ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಬಿತ್ತು ಅಧಿಕೃತ ಮುದ್ರೆ

11ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಮಲಯಾನ

Team Udayavani, May 4, 2022, 10:05 AM IST

3

ಹುಬ್ಬಳ್ಳಿ: ಬಸವ ಜಯಂತಿ, ಅಕ್ಷಯ ತೃತೀಯ ದಿನವೇ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರ ಬಿಜೆಪಿ ಸೇರ್ಪಡೆಗೆ ಅಧಿಕೃತ ಮುದ್ರೆ ಬಿದ್ದಂತಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಮಂಗಳವಾರ ಬೆಂಗಳೂರಿನಲ್ಲಿ ಭೇಟಿ ಮಾಡಿರುವ ಹೊರಟ್ಟಿಯವರು ಮಹತ್ವದ ಮಾತುಕತೆ ನಡೆಸಿದ್ದು, ಮೇ 11ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೆ ಮುಂದಾಗುವ ಮೂಲಕ ಸುಮಾರು ನಾಲ್ಕು ದಶಕಗಳಿಗಿಂತ ಹೆಚ್ಚಿನ ತಮ್ಮ ಜನತಾ ಪರಿವಾರದ ನಂಟಿಗೆ ಇತಿಶ್ರೀ ಹಾಡಲಿದ್ದಾರೆ.

ಕಳೆದ ಹಲವು ತಿಂಗಳಿಂದ ಹೊರಟ್ಟಿ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಅನಿಸಿಕೆಗಳಿಗೆ ಪುಷ್ಟಿ ಎನ್ನುವಂತೆ ಕೆಲ ದಿನಗಳ ಹಿಂದೆಯಷ್ಟೇ ಹೊರಟ್ಟಿಯವರು ಬಿಜೆಪಿ ಸೇರ³ಡೆ ನಿಜ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಇದೀಗ ಅಮಿತ್‌ ಶಾ ಅವರೊಂದಿಗಿನ ಚರ್ಚೆಯೊಂದಿಗೆ ಬಿಜೆಪಿ ಸೇರ್ಪಡೆಗೆ ಅಧಿಕೃತ ಮುದ್ರೆ ಬಿದ್ದಂತಾಗಿದೆ. ಅಲ್ಲಿಗೆ ಜೂನ್‌ನಲ್ಲಿ ನಡೆಯುವ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಹೊರಟ್ಟಿ ಅವರು ಬಿಜೆಪಿಯಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾದಂತಾಗಿದೆ. ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಇತರೆ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿತ್ತಾದರೂ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿರಲಿಲ್ಲ.

ವಿಧಾನ ಪರಿಷತ್ತು ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಅವರು ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದರು. ಸಾಲದು ಎನ್ನುವಂತೆ ಅವರು ತಾವು ಬಿಜೆಪಿ ನಿಯೋಜಿತ ಅಭ್ಯರ್ಥಿ ಎಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲಿಯೂ ಒಂದು ಸುತ್ತಿನ ಪ್ರಚಾರ ಕಾರ್ಯವನ್ನು ಕೈಗೊಂಡಿದ್ದರು. ಆದರೆ, ಬಿಜೆಪಿ ವರಿಷ್ಠರು ಮಾತ್ರ ಮೌನಕ್ಕೆ ಜಾರಿದ್ದರು. ಹೊರಟ್ಟಿಯವರು ಬಿಜೆಪಿ ಸೇರ್ಪಡೆ ಖಚಿತ ಎಂಬ ಕಾರಣದಿಂದಲೇ ಈ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ಹೇಳಲಾಗುತ್ತಿದೆ.

ಸಭಾಪತಿಗೆ ಗ್ರೀನ್‌ ಸಿಗ್ನಲ್‌? ಹೊರಟ್ಟಿ ಅವರ ಬಿಜೆಪಿ ಸೇರ್ಪಡೆ ವಿಷಯವಾಗಿ ಪಕ್ಷದ ಸ್ಥಳೀಯ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹಲವು ಸುತ್ತಿನ ಚರ್ಚೆ ಆಗಿದೆ. ಪಕ್ಷದ ವರಿಷ್ಠರಿಂದ ಹಸಿರು ನಿಶಾನೆ ದೊರತ ನಂತರವೇ ಹೊರಟ್ಟಿ ಅವರು ಮೊದಲ ಬಾರಿಗೆ ಬಿಜೆಪಿ ಸೇರುವುದು ನಿಜ, ಆ ನಿಟ್ಟಿನಲ್ಲಿ ಮಾತುಕತೆ ನಡೆಯುತ್ತಿದ್ದು, ಸಭಾಪತಿ ಸ್ಥಾನದಲ್ಲಿರುವುದರಿಂದ ಅಧಿಕೃತವಾಗಿ ಹೇಳಿಕೆ ನೀಡುವುದಿಲ್ಲ. ಚುನಾವಣೆ ವೇಳೆ ಬಹಿರಂಗ ಪಡಿಸುವೆ ಎಂದಿದ್ದರು.

ಮಂಗಳವಾರ ಬೆಂಗಳೂರಿನಲ್ಲಿ ಅಮಿತ್‌ ಶಾ ಅವರನ್ನು ಮುಖ್ಯಮಂತ್ರಿ, ಕೇಂದ್ರ ಸಚಿವರು, ಪಕ್ಷದ ವಿವಿಧ ನಾಯಕರ ಸಮ್ಮುಖದಲ್ಲಿ ಭೇಟಿ ಮಾಡಿದ ಹೊರಟ್ಟಿ ಅವರು ಚರ್ಚೆ ನಡೆಸಿದ್ದು, ಶಾ ಅವರು ಹೊರಟ್ಟಿ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದರು.

ಜತೆಗೆ ಸುಮಾರು 42 ವರ್ಷಗಳ ಕಾಲ ವಿಧಾನ ಪರಿಷತ್ತು ಸದಸ್ಯ, ಸಚಿವ ಹಾಗೂ ಸಭಾಪತಿಯಾಗಿ ಸೇವೆ ಸಲ್ಲಿಸಿದ ಹೊರಟ್ಟಿ ಅವರ ಸುದೀರ್ಘ‌ ರಾಜಕೀಯ ಪಯಣ ಹಾಗೂ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎನ್ನಲಾಗಿದೆ. ಬಿಜೆಪಿಯ ಕೆಲ ರಾಷ್ಟ್ರೀಯ ನಾಯಕರು ಸುಮಾರು ನಾಲ್ಕುವರೆ ದಶಕಗಳಿಂದ ಜನಪ್ರತಿನಿಧಿಯಾಗಿದ್ದರೂ ಹಗರಣ ಮುಕ್ತ, ಕಳಂಕ ರಹಿತ ರಾಜಕಾರಣಿಯಾಗಿ ಹೊರಹೊಮ್ಮಿರುವ ಹೊರಟ್ಟಿ ಅವರ ವ್ಯಕ್ತಿತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಇನ್ನು ಚುನಾವಣೆಯಲ್ಲಿ ಹೊರಟ್ಟಿಯವರು ಗೆಲುವು ಸಾಧಿಸಿದರೆ ಅವರನ್ನೇ ಮತ್ತೆ ವಿಧಾನ ಪರಿಷತ್ತು ಸಭಾಪತಿಯಾಗಿ ಮುಂದುವರಿಸುವ ಬಗ್ಗೆ ಬಿಜೆಪಿ ವರಿಷ್ಠರಿಂದ ಗ್ರೀನ್‌ಸಿಗ್ನಲ್‌ ದೊರೆತಿದೆ. ಪಕ್ಷ ಸೇರುವುದಕ್ಕೆ ತಮ್ಮನ್ನು ಸಭಾಪತಿ ಸ್ಥಾನದಲ್ಲಿ ಮುಂದುವರಿಸಬೇಕು ಎಂಬ ಬೇಡಿಕೆಯನ್ನು ಹೊರಟ್ಟಿಯವರು ಬಿಜೆಪಿ ವರಿಷ್ಠರ ಮುಂದೆ ಇರಿಸಿದ್ದರು. ಹೊರಟ್ಟಿಯವರಿಗೆ ಬಿಜೆಪಿ ಟಿಕೆಟ್‌ ನೀಡುವುದಕ್ಕೆ 75 ವರ್ಷ ವಯೋಮಿತಿ ಅಡ್ಡಿಯಾಗುತ್ತದೆ ಎಂಬುದು ಕೆಲವರ ಅನಿಸಿಕೆಯಾಗಿತ್ತಾದರೂ, ಬಿಜೆಪಿ ವರಿಷ್ಠರಿಂದ ಇದಕ್ಕೂ ಅಡ್ಡಿ ಇಲ್ಲ ಎಂಬ ಸಂದೇಶ ದೊರೆತಿದೆ ಎಂದು ಹೇಳಲಾಗುತ್ತಿದೆ.

ಸುದೀರ್ಘ‌ ನಂಟಿಗೆ ಗುಡ್‌ಬೈ: ಹೊರಟ್ಟಿ ಅವರು 1980ರಲ್ಲಿ ಮೊದಲ ಬಾರಿಗೆ ವಿಧಾನ ಪರಿಷತ್ತಿಗೆ ಸ್ಪರ್ಧಿಸಿ ಮೊದಲ ಯತ್ನದಲ್ಲೇ ಗೆಲುವು ಸಾಧಿಸುವ ಮೂಲಕ ಪಕ್ಷೇತರ ಸದಸ್ಯರಾಗಿ ವಿಧಾನ ಪರಿಷತ್ತು ಪ್ರವೇಶಿಸಿದ್ದರು. ನಂತರ ರಾಮಕೃಷ್ಣ ಹೆಗಡೆ ಅವರ ಪ್ರಭಾವಕ್ಕೊಳಗಾಗಿ ಜನತಾ ಪಕ್ಷ ಸೇರಿದ್ದರು. ಅಲ್ಲಿಂದ ಇಲ್ಲಿವರೆಗೆ ಅವರು ಜನತಾ ಪರಿವಾರದ ನಂಟು ಬಿಟ್ಟಿರಲಿಲ್ಲ. ಒಂದು ರೀತಿ ಅವರದ್ದು ವ್ಯಕ್ತಿನಿಷ್ಠೆ ರಾಜಕೀಯ ಎಂದರೆ ತಪ್ಪಾಗಲಾರದು. ರಾಮಕೃಷ್ಣ ಹೆಗಡೆಯವರು ಸಕ್ರಿಯ ರಾಜಕಾರಣದಲ್ಲಿ ಇರುವವರೆಗೂ ಅವರ ಜತೆಯಲ್ಲಿಯೇ ಗುರುತಿಸಿಕೊಂಡಿದ್ದರು. ಜನತಾ ಪರಿವಾರದಲ್ಲಿ ಒಡಕಾದಾಗಲೂ ಹೆಗಡೆ ಬೆಂಬಲಿಗರಾಗಿಯೇ ಮುಂದುವರಿದಿದ್ದರು. ಹೆಗಡೆಯವರ ನಿಧನ ನಂತರದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರೊಂದಿಗೆ ಗುರುತಿಸಿಕೊಂಡು ಜೆಡಿಎಸ್‌ ಸೇರಿದವರು.

ಸಭಾಪತಿ ಸ್ಥಾನ ಅಲಂಕರಿಸುವವರೆಗೂ ಜೆಡಿಎಸ್‌ ಸಕ್ರಿಯ ನಾಯಕರಾಗಿದ್ದರು. ಇದೀಗ ಬಿಜೆಪಿ ಕಡೆ ವಾಲುವ ಮೂಲಕ ಸುಮಾರು ನಾಲ್ಕು ದಶಕಗಳ ಜನತಾ ಪರಿವಾರದ ನಂಟಿಗೆ ಗುಡ್‌ಬೈ ಹೇಳಲು ಮುಂದಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್‌ನ ಹಿರಿಯ ನಾಯಕರಾಗಿ ಪಕ್ಷದ ಕೊಂಡಿಯಾಗಿದ್ದ ಹೊರಟ್ಟಿಯವರು ಇದೀಗ ಪಕ್ಷದ ಕೊಂಡಿ ಕಳಚಿಕೊಂಡು, ಬಿಜೆಪಿ ಸೇರ್ಪಡೆಗೆ ಒಲವು ತೋರಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ ಏಳು ಬಾರಿ ಗೆಲುವಿನ ಮೂಲಕ ರಾಷ್ಟ್ರಮಟ್ಟದಲ್ಲಿ ದಾಖಲೆ ಮಾಡಿರುವ ಹೊರಟ್ಟಿ ಅವರು ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮತ್ತೂಂದು ಮಹತ್ವದ ದಾಖಲೆ ಆಗಲಿದೆ. ಹೇಗಾದರೂ ಮಾಡಿ ಪಶ್ಚಿಮ ಪದವೀಧರ ಕ್ಷೇತ್ರದ ಮಾದರಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿಯೂ ತಮ್ಮ ಅಧಿಪತ್ಯ ಸ್ಥಾಪಿಸಬೇಕೆಂಬ ಬಿಜೆಪಿಯ ಹಲವು ದಶಕಗಳ ಕನಸು ನನಸಾದಂತಾಗಲಿದೆ. ಜತೆಗೆ ಉತ್ತರ ಕರ್ನಾಟಕದಲ್ಲಿ ಲಿಂಗಾಯತ ನಾಯಕರೊಬ್ಬರ ಸೇರ³ಡೆ ಆದಂತಾಗಲಿದೆ.

ಬಿಜೆಪಿ ಸೇರ್ಪಡೆ ಇಂಗಿತವನ್ನು ಈಗಾಗಲೇ ಬಹಿರಂಗಪಡಿಸಿದ್ದೇನೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬೆಂಗಳೂರಿನಲ್ಲಿ ಮಂಗಳವಾರ ಭೇಟಿಯಾಗಿ ಚರ್ಚಿಸಿದ್ದೇನೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸೇರಿದಂತೆ ಅನೇಕ ಸಚಿವರು, ನಾಯಕರ ಸಮ್ಮುಖದಲ್ಲಿಯೇ ಭೇಟಿಯಾಗಿ ಚರ್ಚಿಸಿದ್ದೇನೆ. ಬಿಜೆಪಿ ಸೇರ³ಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿದ್ದು, ಬಿಜೆಪಿ ವರಿಷ್ಠರಿಂದಲೂ ಒಪ್ಪಿಗೆ ದೊರೆತಿದೆ. ಮೇ 11ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವೆ. –ಬಸವರಾಜ ಹೊರಟ್ಟಿ, ವಿಧಾನ ಪರಿಷತ್ತು ಸಭಾಪತಿ

-ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.