ಖಾದಿಗೆ ಕೈ ಹಾಕಿರುವ ಕೇಂದ್ರದ ನಡೆ ಮಹಾ ದುರಂತ

ರಾಷ್ಟ್ರಧ್ವಜ ಸಂಹಿತೆಗೆ ತಿದ್ದುಪಡಿ ಮಾಡುವ ಮೂಲಕ ಸ್ವಾಭಿಮಾನ ಕೆದಕಿದ್ದಾರೆ ; ಖಾದಿ ಕಸಿದುಕೊಳ್ಳುತ್ತಿರುವುದು ದಡ್ಡತನ ಪರಮಾವಧಿ

Team Udayavani, Jul 28, 2022, 4:43 PM IST

14

ಹುಬ್ಬಳ್ಳಿ: “ರಾಷ್ಟ್ರದ ಪ್ರತೀಕವಾಗಿರುವ ಖಾದಿಗೆ ಕೈ ಹಾಕಿರುವ ಕೇಂದ್ರ ಸರಕಾರದ ನಡೆ ಮಹಾ ದುರಂತವಾಗಿದೆ. ರಾಷ್ಟ್ರಧ್ವಜ ಸಂಹಿತೆಗೆ ತಿದ್ದುಪಡಿ ಮಾಡುವ ಮೂಲಕ ಸ್ವಾಭಿಮಾನವನ್ನು ಕೆದಕಿದ್ದಾರೆ. ಖಾದಿಯನ್ನು ಕಸಿದುಕೊಳ್ಳುತ್ತಿರುವುದು ದಡ್ಡತನ ಪರಮಾವಧಿಯಾಗಿದ್ದು, ಈ ಕೃತ್ಯಕ್ಕೆ ರಾಷ್ಟ್ರದ ಜನರು ತಕ್ಕ ಪಾಠ ಕಲಿಸಲಿದ್ದಾರೆ’.

ಇದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕಮಲಾಪುರ ಮೂಲದ ಗುಂಡೂರಾವ ದೇಸಾಯಿ ಅವರು ಖಾರವಾದ ಪ್ರತಿಕ್ರಿಯೆ.

ಕೇಂದ್ರ ಸರಕಾರದ ಈ ನಡೆ ನೋಡಿದರೆ ಖಾದಿ ಎಂಬುದು ಕೇವಲ ಬಟ್ಟೆ ಎಂದು ತಿಳಿದಂತಿದೆ. ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಸೆಣಸಲು ಹೋರಾಟಗಾರರನ್ನು ಬಡಿದೆಬ್ಬಿಸಿದ ಅಸ್ತ್ರವೇ ಖಾದಿ. ಬ್ರಿಟೀಷರ ವಿರುದ್ಧ ತೊಡೆ ತಟ್ಟುವಂತೆ ಮಾಡಿದೆ. ಸ್ವಾಭಿಮಾನದ ಸಂಕೇತವಾಗಿರುವ ಖಾದಿ ಧರಿಸಿಯೇ ಹಲವರು ಹೋರಾಟದಲ್ಲಿ ಅಮರರಾಗಿದ್ದಾರೆ. ಇಂತಹ ಪವಿತ್ರ ವಸ್ತುವಿಗೆ ಪರ್ಯಾಯವಾಗಿ ಇನ್ನೊಂದು ಬಟ್ಟೆ ತಂದಿಟ್ಟಿರುವ ಕೇಂದ್ರ ಸರಕಾರದ ನಿರ್ಧಾರ ದಾಸ್ಯದ ಸಂಕೇತವಾಗಿದೆ.

ಖಾದಿಯೇ ನನ್ನ ಜೀವನ: ಕೇವಲ 17-18 ವರ್ಷದವನಿದ್ದಾಗ ಖಾದಿ ಧರಿಸಿಯೇ ಬ್ರಿಟೀಷರ ವಿರುದ್ಧದ ಹೋರಾಟಕ್ಕೆ ಧುಮುಕಿದ್ದೆ. ಆದಾಗಲೇ ನನ್ನ ಸೋದರ ಮಾವ ಹಾನಗಲ್ಲಿನ ತಮ್ಮಣ್ಣ ದೇಸಾಯಿ (ನಾಗೇಶ ವೆಂಕಟರಾವ ದೇಸಾಯಿ) ಅವರು ಸಂಗಡಿಗರು ಸ್ಥಳೀಯರ ಪೊಲೀಸರಿಗೆ ತಲೆ ನೋವಾಗಿದ್ದರು. ಇಂತಹ ಸಂದರ್ಭದಲ್ಲಿ ನನ್ನ ವಯಸ್ಸಿನ ನಾಲ್ವರು ಗೆಳೆಯರೊಂದಿಗೆ ಹಾನಗಲ್ಲನಲ್ಲಿ ಖಾದಿ ಧರಿಸಿ ಅಂಚೆ ಕಚೇರಿಯಲ್ಲಿ ದಾಂಧಲೆ ಮಾಡಿ ಬ್ರಿಟೀಷರ ವಿರುದ್ಧ ಘೋಷಣೆ ಕೂಗಿದ್ದೆವು. ಏಕಕಾಲಕ್ಕೆ ಸಾಕಷ್ಟು ಜನರನ್ನು ಸೆರೆ ಹಿಡಿದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಹಾಕಿದ್ದರು. ಅಂದು ಬಂಧಿತರಾದವರೆಲ್ಲಾ ಖಾದಿಧಾರಿಗಳಾಗಿದ್ದರು. ಆರು ತಿಂಗಳು ಜೈಲುವಾಸ ಅನುಭವಿಸಿದೆವು. ಮಹಾತ್ಮಗಾಂಧಿ ಅವರು ಅಂದು ಘೋಷಿಸಿದ ಖಾದಿ ಮಂತ್ರವನ್ನು ಕಳೆದ 80 ವರ್ಷಗಳಿಂದ ಜೀವನದಲ್ಲಿ ರೂಢಿಸಿಕೊಂಡು ಬಂದಿದ್ದೇನೆ. ಸ್ವಾತಂತ್ರ್ಯ ಸಿಕ್ಕಾಗ ಖಾದಿ ಉಡುಪು ಧರಿಸಿ ನನ್ನ ಸ್ವಗ್ರಾಮ ಹೊಸಪೇಟೆ ಬಳಿಯ ಕಮಲಾಪುರದಲ್ಲಿ ಸರಕಾರಿ ಕಚೇರಿಗಳ ಮೇಲೆ ಧ್ವಜ ಹಾರಿಸಿದ್ದನ್ನು ಮರೆಯಲು ಸಾಧ್ಯವಿಲ್ಲ. ಇಂದಿಗೂ ಕೂಡ ಅಂಬರ ಚರಕ ಕೊಡಿ ನಾನೇ ನೇಯ್ದುಕೊಳ್ಳುತ್ತೇನೆಂದು ಖಾದಿಯೊಂದಿಗಿನ ತಮ್ಮ ಬಾಂಧವ್ಯ ವ್ಯಕ್ತಪಡಿಸಿದರು.

ತಿದ್ದುಪಡಿ ವಿಷಾದನೀಯ: ಖಾದಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹಿಳೆಯರೇ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರತರಾಗಿದ್ದಾರೆ. ಖಾದಿಯ ಸೇವೆಯ ಜತೆಗೆ ಒಂದೊತ್ತಿನ ಊಟ ಮಾಡುತ್ತಿದ್ದ ಕುಟುಂಬಗಳಿಗೆ ಇದು ಕಂಟಕವಾಗಿದೆ. ಪವಿತ್ರ ಖಾದಿ ಬಳಸಿ ರಾಷ್ಟ್ರಧ್ವಜ ತಯಾರಿಸುವ ಕಾರ್ಯ ದೇಶ ಸೇವೆಯಾಗಿದೆ. ಯಾವುದೇ ರಾಜಕೀಯ ಪಕ್ಷಗಳು ರಾಷ್ಟ್ರದ ಸ್ವಾಭಿಮಾನಕ್ಕೆ ಧಕ್ಕೆಯಾಗುವ ನಿರ್ಧಾರ ಕೈಗೊಳ್ಳಬಾರದು. ಇದೊಂದು ವಿಷಾಧನೀಯ ಘಟನೆಯಾಗಿದೆ. ಖಾದಿಯ ಖದರ್‌ ಅರಿತಿದ್ದರೆ ಕೇಂದ್ರ ಸರಕಾರ ಇಂತಹ ನಿರ್ಧಾರ ಮಾಡುತ್ತಿರಲಿಲ್ಲ. ಕಾಲ ಮಿಂಚಿಲ್ಲ ಕೂಡಲೇ ತಿದ್ದುಪಡಿ ರದ್ದುಗೊಳಿಸಿ ಖಾದಿ ಹಾಗೂ ರಾಷ್ಟ್ರಧ್ವಜದ ಘನತೆ ಎತ್ತಿ ಹಿಡಿಯುವ ಕೆಲಸ ಸರಕಾರ ಮಾಡಬೇಕೆಂದರು.

ಪ್ರಧಾನಿಗೆ ಪತ್ರ ಬರೆಯುವೆ: ಖಾದಿ, ರಾಷ್ಟ್ರಧ್ವಜಕ್ಕೆ ಕೈ ಹಾಕಿರುವ ಸಂದರ್ಭದಲ್ಲಿ ಹೋರಾಟಗಳು ಅನಿವಾರ್ಯ. ರಾಷ್ಟ್ರದ ವಿಚಾರ ಬಂದಾಗ ವಯಸ್ಸು ನೋಡಲ್ಲ. ಯಾವುದೇ ಹೋರಾಟಗಳಿಗೆ ಕರೆದರೂ ಬರುತ್ತೇನೆ. ಖಾದಿ ಕಾರ್ಯರ್ತರು, ರಾಷ್ಟ್ರಪ್ರೇಮಿಗಳು, ಮಹಾತ್ಮಗಾಂಧಿ ಸಿದ್ಧಾಂತ ಮೇಲೆ ನಂಬಿಕೆಯಿಟ್ಟವರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಿರುವುದನ್ನು ಸಹಿಸಿಕೊಳ್ಳಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತೇನೆ. ಸ್ವಾತಂತ್ರ್ಯ ಹೋರಾಟಗಾರ, ಖಾದಿ ಪ್ರಿಯನಾಗಿ ಇಷ್ಟು ಮಾಡದಿದ್ದರೆ ಹೇಗೆ? ಯಾರಾದರೂ ಕರೆದುಕೊಂಡು ಹೋದರೆ ದೆಹಲಿಗೆ ಹೋಗಿ ಪ್ರಧಾನಿಗಳನ್ನು ಭೇಟಿಯಾಗಲು ಸಿದ್ಧನಿದ್ದೇನೆ ಎನ್ನುತ್ತಾರೆ ಗುಂಡೂರಾವ ದೇಸಾಯಿ.

ಕಾಂಗ್ರೆಸ್‌ ಎಚ್ಚರವಾಗಿಲ್ಲ: ರಾಷ್ಟ್ರ ಸಂಹಿತೆ ತಿದ್ದುಪಡಿ ಖಾದಿ ಬಿಡಿ ಎನ್ನುವ ಮನಸ್ಥಿತಿ ತೋರುತ್ತದೆ. ಇದಕ್ಕೆ ಪ್ರತಿಯಾಗಿ ಯಾವ ಪಾಠ ಕಲಿಸಬೇಕೆನ್ನುವ ಬುದ್ಧಿ ಜನರಲ್ಲಿದೆ. ಖಾದಿ ತೊಡಬೇಕೆಂದು ಅರಿವು ಮೂಡಿಸುವ ಕೆಲಸ ಸರಕಾರ ಮಾಡಬೇಕಿತ್ತು ಆದರೆ ಸರಕಾರ ಮಾಡಿರುವುದು ಘೋರ ಅನ್ಯಾಯ. ಕೇಂದ್ರದ ಈ ನಿರ್ಧಾರ ನನಗೆ ಬಹಳ ನೋವಾಗಿದೆ. ಅವರಿಗೆ ಅಧಿಕಾರ ಇದೆ ಎನ್ನುವ ಕಾರಣಕ್ಕೆ ಇಂತಹ ನಿರ್ಧಾರಗಳು ಸರಿಯಲ್ಲ. ಅಧಿಕಾರ ಶಾಶ್ವತವಲ್ಲ ಎಂಬುದನ್ನು ಎಲ್ಲಾ ರಾಜಕೀಯ ಪಕ್ಷಗಳು ಅರಿತುಕೊಳ್ಳಬೇಕು. ಖಾದಿ ಬಗ್ಗೆ ಇಂದಿನ ಕಾಂಗ್ರೆಸ್‌ನವರಿಗೆ ಇನ್ನೂ ಎಚ್ಚರವಾಗಿಲ್ಲ. ಖಾದಿಯ ಹಾಗೂ ಕಾಂಗ್ರೆಸ್‌ ನಡುವಿನ ಅವಿನಾಭಾವ ಸಂಬಂಧವನ್ನು ಮರೆಯಬಾರದು. ಹಿಂದಿನ ಕಾಂಗ್ರೆಸ್‌ ಹೋರಾಟ ತಿಳಿಸಿಕೊಡಬೇಕಾಗಿದೆ. ಇದು ಹೋರಾಟದ ರೂಪ ಪಡೆದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.