ಹುಬ್ಬಳ್ಳಿ: ಆಧಾರ ಸೇವಾ ಕೇಂದ್ರದ ಮುಂದೆ ಜನಜಾತ್ರೆ

ಸದ್ಯ ಮೂರು ಕೇಂದ್ರಗಳಲ್ಲಿ ಆಧಾರ ಕಾರ್ಡ್‌ ಮಾಡಲಾಗುತ್ತಿಲ್ಲ.

Team Udayavani, Jun 16, 2023, 12:15 PM IST

ಹುಬ್ಬಳ್ಳಿ:ಆಧಾರ ಸೇವಾ ಕೇಂದ್ರದ ಮುಂದೆ ಜನಜಾತ್ರೆ

ಹುಬ್ಬಳ್ಳಿ: ರಾಜ್ಯ ಸರಕಾರ ಐದು ಗ್ಯಾರಂಟಿಗಳಿಗೆ ಒಂದಿಲ್ಲೊಂದು ರೀತಿಯಲ್ಲಿ ಆಧಾರ ಕಾರ್ಡ್‌ ಕಡ್ಡಾಯಗೊಳಿಸಿದ್ದರಿಂದ ಆಧಾರ ಕಾರ್ಡ್‌ನಲ್ಲಿ ಕೆಲ ಮಾಹಿತಿ ಸೇರ್ಪಡೆ, ಬದಲಾವಣೆ, ತಿದ್ದುಪಡಿಗಾಗಿ ಜನರು ಬರುತ್ತಿದ್ದು, ಆಧಾರ ಸೇವಾ ಕೇಂದ್ರ ಮುಂಭಾಗದಲ್ಲಿ ಜನವೋ ಜನ ಎನ್ನುವಂತಾಗಿದೆ.

ಆಧಾರ ಕಾರ್ಡ್‌ 10 ವರ್ಷ ಮೇಲ್ಪಟ್ಟು ಆಗಿದ್ದಲ್ಲಿ ಅಂತಹವುಗಳನ್ನು ಎಲ್ಲಿ ಬೇಕಾದರೂ ಅಪ್‌ಡೇಟ್‌ ಮಾಡಿಕೊಳ್ಳಬಹುದು ಆದರೆ ಜನರಲ್ಲಿರುವ ತಪ್ಪು ತಿಳಿವಳಿಕೆಯಿಂದ ನೂರಾರು ಜನರು ಬೆಳಿಗ್ಗೆಯಿಂದಲೇ ಆಧಾರ ಸೇವಾ ಕೇಂದ್ರದ ಮುಂದೆ ಸರದಿ ನಿಲ್ಲುತ್ತಿರುವುದು ಕಂಡು ಬರುತ್ತಿದೆ. ಜೂ.15ರೊಳಗೆ ಆಧಾರ ಕಾರ್ಡ್‌ ನವೀಕರಣ ಮಾಡಿಕೊಳ್ಳದಿದ್ದರೆ ಅದು ನಿಷ್ಕ್ರಿಯಗೊಳ್ಳುತ್ತದೆ ಎನ್ನುವ ತಪ್ಪು ಸಂದೇಶದಿಂದ ಜನರು ಗೊಂದಲಕ್ಕೆ ಬಿದ್ದು ಆಧಾರ ಸೇವಾ ಕೇಂದ್ರಗಳತ್ತ ಧಾವಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಕರ್ನಾಟಕ ಒನ್‌ ಕೇಂದ್ರದಿಂದ ಸೇವಾ ಕೇಂದ್ರಕ್ಕೆ:
ಕರ್ನಾಟಕ ಒನ್‌ ಕೇಂದ್ರದಲ್ಲೂ ಆಧಾರ ಕಾರ್ಡ್‌ ಮಾಡಲಾಗುತ್ತಿದ್ದು ಆದರೆ ಕೆಲ ಕೇಂದ್ರಗಳಲ್ಲಿ ಜನರನ್ನು ಮರಳಿ ಕಳುಹಿಸುತ್ತಿದ್ದಾರೆನ್ನುವ ಆರೋಪಗಳು ಕೇಳಿ ಬಂದಿವೆ. ನಗರದ ಗೋಕುಲ ರಸ್ತೆ ಅಕ್ಷಯ ಪಾರ್ಕ್ ನಲ್ಲಿ ಕೇಂದ್ರ, ಕೋಠಾರಿಗೇರಿ ಓಣಿ, ಸಿದ್ದೇಶ್ವರ‌ ಪಾರ್ಕ್‌ನಲ್ಲಿರುವ ಕೇಂದ್ರಗಳು ಆಧಾರ ಕಾರ್ಡ್‌ ಮಾಡಲಾಗುತ್ತಿಲ್ಲ. ಇದರಿಂದ ಜನರು ಅಲ್ಲಿಂದ ಆಧಾರ ಸೇವಾ ಕೇಂದ್ರಕ್ಕೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಒಂದು ವಾರದಿಂದ ಡೇಟಾ ಸೆಂಟರ್‌ ನಲ್ಲಿ ಅಪಡೇಟ್‌ ಮಾಡುವ ಕಾರಣದಿಂದ ಮಧ್ಯಾಹ್ನದ ನಂತರವೇ ಆಧಾರ ಕಾರ್ಡ್‌ ಸಿಂಕ್‌ ಆರಂಭಗೊಳ್ಳುತ್ತಿರುವುದರಿಂದ ಸಮಸ್ಯೆ ಉದ್ಭವಿಸಿತ್ತು.

ಆದರೆ ಸದ್ಯ ಮೂರು ಕೇಂದ್ರಗಳಲ್ಲಿ ಆಧಾರ ಕಾರ್ಡ್‌ ಮಾಡಲಾಗುತ್ತಿಲ್ಲ. ಪ್ರತಿ ಕರ್ನಾಟಕ ಒನ್‌ ಕೇಂದ್ರದಲ್ಲೂ ಆಧಾರ ಕಾರ್ಡ್‌ ಜತೆಗೆ ಇನ್ನಿತರೆ ಸೇವೆ ನೀಡುತ್ತಿದ್ದು, ಪ್ರತಿದಿನ ಸುಮಾರು 50ಕ್ಕೂ ಹೆಚ್ಚು ಆಧಾರ ಕಾರ್ಡ್‌ ಮಾಡಲಾಗುತ್ತಿದೆ.ಜತೆಗೆ ಆಗಮಿಸುವ ಜನರಿಗೆ ಟೋಕನ್‌ ನೀಡಿ ಅವರನ್ನು ಬರಲು ತಿಳಿಸಲಾಗುತ್ತಿದೆ. ಚಿಟಗುಪ್ಪಿ ಪಾರ್ಕ್‌ನಲ್ಲಿರುವ ಆಧಾರ ಸೇವಾ ಕೇಂದ್ರದಲ್ಲಿ ಒಂದು ದಿನಕ್ಕೆ ಸುಮಾರು 250 ರಿಂದ 300 ಆಧಾರ ಕಾರ್ಡ್‌ ಮಾಡಬಹುದು ಆದರೆ ಒಂದೇ ಬಾರಿಗೆ ಸಾವಿರಾರು ಜನರು ಬಂದರೆ
ತೊಂದರೆಯಾಗುತ್ತಿದೆ.

ಚಿಟಗುಪ್ಪಿ ಪಾರ್ಕ್‌ನಲ್ಲಿರುವ ಆಧಾರ ಸೇವಾ ಕೇಂದ್ರದಲ್ಲಿ ಜೂ.20ರವರೆಗೆ ಜನರಿಗೆ ಟೋಕನ್‌ ನೀಡಲಾಗಿದೆ. ಪ್ರತಿದಿನ
ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಇರುವ ಆರು ಕೌಂಟರ್‌ಗಳಲ್ಲಿ ಎಲ್ಲರನ್ನೂ ಸಂಬಾಳಿಸುವುದು ಕಷ್ಟವಾಗಿದೆ. ಹಂತವಾಗಿ ಆಧಾರ ಕಾರ್ಡ್‌ ಮಾಡಿಕೊಡಲಾಗುತ್ತಿದೆ. ಅದಕ್ಕಾಗಿ ಜನರು ಸಹ ಸಹಕಾರ ನೀಡಬೇಕು.
ಲೋಹಿತ್‌ ಎಂ.,
ಆಧಾರ ಸೇವಾ ಕೇಂದ್ರದ ಮುಖ್ಯಸ್ಥ

ಕರ್ನಾಟಕ ಒನ್‌ ಕೇಂದ್ರದಲ್ಲಿ ಆಧಾರ ಕಾರ್ಡ್‌ ಮಾಡಲಾಗುತ್ತಿದ್ದು ಪ್ರತಿದಿನ ಒಂದೊಂದು ಕೇಂದ್ರದಲ್ಲಿ ಸುಮಾರು 50 ರಿಂದ 80 ಜನರವರೆಗೆ ಆಧಾರ ಕಾರ್ಡ್‌ ಮಾಡಲಾಗುತ್ತಿದೆ. ಕೆಲ ಕೇಂದ್ರಗಳಲ್ಲಿ ತಾಂತ್ರಿಕ ಕಾರಣದಿಂದ ಆಧಾರ ಕೇಂದ್ರ ಸ್ಥಗಿತಗೊಂಡಿವೆ. ಆದರೆ ಐಟಿ ಪಾರ್ಕ್‌, ಇಂದಿರಾ ಗಾಜಿನಮನೆ ಕೇಂದ್ರಗಳು ಖಾಲಿ ಇದ್ದು ಅಲ್ಲಿ ಜನರು ಆಗಮಿಸಿ ಆಧಾರ ಕಾರ್ಡ್‌ ಮಾಡಿಸಿಕೊಳ್ಳಬಹುದು.
ಮಧುಮತಿ ಸಂದಿಮನಿ,
ಜಿಲ್ಲಾ ಸಂಯೋಜಕಿ ಕರ್ನಾಟಕ ಒನ್‌

ಬಸವರಾಜ ಹೂಗಾರ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.