ಅರ್ಧಕ್ಕೆ ನಿಂತ ಕಟ್ಟಡಗಳ ಕಾಮಗಾರಿ
ಕೋವಿಡ್ ಕೊಳ್ಳಿ | ಕೃಷಿಯತ್ತ ಮುಖ ಮಾಡಿದ ಹಳ್ಳಿಗಳ ಜನರು | ಕುಟುಂಬಗಳು ಸಂಕಷ್ಟದಲ್ಲಿ
Team Udayavani, Apr 12, 2020, 7:06 PM IST
ಹುಬ್ಬಳ್ಳಿ: ಲಾಕ್ಡೌನ್ ಬಿಸಿ ಕಟ್ಟಡ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಸ್ತಬ್ಧಗೊಳಿಸಿದೆ. ಇದೇ ಕಾಮಗಾರಿಗಳನ್ನು ನಂಬಿಕೊಂಡಿದ್ದ ಸಾವಿರಾರು ದಿನಗೂಲಿ ಕುಟುಂಬಗಳು ಸಂಕಷ್ಟ ಎದುರಿಸುವಂತಾಗಿದೆ.
ನಗರದಲ್ಲಿ ಮನೆ, ಅಪಾರ್ಟ್ಮೆಂಟ್, ಣಿಜ್ಯ ಮಳಿಗೆ ಇನ್ನಿತರ ಕಟ್ಟಡ ಕಾಮಗಾರಿಗಳಿಗೆ ನಿತ್ಯವೂ ಸಾವಿರಾರು ದಿನಗೂಲಿ ಕಾರ್ಮಿಕರು ಬಳಕೆಯಾಗುತ್ತಿದ್ದರು. ಬೇರೆ ಜಿಲ್ಲೆಗಳಿಂದ ವಲಸೆ ಬಂದವರು, ಜಿಲ್ಲೆಯ ಸುತ್ತಮುತ್ತಲ ಗ್ರಾಮಗಳ ಜನರಿಗೂ ಕಟ್ಟಡ ಕಾಮಗಾರಿ ಮಹತ್ವದ ಆಸರೆಯಾಗಿತ್ತು. ಕೊರೊನಾದಿಂದ ಈ ಎಲ್ಲ ಕಾಮಗಾರಿಗಳು ಬಹುತೇಕ ಸ್ತಬ್ಧಗೊಂಡಿದೆ. ಇದು ಕೇವಲ ಕಾರ್ಮಿಕರಿಗಷ್ಟೇ ಅಲ್ಲದೆ, ಕಟ್ಟಡಕ್ಕೆ ಪೂರಕವಾದ ಹಲವು ಉದ್ಯಮ-ವ್ಯಾಪಾರಗಳ ಮೇಲೂ ಪರಿಣಾಮ ಬೀರಿದೆ. ಕಟ್ಟಡ ಕಾಮಗಾರಿಗೆ ಬಳಕೆಯಾಗುವ ಸಿಮೆಂಟ್, ಇಟ್ಟಂಗಿ, ಮರಳು, ಜಲ್ಲಿ, ಕಬ್ಬಿಣ ಎಲ್ಲ ವಹಿವಾಟು ಬಂದ್ ಆಗಿದೆ. ಅದೆಷ್ಟೋ ಕಟ್ಟಡಗಳ ಕಾಮಗಾರಿ ಅರ್ಧಕ್ಕೆ ನಿಲ್ಲುವಂತಾಗಿದೆ.
ಉದ್ಯೋಗ ಬಂದ್: ಪ್ರತಿದಿನ ಸಾವಿರಾರು ಜನರು ಉದ್ಯೋಗ ಅರಸಿ ವಿವಿಧೆಯಿಂದ ನಗರಕ್ಕೆ ಆಗಮಿಸುತ್ತಿದ್ದರು. ಕೆಲವರು ಕೆಲಸದ ಕಾರಣಕ್ಕೆ ಇಲ್ಲಿಗೆ ವಲಸೆ ಬಂದು ನೆಲೆಸಿದ್ದರು. ಇದೀಗ ಕಟ್ಟಡ ಕಾಮಗಾರಿಯೇ ಇಲ್ಲವಾಗಿ ಸಾವಿರಾರು ಕಾರ್ಮಿಕರ ಆದಾಯಕ್ಕೆ ಕಲ್ಲು ಬಿದ್ದಂತಾಗಿದೆ. ಜತೆಗೆ ಹೊಟೇಲ್, ಕಿರಾಣಿ, ಬಟ್ಟೆ ಅಂಗಡಿ, ಔಷಧಿ ಅಂಗಡಿ, ಎಪಿಎಂಸಿ, ಕೋರಿಯರ್ ಇನ್ನಿತರ ಕಡೆಗಳಲ್ಲಿ ಉದ್ಯೋಗದಲ್ಲಿದ್ದ ಜನರಿಗೂ ಇದೀಗ ಕೆಲಸವಿಲ್ಲದ ದಿನಗಳು ಕಾಡತೊಡಗಿವೆ.
ಬಿಕೋ ಎನ್ನುತ್ತಿವೆ ರಸ್ತೆ-ವೃತ್ತಗಳು: ನಗರದ ಎಲ್ಲ ರಸ್ತೆಗಳು ಹಾಗೂ ಪ್ರಮುಖ ವೃತ್ತಗಳು ಕೊರೊನಾ ಕಾರಣದಿಂದ ಜನರಿಲ್ಲದೆ ಬಿಕೋ ಎನ್ನುತ್ತಿವೆ. ಸದಾ ಜನಜಂಗುಳಿಯಿಂದ ತುಂಬಿರುತ್ತಿದ್ದು ರೈಲ್ವೆ ನಿಲ್ದಾಣ ಹಾಗೂ ರೈಲ್ವೆ ಸ್ಟೇಶನ್ ರಸ್ತೆ, ಹಳೇ ಬಸ್ ನಿಲ್ದಾಣ, ಕೊಪ್ಪಿಕರ ರಸ್ತೆ, ದುರ್ಗದ ಬಯಲು, ಹಳೇ ಹುಬ್ಬಳ್ಳಿ ಭಾಗ ಎಲ್ಲವೂ ನಿರ್ಜನ ಪ್ರದೇಶಗಳಂತಾಗಿವೆ. ಬಸ್ -ರೈಲು ಸಂಚಾರವಿಲ್ಲದೆ ನಗರಗಳಿಗೆ ಬರಲು ಸಾಧ್ಯವಾಗದೆ, ಹುಬ್ಬಳ್ಳಿ ಸುತ್ತಮುತ್ತಲಿನ ಹಳ್ಳಿಗಳ ಜನರು ಕೃಷಿಯತ್ತ ಮುಖ ಮಾಡಿದ್ದಾರೆ.
ಕೊರೊನಾ ನಗರದಲ್ಲಿ ನಡೆಯಬೇಕಿದ್ದ ಮದುವೆ, ಗೃಹ ಪ್ರವೇಶ ಸೇರಿದಂತೆ ಎಲ್ಲ ಶುಭ ಕಾರ್ಯಗಳು ಮುಂದೂಡುವಂತೆ ಮಾಡಿದೆ. ಬಸವ ಜಯಂತಿಯಂದು ಗೃಹ ಪ್ರವೇಶ ಮಾಡಬೇಕೆಂದುಕೊಂಡಿದ್ದೆವು. ಆದರೆ ಕೊರೊನಾದಿಂದ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಇನ್ನು ಕೆಲಸ ಸಂಪೂರ್ಣವಾಗಲು ಸಾಧ್ಯವಿಲ್ಲ.
ಭಾರತಿ, ಎಚ್. ಮನೆಯ ಮಾಲಿಕರು
ನಗರದಲ್ಲಿ ಸಾವಿರಾರು ಕಟ್ಟಡಗಳ ಕಾಮಗಾರಿಗಳು ಅರ್ಧಕ್ಕೆ ನಿಂತು ಬಿಟ್ಟಿವೆ. ಲಾಕ್ಡೌನ್ನಿಂದ ಕಟ್ಟಡ ಸಾಮಗ್ರಿಗಳು ಸಿಗುತ್ತಿಲ್ಲ. ಕಾರ್ಮಿಕರು ಬರುತ್ತಿಲ್ಲ. ಇದರಿಂದ ಅನೇಕ ಕಟ್ಟಡಗಳ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸುವಂತಾಗಿದೆ.
ರಾಜು ಕೇಶಣ್ಣವರ, ಇಂಜನಿಯರ್
ನಗರದಲ್ಲಿ ಎಲ್ಲ ಕೆಲಸಗಳು ಅರ್ಧಕ್ಕೆ ನಿಲ್ಲಿಸಲಾಗಿದೆ. ಲಾಕ್ ಡೌನ್ನಿಂದ ಕಾರ್ಮಿಕರು ಬರುತ್ತಿಲ್ಲ, ಕಟ್ಟಡ ಮಾಲಿಕರು ಸಹ ಆಗಮಿಸುತ್ತಿಲ್ಲ. ಇದರಿಂದ ಕಟ್ಟಡ ಕಾಮಗಾರಿಗಳು ಹಾಗೇ ಉಳಿದಿದ್ದು, ಕೊರೊನಾ ವೈರಸ್ ಎಲ್ಲರ ನೆಮ್ಮದಿ ಹಾಳು ಮಾಡಿದೆ.
ಭೀಮಸಿ, ಕಟ್ಟಡ ನಿರ್ಮಾಣ ಮೇಸ್ತ್ರಿ
ಬಸವರಾಜ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ