ತಮ್ಮನಿಗೆ ಚಾಕುವಿನಿಂದ ಇರಿದ ಅಣ್ಣ
Team Udayavani, Oct 6, 2022, 9:49 AM IST
ಹುಬ್ಬಳ್ಳಿ: ಚಿನ್ನದ ವಿಚಾರವಾಗಿ ಸಹೋದರರ ನಡುವೆ ಜಗಳವುಂಟಾಗಿ ವಿಕೋಪಕ್ಕೆ ಹೋಗಿ ತಮ್ಮನಿಗೆ ಅಣ್ಣ ಚಾಕುವಿನಿಂದ ಇರಿದು ಮಾರಣಾಂತಿಕ ಗಾಯಗೊಳಿಸಿದ ಘಟನೆ ವಿಜಯದಶಮಿ ದಿನವಾದ ಬುಧವಾರ ಬೆಳಗ್ಗೆ ಇಲ್ಲಿನ ಕೇಶ್ವಾಪುರ ಪಾರಸವಾಡಿಯ ವಿನಾಯಕ ಕಾಲೋನಿಯಲ್ಲಿ ನಡೆದಿದೆ.
ಘಟನೆಯಲ್ಲಿ ಸಾಗರ ಬಾಕಳೆ ಗಂಭೀರ ಗಾಯಗೊಂಡಿದ್ದು, ಸಂಜಯ ಎಂಬುವರೆ ಹಲ್ಲೆ ಮಾಡಿದವರು. ಸಾಗರ ಮನೆಯಲ್ಲಿದ್ದ ಚಿನ್ನವನ್ನು ಸಂಜಯ ತೆಗೆದುಕೊಂಡು ಹೋಗಿದ್ದ. ಪೂಜೆ ಸಲುವಾಗಿ ಅದನ್ನು ಕೇಳಲೆಂದು ತಂದೆಯೊಂದಿಗೆ ಅಣ್ಣನ ಮನೆಗೆ ಸಾಗರ ಹೋದಾಗ ಇಬ್ಬರ ನಡುವೆ ಜಗಳವಾಗಿದೆ.
ಅದು ವಿಕೋಪಕ್ಕೆ ಹೋದಾಗ ಸಾಗರ ಬಿಯರ್ನ ಖಾಲಿ ಬಾಟಲಿಯಿಂದ ಅಣ್ಣನಿಗೆ ಹೊಡೆದಿದ್ದಾನೆ. ಆಗ ಸಿಟ್ಟಾದವನೇ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಸಾಗರನ ಎದೆ-ಹೊಟ್ಟೆಗೆ ಇರಿದಿದ್ದು, ಗಂಭೀರ ಗಾಯಗೊಂಡಿರುವ ಸಾಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇವರ ನಡುವೆ ಆಸ್ತಿ ವಿಷಯವಾಗಿಯೂ ತಕರಾರು ಇದೆ.
ಘಟನೆಗೆ ಸಂಬಂಧಿಸಿ ಸಂಜಯನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ