ಹುಬ್ಬಳ್ಳಿ: ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ; ಕಿಮ್ಸ್‌ ವೈದ್ಯರ ಸಾಧನೆ

ಕಿಡ್ನಿ ರೋಗಿಯಲ್ಲಿ ಸರಿಯಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ದೃಢಪಡಿಸಿಕೊಳ್ಳಲಾಯಿತು.

Team Udayavani, Mar 18, 2023, 1:15 PM IST

ಹುಬ್ಬಳ್ಳಿ: ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ; ಕಿಮ್ಸ್‌ ವೈದ್ಯರ ಸಾಧನೆ

ಹುಬ್ಬಳ್ಳಿ: ಕಿಡ್ನಿ ಕೊಡುವವರು ಮತ್ತು ತೆಗೆದುಕೊಳ್ಳುವವರ ರಕ್ತದ ಗುಂಪಿನ ಹೊಂದಾಣಿಕೆಯಾದರೆ ಮಾತ್ರ ಕಿಡ್ನಿ ಜೋಡಣೆ ಸಾಮಾನ್ಯ ಪ್ರಕ್ರಿಯೆ. ಆದರೆ, ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ ಮಾಡುವಲ್ಲಿ ಕಿಮ್ಸ್‌ನ ವೈದ್ಯರು ಯಶಸ್ವಿಯಾಗಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಟ್ಟ ಮೊದಲ ಬಾರಿಗೆ ಈ ತರಹದ ಅಪರೂಪದ ಕಿಡ್ನಿ ಕಸಿ (ಎಬಿಒ) ನಡೆಸಿದ ಶ್ರೇಯಸ್ಸು ಕಿಮ್ಸ್‌ಗೆ ಸಲ್ಲುತ್ತದೆ ಎಂದು ಕಿಮ್ಸ್‌ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಿಡ್ನಿ ಕಸಿಯಲ್ಲಿ ಮೂತ್ರಶಾಸ್ತ್ರ ಮತ್ತು ರೋಗಶಾಸ್ತ್ರ ವಿಭಾಗದ ವೈದ್ಯರ ಪರಸ್ಪರ ಸಹಕಾರದೊಂದಿಗೆ ಯುವಕನಿಗೆ ಹೊಸ ಬದುಕು ಸಿಕ್ಕಂತಾಗಿದೆ ಎಂದರು. ಕಿಡ್ನಿ ಕಸಿ ಕುರಿತು ಮಾಹಿತಿ ನೀಡಿದ ನೆಪ್ರೋಲಜಿ ವಿಭಾಗದ ಮುಖ್ಯಸ್ಥ ಡಾ| ವೆಂಕಟೇಶ ಮೊಗೇರ ಮಾತನಾಡಿ, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 25 ವರ್ಷದ ಯುವಕ ಕಳೆದ 10 ತಿಂಗಳಿನಿಂದ ಡಯಾಲಿಸೀಸ್‌ನಲ್ಲಿದ್ದ.

48 ವರ್ಷದ ಈತನ ತಾಯಿ ಪದ್ಮಾವತಿ ಕಿಡ್ನಿ ಕೊಡಲು ಒಪ್ಪಿದ್ದರು. ಆದರೆ, ರೋಗಿ ಎ ಪಾಸಿಟಿವ್‌, ಇವರ ತಾಯಿ ಬಿ ಪಾಸಿಟಿವ್‌ ರಕ್ತ ಹೊಂದಿದ್ದರು. ಇದನ್ನು ಸವಾಲಾಗಿ ಸ್ವೀಕರಿಸಲಾಯಿತು. ಮಾ. 6ರಂದು ಸುಮಾರು ಮೂರು ತಾಸುಗಳ ಶಸ್ತ್ರಚಿಕಿತ್ಸೆ ಮೂಲಕ ರೋಗಿಗೆ ಕಿಡ್ನಿ ಅಳವಡಿಸಲಾಯಿತು. ಕಿಡ್ನಿ ರೋಗಿಯಲ್ಲಿ ಸರಿಯಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ದೃಢಪಡಿಸಿಕೊಳ್ಳಲಾಯಿತು.

36-40 ತಾಸುಗಳಲ್ಲಿ ರೋಗಿಯು ಚೇತರಿಕೆ ಕಂಡರು. ವಾರಕ್ಕೊಮ್ಮೆ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದರು. ಡಾ| ಮಲಗೌಡ ಪಾಟೀಲ, ಡಾ| ವಿವೇಕ ಗಾಣಿಗೇರ, ಮೂತ್ರ ಶಾಸ್ತ್ರ ವಿಭಾಗದ ಮುಖ್ಯಸ್ಥ ರವಿರಾಜ ರಾಯ್ಕರ, ಡಾ| ಜೈದೀಪ ರಟಕಲ್‌, ಡಾ| ಮಂಜು ಪ್ರಸಾದ ಜಿ.ಬಿ., ಡಾ| ಸಂಪತ್ತಕುಮಾರ ಎನ್‌.ಜಿ., ಡಾ| ಚೇತನ ಹೊಸಕಟ್ಟಿ, ಡಾ| ಮಾಧುರಿ ಕುರಡಿ, ಡಾ| ಶೀತಲ್‌ ಹಿರೇಗೌಡರ, ಡಾ| ರೂಪಾ, ಪೆಥಾಲಜಿ ಮುಖ್ಯಸ್ಥ ಡಾ| ಪುರುಷೋತ್ತಮ ರೆಡ್ಡಿ ಮತ್ತು ಶಿವಾನಂದ ಹೊನಕೇರಿ ಅವರನಒಳಗೊಂಡ ತಂಡ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಿರ್ವಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಕಿಮ್ಸ್‌ನ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ ಸಿ., ರೋಗಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಪುರುಷೋತ್ತಮ ರೆಡ್ಡಿ, ಡಾ.ಚೇತನ ಹೊಸಕಟ್ಟಿ, ಶಿವಾನಂದ ಹೊನಕೇರಿ ಸೇರಿದಂತೆ ವೈದ್ಯರು, ಪ್ರಾಧ್ಯಾಪಕರು ಇದ್ದರು.

ಸಂಬಂಧಿಕರಿಗೆ ಸ್ಪೆಷಲ್‌ ಪಾಸ್‌
ಕಿಮ್ಸ್‌ನಲ್ಲಿ ಐದು ಮಹಡಿಗಳ ನೂತನ ತುರ್ತು ನಿಗಾ ಘಟಕ ಸ್ಥಾಪಿಸಲಾಗಿದೆ. ಅದನ್ನು ಚುನಾವಣಾ ನೀತಿ ಜಾರಿಗೊಳ್ಳುವ ಮುನ್ನ ಉದ್ಘಾಟಿಸಲು ಹಾಗೂ ಆಸ್ಪತ್ರೆಯಲ್ಲಿನ ಒಳರೋಗಿಗಳ ಭೇಟಿಗೆ ಹೆಚ್ಚುವರಿಯಾಗಿ ಬರುವ ಅವರ ಪ್ರತಿ ಸಂಬಂಧಿಕರಿಗೆ 50 ರೂ. ಶುಲ್ಕದಂತೆ ಸ್ಪೆಷಲ್‌ ಪಾಸ್‌ ಮಾಡಲು ಯೋಚಿಸಲಾಗಿದೆ. ಇದನ್ನು ಪ್ರಾಯೋಗಿಕ ಆಧಾರದ ಮೇಲೆ ಇನ್ನು 2-3 ವಾರಗಳಲ್ಲಿ ಜಾರಿಗೊಳಿಸಲಾಗುವುದು. ಕಳೆದ ವರ್ಷ ಔಷಧಿಗಾಗಿ 30 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಕಿಮ್ಸ್‌ ನಿರ್ದೇಶಕ ಡಾ| ರಾಮಲಿಂಗಪ್ಪ ಹೇಳಿದರು.

ಕಳೆದ ಒಂದು ವರ್ಷದಿಂದ ಕಿಮ್ಸ್‌ನಲ್ಲಿ 9 ರೋಗಿಗಳಿಗೆ ಕಿಡ್ನಿ ಕಸಿ
ಮಾಡಲಾಗಿದೆ. ಇನ್ನೂ 9 ಜನರು ಕಾಯುತ್ತಿದ್ದಾರೆ. 60 ಜನರು ನೋಂದಣಿ ಮಾಡಿಸಿದ್ದಾರೆ. ಕಿಡ್ನಿ ಕಸಿಗೆ ಹೆಚ್ಚಿನ ವೆಚ್ಚ ತಗಲುತ್ತದೆ. ಆದರೆ, ಸರ್ಕಾರ ಕೇವಲ 2 ಲಕ್ಷ ರೂ. ನಿಗದಿಪಡಿಸಿದೆ. ಇದನ್ನು ಹೆಚ್ಚಿಸಬೇಕು. ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗುತ್ತದೆ. ಹೆಚ್ಚುವರಿ ಮೊತ್ತವನ್ನು ಕಿಮ್ಸ್‌ನಿಂದ ಭರಿಸಲಾಗುತ್ತಿದೆ.
ಡಾ| ರಾಮಲಿಂಗಪ್ಪ ಅಂಟರತಾನಿ, ಕಿಮ್ಸ್‌ ನಿರ್ದೇಶಕ

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.