ಹುಬ್ಬಳ್ಳಿ: ಪಾನ್‌ಬೀಡಾ ಪ್ರಿಯರಿಗೆ ದರ ಏರಿಕೆ ರಣ”ವೀಳ್ಯ’

ಅಂಬಾಡಿ ಎಲೆಯಲ್ಲಿ ಕೊಂಚ ಏರಿಕೆಯಷ್ಟೆ ಕಂಡು ಬರುತ್ತದೆ.

Team Udayavani, Feb 6, 2023, 4:23 PM IST

ಹುಬ್ಬಳ್ಳಿ: ಪಾನ್‌ಬೀಡಾ ಪ್ರಿಯರಿಗೆ ದರ ಏರಿಕೆ ರಣ”ವೀಳ್ಯ’

ಹುಬ್ಬಳ್ಳಿ: ಹವಾಮಾನದ ವೈಪರೀತ್ಯದಿಂದ ವೀಳ್ಯದೆಲೆ ಉತ್ಪಾದನೆ ಗಣನೀಯವಾಗಿ ಕುಸಿದಿದ್ದು, ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಈ ಭಾಗದಲ್ಲಿ ಅಂಬಾಡಿ ಹಾಗೂ ಕರಿಎಲೆ ಹೆಚ್ಚು ಬಳಕೆಯಾಗುತ್ತದೆ. ಪಕ್ಕದ ರಾಣಿಬೆನ್ನೂರ, ಸವಣೂರ, ಕಾರಡಗಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಇಲ್ಲಿನ ಮಾರುಕಟ್ಟೆಗೆ ಆಗಮಿಸುತ್ತದೆ. ಇಲ್ಲಿಂದ ಅಕ್ಕಪಕ್ಕದ ಊರುಗಳಿಗೆ ಸರಬರಾಜು ಮಾಡಲಾಗುತ್ತದೆ.

ಹವಾಮಾನ ವೈಪರೀತ್ಯದಿಂದಾಗಿ ವೀಳ್ಯದೆಲೆ ಉತ್ಪಾದನೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲದ ಕಾರಣ ಮಾರುಕಟ್ಟೆಯಲ್ಲಿ ಎಲೆ ಕೊರತೆ ಹೆಚ್ಚಾಗಿದ್ದು, ಬರುತ್ತಿರುವ ಎಲೆಗೆ ದರ ದುಪ್ಪಟ್ಟಾಗಿದೆ.

ಚಳಿಗಾಲದ ಎಫೆಕ್ಟ್: ಮೂರು ತಿಂಗಳ ಕಾಲ ಇರುವ ಚಳಿಗಾಲದ ಹಿನ್ನೆಲೆಯಲ್ಲಿ ಎಲೆ ಬೆಳವಣಿಗೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಇಳುವರಿ ಕಡಿಮೆ ಆಗುತ್ತದೆ. ಇದರಿಂದ ಮಾರುಕಟ್ಟೆಗೆ ಆಗಮಿಸುವ ವೀಳ್ಯದೆಲೆಯ ಬೆಲೆ ಏರಿಕೆ ಕಂಡುಬರುತ್ತಲೇ ಮೂರು ತಿಂಗಳಲ್ಲಿ ನೂರು ಕರಿಎಲೆಗೆ 100-120 ರೂ. ಇದ್ದದ್ದು 150-200ರ ವರೆಗೂ ಏರಿಕೆ ಆಗುತ್ತದೆ. ಇನ್ನು ಅಂಬಾಡಿ ಎಲೆಯಲ್ಲಿ ಕೊಂಚ ಏರಿಕೆಯಷ್ಟೆ ಕಂಡು ಬರುತ್ತದೆ.

ಆವಕ ಎಷ್ಟು?: ನಗರದ ಮಹಾತ್ಮಾ ಗಾಂಧಿ ಮಾರುಕಟ್ಟೆಗೆ ವಾರದಲ್ಲಿ ಕರಿಎಲೆ ಸುಮಾರು 20 ರಿಂದ 25ಕ್ಕೂ ಹೆಚ್ಚು ಹಂಡಿಗೆ ಬರುತ್ತವೆ. ಒಂದು ಹಂಡಿಗೆಯಲ್ಲಿ ಸುಮಾರು 12,000 ಸಾವಿರಕ್ಕೂ ಹೆಚ್ಚು ಎಲೆಗಳು ಇರುತ್ತವೆ. ಶನಿವಾರ, ಮಂಗಳವಾರ, ಸೋಮವಾರ ಹಾಗೂ ಗುರುವಾರ ಒಟ್ಟು ನಾಲ್ಕು ದಿನ ವೀಳ್ಯದೆಲೆ ಆವಕವಾಗುತ್ತದೆ. ಸುಮಾರು 70 ರಿಂದ 100 ಬುಟ್ಟಿ ಅಂಬಾಡಿ ಎಲೆ ಬರುತ್ತಿದ್ದು, ಒಂದು ಬುಟ್ಟಿಯಲ್ಲಿ ಸುಮಾರು 2ರಿಂದ 2.5 ಸಾವಿರ ಇರುತ್ತವೆ.

ಕಲ್ಕತ್ತಾ ಎಲೆಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ಹಿಂದೆ ನೆರೆಹಾವಳಿ ಬಂದು ಕಲ್ಕತ್ತಾ ಎಲೆ ಬೆಳೆಯುವ ಪ್ರದೇಶದಲ್ಲಿ ಎಲ್ಲವೂ ಕೊಚ್ಚಿಕೊಂಡು ಹೋಗಿತ್ತು. ಆಗ ಒಂದು ಕಲ್ಕತ್ತಾ ಎಲೆ ದರ 10ರಿಂದ 15 ರೂ. ಗೆ ಏರಿಕೆ ಆಗಿತ್ತು. ಆದರೆ, ಇದೀಗ ಒಂದು ಕಲ್ಕತ್ತಾ ಎಲೆಯ ದರ 4-5 ರೂ. ಇದೆ.
ವಾಯಿದ್‌ ಶೇಖ್‌,
ಕಲ್ಕತ್ತಾ ಎಲೆ ಸರಬರಾಜುದಾರ

ಪ್ರತಿವರ್ಷ ಚಳಿಗಾಲದಲ್ಲಿ ವೀಳ್ಯದೆಲೆ ಬೆಲೆ ಏರಿಕೆ ಸಾಮಾನ್ಯ. ಇಳುವರಿಯಲ್ಲಿ ಇಳಿಕೆ ಕಾಣುವುದರಿಂದ ಮಾರುಕಟ್ಟೆಗೆ ಆವಕ ಕಡಿಮೆ ಆಗುತ್ತದೆ. ಈ ಸಮಯದಲ್ಲಿ ಬೆಲೆ ಏರಿಕೆ ಆಗುತ್ತದೆ. ಈ ವರ್ಷ ನೂರು ಎಲೆಗೆ ಸುಮಾರು 60ರಿಂದ 80 ರೂ. ವರೆಗೆ ಬೆಲೆ ಏರಿಕೆ ಕಂಡುಬಂದಿದೆ.
ಅಸ್ಲಂ ಹುಬ್ಬಳ್ಳಿ, ವೀಳ್ಯದೆಲೆ ಮಾರಾಟಗಾರ

ಬಸವರಾಜ ಹೂಗಾರ

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.