ಮೀಸಲು ಘೋಷಿಸದಿದ್ದರೆ ಶಾಪ ತಟ್ಟುತ್ತೆ: ಕಾಶಪ್ಪನವರ

ಪಂಚಮಸಾಲಿ 2ಎ ಮೀಸಲಾತಿಗಾಗಿ ಹಕ್ಕೊತ್ತಾಯ ಸಭೆ ಚನ್ನಮ್ಮ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ

Team Udayavani, Jul 31, 2022, 4:27 PM IST

15

ಹುಬ್ಬಳ್ಳಿ: ನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಾವು ನಾಚಿಕೆ, ಮಾನ, ಮರ್ಯಾದೆ ಬಿಟ್ಟು ನಿಂತಿದ್ದೇವೆ. ಬಹುಸಂಖ್ಯಾತರಿದ್ದರೂ ಅಲ್ಪಸಂಖ್ಯಾತರಂತಾಗಿದ್ದೇವೆ. ಮೀಸಲಾತಿಗೆ ಹಕ್ಕೊತ್ತಾಯ ಮಾಡುತ್ತಿದ್ದರೂ ಸರ್ಕಾರ ಮಾತ್ರ ಅದನ್ನು ಘೋಷಿಸದೆ ನಿರ್ಲಕ್ಷಿಸುತ್ತಿದೆ ಎಂದು ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಆರೋಪಿಸಿದರು.

ನೆಹರು ಮೈದಾನದಲ್ಲಿ ಶನಿವಾರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಿಸಬೇಕೆಂದು ಸರಕಾರವನ್ನು ಒತ್ತಾಯಿಸಲು ಹಮ್ಮಿಕೊಂಡಿದ್ದ ಹಕ್ಕೊತ್ತಾಯ ಸಭೆಯಲ್ಲಿ ಅವರು ಮಾತನಾಡಿದರು.

ಮೀಸಲಾತಿಗೆ ಸತತವಾಗಿ ಹೋರಾಟ ಮಾಡುತ್ತ ಬಂದಿದ್ದೇವೆ. ಒಡೆದಾಳುವ ನೀತಿಯಿಂದ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಮೀಸಲಾತಿ ಘೋಷಿಸದೆ ಹೋದಲ್ಲಿ ಶಾಪ ತಟ್ಟಲಿದೆ ಎಂದು ಈ ಹಿಂದೆ ಯಡಿಯೂರಪ್ಪ ಅವರಿಗೆ ಹೇಳಿದ್ದೆ. ಬಸವರಾಜ ಬೊಮ್ಮಾಯಿ ಅವರಿಗೂ ಅದನ್ನೇ ಹೇಳುತ್ತೇನೆ ಎಂದರು.

ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಸರ್ಕಾರಕ್ಕೆ ಈಗಾಗಲೇ ನಾಲ್ಕು ಬಾರಿ ಗಡುವು ನೀಡಿದ್ದೇವೆ. ಶ್ರಾವಣದಲ್ಲಿ ಸಮಾಜಕ್ಕೆ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜ ತಕ್ಕ ಉತ್ತರ ನೀಡಲಿದೆ. ಮೀಸಲಾತಿ ಬಂದಾಗ ನಾವೆಲ್ಲರೂ ಒಂದೇ. ನಾನಂತೂ ಪ್ರಾಣ ಪಣಕ್ಕಿಟ್ಟು ಹೋರಾಟ ಮಾಡುತ್ತೇನೆ. ಪಂಚಮಸಾಲಿ ಸಮಾಜದವರ ಆಶೀರ್ವಾದದಿಂದಲೇ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿರುವುದು. ಅದನ್ನು ನೆನಪಿಟ್ಟುಕೊಂಡು 2ಎ ಮೀಸಲಾತಿ ಘೋಷಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಸಚಿವ ಪಿ.ಸಿ. ಸಿದ್ದನಗೌಡ್ರ ಮಾತನಾಡಿ, ಸುಮಾರು 28 ವರ್ಷಗಳ ಹೋರಾಟ ಇದಾಗಿದೆ. ಮೀಸಲಾತಿಗಾಗಿ ಅಂದಿನಿಂದ ಹೋರಾಟ ನಡೆಸುತ್ತಲೇ ಬಂದಿದ್ದೇವೆ. ಪಂಚಮಸಾಲಿ ಸಮಾಜದಿಂದಲೇ ಬಹುತೇಕರು ರಾಜಕಾರಣ ಮಾಡುತ್ತಿದ್ದು, ಈ ಬಾರಿ ಮೀಸಲಾತಿ ನೀಡದಿದ್ದಲ್ಲಿ ಅವರೆಲ್ಲರೂ ಪಲ್ಟಿ ಹೊಡೆಯುವುದು ಶತಸಿದ್ಧ ಎಂದರು.

ನಂತರ ನೆಹರೂ ಮೈದಾನದಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಕಾಲ ವೃತ್ತ ಬಂದ್‌ ಮಾಡಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್‌. ಎಸ್‌. ಶಿವಶಂಕರ ಮಾತನಾಡಿ, ರಾಜಕಾರಣಿಗಳು ಅಧಿಕಾರಕ್ಕಾಗಿ, ಸಂಘ ಸಂಸ್ಥೆಗಳು ಸೌಲಭ್ಯಕ್ಕಾಗಿ ಹೋರಾಟ ನಡೆಸಿದರೆ ಶ್ರೀಗಳು ಹಗಲು ರಾತ್ರಿ ಎನ್ನದೇ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ನಮ್ಮ ಮಕ್ಕಳಿಗಾಗಿ ಈ ಹೋರಾಟ ಎಂಬುದನ್ನು ಮರೆಯಬಾರದು. ನಮ್ಮ ಹೋರಾಟ ಹತ್ತಿಕ್ಕಲು ಹಲವು ರೀತಿಯ ಪ್ರಯತ್ನ ಮಾಡಿದರು. ಹಲವು ಪೀಠ ಮಾಡಿದರು. ಆದರೆ ಅದ್ಯಾವುದಕ್ಕೂ ನಾವು ಜಗ್ಗದೇ ಮೀಸಲಾತಿಗೆ ನಮ್ಮ ಹೋರಾಟ ನಿರಂತರ ಎಂದರು.

ಮಾಜಿ ಶಾಸಕ ಎಸ್‌.ಐ. ಚಿಕ್ಕನಗೌಡರ, ಬಸವರಾಜ ಪಾಟೀಲ ಯತ್ನಾಳ ಅವರ ಪುತ್ರ ರಾಮನಗೌಡ ಪಾಟೀಲ, ಮಾಜಿ ಸಂಸದ ಮಂಜುನಾಥ ಕುನ್ನೂರ, ಶಿವಲೀಲಾ ಕುಲಕರ್ಣಿ, ವಿಜಯ ಕುಲಕರ್ಣಿ, ನಾಗರಾಜ ಗೌರಿ ಇನ್ನಿತರರು ಮಾತನಾಡಿದರು.

ಶಿವಾನಂದ ಅಂಬಡಗಟ್ಟಿ, ಶಾಸಕ ಅರವಿಂದ ಬೆಲ್ಲದ, ವೀರೇಶ ಉಂಡಿ, ಗುರುರಾಜ ಹುಣಸಿಮರದ, ಸಚಿನ ಪಾಟೀಲ, ರತ್ನವ್ವ ಕಳ್ಳಿಮನಿ, ಶಶಿಕಾಂತ ಪಡಸಲಗಿ, ಪುಟ್ಟಸ್ವಾಮಿ, ದೀಪಾ ಗೌರಿ, ನಾಗರಾಜ ಗೌರಿ, ರಾಜಶೇಖರ ಮೆಣಸಿನಕಾಯಿ, ನಂದಕುಮಾರ ಇನ್ನಿತರರಿದ್ದರು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.