ಆಪರೇಷನ್‌ ಚಿರತೆ


Team Udayavani, Sep 22, 2021, 2:04 PM IST

hubballi news

ಹುಬ್ಬಳ್ಳಿ: ನಗರದಲ್ಲಿ ಚಿರತೆ ಪ್ರತ್ಯಕ್ಷವಾಗಿ ವಾರ ಕಳೆದರೂ ಅರಣ್ಯ ಇಲಾಖೆಗೆಅದನ್ನು ಸೆರೆ ಹಿಡಿಯಲಾಗುತ್ತಿಲ್ಲ. ನಿರ್ಲಕ್ಷé ತೋರುತ್ತಿದ್ದಾರೆ. ಕೇವಲ ಬಡಿಗೆ ಹಿಡಿದುಕೊಂಡು ಓಡಾಡಿದರೆ ಸಾಲದು.

ನಿಮ್ಮ ಕೈಯಲ್ಲಾಗದಿದ್ದರೆ ಹೇಳಿ ನಾವೇಬೆಟ್ಟದ ಪ್ರದೇಶದೊಳಗೆ ಒಳಹೊಕ್ಕು ತರುತ್ತೇವೆಂದು ಶಿರಡಿ ನಗರ ಹಾಗೂ ಸುತ್ತಮುತ್ತಲಿನ ನಿವಾಸಿಗಳು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.ಜಿಲ್ಲಾಧಿಕಾರಿ ನಿತೇಶ ಪಾಟೀಲರ ನೇತೃತ್ವದಲ್ಲಿ ಇಲ್ಲಿನ ರಾಜನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಾರ್ವಜನಿಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿಗಳ ಕಾರ್ಯಾಚರಣೆಯ ವೈಖರಿಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ನೃಪತುಂಗ ಬೆಟ್ಟ,ರಾಜನಗರದ ಕೇಂದ್ರೀಯ ವಿದ್ಯಾಲಯ ಆವರಣ ಹಾಗೂ ಸುತ್ತಮುತ್ತಲಪ್ರದೇಶದಲ್ಲಿ ಪ್ರತ್ಯಕ್ಷವಾದ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಕ್ಷಿಪ್ರ ಕಾರ್ಯಾಚರಣೆ ನಡೆಸಲಿದ್ದು, ಜಿಲ್ಲಾಡಳಿತದಿಂದ ಎಲ್ಲ ಸಹಕಾರನೀಡಲಾಗುವುದು. ಸಾರ್ವಜನಿಕರೂ ಸಹಕರಿಸಬೇಕು. ಮನೆ ಬಿಟ್ಟುಹೊರಗೆ ಬರಬಾರದು. ಅದರಲ್ಲೂ ಸಂಜೆ-ಬೆಳಗಿನ ಜಾವ ಒಬ್ಬಂಟಿಯಾಗಿತಿರುಗಾಡಬಾರದು ಎಂದರು.ಚಿರತೆ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡಕ್ಕೆ ಹಲವು ಬಾರಿ ಬಂದುಹೋಗಿರುವುದು, ಅಲ್ಲಿ ಆಶ್ರಯ ಪಡೆಯುತ್ತಿರುವ ಬಗ್ಗೆ ಖಚಿತವಾಗಿದೆ.

ಆದ್ದರಿಂದ ಮೊದಲು ಅದರ ತೆರವಿಗೆ ಆದ್ಯತೆ ನೀಡಲಾಗುವುದು. ಚಿರತೆಗೆಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಂದಿ, ನಾಯಿಗಳ ಆಹಾರ ಹೆಚ್ಚಾಗಿಸಿಗುತ್ತಿರುವುದರಿಂದ ಅದು ಇಲ್ಲಿಯೇ ಓಡಾಡುತ್ತಿದೆ. ಬೆಳೆದಿರುವಗಿಡಗಂಟಿ-ಹುಲ್ಲು ತೆರವು ಮಾಡಲಾಗುವುದು. ಆಗ ಚಿರತೆಯನ್ನು ಸುಲಭವಾಗಿಸೆರೆ ಹಿಡಿಯಲು ಅನುಕೂಲವಾಗುತ್ತದೆ. ಜನರ ಜೀವ ರಕ್ಷಣೆ ಮುಖ್ಯ. ಈಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಕಾರ್ಯಾಚರಣೆಯಲ್ಲಿ ಸೂಕ್ಷ್ಮವಾಗಿಹೆಜ್ಜೆ ಇರಿಸುತ್ತಿದ್ದಾರೆ ಎಂದರು.ಚಿರತೆ ಸೆರೆಗಾಗಿ ಅಕ್ಕಪಕ್ಕದ ಜಿಲ್ಲೆಗಳಿಂದ ಹೆಚ್ಚುವರಿಯಾಗಿ ಅರಣ್ಯ ಇಲಾಖೆಸಿಬ್ಬಂದಿ ಕರೆಯಿಸಲಾಗುವುದು.

ಸಫಾರಿ ವಾಹನ ಮೂಲಕ ಬೆಟ್ಟದ ತಪ್ಪಲಿನ ಪ್ರದೇಶದೊಳಗಡೆ ಹೋಗಿ ಕಾರ್ಯಾಚರಣೆ ಮಾಡಲಾಗುವುದು. ಯಾರೂಭಯ ಪಡುವ ಅವಶ್ಯಕತೆಯಿಲ್ಲ. ಯಾರೂತಾಳ್ಮೆ ಕಳೆದುಕೊಳ್ಳಬಾರದು. ಚಿರತೆ ಸಿಗುವವರೆಗೆಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲರೂ ಮನೆಯೊಳಗಿರಬೇಕು.

ಕಾರ್ಯಾಚರಣೆಗೆ ಸಹಕಾರನೀಡಬೇಕು ಎಂದರು.ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಮಾತನಾಡಿ,ಚಿರತೆ ಓಡಾಟದ ಪ್ರದೇಶದಲ್ಲಿ ಜನರ ಚಟುವಟಿಕೆ ಕಡಿಮೆ ಮಾಡಬೇಕಿದೆ.ಅದನ್ನು ಹಿಡಿಯಲು ಐದು ಕಡೆ ಬೋನ್‌ ಇರಿಸಲಾಗಿದೆ. ಕ್ಯಾಮರಾದಲ್ಲಿಸೆರೆಯಾದ ದೃಶ್ಯದಲ್ಲಿ ಚಿರತೆ ಸ್ಪಷ್ಟವಾಗಿ ಕಂಡಿಲ್ಲ. ಸೋಮವಾರ ಬೆಳಗ್ಗೆ ಅದರಓಡಾಟದ ಕುರುಹು ಸಿಕ್ಕಿದೆ.

ನೃಪತುಂಗ ಬೆಟ್ಟ ಸುತ್ತವೇ ಅದು ಓಡಾಡುತ್ತಿದೆ.ಕಾರ್ಯಾಚರಣೆ ತೀವ್ರಗೊಳಿಸಲಾಗುವುದು ಎಂದರು.ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ ಮಾತನಾಡಿ,ಚಿರತೆಯ ಪಗ್‌ ಮಾರ್ಕ್‌ ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ನೋಡಿದ್ದಾರೆ.40 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅರವಳಿಕೆ ತಜ್ಞರುಕಾರ್ಯ ನಿರ್ವಹಿಸುತ್ತಿದ್ದಾರೆ. ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆಇನಾ#Åರೆಡ್‌ ಡ್ರೋಣ್‌ ಕ್ಯಾಮೆರಾ ಬಳಸಿಕೊಳ್ಳಲಾಗುವುದು ಎಂದರು.ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ ಮಾತನಾಡಿ,ಚೆನ್ನೈದಿಂದ ಹಂದಿ ಹಿಡಿಯುವ ತಂಡ ಬರುತ್ತಿದೆ. ಶಿರಡಿನಗರ ಸುತ್ತಮುತ್ತಲಿ ನಹಂದಿ-ಶ್ವಾನಗಳನ್ನು ಹಿಡಿಯಲಾಗುವುದು.

ಇದರಿಂದ ಚಿರತೆಗೆ ಆಹಾರಸಿಗದಂತೆ ನೋಡಿಕೊಳ್ಳಲಾಗುವುದು ಎಂದರು.ಪಾಲಿಕೆ ಸದಸ್ಯ ವೀರಣ್ಣ ಸವಡಿ, ಚಿರತೆ ಕಾಣಿಸಿಕೊಂಡಾಗಿನಿಂದ ಜನರುಭಯಭೀತರಾಗಿದ್ದಾರೆ. ಅರಣ್ಯ ಇಲಾಖೆಯವರು ಇದನ್ನು ಗಂಭೀರವಾಗಿಪರಿಗಣಿಸಿಲ್ಲ. ಬೆಟ್ಟದ ಒಳಗಡೆ ಹೋಗದೆ ಹೊರಗಡೆಯೇ ಪ್ರಯತ್ನಿಸುತ್ತಿದ್ದಾರೆ.ಹಗಲು ಹೊತ್ತು ಕಾರ್ಯಾಚರಣೆ ಮಾಡುತ್ತಿಲ್ಲ. ಅವರ ಬಳಿ ಸಮರ್ಪಕಶಸ್ತ್ರಾಸ್ತ್ರಗಳಿಲ್ಲ. ಹಂದಿ, ನಾಯಿ ಹಿಡಿಯುವ ಬದಲು ಚಿರತೆ ಸೆರೆ ಹಿಡಿಯಿರಿ.

ಪಟಾಕಿ ಹಾರಿಸಿ, ಮದ್ದು ಹಾರಿಸಿ, ಶಬ್ದ ಮಾಡಿ ಇಲ್ಲಿಂದ ಅದನ್ನು ಬೇರೆಡೆಕಳುಹಿಸುವ ಪ್ರಯತ್ನ ಮಾಡಬೇಡಿ. ನಿಮ್ಮಿಂದ ಹಿಡಿಯಲಾಗದಿದ್ದರೆ ಬಂಡಿಪುರ,ಮೈಸೂರಿನ ನುರಿತ ಸಿಬ್ಬಂದಿ ಕರೆಯಿಸಿ ಎಂದು ತರಾಟೆಗೆ ತೆಗೆದುಕೊಂಡರು.ಬಿಜೆಪಿ ಮುಖಂಡ ಸಿದ್ದು ಮೊಗಲಿಶೆಟ್ಟರ, ವಿಜಯಾನಂದ ಹೊಸಕೋಟಿ,ವಿಶ್ವನಾಥ ಪಾಟೀಲ ಮಾತನಾಡಿ, ಚಿರತೆ ಹುಡುಕಾಟ ನಡೆಸಿದ್ದಾರೆಯೇ ವಿನಃನಿಖರ ಕಾರ್ಯಾಚರಣೆ ಮಾಡುತ್ತಿಲ್ಲ. ಚಿರತೆ ಓಡಿಸುವುದು ಮುಖ್ಯವಲ್ಲ.ಅದನ್ನು ಹಿಡಿಯಬೇಕು. ಜನರೇ ಅದನ್ನು ಗುರುತಿಸಿ ನಿಮಗೆ ಹೇಳಬೇಕಿದೆ.

ಆದರೆ ನಿಮ್ಮ ಕಣ್ಣಿಗೆ ಅದು ಬಿದ್ದಿಲ್ಲ. ಜನರ ಸುರಕ್ಷತೆಗೆ ಬೆಟ್ಟದ ಸುತ್ತಲೂ 100ಮೀಟರ್‌ಗೆ ಒಬ್ಬರನ್ನು ಗಸ್ತಿಗೆ ನೇಮಿಸಿ. ಜನರ ಮೇಲೆ ಚಿರತೆ ದಾಳಿ ಮಾಡುವಮೊದಲು ಅದನ್ನು ಸೆರೆ ಹಿಡಿಯಿರಿ ಎಂದರು.ಡಿಸಿಪಿ ಕೆ. ರಾಮರಾಜನ್‌, ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಪಶುವೈದ್ಯಾಧಿಕಾರಿ ಡಾ| ವಿನಿತಾ, ಆರ್‌ಎಫ್‌ಒ ಶ್ರೀಧರ ತೆಗ್ಗಿನಮನಿ, ಕೇಂದ್ರೀಯವಿದ್ಯಾಲಯದ ಪ್ರಾಂಶುಪಾಲ ರವಿ ರಾಜೇಶ ಸೇರಿದಂತೆ ಶಿರಡಿನಗರ,ಪತ್ರಕರ್ತರ ನಗರ, ವಿಶ್ವೇಶ್ವರ ನಗರ ಸೇರಿದಂತೆ ಸುತ್ತಲಿನ ಪ್ರದೇಶದ ನಿವಾಸಿಗಳುಸಭೆಯಲ್ಲಿದ್ದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.