ತ್ಯಾಜ್ಯ ಸಂಗ್ರಹ-ವಿಲೇವಾರಿ ಲೋಪ ಅನಾವರಣ

ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಸದಸ್ಯರು ; ಪರಿಹಾರದ ವರದಿ ಸಲ್ಲಿಸಲು ಮೇಯರ್‌ ಅಂಚಟಗೇರಿ ಆದೇಶ

Team Udayavani, Jul 1, 2022, 4:45 PM IST

14

ಹುಬ್ಬಳ್ಳಿ: ಅವಳಿನಗರದಲ್ಲಿನ ತ್ಯಾಜ್ಯ ಸಂಗ್ರಹ ಹಾಗೂ ವಿಲೇವಾರಿ, ಸ್ವಚ್ಛತೆ ವಿಷಯವಾಗಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸುದೀರ್ಘ‌ ಚರ್ಚೆ ನಡೆಯಿತಲ್ಲದೆ, ತ್ಯಾಜ್ಯ ವಿಚಾರದಲ್ಲಿ ಲೋಪ-ಕೊರತೆಗಳು ಅನಾವರಣಗೊಂಡವು.

ಸುಮಾರು ನಾಲ್ಕು ದಶಕಗಳಿಂದ ಸಂಗ್ರಹಗೊಂಡ ತ್ಯಾಜ್ಯದ ವಿಲೇವಾರಿ, ಸ್ವಚ್ಛತೆ ಕುರಿತಾಗಿ ಸಮಗ್ರ ಮಾಹಿತಿ ಸಂಗ್ರಹಿಸಿ ಪರಿಹಾರ ರೂಪದ ವರದಿಯನ್ನು ಮುಂದಿನ ಸಾಮಾನ್ಯ ಸಭೆಗೆ ಮಂಡಿಸುವಂತೆ ಮಹಾಪೌರ ಈರೇಶ ಅಂಚಟಗೇರಿ, ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು. ಪಾಲಿಕೆ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಸದಸ್ಯ ವೀರಣ್ಣ ಸವಡಿ ಗಮನ ಸೆಳೆಯುವ ಸೂಚನೆ ಮಂಡಿಸಿದರು.

ವಿಪಕ್ಷ ನಾಯಕ ದೊರೈರಾಜ್‌ ಮಣಿಕುಂಟ್ಲಾ ಅನುಮೋದಿಸಿದರು. ತ್ಯಾಜ್ಯ ಸಂಗ್ರಹ-ವಿಲೇವಾರಿ ಬಗ್ಗೆ ಮಾಹಿತಿ ನೀಡುವಂತೆ ಕೇಳಿದರು.

ಪಾಲಿಕೆ ಅಧಿಕಾರಿ ಸಂತೋಷ ಮಾತನಾಡಿ, ಪಾಲಿಕೆಯಲ್ಲಿ 444 ಕಾಯಂ ಪೌರಕಾರ್ಮಿಕರು, 984 ನೇರ ವೇತನ ಪಾವತಿ ಪೌರಕಾರ್ಮಿಕರು ಹಾಗೂ 785 ಗುತ್ತಿಗೆಯಾಧಾರಿತ ಸೇರಿದಂತೆ ಒಟ್ಟು 2213 ಪೌರಕಾರ್ಮಿಕರು ಇದ್ದಾರೆ. 191 ಆಟೋಟಿಪ್ಪರ್‌ಗಳು ಇದ್ದು, 75 ಟ್ರ್ಯಾಕ್ಟರ್, 2 ಜೆಸಿಬಿ, 16 ಜೆಟ್ಟಿಂಗ್‌ ಯಂತ್ರಗಳು, 6 ಹೂಳೆತ್ತುವ ಯಂತ್ರಗಳು, 5 ಕಾಂಪ್ಯಾಕ್ಟರ್‌ ಕೇಂದ್ರ ಇವೆ. 39 ಜನ ಆರೋಗ್ಯ ನಿರೀಕ್ಷಕರು, 8 ಜನ ಪರಿಸರ ಎಂಜಿನಿಯರ್‌ ಗಳು ಇದ್ದಾರೆ. ನಿತ್ಯ ಸಂಗ್ರಹಗೊಳ್ಳುವ ಅಂದಾಜು 450-500 ಟನ್‌ ತ್ಯಾಜ್ಯದ ಪೈಕಿ ಹಸಿ ತ್ಯಾಜ್ಯದಲ್ಲಿ ಶೇ.80 ತ್ಯಾಜ್ಯ ಕಾಪೋಸ್ಟ್‌ ಆಗಿ ಪರಿವರ್ತಿಸಲಾಗುತ್ತಿದ್ದು, ಇದುವರೆಗೆ ಸುಮಾರು 130 ಟನ್‌ ಕಾಂಪೋಸ್ಟ್‌ ಮಾರಾಟ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ‌

5 ಲಕ್ಷ ಟನ್‌ ತ್ಯಾಜ್ಯ ಸಂಗ್ರಹ: ನಿತ್ಯ ಹುಬ್ಬಳ್ಳಿಯಲ್ಲಿ ಸುಮಾರು 300 ಟನ್‌, ಧಾರವಾಡದಲ್ಲಿ ಸುಮಾರು 150 ಟನ್‌ ತ್ಯಾಜ್ಯ ಸಂಗ್ರಹವಾಗುತ್ತಿದೆ. ಜತೆಗೆ ಅವಳಿನಗರದಲ್ಲಿ ಕಳೆದ 40 ವರ್ಷಗಳಿಂದ ಹುಬ್ಬಳ್ಳಿಯಲ್ಲಿ 3.5 ಲಕ್ಷ ಟನ್‌ ಹಾಗೂ ಧಾರವಾಡದಲ್ಲಿ 1.2 ಲಕ್ಷ ಟನ್‌ ತ್ಯಾಜ್ಯ ಸಂಗ್ರಹಗೊಂಡು ವಿಲೇವಾರಿಯಾಗದೆ ಉಳಿದಿದೆ. ಇದರ ವಿಲೇವಾರಿ ಅತ್ಯವಶ್ಯವಾಗಿದೆ. ಸಂಗ್ರಹಗೊಂಡ ತ್ಯಾಜ್ಯವನ್ನು ಎನ್‌ ಟಿಪಿಸಿಯಿಂದ ಕೋಲ್‌ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗಿದೆ. ಇಂತಹ ಕಾರ್ಯಕ್ಕೆ ಕೇಂದ್ರ ಸರಕಾರದಿಂದ ಸಬ್ಸಿಡಿಯೂ ದೊರೆಯಲಿದ್ದು, ಅಂತಹ ಯೋಜನೆ ಇಲ್ಲಿಯೂ ಅನುಷ್ಠಾನಗೊಂಡರೆ ಸಂಗ್ರಹ ತ್ಯಾಜ್ಯ ಸಮಸ್ಯೆ ನಿವಾರಣೆ ಆಗಲಿದೆ ಎಂದರು.

ಕಾಂಗ್ರೆಸ್‌ ಸದಸ್ಯ ಸಂದೀಲ್‌ ಕುಮಾರ, ಎಐಎಂಐನ ನಜೀರ್‌ ಹೊನ್ಯಾಳ ಮಾತನಾಡಿ, ಅಧಿಕಾರಿಗಳು ಸದನಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ವಾರ್ಡ್‌ ಗೆ 30 ಪೌರಕಾರ್ಮಿಕರು ಬೇಕು. ಆದರೆ, ವಾಸ್ತವಿಕವಾಗಿ ಅನೇಕ ವಾರ್ಡ್‌ ಗಳಿಗೆ 3-4 ಪೌರಕಾರ್ಮಿಕರು ಇದ್ದಾರೆ ಎಂದರು. ವಿಪಕ್ಷ ನಾಯಕ ದೊರೈರಾಜ್‌ ಮಣಿಕುಂಟ್ಲಾ, ಅನೇಕ ಸದಸ್ಯರು ತ್ಯಾಜ್ಯ ಸಮಸ್ಯೆ ಮೇಲೆ ಮಾತನಾಡಿದರು. ಪಾಲಿಕೆ ಆಯುಕ್ತ ಡಾ| ಬಿ.ಗೋಪಾಲಕೃಷ್ಣ ಮಾತನಾಡಿ, ಒಟ್ಟು ಪೌರಕಾರ್ಮಿಕರಲ್ಲಿ ಶೇ.10 ಜನರು ಗೈರಾಗಿರುತ್ತಾರೆ. 50 ಪೌರಕಾರ್ಮಿಕರನ್ನು ಅತಿಗಣ್ಯರ ಆಗಮನ ಇನ್ನಿತರ ತುರ್ತು ಕಾರ್ಯಕ್ಕೆ ಕಾಯ್ದಿರಿಸಿ, ಉಳಿದ ಪೌರಕಾರ್ಮಿಕರನ್ನು 82 ವಾರ್ಡ್‌ಗಳಿಗೆ ಹಂಚಿಕೆ ಮಾಡಲಾಗುವುದು. ವಾರ್ಡ್‌ ನಲ್ಲಿನ ಜನಸಂಖ್ಯೆ, ವಾರ್ಡ್‌ ವಿಸ್ತಾರ ಇನ್ನಿತರ ವಿಷಯಗಳನ್ನು ಗಮನಿಸಿ ಹಂಚಿಕೆ ಮಾಡುವ ಚಿಂತನೆ ಹೊಂದಿದ್ದೇವೆ. ಕಾಯಂ ಪೌರಕಾರ್ಮಿಕರು, ನೇರ ವೇತನ ಹಾಗೂ ಗುತ್ತಿಗೆಯಾಧಾರಿತ ಪೌರಕಾರ್ಮಿಕರು ಸೇರಿ ತಲಾ ಆರು ಜನರಂತೆ ಒಂದು ವಾರ್ಡ್‌ಗೆ ನಿಯೋಜನೆ ಮಾಡಲು ಯೋಜಿಸಲಾಗಿದ್ದು, ಸದಸ್ಯರು ಒಪ್ಪಿಗೆ ನೀಡಿದರೆ ಇದನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳಿದರು.

ಮಹಾಪೌರ ಈರೇಶ ಅಂಚಟಗೇರಿ ಮಾತನಾಡಿ, ಪ್ರತಿ ವಲಯವಾರು ಸದಸ್ಯರನ್ನು ಆಹ್ವಾನಿಸಿ ಪೌರಕಾರ್ಮಿಕರ ವಿಂಗಡಣೆ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳಬೇಕು. ಸಂಗ್ರಹಿತ ತ್ಯಾಜ್ಯ ವಿಲೇವಾರಿ ಕುರಿತಾಗಿ ಅಗತ್ಯ ಮಾಹಿತಿ ಸಂಗ್ರಹಿಸಿ ಮುಂದಿನ ಸಾಮಾನ್ಯ ಸಭೆಗೆ ಮಂಡಿಸಬೇಕೆಂದು ಆದೇಶಿಸಿದರು. ಕನಿಷ್ಟ 500 ಜನರಿಗೆ ಒಬ್ಬರು ಪೌರಕಾರ್ಮಿಕರು ಅಗತ್ಯವಾಗಿದ್ದು, ಇದರ ಪ್ರಕಾರ ಇನ್ನೂ 300 ಪೌರಕಾರ್ಮಿಕರು ಬೇಕು. ಸುಮಾರು 250 ಆಟೋಟಿಪ್ಪರ್‌, ಪ್ರತಿ ಎರಡು ವಾರ್ಡ್‌ಗೆ ಒಬ್ಬ ಆರೋಗ್ಯ ನಿರೀಕ್ಷಕ, ವಲಯಕ್ಕೆ ಒಬ್ಬರು ಪರಿಸರ ಎಂಜಿನಿಯರ್‌ ಬೇಕಾಗಿದೆ. ಆಟೋಟಿಪ್ಪರ್‌ಗಳ ದುರಸ್ತಿ ಕಾರ್ಯವನ್ನು ಆಯಾ ವಲಯಾಧಿಕಾರಿಗಳಿಗೆ ನೀಡುವುದು ಒಳಿತು. –ವೀರಣ್ಣ ಸವಡಿ, ಪಾಲಿಕೆ ಸದಸ್ಯ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.