ಹುಬ್ಬಳ್ಳಿ: ಹಸಿದವರ ಅನ್ನ ಜೋಳಿಗೆ ಉದ್ಘಾಟನೆ

ಕರಿಯಪ್ಪ ಅವರು ಟ್ರಸ್ಟ್‌ ಮಾಡಿಕೊಂಡು ಅತ್ಯುತ್ತಮ ಕಾರ್ಯ ಮಾಡುತ್ತಿದ್ದಾರೆ.

Team Udayavani, Jul 10, 2023, 6:13 PM IST

ಹುಬ್ಬಳ್ಳಿ: ಹಸಿದವರ ಅನ್ನ ಜೋಳಿಗೆ ಉದ್ಘಾಟನೆ

ಹುಬ್ಬಳ್ಳಿ: ಹಸಿವಿನಿಂದ ನರಳುತ್ತಿರುವವರಿಗೆ ಕರಿಯಪ್ಪ ಶಿರಹಟ್ಟಿ ತನ್ನ ಸಂಸ್ಥೆ ಮೂಲಕ ಅನ್ನ ನೀಡುತ್ತಿರುವುದು ಸಣ್ಣ ಕೆಲಸವಲ್ಲ. ದುಡಿಮೆ ಒಂದಿಷ್ಟು ಪಾಲನ್ನು ನಿರ್ಗತಿಕರ ಹಸಿವು ನೀಗಿಸಲು ಖರ್ಚು ಮಾಡುತ್ತಿರುವುದು ಅವರ ದೊಡ್ಡ ಗುಣ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ಹೇಳಿದರು.

ಇಲ್ಲಿನ ಮೂರುಸಾವಿರ ಮಠದ ಆವರಣದಲ್ಲಿ ನೀಲಪ್ಪ ಗುಡ್ಡಪ್ಪ ಶಿರಹಟ್ಟಿ ಸೇವಾ ಸಂಸ್ಥೆ ವತಿಯಿಂದ “ಹಸಿದವರ ಅನ್ನ ಜೋಳಿಗೆ’ ಉದ್ಘಾಟನೆ ಹಾಗೂ ಪ್ರಚಾರಾರ್ಥಕ್ಕಾಗಿ ನಿರ್ಮಿಸಿರುವ ವೆಬ್‌ ಸೈಟ್‌ ಹಾಗೂ ಪ್ರಚಾರದ ವಾಹನಗಳಿಗೆ ಚಾಲನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜದ ಸೇವೆ ಮಾಡುವ ಅರ್ಹತೆ ಹಾಗೂ ಸಾಮರ್ಥ್ಯ ಸಾಕಷ್ಟು ಜನರಿಗೆ ಇರುತ್ತದೆ. ಆದರೆ ಸೇವೆ ಮಾಡುವ ಅವಕಾಶ ಸಿಗುವುದು ಕೆಲವರಿಗೆ ಮಾತ್ರ ಅಂತಹವರ ಸಾಲಿನಲ್ಲಿ ಕರಿಯಪ್ಪ ದಂಪತಿ ನಿಲ್ಲುತ್ತಾರೆ. ಇಂತಹ ಕಾರ್ಯ ಶ್ಲಾಘನೀಯಕ್ಕಿಂತ ದೊಡ್ಡದು. ಅವರ ಬಳಿ ಲಕ್ಷಾಂತರ ರೂಪಾಯಿಗಳಿಲ್ಲ. ಸಾಧಾರಣ ವ್ಯಕ್ತಿಯಾದರೂ ಅಸಾಧಾರಣ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದರು. ಸ್ವಾರ್ಥ ಬಿಟ್ಟು ಸೇವೆ ಮಾಡುವ ಅವರ ಕಾರ್ಯಕ್ಕೆ ಮಹಾನಗರ ಪಾಲಿಕೆ, ಶಾಸಕರು, ಸಮಾಜ ಗುರುತಿಸಿ ಕೈಲಾಗುವ ಸಹಾಯ ಮಾಡಬೇಕು ಎಂದರು. ಪಾಲಿಕೆ ಮೇಯರ್‌ ವೀಣಾ ಬರದ್ವಾಡ ಅವರು ಹಸಿದವರ ಅನ್ನ ಜೋಳಿಗೆಗೆ ಚಾಲನೆ ನೀಡಿ, ಕರಿಯಪ್ಪ ಅವರು ಟ್ರಸ್ಟ್‌ ಮಾಡಿಕೊಂಡು ಅತ್ಯುತ್ತಮ ಕಾರ್ಯ ಮಾಡುತ್ತಿದ್ದಾರೆ.

ಪ್ರಜ್ಞಾವಂತರು ಇಂತಹ ಕಾರ್ಯಕ್ಕೆ ಕೈ ಜೋಡಿಸಬೇಕಿದೆ. ಪಾಲಿಕೆಯಿಂದ ಸಹಕಾರ ನೀಡಲಾಗುವುದು ಎಂದರು. ಪ್ರಚಾರದ ವೆಬ್‌ಸೈಟ್‌ ಉದ್ಘಾಟಿಸಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಪೌರ ಕಾರ್ಮಿಕನ ಮಗನಾಗಿರುವ ಕರಿಯಪ್ಪ ಇಂತಹ
ಮಹತ್ವದ ಕಾರ್ಯಕ್ಕೆ ಮುಂದಾಗಿರುವುದು ನಿಜಕ್ಕೂ ಮೆಚ್ಚುವಂತಹ ಕಾರ್ಯ. ದೊಡ್ಡ ದೊಡ್ಡ ಕಾರ್ಯಕ್ರಮದಲ್ಲಿ ಅನ್ನವನ್ನು
ಕೆಡಿಸಲಾಗುತ್ತಿದೆ. ದಿನನಿತ್ಯ ಎಲ್ಲ ಕಡೆ ಇಂತಹ ಘಟನೆಯನ್ನು ಕಾಣುತ್ತೇವೆ. ಈ ರೀತಿ ಬೇಕಾಬಿಟ್ಟಿ ಅನ್ನವನ್ನು ಕೆಡಿಸದೆ ಹಸಿದವರಿಗೆ ಮುಟ್ಟಿಸುವ ಕಾರ್ಯ ಮೆಚ್ಚುವಂತದ್ದು. ಸಮಾಜ ಕೂಡ ಅವರೊಂದಿಗೆ ನಿಲ್ಲಬೇಕು. ಕರಿಯಪ್ಪ ಅವರಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಮಾಜಿ ಸಂಸದ ಐ.ಜಿ.ಸನದಿ, ಡಾ| ಆನಂದ ಪಾಂಡುರಂಗಿ, ದಾನಿಗಳಾದ ಚಂದ್ರಶೇಖರ ಅಮಿನಗಡ, ನಾಗರತ್ನ ಅಮ್ಮಿನಗಡ, ಚನ್ನಬಸಪ್ಪ ಧಾರವಾಡಶೆಟ್ಟರ, ಟ್ರಸ್ಟ್‌ನ ಕರಿಯಪ್ಪ ಶಿರಹಟ್ಟಿ, ವೆಂಕಟೇಶ ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.