ಹುಬ್ಬಳ್ಳಿ: ಜಿ.ಬಿ.ಜೋಶಿ ಮೆಮೋರಿಯಲ್‌ ಟ್ರಸ್ಟ್‌- 23ರಿಂದ ನಾದ ಲಹರಿ ಸಂಗೀತೋತ್ಸವ

ಜುಗಲ್‌ ಬಂದಿಯೊಂದಿಗೆ ಸಂಗೀತೋತ್ಸವಕ್ಕೆ ತೆರೆ ಬೀಳಲಿದೆ.

Team Udayavani, Feb 21, 2024, 11:33 AM IST

ಹುಬ್ಬಳ್ಳಿ: ಜಿ.ಬಿ.ಜೋಶಿ ಮೆಮೋರಿಯಲ್‌ ಟ್ರಸ್ಟ್‌- 23ರಿಂದ ನಾದ ಲಹರಿ ಸಂಗೀತೋತ್ಸವ

ಉದಯವಾಣಿ ಸಮಾಚಾರ
ಹುಬ್ಬಳ್ಳಿ: ಪಂ|ಕುಮಾರ ಗಂಧರ್ವರ ಜನ್ಮಶತಾಬ್ದಿ ನಿಮಿತ್ತ ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಫೆ.23 ರಿಂದ 25 ರವರೆಗೆ “ನಾದ ಲಹರಿ’ ಕಾರ್ಯಕ್ರಮ ನಡೆಯಲಿದ್ದು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಸಂಗೀತ
ಕಲಾವಿದರು ಪಾಲ್ಗೊಳ್ಳಲಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ಷಮತಾ ಸೇವಾ ಸಂಸ್ಥೆ ಸಂಚಾಲಕ ಗೋವಿಂದ ಜೋಶಿ ಅವರು, ಪ್ರಸ್ತುತ ವರ್ಷವನ್ನು ಅವರ ಜನ್ಮಶತಾಬ್ದಿ ವರ್ಷವನ್ನಾಗಿ ದೇಶಾದ್ಯಂತ ಆಚರಿಸಲಾಗುತ್ತಿದೆ.

ಧಾರವಾಡದ ಜಿ.ಬಿ. ಜೋಶಿ ಮೆಮೋರಿಯಲ್‌ ಟ್ರಸ್ಟ್‌ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರೇರಿತ ಹುಬ್ಬಳ್ಳಿಯ ಕ್ಷಮತಾ ಸಂಸ್ಥೆಯಿಂದ ಸಂಗೀತೋತ್ಸವ ಆಯೋಜಿಸಲಾಗಿದೆ. ಕಳೆದ ತಿಂಗಳು ಧಾರವಾಡದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಯಶಸ್ವಿಯಾಗಿದ್ದು, ಇದೀಗ ನಗರದಲ್ಲಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಯುವ ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮತ್ತೊಂದು ಸಂಗೀತ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.

ಫೆ.23ರಂದು ಸಂಜೆ 5:30ಕ್ಕೆ ಸಂಗೀತೋತ್ಸವ ಉದ್ಘಾಟನೆಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಎಲ್‌ ಐಸಿ ದಕ್ಷಿಣ ಮಧ್ಯ ವಿಭಾಗದ ವಲಯ ಪ್ರಬಂಧಕ ಎಲ್‌.ಕೆ. ಶ್ಯಾಮಸುಂದರ, ಪದ್ಮಶ್ರೀ ಪುರಸ್ಕೃತ ಹಿರಿಯ ನೇತ್ರತಜ್ಞ ಡಾ|ಎಂ.ಎಂ. ಜೋಶಿ ಆಗಮಿಸಲಿದ್ದಾರೆ.

ಕ್ಷಮತಾ ಸಂಸ್ಥೆಯ ಸಂಚಾಲಕ ಗೋವಿಂದ ಜೋಶಿ, ಜಿ.ಬಿ. ಜೋಶಿ ಮೆಮೋರಿಯಲ್‌ ಟ್ರಸ್ಟ್‌ನ ಚೇರಮನ್‌ ಡಾ| ರಮಾಕಾಂತ ಜೋಶಿ ಉಪಸ್ಥಿತರಿರುವರು.

ಸಂಜೆ 6:30ಕ್ಕೆ ಜೈಪುರ-ಅತೌಲಿ ಘರಾಣೆಯ ಗಾಯಕಿ ಪುಣೆಯ ಯಶಸ್ವಿ ಸರಪೋತದಾರ ಅವರ ಗಾಯನ ಮೂಲಕ ಸಂಗೀತೋತ್ಸವಕ್ಕೆ ಚಾಲನೆ ದೊರೆಯಲಿದೆ. ರಾತ್ರಿ 8:00 ಗಂಟೆಗೆ ಕಿರಾನಾ ಘರಾಣೆಯ ಸ್ಥಳೀಯ ಮೇರು ಕಲಾವಿದ ಜಯತೀರ್ಥ ಮೇವುಂಡಿ ಪ್ರಸ್ತುತಿ ಪಡಿಸುವರು. ಫೆ.24 ರಂದು ಸಂಜೆ 5.30ಕ್ಕೆ ಕಿರಾನಾ ಘರಾಣೆಯ ಕೋಲ್ಕತ್ತಾದ ವಿ|ಮನಾಲಿ ಬೋಸ್‌, ಸಂಜೆ 7:00 ಗಂಟೆಗೆ ಕಲಾವಿದೆ ವಿ|ಕಲಾ ರಾಮನಾಥ ಅವರ ವಯೋಲಿನ್‌ ತಂತುಗಳ ನಿನಾದ ಝೇಂಕರಿಸಲಿದೆ.

ಫೆ.25ರಂದು ಸಂಜೆ 7:00 ಗಂಟೆಗೆ ನವದೆಹಲಿಯ ಲಕ್ಷé ಮೋಹನ ಹಾಗೂ ಆಯುಷ ಮೋಹನ ಸಹೋದರರ ಸಿತಾರ-ಸರೋದ ವಾದನಗಳ ಜುಗಲ್‌ ಬಂದಿಯೊಂದಿಗೆ ಸಂಗೀತೋತ್ಸವಕ್ಕೆ ತೆರೆ ಬೀಳಲಿದೆ. ಸಹಕಲಾವಿದರಾಗಿ ಪಂ| ರಾಜೇಂದ್ರ ನಾಕೋಡ, ಡಾ| ರವಿಕಿರಣ ನಾಕೋಡ, ಪಂ|ಭೂಷಣ ಪರಚುರೆ, ಮಯಾಂಕ ಬೇಡೆಕರ, ರೂಪಕ ಕಲ್ಲೂರಕರ ತಬಲಾ ಸಾಥ್‌ ನೀಡಲಿದ್ದು, ಡಾ|ರವೀಂದ್ರ ಕಾತೋಟಿ, ಸತೀಶ ಭಟ್ಟ ಹೆಗ್ಗಾರ ಸಂವಾದಿನಿಯೊಂದಿಗೆ ಪಾಲ್ಗೊಳ್ಳಲಿದ್ದಾರೆ.

ಫೆ.25ರಂದು ಸಂಜೆ 5:30ಕ್ಕೆ ಸಂಗೀತೋತ್ಸವ ಸಮಾರೋಪ ಜರುಗಲಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಎಲ್‌ಐಸಿ ಧಾರವಾಡದ ಹಿರಿಯ ವಿಭಾಗೀಯ ಪ್ರಬಂಧಕ ಕೆ. ವೆಂಕಟರಮಣ ಆಗಮಿಸಲಿದ್ದಾರೆ. ಕ್ಷಮತಾ ಸಂಸ್ಥೆಯ ಸಂಚಾಲಕ ಗೋವಿಂದ ಜೋಶಿ ಹಾಗೂ ಜಿ.ಬಿ. ಜೋಶಿ ಮೆಮೋರಿಯಲ್‌ ಟ್ರಸ್ಟ್‌ನ ಚೇರಮನ್‌ ಡಾ| ರಮಾಕಾಂತ ಜೋಶಿ ಉಪಸ್ಥಿತರಿರುವರು.

ಸಂಗೀತ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸುತ್ತಿರುವ ಹಿರಿಯ ಕಲಾವಿದರಾದ ಪಂ|ಬಿ.ಎಸ್‌. ಮಠ, ವಿದುಷಿ ಅಕ್ಕಮಹಾದೇವಿ ಮಠ, ಹಿರಿಯ ತಬಲಾ ವಾದಕ ಪಂ| ರಘುನಾಥ ನಾಕೋಡ, ಗಾನವಿದುಷಿ ರೇಣುಕಾ ನಾಕೋಡ, ಧಾರವಾಡ ಘರಾಣೆಯ ಹಿರಿಯ ಸಿತಾರ ವಾದಕ ಪಂ| ಶ್ರೀನಿವಾಸ ಜೋಶಿ, ಹಿರಿಯ ಸಂಗೀತ ತಜ್ಞ-ಗುರು ಪಂ| ಕೃಷ್ಣರಾವ ಇನಾಮದಾರ ಅವರನ್ನು ಸನ್ಮಾನಿಸಲಾಗುವುದು.

ತಾಲೂಕು ಕೇಂದ್ರಗಳಲ್ಲಿ ಕರಿನೀರ ವೀರ ಪ್ರದರ್ಶನ ಕೊಡಗಿನ ರಂಗಭೂಮಿ ಟ್ರಸ್ಟ್‌ ಹಾಗೂ ಕ್ಷಮತಾ ಸೇವಾ ಸಂಸ್ಥೆಯಿಂದ ಅಡ್ಡಂಡ ಕಾರ್ಯಪ್ಪ ರಚಿಸಿ ನಿರ್ದೇಶಿಸಿರುವ ಕರಿನೀರ ವೀರ ನಾಟಕ ಪ್ರದರ್ಶನ ನಡೆಯಲಿದೆ. ಫೆ.24ರಂದು ಧಾರವಾಡದಲ್ಲಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಫೆ.24 ಧಾರವಾಡದ ಸನ್ನಿಧಿ ಕಲಾಕ್ಷೇತ್ರ, ಫೆ.25ರಂದು ಅಳ್ನಾವರದ
ಉಮಾ ಭವನ, ಫೆ.27ರಂದು ಕಲಘಟಗಿ ಬಸವೇಶ್ವರ ಭವನ, ಫೆ.29 ರಂದು ಶಿಗ್ಗಾವಿ ಬೊಮ್ಮಾಯಿ ನಿವಾಸ, ಮಾ.2ರಂದು ಹುಬ್ಬಳ್ಳಿಯ ಗೋಕುಲ ಗಾರ್ಡನ್‌, ಮಾ.3 ಕುಂದಗೋಳದ ಸವಾಯಿ ಗಂಧರ್ವ ಭವನ, ಮಾ.5 ಅಣ್ಣಿಗೇರಿ ಪಂಪ ಭವನದಲ್ಲಿ ನಾಟಕ ಪ್ರದರ್ಶನ ನಡೆಯಲಿದೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.