ವಾರ್ಡ್‌ಗಳ ಸ್ವಚ್ಛತೆಗೆ ಒತ್ತು ನೀಡಿ: ಶಾಸಕ ಅಬ್ಬಯ್ಯ

ಪಾಲಿಕೆಯಲ್ಲಿ ಪ್ರಸ್ತುತ 5 ಡಿ-ಶಿಲ್ಟಿಂಗ್‌ ಮಶೀನ್‌ಗಳು ಕಾರ್ಯ ನಿರ್ವಹಿಸುತ್ತಿವೆ.

Team Udayavani, Jan 25, 2022, 5:41 PM IST

ವಾರ್ಡ್‌ಗಳ ಸ್ವಚ್ಛತೆಗೆ ಒತ್ತು ನೀಡಿ: ಶಾಸಕ ಅಬ್ಬಯ್ಯ

ಹುಬ್ಬಳ್ಳಿ: ನಗರದ ವಾರ್ಡ್‌ಗಳಲ್ಲಿ ಸ್ವಚ್ಛತಾ ಕೆಲಸ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ. ಕೂಡಲೇ ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡು ನಗರದ ಸ್ವಚ್ಛತೆಗೆ ಹೆಚ್ಚು ಒತ್ತು ಕೊಡಬೇಕೆಂದು ಶಾಸಕ ಪ್ರಸಾದ ಅಬ್ಬಯ್ಯ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಇಲ್ಲಿನ ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಸೋಮವಾರ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ವಾರ್ಡ್‌ಗಳ ಪುನರ್ವಿಂಗಡನೆಯಿಂದ ವಾರ್ಡ್‌ಗಳ ಸಂಖ್ಯೆ ಹೆಚ್ಚಾದರೂ ಹಳೆಯ ವಾರ್ಡ್‌ಗಳ ಜನಸಂಖ್ಯೆಗೆ ಅನುಗುಣವಾಗಿ ಪೌರಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪ್ರತಿ ವಾರ್ಡ್‌ ಗಳಲ್ಲಿ ಸ್ವಚ್ಛತಾ ಕೆಲಸ ನಿರೀಕ್ಷೆಯಂತೆ ಸಾಗುತ್ತಿಲ್ಲ. ಹಳೇ ಹುಬ್ಬಳ್ಳಿ ಭಾಗದ ಕೆಲ ವಾರ್ಡ್‌ಗಳಲ್ಲಿ ಕಸದ ಟಿಪ್ಪರ್‌ ವಾಹನಗಳು ಜನರ ಮನೆ ಬಾಗಿಲ ಬಳಿ ತಲುಪಲಾಗುತ್ತಿಲ್ಲ. ಹೀಗಾಗಿ ಜನರು ತಮ್ಮ ಮನೆ ಕಸವನ್ನು ವಾಹನಕ್ಕೆ ಹಾಕಲಾಗದೇ ರಸ್ತೆ ಸೇರಿದಂತೆ
ಎಲ್ಲೆಂದರಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಸ್ವಚ್ಛತಾ ನಿರ್ವಹಣೆ ಕಷ್ಟಕರವಾಗುತ್ತಿದೆ. ಕಸದ ಟಿಪ್ಪರ್‌ ವಾಹನಗಳು ಹೋಗಲಾಗದಂಥ ಪ್ರದೇಶಗಳಲ್ಲಿ (ಪುಶ್‌ ಕಾರ್ಟ್ಸ್) ತಳ್ಳುಗಾಡಿ ಒದಗಿಸುವಂತೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಡಾ|ಬಿ. ಗೋಪಾಲಕೃಷ್ಣ, ಸರಕಾರದ ನಿಯಮಾವಳಿಯಂತೆ ಪ್ರಸ್ತುತ 700 ಜನರಿಗೆ ಒಬ್ಬರಂತೆ ಪೌರ ಕಾರ್ಮಿಕರು
ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಹೆಚ್ಚಿನ ಪೌರ ಕಾರ್ಮಿಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಧಾರವಾಡದ ಕೆಲವೆಡೆ ಪುಶ್‌ ಕಾರ್ಟ್ಸ್ ಒದಗಿಸಿದ್ದು, ಶೀಘ್ರವೇ ವಲಯ ಆಯುಕ್ತರೊಂದಿಗೆ ಸಭೆ ನಡೆಸಿ ಎಲ್ಲೆಲ್ಲಿ ತಳ್ಳುಗಾಡಿಗಳ ಅವಶ್ಯಕತೆಯಿದೆ ಎಂಬುದನ್ನು ಪರಿಶೀಲಿಸಿ ಆದ್ಯತೆ ಮೇರೆಗೆ ಒದಗಿಸಲಾಗುವುದು ಎಂದರು.

ಯುಜಿಡಿಯಲ್ಲಿನ ಕಸ-ಕಡ್ಡಿ ತೆಗೆಯಲು ಬಳಸುವ ಡಿ-ಶಿಲ್ಟಿಂಗ್‌ ವಾಹನವು ಇಡೀ ಕ್ಷೇತ್ರಕ್ಕೆ ಕೇವಲ ಒಂದು ಮಾತ್ರವಿದ್ದು, ಇದರಿಂದ ಯುಜಿಡಿ ಸಮಸ್ಯೆ ನಿವಾರಿಸಲಾಗುತ್ತಿಲ್ಲ. ಆದ್ದರಿಂದ ಪ್ರತಿ ವಲಯಕ್ಕೆ ಕನಿಷ್ಟ ಒಂದಾದರೂ ಒದಗಿಸುವಂತೆ ಶಾಸಕರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಪಾಲಿಕೆಯಲ್ಲಿ ಪ್ರಸ್ತುತ 5 ಡಿ-ಶಿಲ್ಟಿಂಗ್‌ ಮಶೀನ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಹೊಸದಾಗಿ ಏಳು ಮಶೀನ್‌ ಖರೀದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅವು ಮಂಜೂರಾದ ನಂತರ ಪ್ರತಿ ವಲಯಕ್ಕೆ ಒಂದರಂತೆ ಮಶೀನ್‌ಗಳು ಕಾರ್ಯ ನಿರ್ವಹಿಸಲಿವೆ ಎಂದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸ ಯೋಜನೆಗಳನ್ನು ಜಾರಿಗೊಳಿಸಲು ಸರಕಾರಿ ಜಾಗೆಗಳು ಲಭ್ಯವಿಲ್ಲದ್ದರಿಂದ ಅನೇಕ ಯೋಜನೆಗಳು ನನೆಗುದಿಗೆ ಬಿದ್ದಿವೆ. ಆದರೆ ಕ್ಷೇತ್ರ ವ್ಯಾಪ್ತಿಯ ಹಲವೆಡೆ ಪಾಲಿಕೆ ಒಡೆತನದ ಖುಲ್ಲಾ ಜಾಗೆಗಳನ್ನು ಖಾಸಗಿಯವರು ಅತಿಕ್ರಮಿಸಿಕೊಂಡು ವ್ಯಾಪಾರ-ವಹಿವಾಟು ನಡೆಸುತ್ತಿದ್ದಾರೆ. ಅವನ್ನು ಕೂಡಲೇ ತೆರವುಗೊಳಿಸಿ ಖುಲ್ಲಾ ಜಾಗೆಗಳು ಅತಿಕ್ರಮಣವಾಗದಂತೆ ಫೆನ್ಸಿಂಗ್‌ ಅಳವಡಿಸಬೇಕು. ಅಲ್ಲದೇ ಗಾರ್ಡನಪೇಟೆ, ಗಣೇಶಪೇಟೆಯಲ್ಲಿನ ಶಿಥಿಲಾವಸ್ಥೆಯಲ್ಲಿರುವ ಪಾಲಿಕೆ ಒಡೆತನದ ಕಟ್ಟಡಗಳನ್ನು ಕೂಡಲೇ ತೆರವು ಮಾಡಬೇಕೆಂದು ಶಾಸಕರು ಆಯುಕ್ತರಿಗೆ ಸೂಚಿಸಿದರು.

ಕುಡಿಯುವ ನೀರಿನ ಪೈಪ್‌ಲೈನ್‌ದಲ್ಲಿ ಕೆಲವೆಡೆ ಯುಜಿಡಿ ನೀರು ಮಿಶ್ರಣವಾಗುತ್ತಿದ್ದು, ಅದನ್ನು ಸರಿಪಡಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಾರ್ಡ್‌ಗಳ ನಡುವೆ ಗಡಿರೇಖೆ ಗುರುತಿಸಬೇಕು. ಬೀದಿದೀಪಗಳ ಅಳವಡಿಸಬೇಕು. ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿವೆ. ಅಧಿಕಾರಿಗಳು ಅನಗತ್ಯ ವಿಳಂಬ ಮಾಡದೇ ಕಾಲಮಿತಿಯೊಳಗೆ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಬೇಕೆಂದು ಶಾಸಕರು ಸೂಚಿಸಿದರು. ಜೊತೆಗೆ ಇನ್ನಿತರೆ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಪಾಲಿಕೆ ಜಂಟಿ ಆಯುಕ್ತ ಆನಂದ ಕಲ್ಲೋಳಿಕರ, ಅಧೀಕ್ಷಕ ಅಭಿಯಂತರ ಟಿ. ತಿಮ್ಮಪ್ಪ, ಇಇ ವಿಜಯಕುಮಾರ ಹಾಗೂ ಪಾಲಿಕೆಯ ವಲಯಾಧಿಕಾರಿಗಳು, ಘನತ್ಯಾಜ್ಯ ನಿರ್ವಹಣೆ, ಜಲಮಂಡಳಿ, ವಿದ್ಯುತ್‌ ವಿಭಾಗದ ಅಧಿಕಾರಿಗಳು ಮೊದಲಾದವರಿದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.