Hubballi: ಅಲ್ಫಾನ್ಸೋ ಮಾವಿನ ಹಣ್ಣು ರಫ್ತಿಗೆ ಹೇರಳ ಅವಕಾಶ

ದೆಹಲಿಗೆ ಕಳಿಸಲು ಕೇಂದ್ರ ಸರಕಾರ ಕಿಸಾನ್‌ ರೈಲನ್ನು ಪರಿಚಯಿಸಿದೆ.

Team Udayavani, Nov 9, 2023, 5:25 PM IST

Hubballi: ಅಲ್ಫಾನ್ಸೋ ಮಾವಿನ ಹಣ್ಣು ರಫ್ತಿಗೆ ಹೇರಳ ಅವಕಾಶ

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫು¤ ನಿಗಮ ನಿಯಮಿತ ಬೆಂಗಳೂರು, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ ಧಾರವಾಡ ಆಶ್ರಯದಲ್ಲಿ ಬುಧವಾರ ಮಾವು ರಫ್ತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಎಂ.ಎಚ್‌.ಬಂಥನಾಳ
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾವು ಬೆಳೆದ ಗುಣಮಟ್ಟದ ಅಲ್ಫಾನ್ಸೋ ಮಾವು ಹೊರ ದೇಶಗಳಿಗೆ ರಫ್ತು ಮಾಡಲು
ಪ್ರಯತ್ನಿಸಬೇಕು. ಇದಕ್ಕೆ ಬೇಕಾದ ರಫ್ತು ವಿಧಾನ, ಪೋಸ್ಟ್‌ ಹಾರ್ವೇಸ್ಟ್‌ಗೆ ಬೇಕಾದ ಮೂಲಸೌಕರ್ಯಗಳಾದ ಶೀತಲೀಕರಣ ಘಟಕ, ವೇರ್‌ಹೌಸ್‌, ರಿಫರ್‌ ವ್ಯಾನ್‌ ಇತ್ಯಾದಿ ಕೆಪೆಕ್‌ ಸಂಸ್ಥೆಯಿಂದ ಹುಬ್ಬಳ್ಳಿಯಲ್ಲಿ ಸ್ಥಾಪಿಸಿದ್ದು, ಇದನ್ನು ಮಾವು ಬೆಳೆಗಾರರು ಉಪಯೋಗಿಸಿಕೊಂಡು ರಫ್ತು ಕೈಗೊಳ್ಳ ಬಹುದು ಎಂದರು.

ವಿಟಿಪಿಸಿಯ ಸಹಾಯಕ ನಿರ್ದೇಶಕ ಟಿ.ಎಸ್‌. ಮಲ್ಲಿಕಾರ್ಜುನ ಪ್ರಾಸ್ತಾವಿಕ ಮಾತನಾಡಿ, ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಲ್ಲಿ ಮಾವು ಧಾರವಾಡ ಜಿಲ್ಲೆಯಲ್ಲಿ ಗುರುತಿಸಿದ್ದು,  ಮಾವು ಬೆಳೆಗಾರರು ಮಾವು ಬೆಳೆ ವಿಸ್ತರಿಸಿ ಗುಣಮಟ್ಟದ ಉತ್ಪನ್ನ ಬೆಳೆದು ರಫ್ತು ಕೈಗೊಳ್ಳಲು ಆಸಕ್ತಿ ವಹಿಸಬೇಕೆಂದರು.

ಮಾವು ಹಾಗೂ ಇತರೆ ಹಣ್ಣುಗಳ ಬೆಳೆಗಾರರ ಸಂಘದ ಅಧ್ಯಕ್ಷ ಗುರುನಾಥ ಓದುಗೌಡರ ಮಾತನಾಡಿ, ಮಾವಿನ ಹಣ್ಣಿಗೆ ವಿದೇಶದಲ್ಲಿ ಹೆಚ್ಚಿನ ಬೇಡಿಕೆ ಇದ್ದು, ಗುಣಮಟ್ಟದ ಹಣ್ಣು ಹಾಗೂ ಮಾವಿನಿಂದ ಸಂಸ್ಕರಿಸಿದ ಉತ್ಪನ್ನಗಳಾದ ಜ್ಯೂಸ್‌, ಉಪ್ಪಿನಕಾಯಿ, ಜಾಮ್‌ ಸೇರಿದಂತೆ ಇತರೆ ಉತ್ಪನ್ನಗಳನ್ನು ರಫ್ತು ಏಜೆನ್ಸಿಗಳಾದ ನಾಮದಾರಿ ಸೀಡ್ಸ್‌ , ಇನೋವಾ ಪ್ರೈ.ಲಿ.ಮುಖಾಂತರ ರಫ್ತು ಮಾಡಿದರೆ ಉತ್ತಮ ಬೆಲೆ ದೊರೆಯುವುದು ಎಂದರು.

ಮೆ.ಕೆನ್‌ ಅಗ್ರಿಟೆಕ್‌ ಹಾಗೂ ಟ್ರಾಫಿಕೂಲ್‌ ಕಂಪನಿ ಎಂಡಿ ವಿವೇಕ ನಾಯಕ ಮಾತನಾಡಿ, ತಮ್ಮ ಸಂಸ್ಥೆಯಿಂದ ಹೆಚ್ಚಾಗಿ
ಸಂಸ್ಕರಿಸಿ ಮಾವು(ಫಲ ) ಹಾಗೂ ಫ್ರೂಜನ್‌ ಮಾವುಗಳನ್ನು ರಫ್ತು ಮಾಡುತ್ತಿದ್ದು, ರೈತರು ಸಂಸ್ಕರಿಸಿದ ಮಾವುಗಳನ್ನು ರಫ್ತು ಮಾಡಲು ವಿಫುಲ ಅವಕಾಶಗಳಿವೆ ಎಂದರು.

ಕೆಸಿಸಿಐ ಅಧ್ಯಕ್ಷ ಎಸ್‌.ಪಿ.ಸಂಶಿಮಠ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾವು ಹಾಗೂ ಇತರೆ ದೇಶಿಯ ತಳಿಗಳ ಹಣ್ಣುಗಳನ್ನು ಉತ್ತಮ ಬೆಲೆಗೆ ಮಾರಾಟ ಮಾಡಲು ದೆಹಲಿಗೆ ಕಳಿಸಲು ಕೇಂದ್ರ ಸರಕಾರ ಕಿಸಾನ್‌ ರೈಲನ್ನು ಪರಿಚಯಿಸಿದೆ. ಎಲ್ಲ ಎಪಿಎಂಸಿ ಪ್ರಾಂಗಣಗಳಲ್ಲಿ ಶೀತಲೀಕರಣ/ ರಿಫರ್‌ ವ್ಯಾನ್‌/ವೇರ್‌ಹೌಸ್‌ ಇತ್ಯಾದಿ ಪ್ರತಿ ಪಂಚಾಯಿತಿಗೊಂದು ಸ್ಥಾಪಿಸಿದರೆ ಕೃಷಿ ಉತ್ಪನ್ನಗಳ ರಫ್ತಿಗೆ ಇನ್ನೂ ಹೆಚ್ಚು ಅನುಕೂಲವಾಗುವುದು ಎಂದರು.

ಗೌರವ ಕಾರ್ಯದರ್ಶಿ ರವೀಂದ್ರ ಎಸ್‌. ಬಳಿಗಾರ ಸ್ವಾಗತಿಸಿ, ಮಾತನಾಡಿ, ಕೃಷಿ ಉತ್ಪಾದಕರು, ರಫು¤ದಾರರು, ವ್ಯಾಪಾರಿಗಳು
ಮತ್ತು ಖರೀದಿದಾರರ ನಡುವಿನ ವ್ಯಾಪಾರ ಜಾಲವು ಕೃಷಿ-ಆಹಾರ ಸಂಸ್ಕರಣಾ ವಲಯಕ್ಕೆ ಬಹಳ ಅವಶ್ಯಕವಾಗಿದೆ. ಪ್ಯಾಕಿಂಗ್‌, ಗ್ರೇಡಿಂಗ್‌ ಮತ್ತು ಸಪ್ಲೈ ಚೈನ್‌ ಲಾಜಿಸ್ಟಿಕ್ಸ್‌ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.

ಬೆಂಗಳೂರಿನ ಅಪೇಡಾ ಸಂಸ್ಥೆ ಅಧಿಕಾರಿ ಬಿ.ಕಾರಂತ, ಬಾಗಲಕೋಟೆ ತೋಟಗಾರಿಕೆ ವಿವಿ ಸಹಾಯಕ ಪ್ರೊ|ಆನಂದ ನಂಜಪ್ಪನವರ, ಎಸ್‌ಬಿಐನ ಎಸ್‌ಎಂಇಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಸಿಮೋನ್‌, ರಫು¤ ಸಲಹೆಗಾರ ಸುಧೀರ ಚಿತ್ರಗಾರ, ಬೆಳಗಾವಿಯ ಗ್ರೀನ್‌ ಲ್ಯಾಂಡ್‌ ಪ್ರಸ್ಕೋ ಎಕ್ಸಪೋರ್ಟ್‌ದ ಲೇಖರಾಜ ಮಾಳಗಿ ತಾಂತ್ರಿಕ ಅಧಿವೇಶನ ನಡೆಸಿಕೊಟ್ಟರು. ಸಂಸ್ಥೆಯ ಮಾಜಿ ಅಧ್ಯಕ್ಷ ರಮೇಶ ಎ.ಪಾಟೀಲ, ವಿನಯ ಜವಳಿ, ಉಪಾಧ್ಯಕ್ಷ ಸಂದೀಪ ಬಿಡಸಾರಿಯಾ, ಗೌರವ ಕಾರ್ಯದರ್ಶಿ
ಮಹೇಂದ್ರ ಸಿಂಘಿ ಇದ್ದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.