ಕ್ಷೇತ್ರ ವ್ಯಾಪ್ತಿ ಎಲ್ಲೆಡೆ ಉಚಿತ ಆರೋಗ್ಯ ತಪಾಸಣೆ ಶಿಬಿರ: ಪ್ರಸಾದ್‌

ಜನರು ಶಿಬಿರದ ಸದುಪಯೋಗಪಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು

Team Udayavani, Feb 21, 2022, 5:11 PM IST

ಕ್ಷೇತ್ರ ವ್ಯಾಪ್ತಿ ಎಲ್ಲೆಡೆ ಉಚಿತ ಆರೋಗ್ಯ ತಪಾಸಣೆ ಶಿಬಿರ: ಪ್ರಸಾದ್‌

ಹುಬ್ಬಳ್ಳಿ: ಬಡಜನರ ಮನೆ ಬಾಗಿಲಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ನನ್ನ ಕ್ಷೇತ್ರ ವ್ಯಾಪ್ತಿಯ ಎಲ್ಲೆಡೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಎಸ್‌ಡಿಎಂ ನಾರಾಯಣ ಹಾರ್ಟ್‌ ಸೆಂಟರ್‌ ಹಾಗೂ ಪ್ರಸಾದ ಅಬ್ಬಯ್ಯ ಫೌಂಡೇಶನ್‌ ವತಿಯಿಂದ ರವಿವಾರ ವಾರ್ಡ್‌ ನಂ. 79ರ ಎಸ್‌.ಎಂ. ಕೃಷ್ಣ ನಗರದ ರಾಜೀವ ಗಾಂಧಿ ಕನ್ನಡ ಮತ್ತು ಉರ್ದು ಶಾಲೆ ಆವರಣದಲ್ಲಿ ಆಯೋಜಿಸಿದ್ದ ಉಚಿತ ಹೃದ್ರೋಗ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಉಚಿತ ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಂದ ಮಾತ್ರ ಸದೃಢ ದೇಶ ನಿರ್ಮಿಸಲು ಸಾಧ್ಯ ಎಂಬುದು ಡಾ| ಬಿ.ಆರ್‌. ಅಂಬೇಡ್ಕರ ಅವರ ಆಶಯವಾಗಿತ್ತು.

ಅವರ ಅಭಿಲಾಷೆಯಂತೆ ಕ್ಷೇತ್ರ ವ್ಯಾಪ್ತಿಯ ಬಡ ಜನರ ಆರೋಗ್ಯ ಸುಧಾರಣೆ ಹಾಗೂ ಬಡ ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ಕೊಟ್ಟು ಕೋಟ್ಯಂತರ ರೂ. ಅನುದಾನದಲ್ಲಿ ಕ್ಷೇತ್ರದ ವಿವಿಧೆಡೆ ಸರಕಾರಿ ಆಸ್ಪತ್ರೆಗಳನ್ನು ನಿರ್ಮಿಸಿದ್ದಲ್ಲದೇ ಸರಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ ಮಕ್ಕಳ ಕಲಿಕೆಗೆ ಪ್ರೇರೇಪಣೆ ನೀಡಲಾಗಿದೆ ಎಂದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಬಡವರು, ಮಧ್ಯಮ ವರ್ಗದ ಜನರೇ ಅತಿ ಹೆಚ್ಚು ವಾಸವಾಗಿದ್ದು, ಅವರಿರುವಲ್ಲಿಯೇ ತಜ್ಞ ವೈದ್ಯರ ತಂಡದೊಂದಿಗೆ ಉಚಿತ ತಪಾಸಣೆ ನಡೆಸಿ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಕಳೆದ ಬಾರಿ ಹಮ್ಮಿಕೊಂಡಿದ್ದ ನೇತ್ರ ತಪಾಸಣೆ ಶಿಬಿರದಲ್ಲಿ ಸುಮಾರು 400ಕ್ಕೂ ಹೆಚ್ಚು ಜನರು ತಪಾಸಣೆಗೊಳಪಟ್ಟು 120ಕ್ಕೂ ಅಧಿಕ ಜನರು ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದರು.

ಇಂತಹ ಆರೋಗ್ಯ ಶಿಬಿರಗಳಿಂದ ಕಡುಬಡವರಿಗೆ ಅನುಕೂಲವಾಗಿದೆ ಎಂದು ಹೇಳಿದರು. ಸಾನ್ನಿಧ್ಯ ವಹಿಸಿದ್ದ ತಾಜುದ್ದೀನ್‌ ಪೀರಾ ಖಾದ್ರಿ ಮಾತನಾಡಿ, ಕ್ಷೇತ್ರದ ಬಡ ಜನರ ಆರೋಗ್ಯದ ಕಾಳಜಿಯಿಂದ ಫೌಂಡೇಶನ್‌ ಸ್ಥಾಪಿಸಿ ಜನರ ಮನೆ ಬಾಗಿಲಿಗೆ ಉಚಿತವಾಗಿ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸುತ್ತಿರುವ ಶಾಸಕ ಪ್ರಸಾದ ಅಬ್ಬಯ್ಯ ಅವರ ಸೇವಾಕಾರ್ಯ ಶ್ಲಾಘನೀಯ. ಜನರು ಶಿಬಿರದ ಸದುಪಯೋಗಪಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಪಾಲಿಕೆ ಮಾಜಿ ಸದಸ್ಯರಾದ ಮೋಹನ ಅಸುಂಡಿ, ಅಲ್ತಾಫ್‌ ಕಿತ್ತೂರ, ಮುತುವಲ್ಲಿ ಶಬ್ಬೀರ್‌ ನದಾಫ್‌, ಎಸ್‌ಡಿಎಂ ಆಸ್ಪತ್ರೆಯ ವೈದ್ಯ ಡಾ| ಮಹಾಂತೇಶ ಉಳ್ಳಾಗಡ್ಡಿ, ಮುಖಂಡರಾದ ಬಾಬಾಜಾನ ಕಾರಡಗಿ, ಪ್ರಭು ಪ್ರಭಾಕರ, ಸೈಯದ್‌ ಸಲೀಂ ಮುಲ್ಲಾ, ರಿಯಾಜ್‌ ಖೀಲ್ಲೇದಾರ, ಜಾಫರ ಸೊಲ್ಲಾಪುರಿ, ಶಂಕ್ರಪ್ಪ ಅಸುಂಡಿ, ಮೀರಾನಸಾಬ ನದಾಫ, ರಾಕೇಶ ಪಲ್ಲಾಟೆ, ದೇವೇಂದ್ರಪ್ಪ ಇಟಗಿ, ಅಬ್ದುಲ ಮುನಾಫ ಮುಲ್ಲಾ, ಅಹಮ್ಮದಸಾಬ ಸವಣೂರು, ಮಹ್ಮದಗೌಸ್‌ ಮುನವಳ್ಳಿ ಮೊದಲಾದವರಿದ್ದರು.

ಟಾಪ್ ನ್ಯೂಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.