ಕೆಸರುಗದ್ದೆಯಾದ ನೃಪತುಂಗ ಬಡಾವಣೆ; ಮಾಜಿ ಸಿಎಂ ಕ್ಷೇತ್ರದ ಜನರ ಗೋಳು

ನೃಪತುಂಗ ನಗರದ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡಿದ್ದಾರೆ.

Team Udayavani, Jul 13, 2022, 4:56 PM IST

ಕೆಸರುಗದ್ದೆಯಾದ ನೃಪತುಂಗ ಬಡಾವಣೆ; ಮಾಜಿ ಸಿಎಂ ಕ್ಷೇತ್ರದ ಜನರ ಗೋಳು

ಹುಬ್ಬಳ್ಳಿ: ಇಂದೋ ನಾಳೆಯೋ ತಮ್ಮ ಬಡಾವಣೆಯಲ್ಲಿ ಡಾಂಬರ್‌ ರಸ್ತೆಗಳಾಗುತ್ತವೆ ಎನ್ನುವ ಭರವಸೆಯಲ್ಲಿ ಬದುಕುತ್ತಿರುವ ನಿವಾಸಿಗಳು ಇಂದಿಗೂ ಕೆಸರುಗದ್ದೆಯಂತಹ ರಸ್ತೆಗಳಲ್ಲಿ ಓಡಾಡುತ್ತಿದ್ದಾರೆ.

ಕಳೆದ 10-12 ವರ್ಷಗಳಿಂದ ರಸ್ತೆಯಿಲ್ಲದೆ ಬಡಾವಣೆ ನಿವಾಸಿಗಳು ಸ್ವಂತ ಖರ್ಚಿನಲ್ಲಿ ಮಣ್ಣು ಹಾಕಿಸಿಕೊಂಡು ಬದುಕುತ್ತಿದ್ದಾರೆ. ಮೇಲಾಗಿ ಇದು ಮಾಜಿ ಮುಖ್ಯಮಂತ್ರಿಗಳು ಪ್ರತಿನಿಧಿಸುವ ಕ್ಷೇತ್ರ ಎಂಬುದೇ ವಿಪರ್ಯಾಸ!

ಇದು ಡಾ| ಗಂಗೂಬಾಯಿ ಹಾನಗಲ್ಲ ಗುರುಕುಲ ಬಳಿಯಿರುವ 39ನೇ ವಾರ್ಡ್‌ನ ನೃಪತುಂಗ ನಗರದ ಚಿತ್ರಣ. ಮಳೆಗಾಲದಲ್ಲಿ ಕೆಸರುಗದ್ದೆಯಾಗುವ ಇಲ್ಲಿನ ರಸ್ತೆಗಳು ಬೇಸಿಗೆಯಲ್ಲಿ ತಗ್ಗು ದಿನ್ನೆಯ ರೂಪ ಪಡೆದುಕೊಳ್ಳುತ್ತವೆ. 100ಕ್ಕೂ ಹೆಚ್ಚು ಮನೆಗಳಿದ್ದು, ಕಳೆದ 10-12 ವರ್ಷಗಳಿಂದ ಇದೇ ರಸ್ತೆಗಳು ಇಲ್ಲಿನ ನಿವಾಸಿಗಳಿಗೆ ಅನಿವಾರ್ಯವಾಗಿದೆ. ಬಡಾವಣೆಯಲ್ಲಿರುವ ಎರಡು ಪ್ರಮುಖ ರಸ್ತೆ ಹಾಗೂ 6 ಒಳ ರಸ್ತೆಗಳ ಚಿತ್ರಣ ವಿಭಿನ್ನವಾಗಿಲ್ಲ. ಇದೀಗ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಅಕ್ಷರಶಃ ಕೆಸರುಗದ್ದೆಯಾಗಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಾಗಿದೆ. ಸುಸಜ್ಜಿತ ರಸ್ತೆಗಳನ್ನು ನಿರ್ಮಿಸುವಲ್ಲಿ ಪಾಲಿಕೆ ಸಂಪೂರ್ಣ ವಿಫಲವಾಗಿದೆ.

ಭರವಸೆ ಈಡೇರಿಲ್ಲ: ಮಾಜಿ ಸಿಎಂ ಜಗದೀಶ ಶೆಟ್ಟರ ಪ್ರತಿನಿಧಿಸುವ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ಬಡಾವಣೆಯಿದೆ. ಹಲವು ಬಾರಿ ರಸ್ತೆ ನಿರ್ಮಾಣದ ಕುರಿತು ಮನವಿಗಳನ್ನು ಸಲ್ಲಿಸಿದ್ದು, ಭರವಸೆಗಳು ಸಿಕ್ಕಿದ್ದಷ್ಟೆ. ಇಷ್ಟು ವರ್ಷಗಳಲ್ಲಿ ಕನಿಷ್ಟ ಎರಡು ಪ್ರಮುಖ ರಸ್ತೆಗಳಾದರೂ ನಿರ್ಮಾಣವಾಗಲಿಲ್ಲ ಎನ್ನುವ ಬೇಸರ ಹಾಗೂ ಅಸಮಾಧಾನವಿದೆ.

ಬಡಾವಣೆ ಆರಂಭವಾದ ನಂತರದಲ್ಲಿ ಒಂದಿಷ್ಟು ಕಡಿ, ಮಣ್ಣು ಹಾಕಿ ರಸ್ತೆ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ರಸ್ತೆ ನಿರ್ಮಾಣದ ಭರವಸೆಯಲ್ಲಿ ದಿನ ಕಳೆಯುತ್ತಿದ್ದಾರೆ. ಇತ್ತೀಚೆಗೆ ಪಕ್ಕದ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಲು ಬಂದ ಸಂದರ್ಭದಲ್ಲೂ ಶೆಟ್ಟರ ಅವರು ಭರವಸೆ ನೀಡಿದ್ದರು ಎಂದು ಸ್ಥಳೀಯರು ನೆನಪಿಸಿಕೊಳ್ಳುತ್ತಾರೆ.

ಜಲಮಂಡಳಿ ಅಗೆತ: ಆರೇಳು ವರ್ಷಗಳ ಹಿಂದೆ ಅಂದಿನ ಪಾಲಿಕೆ ಸದಸ್ಯೆ ರತ್ನಾ ಪಾಟೀಲ ಅವಧಿಯಲ್ಲಿ ರಸ್ತೆಗಳು ಒಂದಿಷ್ಟು ಖಡಿ ಹಾಗೂ ಮಣ್ಣು ಕಂಡಿದ್ದವು. ಆದರೆ ಕುಡಿಯುವ ನೀರು ಹಾಗೂ ಒಳಚರಂಡಿ ಕಾಮಗಾರಿ ನಿಮಿತ್ತ ಅಗೆದ ರಸ್ತೆ ಐದಾರು ವರ್ಷ ಕಳೆದರೂ ದುರಸ್ತಿಯಾಗಿಲ್ಲ. ಈ ಕುರಿತು ಸ್ಥಳೀಯರು ಸಂಬಂಧಿಸಿದ ಇಲಾಖೆ ಪ್ರಶ್ನಿಸಿದರೆ ರಸ್ತೆ ದುರಸ್ತಿಗೆ ತಗಲುವ ವೆಚ್ಚವನ್ನು ಪಾಲಿಕೆಗೆ ಭರಿಸಲಾಗಿದೆ. ಅವರು ರಸ್ತೆ ನಿರ್ಮಿಸಲಿದ್ದಾರೆ ಎನ್ನುವ ಸಬೂಬು ದೊರೆಯುತ್ತಿದ್ದು, ಅಧಿಕಾರಿಗಳು ಜಾರಿಕೊಳ್ಳುತ್ತಿದ್ದಾರೆ. ಹೀಗಾಗಿ ರಸ್ತೆಗೆ ಡಾಂಬರ್‌  ಅಥವಾ ಜಲ್ಲಿ ಕಲ್ಲು ಕೂಡ ಕಾಣುತ್ತಿಲ್ಲ. ಶಾಸಕರಿಗೆ, ಅಧಿಕಾರಿಗಳಿಗೆ ಬೇಡಿಕೆಯ ಮನವಿಗಳನ್ನು ಸಲ್ಲಿಸಿ ಜನ ರೋಸಿ ಹೋಗಿದ್ದಾರೆ. ನೃಪತುಂಗ ಬಡಾವಣೆ ನಗರದ ಹೊರಗಿರುವ ಕಾರಣಕ್ಕೆ ಇದನ್ನು ಸಂಪೂರ್ಣ ನಿರ್ಲಕ್ಷಿಸಲಾಗುತ್ತಿದೆ ಎನ್ನುವ ಭಾವನೆ ಸ್ಥಳೀಯರಲ್ಲಿ ಮೂಡಿದೆ.

ಸ್ವಂತ ಹಣದಲ್ಲಿ ಮಣ್ಣು
ಭರವಸೆಗಳಿಂದ ಭ್ರಮನಿರಸನಗೊಂಡ ಸ್ಥಳೀಯರು ಆಗಾಗ ಹಣ ಸಂಗ್ರಹಿಸಿ ರಸ್ತೆಗೆ ಮಣ್ಣು ಹಾಕಿಸಿ ದುರಸ್ತಿ ಮಾಡಿಕೊಳ್ಳುತ್ತಿದ್ದಾರೆ. ಮಳೆಗಾಲದಲ್ಲಿ ಅಕ್ಷರಶಃ ಕೆಸರುಗದ್ದೆಯಾಗಿ ನಿರ್ಮಾಣವಾಗುತ್ತಿದ್ದು, ಶಾಲಾ ವಾಹನ ಸ್ಥಗಿತಗೊಂಡಿತ್ತು. ಸಣ್ಣ ಪುಟ್ಟ ಮಕ್ಕಳು ನಿರ್ಭಿಡೆಯಿಂದ ರಸ್ತೆಯಲ್ಲಿ ನಡೆದಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಶಾಸಕರು, ಹಿಂದಿನ ಹಾಗೂ ಇಂದಿನ ಪಾಲಿಕೆ ಸದಸ್ಯರು ಬೇರೆ ಬಡಾವಣೆಯಲ್ಲಿರುವ ಕಾರಣ ಇಲ್ಲಿನ ಸಮಸ್ಯೆ ಅವರಿಗೆ ಅರ್ಥವಾಗುತ್ತಿಲ್ಲ. ಆರಿಸಿ ಕಳುಹಿಸಿದ ಜನಪ್ರನಿಧಿಗಳು ಒಮ್ಮೆಯಾದರೂ ನಮ್ಮ ಪ್ರದೇಶಕ್ಕೆ ಭೇಟಿ ನೀಡಿ ವಾಸ್ತವ ಅರಿಯಲಿ. ಅಂದಾಗ ಇಲ್ಲಿನ ಜನರು ಅನುಭವಿಸುತ್ತಿರುವ
ಸಂಕಷ್ಟ ಅವರ ಗಮನಕ್ಕೆ ಬರಲಿದೆ.
ಅಶೋಕ ನಿಕ್ಕಂ,
ನೃಪತುಂಗ ಬಡಾವಣೆ ನಿವಾಸಿ

ಪಕ್ಷದ ಇಬ್ಬರು ನಾಯಕರ ಶ್ರಮದಿಂದ ನೃಪತುಂಗ ನಗರದ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡಿದ್ದಾರೆ. ರಸ್ತೆಗಾಗಿಯೇ ಒಂದು ಕೋಟಿ ರೂ. ಬೇಡಿಕೆ ಸಲ್ಲಿಸಿದ್ದೆವು. 75 ಲಕ್ಷ ರೂ. ಅನುದಾನ ಮಂಜೂರು ಮಾಡಿದ್ದಾರೆ. ಮಳೆಗಾಲದ ನಂತರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ವಾರ್ಡ್‌ ನಿಧಿಯಲ್ಲಿ ತಾತ್ಕಾಲಿಕವಾಗಿ ಈ ರಸ್ತೆ ಸರಿಪಡಿಸಲು ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಶೀಘ್ರದಲ್ಲಿ ರಸ್ತೆ ಸಮಸ್ಯೆ ಬಗೆಹರಿಸಲಾಗುವುದು.
ಸೀಮಾ ಮೊಗಲಿಶೆಟ್ಟರ, ಪಾಲಿಕೆ ಸದಸ್ಯೆ

ಹು-ಧಾ ಹೆಸರಿಗಷ್ಟೇ ಸ್ಮಾರ್ಟ್‌ಸಿಟಿ ಆಗುತ್ತಿದೆ. ನಗರದ ಪ್ರಮುಖ ರಸ್ತೆಗಳು ಕಾಂಕ್ರಿಟ್‌, ಡಾಂಬರ್‌ ಆದರೆ ಅಭಿವೃದ್ಧಿಯಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರಕಾರ ಇರುವಾಗ ಸಣ್ಣ ಕೆಲಸ ದೊಡ್ಡದಲ್ಲ. ನಾನು ಅಧಿಕಾರದಲ್ಲಿದ್ದಾಗ ಮೆಟಲಿಂಗ್‌ ರಸ್ತೆ ಮಾಡಿಸಿದ್ದು ಬಿಟ್ಟರೆ ಡಾಂಬರ್‌ ಕಂಡಿಲ್ಲ. ಯಾವ ಸೌಲಭ್ಯಗಳು ಇಲ್ಲದ ಪ್ರದೇಶಕ್ಕೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುವ ಕೆಲಸ ಮಾಡಿದ್ದೇವೆ. ಇಂದಿನ ಸರಕಾರ ಈ ಪ್ರದೇಶವನ್ನು ಸಂಪೂರ್ಣ ನಿರ್ಲಕ್ಷಿಸಿದೆ.
ಎಂ.ಎಸ್‌. ಪಾಟೀಲ,
ಪಾಲಿಕೆ ಮಾಜಿ ಸದಸ್ಯ

*ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.