ಸುಸಜ್ಜಿತ ಎಫ್‌ಎಂಸಿಜಿ ವಲಯಕ್ಕೆ ವಿಷನ್‌ ವರದಿ! ದೇಶದ ಮೊದಲ ಕ್ಲಸ್ಟರ್‌ ಎಂಬ ಹೆಗ್ಗಳಿಕ


Team Udayavani, Oct 3, 2020, 12:45 PM IST

ಸುಸಜ್ಜಿತ ಎಫ್‌ಎಂಸಿಜಿ ವಲಯಕ್ಕೆ ವಿಷನ್‌ ವರದಿ! ದೇಶದ ಮೊದಲ ಕ್ಲಸ್ಟರ್‌ ಎಂಬ ಹೆಗ್ಗಳಿಕ

ಹುಬ್ಬಳ್ಳಿ: ದೇಶದ ಮೊದಲ ಎಫ್‌ಎಂಸಿಜಿ (ಫಾಸ್ಟ್‌ ಮೂವಿಂಗ್‌ ಕನ್ಸೂಮರ್‌ ಗೂಡ್ಸ್‌ ಉತ್ಪಾದನಾ ಕ್ಲಸ್ಟರ್‌) ವಲಯವನ್ನು ಮಹಾನಗರದಲ್ಲಿ ಸುಸಜ್ಜಿತವಾಗಿ ಸ್ಥಾಪನೆಗೆ ಸಂಬಂಧಿಸಿದಂತೆ ವಿಷನ್‌ ಗ್ರೂಪ್‌ ಸಿದ್ಧಪಡಿಸಿರುವ ವರದಿಯನ್ನು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ ಅವರಿಗೆ ಶುಕ್ರವಾರ ಸಲ್ಲಿಸಲಾಯಿತು.

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ವಿಷನ್‌ ಗ್ರೂಪ್‌ನ ಮುಖ್ಯಸ್ಥ ಉಲ್ಲಾಸ್‌ ಕಾಮತ ಅವರು ಎಫ್‌ಎಂಸಿಜಿ ಕ್ಲಸ್ಟರ್‌ ಸ್ಥಾಪನೆ ಕುರಿತ “ಟ್ರಾನ್ಸ್‌ಫಾರ್ಮ್ ಹುಬ್ಬಳ್ಳಿ-ಧಾರವಾಡ ವಿಷನ್‌ ಗ್ರೂಪ್‌ 2020-2025′ ವರದಿಯನ್ನು ಹಸ್ತಾಂತರಿಸಿದರು.
ವರದಿ ಸ್ವೀಕರಿಸಿ ಮಾತನಾಡಿದ ಸಚಿವ ಜಗದೀಶ ಶೆಟ್ಟರ, ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಬದ್ಧವಾಗಿ ಉತ್ತರ-ಕರ್ನಾಟಕದ ಅಭಿವೃದ್ಧಿಗಾಗಿ “ಟ್ರಾನ್ಸ್‌ಫಾರ್ಮ್ ಹುಬ್ಬಳ್ಳಿ-ಧಾರವಾಡ’ ರೂಪುರೇಷೆಯ ದಾಖಲೆ ಸಿದ್ಧವಾಗಿದೆ. 2025ರ ವೇಳೆಗೆ ಶೇ.35 ಆರ್ಥಿಕ ಬೆಳವಣಿಗೆಯೊಂದಿಗೆ 5 ಲಕ್ಷ ಉದ್ಯೋಗಾವಕಾಶ ಸೃಷ್ಟಿಸುವ ಗುರಿ ಇದೆ. ಧಾರವಾಡದಲ್ಲಿ ಎಫ್‌ಎಂಸಿಜಿ ಕ್ಲಸ್ಟರ್‌ ಸ್ಥಾಪನೆ ಮೂಲಕ ಈ ಕ್ಷೇತ್ರದ ಹೂಡಿಕೆದಾರನ್ನು ಸೆಳೆಯಲಾಗುವುದು ಎಂದು ಹೇಳಿದರು.

ಕಳೆದ ಬಜೆಟ್‌ನಲ್ಲಿ ಎಫ್‌ಎಂಸಿಜಿ ಕ್ಲಸ್ಟರ್‌ ಸ್ಥಾಪನೆ ಸಂಬಂಧ ಘೋಷಣೆ ಆಗಿತ್ತು. ಅದರಂತೆ ಟ್ರಾನ್‌ಸಾ#ರ್ಮ್ ಹುಬ್ಬಳ್ಳಿ ಧಾರವಾಡ ವಿಷನ್‌ ಗ್ರೂಪ್‌ 2020-2025 ವರದಿ ಸಿದ್ಧಪಡಿಸಲಾಗಿದೆ. ಧಾರವಾಡದಲ್ಲಿ ಎಫ್‌ಎಂಸಿಜಿ ಕ್ಲಸ್ಟರ್‌ ಸ್ಥಾಪನೆ ಕುರಿತು ಸಂಬಂಧಪಟ್ಟ ಎಲ್ಲರ ಅಭಿಪ್ರಾಯ ಪಡೆದ ಬಳಿಕ ಸಿಎಂ ಜತೆ ಸಮಾಲೋಚನೆ ನಡೆಸಿ ಯೋಜನೆ ಸಾಕಾರಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ಹುಬ್ಬಳ್ಳಿ-ಧಾರವಾಡದ ಎಫ್‌ಎಂಸಿಜಿ ಕ್ಲಸ್ಟರ್‌ನಿಂದ ಹೆಚ್ಚುವರಿ 25,000 ಕೋಟಿ ರೂ. ವಹಿವಾಟು ನಡೆಯುವ ನಿರೀಕ್ಷೆ ಇದೆ. ಈ
ಪ್ರದೇಶದಲ್ಲಿ 12-15 ಸಾವಿರ ಕೋಟಿ ರೂ. ಸಾಮಾಜಿಕ ಆರ್ಥಿಕ ವಹಿವಾಟು ನಡೆಯುವ ಅಂದಾಜಿದೆ. ಪ್ರಸ್ತಾವಿತ ಎಫ್‌ಎಂಸಿಜಿ ಕ್ಲಸ್ಟರ್‌ ಮೂರು ಹಂತದಲ್ಲಿ ಅಭಿವೃದ್ಧಿಯಾಗಲಿದ್ದು, ಪ್ರತಿ ಹಂತದಲ್ಲೂ 50 ಎಫ್‌ಎಂಸಿಜಿ ಕಂಪನಿಗಳು ಅಂದಾಜು 2500 ಕೋಟಿ ರೂ. ಹೂಡಿಕೆ ಮಾಡುವ ನಿರೀಕ್ಷೆ ಇದೆ. ಅದೇ ರೀತಿ ಪ್ರತಿ ಹಂತದಲ್ಲೂ 50,000 ಉದ್ಯೋಗ ಸೃಷ್ಟಿ ಸಾಧ್ಯತೆ ಇದ್ದು, ಪ್ರತಿ ಹಂತದಲ್ಲೂ 500 ಎಕರೆ ಪ್ರದೇಶ ಬಳಕೆಯಾಗಲಿದೆ. ರಾಜ್ಯದ ಮುಂದಿನ ಕೈಗಾರಿಕಾ ಕ್ರಾಂತಿಗೆ ಈ ಯೋಜನೆ ನಾಂದಿ ಹಾಡಲಿದೆ.
ಮುಂದಿನ 4-5 ವರ್ಷಗಳಲ್ಲಿ ಭಾರತವನ್ನು 5 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯ ದೇಶವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕೂಡ ಇದು ನೆರವಾಗಲಿದೆ ಎಂದರು.

ವಿಷನ್‌ ಗ್ರೂಪ್‌ನ ಅಧ್ಯಕ್ಷ ಉಲ್ಲಾಸ ಕಾಮತ ಮಾತನಾಡಿ, ಹೂಡಿಕೆ ಆಕರ್ಷಣೆ ಹಾಗೂ ಕೈಗಾರಿಕೆಗಳ ಅಭಿವೃದ್ಧಿ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂಬಯಿ, ಹೈದರಾಬಾದ್‌, ಗುವಾಹಟಿ ಹಾಗೂ ಹುಬ್ಬಳ್ಳಿಯಲ್ಲಿ ರೋಡ್‌ ಶೋ ಆಯೋಜಿಸಿತ್ತು.
ಅದರ ಫಲವಾಗಿ ಹಲವಾರು ಯೋಜನೆಗಳು ಸಾಕಾರ ರೂಪ ತಾಳುತ್ತಿವೆ. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ಅಧ್ಯಯನಕ್ಕೆ ವಿಷನ್‌ ಗ್ರೂಪ್‌ ರಚಿಸಲಾಗಿತ್ತು. ರಾಜ್ಯ ಸರ್ಕಾರ ಹಾಗೂ ಕೈಗಾರಿಕೆ ಇಲಾಖೆಯ ಪ್ರಯತ್ನದಿಂದಾಗಿ ಈ
ವರದಿ ಸಿದ್ಧಗೊಂಡಿದೆ ಎಂದರು. ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ, ಕೆಐಡಿಬಿ ಸಿಇಒ ಡಾ| ಶಿವಶಂಕರ, ಎಫ್‌ಎಂಸಿಜಿ ಕ್ಲಸ್ಟರ್‌ ನೋಡಲ್‌ ಬಿ.ಕೆ ಶಿವಕುಮಾರ ಇನ್ನಿತರರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.