ಹಿಜಾಬ್ ನೆಪದಲ್ಲಿ ಇಸ್ಲಾಮೀಕರಣ; ಪ್ರಮೋದ ಮುತಾಲಿಕ ಕಿಡಿ
ಎಲ್ಲ ಶಾಲೆಗಳಲ್ಲಿ ಸಮವಸ್ತ್ರವನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕೆಂದರು.
Team Udayavani, Feb 11, 2022, 6:02 PM IST
ಹುಬ್ಬಳ್ಳಿ: ಹಿಜಾಬ್ ನೆಪದಲ್ಲಿ ಎಲ್ಲೆಡೆ ಇಸ್ಲಾಮೀಕರಣ ಯತ್ನ ನಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಹಿಂದೂಗಳು ಸಂಘಟಿತ ರೂಪದಲ್ಲಿ ಮುಂದಾಗಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.
ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ಶಾಲೆಗಳಲ್ಲಿ ಹಿಜಾಬ್ ಗಾಗಿ ಯಾಕೆ ಒತ್ತಾಯ ವಿಷಯದ ಆನ್ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಜಾಬ್ ಪ್ರಕರಣದ ಹಿಂದೆ ಎಡಪಂಥಿಯರು ಹಾಗೂ ಮುಸ್ಲಿಂ ಮೂಲಭೂತವಾದಿಗಳಿದ್ದು, ಮಹಾರಾಷ್ಟ್ರದಲ್ಲಿ ಮೊದಲು ಇಸ್ಲಾಂ ನಂತರ ಶಿಕ್ಷಣ ಎಂಬ ಪೋಸ್ಟರ್ಗಳನ್ನು ಹಾಕಿದ್ದು ನೋಡಿದರೆ, ಇಸ್ಲಾಮೀಕರಣದ ಉದ್ದೇಶ ಸ್ಪಷ್ಟವಾಗುತ್ತದೆ.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಗ ಒತ್ತಾಯಿಸುವವರು ಮುಂದೆ ಇನ್ನಷ್ಟು ಬೇಡಿಕೆಗಳನ್ನು ಇರಿಸುವುದರಲ್ಲಿ ಅನುಮಾನವಿಲ್ಲ. ಇಸ್ಲಾಮೀಕರಣಗೊಳಿಸುವ ಯತ್ನವನ್ನು ವಿಫಲಗೊಳಿಸಬೇಕು. ಎಲ್ಲ ಶಾಲೆಗಳಲ್ಲಿ ಸಮವಸ್ತ್ರವನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕೆಂದರು.
ಉದ್ಯಮಿ ಪ್ರಶಾಂತ ಸಂಬರಗಿ ಮಾತನಾಡಿ, ಹಿಜಾಬ್ ಪ್ರಕರಣ ಪೂರ್ವಯೋಜಿತ ಅಂತಾರಾಷ್ಟ್ರೀಯ ಸಂಚಾಗಿದೆ. ದೇಶದ ಕೆಲವರು ಸೇರಿದಂತೆ ವಿದೇಶದವರು ಇದರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದ್ದು ನೋಡಿದರೆ ಇದೊಂದು ಅಂತಾರಾಷ್ಟ್ರೀಯ ಕಾರ್ಯಸೂಚಿಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದರು. ದೆಹಲಿ ಹೈಕೋರ್ಟ್ ವಕೀಲರಾದ ವಿನಿತಾ ರಾಘವ, ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನಗೌಡ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!