ಪೊಲೀಸರಿಗೆ ಕಲ್ಲೇಟು: ಮತ್ತೆ 10 ಮಂದಿ ಸೆರೆ
Team Udayavani, Apr 5, 2020, 1:38 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಇಲ್ಲಿನ ಮಂಟೂರ ರಸ್ತೆಯ ಅರಳಿಕಟ್ಟಿ ಕಾಲೋನಿಯಲ್ಲಿ ಪೊಲೀಸರ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಮತ್ತೆ ಹತ್ತು ಜನರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಅರಳಿಕಟ್ಟಿ ಕಾಲೋನಿಯ ಖಾಜಾ ಬೇಪಾರಿ, ರಾಜೇಸಾಬ್ ನದಾಫ್, ಅಲ್ಲಾಭಕ್ ನದಾಫ್, ಜಾವೀದ್ ಬಿಜಾಪೂರ, ಅಫ್ಜಲ್ ರೋಣ, ಮಹಮ್ಮದಗೌಸ್ ಹಾವನೂರ, ಇರ್ಫಾನ್ ಬೇಪಾರಿ, ಗೂಡುಸಾಬ್ ಬೆಣ್ಣಿ, ಮಹಮ್ಮದ್ ಇಕ್ಬಾಲ್ ಬೆಣ್ಣಿ ಹಾಗೂ ಫಾತಿಮಾ ನದಾಫ್ ಬಂಧಿತರಾಗಿದ್ದು, ಎಲ್ಲರನ್ನೂ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಶುಕ್ರವಾರ ಅರಳಿಕಟ್ಟಿ ಕಾಲೋನಿಯ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲು ಕೆಲವರು ಮುಂದಾಗಿದ್ದ ವೇಳೆ ಪೊಲೀಸರು ಲಾಕ್ಡೌನ್ ಪಾಲಿಸಿ ಎಂದು ಹೇಳಲು ಹೋದಾಗ ಆರೋಪಿಗಳು ಅವರೊಂದಿಗೆ ವಾಗ್ವಾದ ನಡೆಸಿದ್ದರು. ಈ ವೇಳೆ ಕಾಲೋನಿಯ ಮಹಿಳೆಯರು ಸೇರಿ ನೂರಾರು ಜನ ಜಮಾಯಿಸಿ ಪೊಲೀಸರ ಮೇಲೆ ಕಲ್ಲು, ಇಟ್ಟಿಗೆ ತುಂಡುಗಳನ್ನು ತೂರಿದ್ದಲ್ಲದೆ ಬಡಿಗೆಯಿಂದ ಹಲ್ಲೆ ಮಾಡಿದ್ದರು. ಇದರಿಂದ ಎಎಸ್ಐ ಸೇರಿ ಐವರು ಪೊಲೀಸರು ಗಾಯಗೊಂಡಿದ್ದರು. ಈ ಕುರಿತು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಘಟನೆಗೆ ಸಂಬಂಧಿಸಿ ಪೊಲೀಸರು ಶಬಾನಾ ರೋಣ, ಸೈನಾಜ ರೋಣ, ರೇಷ್ಮಾ ಗದಗ, ಮಹಾಬೂಬಿ ಮಂಡಾಲಿ, ಶಾಬೀರಾ ಬೆಣ್ಣಿ ಅವರನ್ನು ಶುಕ್ರವಾರವೇ ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಆರು ಮಹಿಳೆಯರು ಸೇರಿ ಒಟ್ಟು 15 ಜನರನ್ನು ಬಂಧಿಸಿದಂತಾಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದವರಲ್ಲಿ ಕೆಲವರು ರೌಡಿಶೀಟರ್ ಗಳಾಗಿದ್ದಾರೆ ಎಂದು ತಿಳಿದುಬಂದಿದೆ.
ತಲೆಮರೆಸಿಕೊಂಡಿರುವ ದಾವಲಸಾಬ್ ನದಾಫ್, ಬಾಷಾ ಬೇಪಾರಿ, ಫತ್ತೆಅಹ್ಮದ್ ಶಾಬ್ದಿ, ಇಮ್ಮು ನದಾಫ್, ಜಿಲಾನಿ ನದಾಫ್ ಶಾರೂಖ್ ಬೇಪಾರಿ, ರಬ್ಟಾನಿ ಬೇಪಾರಿ ಸೇರಿದಂತೆ ಇನ್ನಿತರರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ