Sanatan Dharma: ನನ್ನ ಅಭಿಪ್ರಾಯ ಹೇಳಿದ್ದೇನೆ, ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ: ಪರಂ
Team Udayavani, Sep 8, 2023, 10:11 AM IST
ಹುಬ್ಬಳ್ಳಿ: ನಾನು ಸನಾತನ ಧರ್ಮದ ಬಗ್ಗೆ ತಪ್ಪು ಅರ್ಥ ಬರುವ ರೀತಿಯಲ್ಲಿ ಮಾತನಾಡಿಲ್ಲ. ಬೇರೆಯವರು ಏನು ವಿಶ್ಲೇಷಣೆ ಮಾಡುತ್ತಾರೆ ಅದಕ್ಕೆಲ್ಲ ಉತ್ತರ ಕೊಡಲ್ಲ. ನಾನು ಸಮಯ, ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೆ ಮಾತನಾಡುತ್ತಾರೆ. ಹೀಗೆ ಮಾತನಾಡುತ್ತಾರೆ ಅಂದರೆ ನಾನು ಉತ್ತರ ಕೊಡಲ್ಲ. ಪ್ರಧಾನಿ ಮೋದಿ ಅವರು ನಾನು ಹೇಳಿರೋ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಸನಾತನ ಧರ್ಮದ ವಿಚಾರವಾಗಿ ಮಾತನಾಡಿದ್ದಾರೆ ಎಂದರು.
ಬಿಜೆಪಿಯವರು ಹೋರಾಟ ಮಾಡಲಿ ನಾವು ಪ್ರತ್ಯುತ್ತರ ಕೊಡುತ್ತೇವೆ. ಈಗಾಗಲೇ ಜನ ಉತ್ತರ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನ ಉತ್ತರ ಕೊಡುತ್ತಾರೆ ಎಂದರು.
ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಬಿಜೆಪಿಯವರಿಗೆ ಏನು ಬೇರೆ ಇದೇಯಾ ಎಂದು ಪ್ರಶ್ನಿಸಿದರು.
ಬರಗಾಲದ ಬಗ್ಗೆ ಸಂಪುಟ ಸಭೆಯಲ್ಲಿ ನಲ್ಲಿ ಚರ್ಚೆಯಾಗಿದೆ. ಶೀಘ್ರವೇ ಬರಗಾಲ ಘೋಷಣೆ ಮಾಡಲಾಗವುದು. ಜೊತೆಗೆ ಕೇಂದ್ರಕ್ಕೂ ವರದಿ ಕಳಿಸುತ್ತೇವೆ ಎಂದರು.
ಗದಗನಲ್ಲಿ ಹೊಸದಾಗಿ ಕಮಾಂಡೋ ಸೆಂಟರ್ ಮಾಡಿದ್ದಾರೆ. ಹೀಗಾಗಿ ಗದಗ ಹೋಗುತ್ತಿದ್ದೇನೆ ಎಂದರು.
ಇದನ್ನೂ ಓದಿ: G20 Summit: ಬಿಗಿ ಭದ್ರತೆಯೊಂದಿಗೆ ವಿವಿಧ ದೇಶಗಳ ಗಣ್ಯರ ಸ್ವಾಗತಕ್ಕೆ ಸಜ್ಜಾಗಿದೆ ದೆಹಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್