ಬಿಜೆಪಿ ಭ್ರಷ್ಟತೆಗೆ ಭಾವನಾತ್ಮಕ ಕವಚ

ಸಮಾಜ ವಿಭಜಿಸಿ ಮತಗಳ ಕ್ರೋಢೀಕರಣಕ್ಕೆ ಯತ್ನ: ಸಿದ್ದರಾಮಯ್ಯ

Team Udayavani, Apr 7, 2022, 11:12 AM IST

5

ಹುಬ್ಬಳ್ಳಿ: ಬಿಜೆಪಿಯವರು ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಅವರಿಗೆ ಜನರ ಮುಂದೆ ತಮ್ಮ ಸಾಧನೆಗಳ ಬಗ್ಗೆ ಮಾತನಾಡಲು ಏನೂ ಇಲ್ಲ. ಜತೆಗೆ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಇದನ್ನೆಲ್ಲ ಮುಚ್ಚಿಕೊಳ್ಳಲು, ಮರೆಮಾಚಲು ಧಾರ್ಮಿಕ ವಿಚಾರ, ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಹೋಗುತ್ತಿದ್ದಾರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಬಳಿ ಸಾಧನೆಗಳೇ ಇಲ್ಲದ್ದಕ್ಕೆ ಹಿಜಾಬ್‌, ಹಲಾಲ್‌, ಜಾತ್ರೆಗಳಲ್ಲಿ ಮುಸ್ಲಿಂರ ಬೀದಿ ವ್ಯಾಪಾರ, ಭಗವದ್ಗೀತೆ, ಮಸೀದಿಗಳ ಧ್ವನಿವರ್ಧಕ ಮುಂತಾದ ಧಾರ್ಮಿಕ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ.

ಈಗ ಮಾವಿನ ಹಣ್ಣಿನ ವ್ಯಾಪಾರ ಮಾಡುವ ವಿಚಾರದಲ್ಲೂ ವಿವಾದ ಸೃಷ್ಟಿಸಿದ್ದಾರೆ. ಹಲವಾರು ವರ್ಷಗಳಿಂದ ಹಿಂದೂ-ಮುಸ್ಲಿಮರು ಪರಸ್ಪರ ಹೊಂದಾಣಿಕೆ, ಸಹಕಾರದಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಇಂಥದ್ದಕ್ಕೆಲ್ಲ ಅಡ್ಡ ಬರುತ್ತಾರೆಂದರೆ ಏನರ್ಥ? ಬಿಜೆಪಿಯವರು ಚುನಾವಣೆಗಾಗಿ ಸಮಾಜ ವಿಭಜಿಸಿ ಮತಗಳ ಕ್ರೋಡೀಕರಣ ಮಾಡುತ್ತಿದ್ದಾರೆ. ಇಂತಹ ಧಾರ್ಮಿಕ ಆಚರಣೆ, ನಂಬಿಕೆಗಳನ್ನು ವಿವಾದ ಮಾಡುತ್ತ ಹೋದರೆ ಮುಂದೆ ಬಿಜೆಪಿಗೆ ಇದು ತಿರುಗುಬಾಣವಾಗುತ್ತದೆ. ಜನರಿಗೆ ಇವರ ಹುನ್ನಾರ ಅರ್ಥವಾಗುತ್ತಿದೆ ಎಂದರು.

ಬೆಲೆ ಏರಿಕೆ ಬಗ್ಗೆ ಮಾತಾಡಲಿ: ಮಾಂಸ ತಿನ್ನದವರು ಮಾಂಸ ತಿನ್ನುವ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದರ ವಿವಾದ ಸೃಷ್ಟಿಸುತ್ತಿದ್ದಾರೆ. ನಿಮ್ಮ ನಂಬಿಕೆ ನೀವು ಮಾಡಿ. ನಾವು ಕೂಡ ಹಲಾಲ್‌ ಮಾಂಸ ತಿಂದಿದ್ದೇವೆ. ಎಷ್ಟೋ ವರ್ಷಗಳಿಂದ ಹಲಾಲ್‌ ನಡೆದುಕೊಂಡು ಬಂದಿದೆ. ಈಗ ಬಿಜೆಪಿಯವರು ಅದನ್ನು ವಿರೋಧಿಸುತ್ತಿದ್ದು, ಅವರ ಈ ವರ್ತನೆ ಖಂಡಿಸುತ್ತೇನೆ. ಮತಕ್ಕಾಗಿ ಅವರು ಇದನ್ನೆಲ್ಲ ಮಾಡುತ್ತಿದ್ದಾರೆ. ಕಳೆದ ಹದಿನೈದು ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ 9.20 ರೂ. ಜಾಸ್ತಿಯಾಗಿದೆ. ಗೊಬ್ಬರ, ಗ್ಯಾಸ್‌, ವಿದ್ಯುತ್‌, ಅಡುಗೆ ಎಣ್ಣೆ, ಸಿಮೆಂಟ್‌, ಕಬ್ಬಿಣ, ಹೋಟೆಲ್‌ ತಿನಿಸು, ಜನೌಷಧ ದರ ಹೆಚ್ಚಾಗಿದೆ. ಬಿಜೆಪಿಯವರು, ಸರ್ಕಾರ ಮತ್ತು ಮುಖ್ಯಮಂತ್ರಿ ಈ ಬಗ್ಗೆ ಮಾತನಾಡಲ್ಲ.

ಇವೆಲ್ಲ ಜನರ ಬದುಕಿಗೆ ಸಂಬಂಧಪಟ್ಟ ವಿಚಾರಗಳು. ಅದನ್ನೆಲ್ಲ ಬಿಟ್ಟು ಜನರ ಜೀವನಕ್ಕೆ ಸಂಬಂಧವಿಲ್ಲದ ವಿಚಾರಗಳ ಬಗ್ಗೆ ಮಾತನಾಡಿ, ಜನರ ಭಾವನೆ, ಧಾರ್ಮಿಕ ಭಾವನೆಗಳನ್ನು ಕೆರಳಿಸುವಂಥದ್ದು ಖಂಡನೀಯ ಎಂದರು.

ಅಸಮರ್ಥ ಗೃಹಮಂತ್ರಿ: ಬೆಂಗಳೂರಿನ ಗೌರಿಪಾಳ್ಯದಲ್ಲಿ ಚಂದ್ರು ಸೇರಿದಂತೆ ರಾಜ್ಯದಲ್ಲಿ ಯಾರದ್ದೇ ಕೊಲೆಯಾದರೂ ಸರ್ಕಾರ ಕಾನೂನು ರೀತ್ಯ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಿ. ಗೃಹಮಂತ್ರಿ ಅತ್ಯಂತ ಅಸಮರ್ಥ ವ್ಯಕ್ತಿ. ಅವರಿಗೆ ಅನುಭವವಿಲ್ಲ. ಇಲಾಖೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲ. ಹರ್ಷ ಮೇಲೆ ಕ್ರಿಮಿನಲ್‌ ಕೇಸ್‌ ಇದ್ದವು ಎನ್ನುತ್ತಾರೆ. ಆಮೇಲೆ ಇಲ್ಲ ಎನ್ನುತ್ತಾರೆ. ಹರ್ಷ ಕೊಲೆ ಖಂಡಿಸಿದ್ದೇನೆ. ಈಗಲೂ ಖಂಡಿಸುತ್ತೇನೆ. ಕೊಲೆ ಮಾಡಿದವರನ್ನು ಶಿಕ್ಷೆಗೊಳಪಡಿಸಬೇಕು. ಯಾರದ್ದೇ ಕೊಲೆಯಾದರೂ ಅವರು ಮನುಷ್ಯರಲ್ಲವೇ? ಮುಸ್ಲಿಂ, ಹಿಂದೂ, ಕ್ರಿಶ್ಚಿಯನ್‌ ಸೇರಿದಂತೆ ಯಾರೇ ಸತ್ತರೂ ಅದು ಜೀವವೇ. ನರಗುಂದದಲ್ಲಿ ಕೊಲೆಯಾದ ಸಮೀರ್‌ ಮತ್ತು ಬೆಳ್ತಂಗಡಿಯಲ್ಲಿ ಕೊಲೆಯಾದ ದಿನೇಶನಿಗೆ ಸರ್ಕಾರ ಏಕೆ ಪರಿಹಾರ ನೀಡಲಿಲ್ಲ. ಹರ್ಷನ ಕೊಲೆ ಮಾಡಿದ್ದು ತಪ್ಪು. ಯಾರು ಮಾಡಿದ್ದಾರೆ ಅವರಿಗೆ ಜೀವಾವಧಿ ಶಿಕ್ಷೆ ಕೊಡಿಸಿ, ಇಲ್ಲವೇ ನೇಣುಗಂಬಕ್ಕೆ ಏರಿಸಿ. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಅದೇ ಸಮಯದಲ್ಲಿ ಎಲ್ಲರನ್ನೂ ಒಂದೇ ಆಗಿ ನೋಡಬೇಕು ಎಂದರು.

ಮುಖ್ಯಮಂತ್ರಿಗಳು ಮಂಗಳೂರಿಗೆ ಹೋಗಿದ್ದಾಗ ನೈತಿಕ ಪೊಲೀಸ್‌ಗಿರಿಗೆ ಸಂಬಂಧಿಸಿದ ಪ್ರಶ್ನೆಗೆ ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ ಎಂದರು. ಇದು ಅಂಥವರಿಗೆ ಕುಮ್ಮಕ್ಕು ಕೊಟ್ಟಂತಾಗಲ್ವ? ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾದಾಗ ಗೃಹ ಸಚಿವರು ಆ ಯುವತಿ ಅಷ್ಟು ಹೊತ್ತಿನಲ್ಲಿ ಅಲ್ಲಿಗೇಕೆ ಹೋಗಬೇಕಿತ್ತು? ಕಾಂಗ್ರೆಸ್‌ನವರು ನನ್ನನ್ನೇ ಅತ್ಯಾಚಾರ ಮಾಡುತ್ತಿದ್ದಾರೆ ಎಂದರು.

ಇಂಥವರು ನಮ್ಮ ರಾಜ್ಯದ ಗೃಹ ಮಂತ್ರಿಯಾಗಿದ್ದು ದುರದೃಷ್ಟಕರ. ಇವರು ಗೃಹ ಮಂತ್ರಿ ಆಗಲು ಲಾಯಕ್‌ ಅಲ್ಲ. ಇವರಿಗೆ ಮುಖ್ಯಮಂತ್ರಿಗಳು ಬೆಂಬಲ ಕೊಡುತ್ತಾರೆ. ಸರ್ವಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಅವರ ಮಾತಿನಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ ಎಂದರು.

ಕಾನೂನು-ಸುವ್ಯವಸ್ಥೆ ಸರಿಯಿಲ್ಲ: ಶಿವಮೊಗ್ಗದಲ್ಲಿ ಸಚಿವ ಕೆ.ಎಸ್‌. ಈಶ್ವರಪ್ಪ ಮತ್ತು ಬೀದರನಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ನಿಷೇಧಾಜ್ಞೆ ಉಲ್ಲಂಘಿಸಿದ್ದರು. ಅವರ ಮೇಲೆ ಸರ್ಕಾರ ಯಾವುದಾದರೂ ಕಾನೂನು ಕ್ರಮ ಕೈಗೊಂಡಿದೆಯೇ? ಈ ಇಬ್ಬರನ್ನು ಸಚಿವ ಸಂಪುಟದಿಂದ ತಕ್ಷಣ ವಜಾ ಮಾಡಬೇಕಿತ್ತು. ಇವರು ಮಂತ್ರಿಯಾಗಲು ಯೋಗ್ಯರೇ? ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಇಲ್ಲದಿದ್ದರೆ ಹೂಡಿಕೆದಾರರು ಬರಲ್ಲ. ಕಳೆದೆರಡು ವರ್ಷಗಳಿಂದ ಬಂಡವಾಳ ಹೂಡಿಕೆ ಆಗಿಲ್ಲ. ರಾಜ್ಯದಲ್ಲಿನ ಕೈಗಾರಿಕೆಗಳು ಮುಚ್ಚುತ್ತಿವೆ. ತಮಿಳುನಾಡಿಗೆ ಹೋಗುತ್ತಿವೆ. ನಮ್ಮಲ್ಲಿ ಬಂಡವಾಳ ಹೂಡಿಕೆಗೆ ಬೇಕಾದ ಪೂರಕ ವಾತಾವರಣ ಇಲ್ಲ. ತೆಲಂಗಾಣದವರು ಕರ್ನಾಟಕದಲ್ಲಿ ವಾತಾವರಣ ಸರಿಯಿಲ್ಲದಿದ್ದರೆ ನಮ್ಮ ರಾಜ್ಯಕ್ಕೆ ಬನ್ನಿ ಎಂದು ಕಂಪನಿಗಳನ್ನು ಕರೆಯುತ್ತಿದ್ದಾರೆ. ಬಿಜೆಪಿಯವರಿಗೆ ಇವರನ್ನು ಉಳಿಸಿಕೊಳ್ಳುವ ಯೋಗ್ಯತೆ ಇಲ್ಲ. ಹೂಡಿಕೆ ಸ್ನೇಹಿ ವಾತಾವರಣ ಇದ್ದಾಗ ಮಾತ್ರ ಹೂಡಿಕೆದಾರರು ಬರುತ್ತಾರೆ. ಕೈಗಾರಿಕೆಗಳು ಬೆಳವಣಿಗೆ ಆದಾಗ ಮಾತ್ರ ಉದ್ಯೋಗ ಸೃಷ್ಟಿಯಾಗುತ್ತದೆ. ಖರೀದಿ ಸಾಮರ್ಥ್ಯ ಹೆಚ್ಚುತ್ತದೆ. ಬಿಜೆಪಿಯವರು ರಾಜ್ಯ ಹಾಳು ಮಾಡುತ್ತಿದ್ದಾರೆ. ಹೀಗಾಗಿ ಜನರು ಈ ಸರ್ಕಾರ ಬೇಗ ತೊಲಗಿದರೆ ಸಾಕು ಎನ್ನುತ್ತಿದ್ದಾರೆ ಎಂದರು.
ರಾಹುಲ್‌ಗೆ 150 ಸ್ಥಾನ  ಮಾತು ಕೊಟಿದ್ದೇವೆ: ಬಿಜೆಪಿಯವರು ಸುಳ್ಳು ಮಾರ್ಕೆಟಿಂಗ್‌ ಮಾಡುತ್ತಾರೆ. ಹಿಂದುತ್ವ ಹೇಳಿಕೊಂಡು ಜನರ ದಾರಿ ತಪ್ಪಿಸುತ್ತಿರುವ, ಬೋಗಸ್‌ ಧರ್ಮ ಮಾಡುತ್ತಿರುವವರ ಬಗ್ಗೆ ಜನರಿಗೆ ಸತ್ಯ ಹೇಳಿ ಮನವರಿಕೆ ಮಾಡುತ್ತೇವೆ. ಸುಳ್ಳುಗಳಿಗೆ ಮಾರು ಹೋಗಬೇಡಿ ಎಂದು ಜನರ ಬಳಿ ಈಗಿನಿಂದಲೇ ಹೋಗುತ್ತೇವೆ. ದೇಶದ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ಜನಾಂಗದವರನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಭಾರತವು ಜಾತ್ಯತೀತ ರಾಷ್ಟ್ರ. ಕಾಂಗ್ರೆಸ್‌ ಪಕ್ಷ ಎಲ್ಲ ಧರ್ಮಗಳ ಜನರಿಗೆ ರಕ್ಷಣೆ ಕೊಡುತ್ತದೆ. ಸರ್ಕಾರಕ್ಕೆ ಯಾವುದೇ ಧರ್ಮವಿಲ್ಲ. ಎಲ್ಲ ಧರ್ಮಗಳನ್ನು ಸಮಾನವಾಗಿ ನೋಡಿಕೊಳ್ಳಲಾಗುವುದು. ನಾವು ಮನುಷ್ಯ ಧರ್ಮದಲ್ಲಿ ನಂಬಿಕೆ ಇದ್ದವರು, ಬಿಜೆಪಿಯವರು ಮನುವಾದದಲ್ಲಿ ನಂಬಿಕೆ ಇಟ್ಟವರು. ರಾಹುಲ್‌ ಗಾಂಧಿಗೆ ನಾವು ರಾಜ್ಯದಲ್ಲಿ 150 ಸ್ಥಾನ ಗೆಲ್ಲುತ್ತೇವೆಂಬ ನಂಬಿಕೆ, ವಿಶ್ವಾಸವಿದೆ. ಅದಕ್ಕೆ ನಮಗೆ ಹೇಳಿದ್ದಾರೆ. ನಾವು 150 ಸ್ಥಾನ ಗೆದ್ದೆ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.