ಉತ್ತರದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಹೆಚ್ಚಳ

ಸಿಬ್ಬಂದಿ ಕೊರತೆ-ಮೂಲಸೌಕರ್ಯ ಕುರಿತು ಸರಕಾರಕ್ಕೆ ಪತ್ರ

Team Udayavani, May 20, 2022, 10:46 AM IST

4

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಹೆಚ್ಚಾಗಿದೆ. ಇನ್ನೂ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸಿಂಗ್‌ ಸಿಬ್ಬಂದಿ ಕೊರತೆ ಹಾಗೂ ಮೂಲ ಸೌಕರ್ಯದ ಕುರಿತು ಸರಕಾರಕ್ಕೆ ಪತ್ರ ಬರೆಯಲಾಗುವುದು. ಒಂದು ವೇಳೆ ಕ್ರಮ ಜರುಗಿಸದಿದ್ದರೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ಹೈಕೋರ್ಟ್‌ ನ್ಯಾಯಮೂರ್ತಿ, ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷರಾದ ಬಿ. ವೀರಪ್ಪ ತಿಳಿಸಿದರು.

ಗುರುವಾರ ಕಿಮ್ಸ್‌ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ರೋಗಿಗಳಿಗೆ ದೊರೆಯುತ್ತಿರುವ ಚಿಕಿತ್ಸೆ, ಔಷಧೋಪಚಾರ ಹಾಗೂ ಮೂಲ ಸೌಲಭ್ಯಗಳ ಕುರಿತು ಪರಿಶೀಲಿಸಿದರು.

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹೆಲ್ಮೆಟ್‌ ಬಳಕೆ, ಸಂಚಾರ ನಿಯಮಗಳು ಸಮರ್ಪಕವಾಗಿ ಪಾಲನೆಯಾಗದಿರುವುದನ್ನು ಗಮನಿಸಲಾಗಿದೆ. ಇದರಿಂದ ರಸ್ತೆ ಅಪಘಾತಗಳ ಪ್ರಕರಣಗಳು ಹೆಚ್ಚು ಸಂಭವಿಸುತ್ತಿವೆ. ಸಾರ್ವಜನಿಕರು ಚಾಲನಾ ಪರವಾನಗಿ, ವಾಹನ ವಿಮೆ ಮತ್ತಿತರ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಈ ಕುರಿತು ಇಲ್ಲಿನ ಜಿಲ್ಲಾಧಿಕಾರಿಗಳು ಹಾಗೂ ನಗರ ಪೊಲೀಸ್‌ ಆಯುಕ್ತರೊಂದಿಗೆ ಮಾತನಾಡಿ ನಿರ್ದೇಶನ ನೀಡಲಾಗುವುದು. ಸರ್ಕಾರ ಸಾರ್ವಜನಿಕರಿಗಾಗಿ ಬೃಹತ್‌ ಆಸ್ಪತ್ರೆ ನಿರ್ಮಿಸಿ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ನೀಡುತ್ತಿದೆ. ಜನರು ಕೂಡ ಈ ಬಗ್ಗೆ ಕಾಳಜಿ ವಹಿಸಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಕಾಪಾಡಿಕೊಳ್ಳಬೇಕು ಎಂದರು.

ಶಸ್ತ್ರಚಿಕಿತ್ಸೆ ನಂತರದ ಜನರಲ್‌ ವಾರ್ಡ್‌, ಹೃದ್ರೋಗ ಚಿಕಿತ್ಸೆ, ತಾಯಿ ಮತ್ತು ಮಕ್ಕಳ ಚಿಕಿತ್ಸೆ ವಿಭಾಗಗಳಿಗೆ ಭೇಟಿ ನೀಡಿ ರೋಗಿಗಳೊಂದಿಗೆ ಮಾತನಾಡಿ ಯೋಗಕ್ಷೇಮ ವಿಚಾರಿಸಿದರು. ಚಿಕಿತ್ಸೆ ಹಾಗೂ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ರೋಗಿಗಳ ದಾಖಲೆ ಸರಿಯಾಗಿ ನಿರ್ವಹಿಸಬೇಕು. ರೋಗಿಯೊಂದಿಗೆ ಒಬ್ಬರು ಆರೈಕೆದಾರರು ಮಾತ್ರ ಇರಬೇಕು. ಹೆಚ್ಚಿನ ಜನರು ಬಂದು ಆಸ್ಪತ್ರೆ ವಾತಾವರಣದಲ್ಲಿ ಗದ್ದಲ ಉಂಟು ಮಾಡಬಾರದು. ರೋಗಿಗಳ ಆರೈಕೆದಾರರಿಗೂ ವಿಶ್ರಾಂತಿ ಪಡೆಯಲು ಸೌಕರ್ಯ ಕಲ್ಪಿಸಬೇಕು ಎಂದು ಸೂಚಿಸಿದರು.

ಆಸ್ಪತ್ರೆಯ ಶೌಚಾಲಯವನ್ನು ನೋಡಿ ನೈರ್ಮಲ್ಯ ಕಾಪಾಡುವಂತೆ ನಿರ್ದೇಶನ ನೀಡಿದರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ವಿಘ್ನೇಶಕುಮಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಂ. ಪುಷ್ಪಲತಾ, ಕಿಮ್ಸ್‌ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ, ಸ್ಥಾನಿಕ ವೈದ್ಯಾಧಿಕಾರಿ ಡಾ|ಸಿದ್ದೇಶ್ವರ ಕಟಕೋಳ, ಉಪ ವೈದ್ಯಕೀಯ ಅಧೀಕ್ಷಕ ಡಾ| ರಾಜಶೇಖರ ದ್ಯಾಬೇರಿ, ಸಮುದಾಯ ಆರೋಗ್ಯ ಅಧಿಕಾರಿ ಡಾ|ಲಕ್ಷ್ಮೀಕಾಂತ ಲೋಕರೆ ಮತ್ತಿತರರಿದ್ದರು.

ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಿದ ನ್ಯಾಯಮೂರ್ತಿಗಳು:

ಶಿಗ್ಗಾವಿ ತಾಲೂಕು ಬನ್ನೂರು ಗ್ರಾಮದ ಐಟಿಐ ವಿದ್ಯಾರ್ಥಿ ಬಸನಗೌಡ ಪೊಲೀಸ್‌ಗೌಡ್ರ ಚಕ್ಕಡಿ ಸ್ಪರ್ಧೆ ನೋಡಲು ಹೋದಾಗ ಬಿದ್ದು ಬಲಕೈ ಕಳೆದುಕೊಂಡಿರುವುದನ್ನು ಕಂಡು ಮರುಗಿದ ನ್ಯಾಯಮೂರ್ತಿಗಳು, ವಿದ್ಯಾರ್ಥಿಯ ಕಣ್ಣೀರೊರೆಸಿ ವಿಕಲಚೇತನರು ಅನೇಕ ರಂಗಗಳಲ್ಲಿ ಸಾಧನೆ ಮಾಡಿದ್ದಾರೆ. ಅವರನ್ನು ಆದರ್ಶವಾಗಿಟ್ಟುಕೊಂಡು ಸಾಧನೆ ಮಾಡಬೇಕು. ಎದೆಗುಂದಬಾರದು ಎಂದು ಆತ್ಮಸ್ಥೈರ್ಯ ತುಂಬಿದರು.

ಕಲಘಟಗಿ ತಾಲೂಕು ಪರಸಾಪುರದ ಮೌಲಾಲಿ, ಅದರಗುಂಚಿಯ ಪರಶುರಾಮ, ಬು.ಅರಳಿಕಟ್ಟಿ ಗ್ರಾಮದ ವೃದ್ಧ ದೊಡ್ಡಬಸಪ್ಪ ಕುಂಬಾರ, ಹಾವೇರಿ ಜಿಲ್ಲೆ ದೇವಗಿರಿಯ ಶಂಕರಪ್ಪ ಕಲ್ಲೆದೇವರ, ಕೊಪ್ಪಳ ಜಿಲ್ಲೆ ಹೊನ್ನುಣಸಿ ಗ್ರಾಮದ ಶೇಖರಪ್ಪ ರಡ್ಡೇರ, ಹಳೆ ಹುಬ್ಬಳ್ಳಿಯ ಸರೋಜಾ ಗುನಗಾ ಮತ್ತಿತರ ರೋಗಿಗಳೊಂದಿಗೆ ಮಾತನಾಡಿ ಅವರ ಕೌಟುಂಬಿಕ, ಆರ್ಥಿಕ ಸ್ಥಿತಿಗಳ ಕುರಿತು ಮಾಹಿತಿ ಪಡೆದರು. ಸರ್ಕಾರದಿಂದ ಉಚಿತ ಪಡಿತರ, ವೃದ್ಧಾಪ್ಯವೇತನ ಮುಂತಾದ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳು ದೊರೆಯುತ್ತಿರುವ ಬಗ್ಗೆ ಪ್ರಶ್ನಿಸಿದರು. ಅಂತಹ ಜನರಿಗೆ ಅಗತ್ಯ ನೆರವು ನೀಡಲು ಸ್ಥಳೀಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.