ಉತ್ತಮ ಆಡಳಿತಕ್ಕೆ ಇತಿಹಾಸ ಪುನರ್‌ ಮನನ ಅಗತ್ಯ; ಯದುವೀರ

ಐತಿಹಾಸಿಕ ಪಾರಂಪರಿಕ ಸಂಪ್ರದಾಯಗಳ ಸಂರಕ್ಷಣೆಗೆ ಒತ್ತು ನೀಡಿ ಉತ್ತಮ ಆಡಳಿತ ನೀಡಿದರು

Team Udayavani, May 2, 2022, 5:38 PM IST

ಉತ್ತಮ ಆಡಳಿತಕ್ಕೆ ಇತಿಹಾಸ ಪುನರ್‌ ಮನನ ಅಗತ್ಯ; ಯದುವೀರ

ಧಾರವಾಡ: ರಾಜ್ಯದಲ್ಲಿ ಉತ್ತಮ ಆಡಳಿತ, ನೀತಿ-ನಿಯಮಗಳ ರಚನೆಗಾಗಿ ಇತಿಹಾಸವನ್ನು ಪುನರ್‌ ಮನನ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಮೈಸೂರು ರಾಜವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ಕವಿವಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ರಾಜ್ಯಶಾಸ್ತ್ರ ವಿಭಾಗ, ಸಾರ್ವಜನಿಕ ಆಡಳಿತ ವಿಭಾಗ ಮತ್ತು ಪ್ರೊ| ಹರೀಶ್‌ ರಾಮಸ್ವಾಮಿ ಗುರುಗಳ ಅಭಿನಂದನಾ ಸಮಿತಿ ಸಹಯೋಗದಲ್ಲಿ “ಕರ್ನಾಟಕದಲ್ಲಿ ರಾಜಕಾರಣ ಮತ್ತು ನೀತಿ ರಚನೆ’ ಎಂಬ ವಿಷಯದ ಕುರಿತು ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಪ್ರೊ| ಹರೀಶ ರಾಮಸ್ವಾಮಿ ಗುರುಗಳ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾಲ್ಕು ಆಂಗ್ಲೋ ಮೈಸೂರು ಯುದ್ಧಗಳಿಂದ ಮೈಸೂರು ಸಂಸ್ಥಾನ ಜರ್ಜರಿತವಾಗಿದ್ದ ನಂತರ ಮುಮ್ಮಡಿ ಕೃಷ್ಣರಾಜ ಒಡೆಯರ್‌ ಅವರ ಆಡಳಿತದಲ್ಲಿ ಧಾರ್ಮಿಕ ಸಂಸ್ಥೆ ಮತ್ತು ಐತಿಹಾಸಿಕ ಪಾರಂಪರಿಕ ಸಂಪ್ರದಾಯಗಳ ಸಂರಕ್ಷಣೆಗೆ ಒತ್ತು ನೀಡಿ ಉತ್ತಮ ಆಡಳಿತ ನೀಡಿದರು. ಆಗ ಕೃಷಿಗೆ ಹೆಚ್ಚಿನ ಪ್ರಮಾಣದಲ್ಲಿ ಒತ್ತು ನೀಡಿದ್ದರು. ದೇಶದಲ್ಲಿ ಮೊದಲನೆದಾಗಿ ಹಿಂದುಳಿದ ದಮನಿತ ವರ್ಗಗಳಿಗೆ ಮೀಸಲಾತಿ ನೀಡುವಲ್ಲಿ ಮೈಸೂರು ಸಂಸ್ಥಾನ ಒಂದು ಹೆಜ್ಜೆ ಮುಂದೆ ಇಟ್ಟಿತು. ನಂತರ ಸಂವಿಧಾನದಲ್ಲಿ ಮೀಸಲಾತಿ ಅಳವಡಿಸಲಾಯಿತು ಎಂದರು.

ಪುಸ್ತಕ ಬಿಡುಗಡೆಗೊಳಿಸಿದ ಆರೆಸ್ಸೆಸ್‌ ಕರ್ನಾಟಕ ಉತ್ತರ ಪ್ರಾಂತದ ಸಹ ಸಂಚಾಲಕ ಅರವಿಂದರಾವ್‌ ದೇಶಪಾಂಡೆ ಮಾತನಾಡಿ, ರಾಜಕೀಯ ನಾಯಕರು ನೀತಿ ರಚನೆಯಲ್ಲಿ ಹೆಚ್ಚು ನಿಷ್ಠೆ ಹೊಂದಿರಬೇಕು. ಆಡಳಿತ ನಡೆಸುವವರು ಸಮಗ್ರ ಬೆಳವಣಿಗೆ-ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು. ಪ್ರಸ್ತುತ ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಬೇಕು. ಮೈಸೂರು ಪ್ರಾಂತ್ಯದ ಕಾವೇರಿಗೆ ಎಷ್ಟು ಮಹತ್ವ ನೀಡಲಾಗುತ್ತಿದೆಯೋ ಅಷ್ಟೇ ರೀತಿಯಲ್ಲಿ ಉತ್ತರ ಕರ್ನಾಟಕದ ಕೃಷ್ಣ ಪ್ರಾಂತ್ಯದ ಅಭಿವೃದ್ಧಿಗೂ ಆದ್ಯತೆ ನೀಡಬೇಕು. ಪ್ರಾದೇಶಿಕ ಅಸಮಾನತೆ ತೊಡೆದು ಹಾಕಲು ಹೆಚ್ಚು ಗಮನ ಹರಿಸಬೇಕು.ಉತ್ತರ ಕರ್ನಾಟಕಕ್ಕೆ ಔದ್ಯೋಗಿಕವಾಗಿ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕವಿವಿ ಕುಲಪತಿ ಪ್ರೊ| ಕೆ.ಬಿ. ಗುಡಸಿ ಮಾತನಾಡಿ, ಭಾರತೀಯ ವಿಜ್ಞಾನ ಕೇಂದ್ರಕ್ಕೆ ಮೈಸೂರಿನ ಮಹಾರಾಜರು ಜಾಗ ನೀಡಿದ್ದು ಅವರ ಶೈಕ್ಷಣಿಕ ಕಾಳಜಿ ಎತ್ತಿ ತೋರಿಸುತ್ತದೆ ಎಂದರು. “ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ರಾಜಕೀಯ ಪಾತ್ರ ಮತ್ತು ಹೊಣೆಗಾರಿಕೆ’ ಮತ್ತು “ಟಿಬೆಟಿನ್‌ ರಾಜಕೀಯ ವ್ಯವಸ್ಥೆ (ರಾಜ್ಯದೊಳಗೊಂದು ರಾಜ್ಯ)’ ಎಂಬ ಎರಡು ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಶಿಗ್ಗಾವಿಯ ಜಾನಪದ ವಿವಿ ಮೌಲ್ಯಮಾಪನ ಕುಲಸಚಿವ ಡಾ| ಎನ್‌.ಎಂ. ಸಾಲಿ, ರಾಯಚೂರು ವಿವಿ ಮೌಲ್ಯಮಾಪನ ಕುಲಸಚಿವ ಡಾ| ಎಂ. ಯರಿಸ್ವಾಮಿ, ಕವಿವಿ ಮತ್ತು ರಾಯಚೂರು ವಿವಿ ಸಿಂಡಿಕೇಟ್‌ ಸದಸ್ಯರು ಇದ್ದರು.

ಬೆಳಗಾವಿ ರಾಣಿ ಚನ್ನಮ್ಮಾ ವಿವಿಯ ಡಾ| ಕಮಲಾಕ್ಷಿ ತಡಸದ ಪ್ರಾಸ್ತಾವಿಕ ಮಾತನಾಡಿದರು. ಡಾ| ಬಿ.ಎಂ. ರತ್ನಾಕರ ಸ್ವಾಗತಿಸಿದರು. ಡಾ| ಎಸ್‌.ವಿ. ವಸ್ತ್ರದ ನಿರೂಪಿಸಿದರು. ಡಾ| ಪ್ರದೀಪ ಜೋಶಿ ವಂದಿಸಿದರು.

ಅಭಿನಂದನಾ ಸಮಾರಂಭ: ಮೈಸೂರು ರಾಜವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಪ್ರೊ| ಹರೀಶ ರಾಮಸ್ವಾಮಿ ಮತ್ತು ಪತ್ನಿ ನೀರಧಾ ರಾಮಸ್ವಾಮಿ ಅವರನ್ನು ಸನ್ಮಾನಿಸಿದರು. ಅಭಿನಂದನೆ ಸ್ವೀಕರಿಸಿದ ಪ್ರೊ| ರಾಮಸ್ವಾಮಿ ಮಾತನಾಡಿ, ಸಂಸ್ಕಾರಗಳು ಮನುಷ್ಯನನ್ನು ಬದಲಾಯಿಸುತ್ತವೆ. ಈ ಕಾರಣದಿಂದಲೇ ಒಬ್ಬ ಉಪನ್ಯಾಸಕನಾಗಿ, ಒಂದು ವಿವಿಯ ಕುಲಪತಿಯಾಗಿ ನಿಂತಿದ್ದೇನೆ ಎಂದರು. ಕವಿವಿ ರಾಜ್ಯಶಾಸ್ತ್ರ ವಿಭಾಗ ಹೊರತಂದ ಚಾಣಿಕ್ಯ ಸಂಶೋಧನಾ ನಿಯತಕಾಲಿಕೆ ಬಿಡುಗಡೆ ಮಾಡಲಾಯಿತು. ಕವಿವಿ ಕುಲಸಚಿವ ಯಶಪಾಲ್‌ ಕ್ಷೀರಸಾಗರ ಅಧ್ಯಕ್ಷತೆ ವಹಿಸಿದ್ದರು.

ಪಂಚವಾರ್ಷಿಕ ಯೋಜನೆಗಳು ಮೈಸೂರು ಮಹಾರಾಜರ ಕಲ್ಪನೆಯಾಗಿದ್ದು, ಸ್ವಾತಂತ್ರ್ಯದ ನಂತರ ದೇಶದಲ್ಲಿ ಅನುಷ್ಠಾನಗೊಳಿಸಿದರು. ದೇಶದಲ್ಲಿ 450 ಪಾರಂಪರಿಕ ಭೌಗೋಳಿಕ ಸೂಚ್ಯಂಕಗಳು ಇದ್ದು, ಅದರಲ್ಲಿ ಕರ್ನಾಟಕದಲ್ಲಿ 50ಕ್ಕಿಂತ ಹೆಚ್ಚು ವಿವಿಧ ರೀತಿಯ ಸೂಚ್ಯಂಕಗಳು ಇವೆ. ಅದರಲ್ಲಿ ಹೆಚ್ಚು ಮೈಸೂರಿನ ಭಾಗದ್ದು ಎಂಬುದು ಹೆಮ್ಮೆಯ ಸಂಗತಿ.
ಯದುವೀರ ಕೃಷ್ಣದತ್ತ ಚಾಮರಾಜ
ಒಡೆಯರ್‌, ಮೈಸೂರು ರಾಜವಂಶಸ್ಥ

ಜನರು ಮಾತ್ರ ರಾಜಕೀಯ ವ್ಯವಸ್ಥೆ ಸರಿಪಡಿಸಲು ಸಾಧ್ಯವಿದೆ. ನಮ್ಮನ್ನು ಆಳುವವರ ಮನೋಭಾವ, ಆಲೋಚನೆಗಳು ಬದಲಾಗಬೇಕು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು. ಉತ್ತರ ಕರ್ನಾಟಕ ಹಿಂದುಳಿದಿಲ್ಲ. ಆದರೆ ಉತ್ತರ ಕರ್ನಾಟಕ ರಾಜಕೀಯ ನಾಯಕರ ಮತ್ತು ಜನರ ಮೈಂಡ್‌ ಸೆಟ್‌ ಬದಲಾವಣೆ ಆಗಬೇಕು.
ಪ್ರೊ| ಹರೀಶ ರಾಮಸ್ವಾಮಿ,
ರಾಯಚೂರು ವಿವಿ ಕುಲಪತಿ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.