು ಸದ್ಯ ಹುಸಿಗೊಳ್ಳುತ್ತಿದ್ದು, ಜನರು ಜನಪ್ರತಿನಿಧಿಗಳ ನೀಡಿದ ಭರವಸೆಗಳು ಹುಸಿಯಾಗಿವೆ.

ಈ ಭಾಗದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದಾಗಿ ಕೊಳವೆ ಬಾವಿಗಳಲ್ಲಿ ನೀರು ಕ್ರಮೇಣವಾಗಿ ಕಡಿಮೆಯಾಗುತ್ತಿದೆ. ಒಂದೆರಡು ಗಂಟೆಗಳ ಕಾಲ ನೀರು ಕೊಡುತ್ತಿದ್ದ ಕೊಳವೆ ಬಾವಿಗಳು ಈಗ ಕೇವಲ ಅರ್ಧ ಗಂಟೆಗಳ ಕಾಲ ಮಾತ್ರ ನೀರನ್ನು ನೀಡುತ್ತಿವೆ. ಮುಂದಿನ ಒಂದು ವಾರದೊಳಗಾಗಿ ಕೃಷ್ಣೆಗೆ ನೀರು ಬರದೆ ಇದ್ದರೆ ಸಮಸ್ಯೆ ಉಲ್ಬಣಿಸಲಿದೆ.

ಜವಳಿ ಉದ್ದಿಮೆ ಹೊಂದಿರುವ ರಬಕವಿ-ಬನಹಟ್ಟಿ, ರಾಜ್ಯದಲ್ಲಿಯೇ ಸೀರೆಗಳ ಉತ್ಪಾದನೆಗೆ ಹೆಸರುವಾಸಿಯಾಗಿದೆ. ಇಲ್ಲಿ ದಿನಂಪ್ರತಿ ಸಾವಿರಾರು ಸೀರೆಗಳು ರಫ್ತಾಗುತ್ತವೆ. ಇದಕ್ಕೆ ಬೇಕಾಗುವ ಕಚ್ಚಾ ವಸ್ತುಗಳಿಗೆ ಪ್ರಮುಖವಾಗಿ ನೀರು ಬೇಕು. ಸದ್ಯ ನೀರಿನ ಅಭಾವದ ಕಾರಣ ಪರೋಕ್ಷವಾಗಿ ಜವಳಿ ಉದ್ದಿಮೆಗೆ ಪೆಟ್ಟು ಬಿದ್ದಿದೆ. ಅಲ್ಲದೇ ಇದು ನೇಕಾರಿಕೆಯ ಉದ್ಯೋಗದ ಮೇಲೂ ಪರಿಣಾಮ ಬೀರಿದೆ.

ನೀರಿನ ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ತಾಲೂಕು ಆಡಳಿತ ಸಮರ್ಪಕ ನೀರು ಪೂರೈಸುವತ್ತ ಅಗತ್ಯ ಕ್ರಮ ಕೈಗೊಂಡಿದೆ. ಅಧಿಕಾರಿಗಳ ಸಭೆ ಕರೆದು ಎಲ್ಲಿ ನೀರಿನ ಅವಶ್ಯವಿರುವ ಕಡೆ ನೀರು ಪೂರೈಕೆಗೆ ಸೂಚಿಸಲಾಗಿದೆ.
•ಕೆ. ರಾಘವೆಂದ್ರರಾವ್‌ ತಹಶೀಲ್ದಾರ್‌ ರಬಕವಿ-ಬನಹಟ್ಟಿ

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.