ಹುಬ್ಬಳ್ಳಿ: ಕಸ ಎಸೆಯುವವರ ವಿರುದ್ಧ ದಂಡಾಸ್ತ್ರಕ್ಕೆ ವಿಕ್ರಂ ತಂಡ

ಪ್ರತಿಯೊಂದು ವಲಯಕ್ಕೂ ಈ ವಿಕ್ರಂ ವಿಸ್ತರಿಸುವ ಉದ್ದೇಶವನ್ನು ಪಾಲಿಕೆ ಹೊಂದಿದೆ

Team Udayavani, Jun 7, 2023, 6:23 PM IST

ಹುಬ್ಬಳ್ಳಿ: ಕಸ ಎಸೆಯುವವರ ವಿರುದ್ಧ ದಂಡಾಸ್ತ್ರಕ್ಕೆ ವಿಕ್ರಂ ತಂಡ

ಹುಬ್ಬಳ್ಳಿ: ಮಹಾನಗರದ ಸ್ವಚ್ಛತೆ ಹಾಗೂ ಕಸ ನಿರ್ವಹಣೆಗೆ ಪಾಲಿಕೆ ಹಲವು ಕಸರತ್ತು ಮಾಡುತ್ತಿದೆ. ಈಗಾಗಲೇ ಜನರಲ್ಲಿ ಜಾಗೃತಿ ಮೂಡಿಸುವ ಹಂತದಿಂದ ಒಂದು ಹೆಜ್ಜೆ ಮುಂದೆ ಹೋಗಿ ದಂಡ ವಸೂಲಿಗೆ ಕಾಲಿಟ್ಟಿದೆ. ಇದಕ್ಕಾಗಿ ಪ್ರತ್ಯೇಕವಾಗಿ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಎರಡು ತಂಡಗಳನ್ನು ರಚಿಸಿದ್ದು, ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಆ ಸ್ಥಳಕ್ಕೆ “ವಿಕ್ರಂ’ ಬರಲಿದೆ.

ಸ್ವಚ್ಛ ನಗರಕ್ಕಾಗಿ ಪಾಲಿಕೆ ಹಲವು ಯೋಜನೆ ಜಾರಿಗೆ ತಂದು ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿಸಿದೆ. ಕಸ ಚೆಲ್ಲುವ ಸ್ಥಳಗಳನ್ನು ಸ್ವಚ್ಛ ಗೊಳಿಸಿ ಅಲ್ಲಿ ರಂಗೋಲಿ ಹಾಕಿ ಕಸ ಹಾಕದಂತೆ ಮನವಿ ಮಾಡಲಾಯಿತು. ಕೆಲವೊಂದು ಕಡೆ ರಂಗೋಲಿ ಹಾಕಿದರೂ ಪೌರ ಕಾರ್ಮಿಕರ ಕಾವಲು ಹಾಕಲಾಯಿತು. ಪುನರಾವರ್ತನೆಯಾಗುವ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ದಂಡ ಹಾಕಲಾಯಿತು. ಕಸ ಹಾಕಿದವರಿಂದಲೇ ಆ ಕಸ ಎತ್ತಿಸುವ ಪ್ರಯೋಗವೂ ನಡೆಯಿತು. ಇಂತಹ ಹಲವು ಕಸರತ್ತು ಮಾಡಿದರೂ ಪಾಲಿಕೆ ಅಧಿಕಾರಿಗಳು ನಿರೀಕ್ಷಿಸಿದ ಮಟ್ಟಿಗೆ ಫಲ ನೀಡಿಲ್ಲ. ಹೀಗಾಗಿ ಅನಿವಾರ್ಯವಾಗಿ ದಂಡವೇ ಅಂತಿಮ ಮದ್ದು ಎನ್ನುವ ಕಾರಣಕ್ಕೆ ತಂಡಗಳನ್ನು ರಚಿಸಲಾಗಿದೆ. ಪೊಲೀಸ್‌ ಗಸ್ತು ವಾಹನದಂತೆ ಈ ವಾಹನ ಕೆಲ ಪ್ರದೇಶಗಳಲ್ಲಿ ಸಂಚರಿಸಲಿದ್ದು, ಕಸ ಹಾಕುವವರ ಮೇಲೆ ನಿಗಾ ವಹಿಸಲಿದೆ. ಇದು ರಾಜ್ಯದಲ್ಲಿಯೇ ಮೊದಲ ಪ್ರಯತ್ನವಾಗಿದೆ.

ಸ್ಥಳಕ್ಕೆ ವಿಕ್ರಂ ತಂಡ: ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಎರಡು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳಿಗೆ ಹೊಸದಾಗಿ ಎರಡು ಬೊಲೆರೊ ವಾಹನಗಳನ್ನು ಖರೀದಿಸಿದ್ದು, ಇಷ್ಟರಲ್ಲೇ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈ ತಂಡಗಳು
ಮೊದಲೇ ಗುರುತಿಸಿದ ಪ್ರದೇಶಗಳಲ್ಲಿ ಗಸ್ತು ತಿರುಗಲಿದೆ. ವಾಹನಕ್ಕೆ ಜಿಪಿಎಸ್‌, ವಾಕಿಟಾಕಿ ಸೇರಿದಂತೆ ಪ್ರತಿಯೊಂದು ಸೌಲಭ್ಯ ಕಲ್ಪಿಸಲಾಗಿದೆ.

ಪ್ರತಿಯೊಂದು ತಂಡದಲ್ಲಿ ಓರ್ವ ಆರೋಗ್ಯ ನಿರೀಕ್ಷಕರು ಹಾಗೂ ಅವರೊಂದಿಗೆ ಒಂದಿಷ್ಟು ಸಿಬ್ಬಂದಿ ನಿಯೋಜಿಸಲಾಗುತ್ತಿದೆ. ಆಟೋ ಟಿಪ್ಪರ್‌ಗಳಿಗೆ ಕಸ ನೀಡದೆ ರಸ್ತೆ ಸೇರಿದಂತೆ ಬೇಕಾಬಿಟ್ಟಿಯಾಗಿ ಕಸ ಹಾಕುವವರನ್ನು ಗುರುತಿಸಿ ದಂಡ ವಿಧಿಸುವ ಕೆಲಸ ಈ ತಂಡ ಮಾಡಲಿದೆ. ಈಗಾಗಲೇ ಕೆಲವೊಂದು ಕಡೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಹಾಕಲಾಗಿದೆ. ಅಂತಹ ಕಡೆಗಳಲ್ಲಿ ದೃಶ್ಯಗಳ ಆಧಾರದ ಮೇಲೆ ಕಸ ಹಾಕುವವರನ್ನು ಗುರುತಿಸಿ ದಂಡ ವಸೂಲಿ ಮಾಡಲಿದೆ. ಈಗಾಗಲೇ ಜಾಗೃತಿ, ಮನವಿ, ದಂಡ ಹಾಕಿದರೂ ಇಂದಿಗೂ ಕಸ ಚೆಲ್ಲುವ ಸ್ಥಳಗಳನ್ನು ಗುರುತಿಸಲಾಗಿದ್ದು, ಅಂತಹ ಸ್ಥಳಗಳ ಮೇಲೆ ಹೆಚ್ಚಿನ ನಿಗಾ ವಹಿಸಲಿದೆ. ಮೊದಲ ಹಂತವಾಗಿ ಮಾರುಕಟ್ಟೆ ಪ್ರದೇಶಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ಇಲ್ಲಿನ ಸಾಧಕ-ಬಾಧಕ ಅಧ್ಯಯನ ನಡೆಸಿ ಪ್ರತಿಯೊಂದು ವಲಯಕ್ಕೂ ಈ ವಿಕ್ರಂ ವಿಸ್ತರಿಸುವ ಉದ್ದೇಶವನ್ನು ಪಾಲಿಕೆ ಹೊಂದಿದೆ.

ಆರಂಭ ಶೂರತ್ವ ಆಗದಿರಲಿ ಪಾಲಿಕೆಯ ಯೋಜನೆಗಳು ಆರಂಭಕ್ಕೆ ಸೀಮಿತ ಎನ್ನುವ ಭಾವನೆ ಜನರಲ್ಲಿ ಮೂಡಿದೆ. ಯೋಜನೆ ರೂಪಿಸುವುದು, ಅನುಷ್ಠಾನ, ಖರೀದಿಗೆ ತೋರಿದ ಆಸಕ್ತಿ ದೀರ್ಘಾವಧಿಗೆ ಇರುವುದಿಲ್ಲ. 60 ಕೋಟಿ ರೂ. ಖರ್ಚು ಮಾಡಿ ಕಸ ನಿರ್ವಹಣೆಗೆ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಆದರೆ ಪ್ರಾಥಮಿಕ ಹಂತದಲ್ಲಿ ಕಸ ವಿಂಗಡಣೆಯಾಗುತ್ತಿಲ್ಲ. ಒಣ ಹಾಗೂ
ಹಸಿ ಕಸ ವಿಂಗಡಿಸಿ ನೀಡಿದರೆ ಪೌರ ಕಾರ್ಮಿಕರು ಒಂದೇ ಕಂಟೇನರ್‌ಗೆ ಮಿಶ್ರ ಮಾಡುತ್ತಿದ್ದು, ಕೆಲವೆಡೆ ಮೊದಲೇ ಮಿಶ್ರಣ ಮಾಡಿ ಕೊಡುತ್ತಿದ್ದಾರೆ. ಇದರ ಬಗ್ಗೆ ಪಾಲಿಕೆಯ ಆರಂಭದ ಶೂರತ್ವ ಈಗಿಲ್ಲ. ಇನ್ನೂ ಬ್ಲಾಕ್‌ಸ್ಪಾಟ್‌ಗಳ ಬಗ್ಗೆ ತೋರಿದ ಆಸಕ್ತಿ ಇಂದು ಕಾಣುತ್ತಿಲ್ಲ. ನಿರಂತರವಾಗಿ ಕೇವಲ ಆಟೋ ಟಿಪ್ಪರ್‌ಗಳ ಮೂಲಕ ಜಾಗೃತಿ ಸಂದೇಶಗಳು ಬಿತ್ತರವಾಗುತ್ತಿವೆ ಬಿಟ್ಟರೆ ನಿಯಮ ಉಲ್ಲಂಘಿಸುವವರ ಮೇಲೆ ಯಾವುದೇ ಕ್ರಮವಿಲ್ಲ. ಒಣ ಹಾಗೂ ಹಸಿ ಕಸ ಮಿಶ್ರಣ ಮಾಡಿಕೊಂಡು ಬರುವ ಪೌರ ಕಾರ್ಮಿಕರ ಮೇಲೂ ನಿಗಾ ಇಲ್ಲದಂತಾಗಿದೆ. ಕೇವಲ ಪ್ರಯೋಗಗಳಿಗೆ ಜನರ ತೆರಿಗೆ ಹಣ ಬಳಸದೆ ನಿರಂತರ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎನ್ನುವುದು ಜನತೆಗೆ ಆಗ್ರಹವಾಗಿದೆ.

ಬಹುಪಯೋಗಿ ವಿಕ್ರಂ
ಘನತ್ಯಾಜ್ಯ ವಿಲೇವಾರಿ ವಿಭಾಗದಡಿ ಈ ತಂಡಗಳು ಕಾರ್ಯನಿರ್ವಹಿಸಲಿವೆ. ಮಾರುಕಟ್ಟೆ ಪ್ರದೇಶಗಳಲ್ಲಿ ಸ್ವತ್ಛತೆಗೆ ಹಾಗೂ
ಪಾಲಿಕೆ ನಿಯಮಗಳ ಉಲ್ಲಂಘನೆ ತಡೆಗೆ ತಂಡ ಬಳಕೆಯಾಗಲಿದೆ. ಜತೆಗೆ ತುರ್ತು ಸಂದರ್ಭದಲ್ಲೂ ಬಳಕೆಯಾಗಲಿದೆ. ಮಳೆಗಾಲದ ಸಂದರ್ಭದಲ್ಲಿ ಏನಾದರೂ ಅವಘಡಗಳು ಸಂಭವಿಸಿದರೆ ಈ ವಾಹನದ ಮೂಲಕ ಕಾರ್ಮಿಕರು ಹಾಗೂ ಅಗತ್ಯ ಸಾಮಗ್ರಿಗಳನ್ನು ಸಾಗಿಸಲು ಬಳಕೆಯಾಗಲಿದೆ. ವಾಹನಕ್ಕೆ ಮೈಕ್‌ ಅಳವಡಿಸಿದ್ದು, ಪಾಲಿಕೆಯ ಪ್ರತಿಯೊಂದು ಸೂಚನೆ, ಜಾಗೃತಿ ಸಂದೇಶಗಳನ್ನು ಇದರ ಮೂಲಕ ನೀಡಲಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕರ ಬಾಕಿ ಉಳಿಸಿಕೊಂಡರೆ ವಸೂಲಿಗೆ ಅಂಥಹವರ ಮನೆ ಮುಂದೆಯೂ “ವಿಕ್ರಂ’ ನಿಲ್ಲಲಿ¨.

ಇದು ರಾಜ್ಯದಲ್ಲಿಯೇ ಮೊದಲ ಪ್ರಯತ್ನವಾಗಿದೆ. ಮಹಾನಗರದ ಸ್ವತ್ಛತೆ ಕಾಪಾಡುವ ಉದ್ದೇಶದಿಂದ ವಿಕ್ರಂ ತಂಡ ಕಾರ್ಯನಿರ್ವಹಿಸಲಿದೆ. ಇದೊಂದು ಬಹುಪಯೋಗಿ ವಾಹನವಾಗಿದೆ. ಪಾಲಿಕೆಯ ಪ್ರತಿಯೊಂದು ಕಾರ್ಯಕ್ಕೆ ಮಹಾನಗರ ಜನತೆಯ ಸಹಕಾರ-ಸಹಭಾಗಿತ್ವ ಅಗತ್ಯ. ಸ್ವಯಂ ಪ್ರೇರಿತವಾಗಿ ಸ್ವಚ್ಛ ನಗರ ನಿರ್ಮಾಣದ ಮನಸ್ಸು ಮಾಡಬೇಕು. ಅದಕ್ಕೆ ಪೂರಕವಾಗಿ ಪಾಲಿಕೆ ಅಗತ್ಯ ಸಹಕಾರ ನೀಡಲಿದೆ. ಸಾಕಷ್ಟು ಜಾಗೃತಿ ನಂತರವೂ ನಿಯಮ ಪಾಲನೆ ಮಾಡದಿದ್ದರೆ ದಂಡ
ಅನಿವಾರ್ಯವಾಗಲಿದೆ.
*ಡಾ| ಬಿ.ಗೋಪಾಲಕೃಷ್ಣ, ಪಾಲಿಕೆ ಆಯುಕ್ತ

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.