ಹಳೇಹುಬ್ಬಳ್ಳಿ ಸಂಪರ್ಕ ಮುಖ್ಯರಸ್ತೆ ತ್ರಿಶಂಕು ಸ್ಥಿತಿ

ಇದು ಸಿಸಿ ರಸ್ತೆ ಸ್ಥಿತಿಯಾದರೆ, ಅದರ ಮುಂದಿನ ರಸ್ತೆಯ ಸ್ಥಿತಿ ಮತ್ತೊಂದು ಕಥೆ ಹೇಳುತ್ತದೆ.

Team Udayavani, Nov 29, 2021, 5:39 PM IST

ಹಳೇಹುಬ್ಬಳ್ಳಿ ಸಂಪರ್ಕ ಮುಖ್ಯರಸ್ತೆ ತ್ರಿಶಂಕು ಸ್ಥಿತಿ

ಹುಬ್ಬಳ್ಳಿ: ಇಲ್ಲಿನ ನ್ಯೂ ಇಂಗ್ಲಿಷ್‌ ಶಾಲೆ ವೃತ್ತದಿಂದ ಹಳೇ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಒಂದು ಮಗ್ಗಲಿನ ದುರಸ್ತಿಯೊಂದಿಗೆ ತ್ರಿಶಂಕು ಸ್ಥಿತಿ ಅನುಭವಿಸುತ್ತಿದ್ದು, ಸಾರ್ವಜನಿಕರಿಗೂ ಸಂಕಷ್ಟ ತಂದೊಡ್ಡಿದೆ.

ನ್ಯೂ ಇಂಗ್ಲಿಷ್‌ ಶಾಲೆ ವೃತ್ತದಿಂದ ಹಳೇಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಒಂದು ಭಾಗದಲ್ಲಿ ಸಿಸಿ ರಸ್ತೆ ನಿರ್ಮಾಣವಾಗಿ ತಿಂಗಳುಗಳೇ ಗತಿಸಿದರೂ ಇನ್ನೊಂದು ಭಾಗದ ಸಿಸಿ ರಸ್ತೆ ಮಾಡದೆ ಹಾಗೇ ಬಿಡಲಾಗಿದೆ. ನ್ಯೂ ಇಂಗ್ಲಿಷ್‌ ಸ್ಕೂಲ್‌ ವೃತ್ತದಿಂದ ಕಮ್ಮಾರ ಸಾಲು ರಾಜಕಾಲುವೆ ವರೆಗೆ ಸಿಸಿ ರಸ್ತೆ ಕಾಮಗಾರಿ ಇದ್ದು, ಅದರಲ್ಲಿ ಕಳೆದ 7-8 ತಿಂಗಳ ಹಿಂದೆ ಒಂದು ಭಾಗದಲ್ಲಿ ಸಿಸಿ ರಸ್ತೆ ನಿರ್ಮಿಸಿ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

ಆದರೆ ಇನ್ನೊಂದು ಭಾಗದಲ್ಲಿ ನಿರ್ಮಿಸಬೇಕಾದ ರಸ್ತೆಯ ಸುಳಿವೇ ಇಲ್ಲದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಒಂದು ಭಾಗಕ್ಕೆ ಬೆಣ್ಣೆ, ಇನ್ನೊಂದು ಭಾಗಕ್ಕೆ ಸುಣ್ಣು ಎನ್ನುವಂತೆ ಈ ಭಾಗದ ಕಾಮಗಾರಿಯ ಸ್ಥಿತಿ ಆಗಿದೆ. ಇದನ್ನು ನೋಡಿದರೆ ಈ ಹಿಂದೆ ಇದ್ದ ರಸ್ತೆಯೇ  ಎಷ್ಟೋ ಪಾಲು ಚೆನ್ನಾಗಿತ್ತು. ಅಭಿವೃದ್ಧಿ ನೆಪದಲ್ಲಿ ಒಂದು ಭಾಗದಲ್ಲಿ ಎತ್ತರ ಇನ್ನೊಂದು ಭಾಗದಲ್ಲಿ ತಗ್ಗು ಆದಂತೆ ಇಲ್ಲಿನ ಸ್ಥಿತಿ ಆಗಿದೆ.

ಇದು ಸಿಸಿ ರಸ್ತೆ ಸ್ಥಿತಿಯಾದರೆ, ಅದರ ಮುಂದಿನ ರಸ್ತೆಯ ಸ್ಥಿತಿ ಮತ್ತೊಂದು ಕಥೆ ಹೇಳುತ್ತದೆ. ಕಸಬಾಪೇಟೆ ಪೊಲೀಸ್‌ ಠಾಣೆಯ ಮುಂಭಾಗದ ರಸ್ತೆ ತಗ್ಗು ದಿನ್ನೆಗಳಿಂದ ಕೂಡಿದ್ದು ಅದನ್ನು ಸರಿಪಡಿಸುವ ಸಣ್ಣ ಕೆಲಸವನ್ನೂ ಮಹಾನಗರ ಪಾಲಿಕೆಯವರು ಮಾಡಿಲ್ಲ ಎನ್ನುವುದು ಸ್ಥಳೀಯರ ಆರೋಪ. ಗುಂಡಿಗಳಿಗೆ ಯಾರೋ ಬಂದು ಕಟ್ಟಡ ತಾಜ್ಯ ಸುರಿದು ಮುಚ್ಚುತ್ತಾರೆ. ಈ ರಸ್ತೆ ಸುಧಾರಿಸುವುದಾದರೂ ಯಾವಾಗ ಎಂದು ಸ್ಥಳೀಕರು ಮಹಾನಗರ ಪಾಲಿಕೆ ಹಾಗೂ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ನ್ಯೂ ಇಂಗ್ಲೀಷ್‌ ಸ್ಕೂಲ್‌ ವೃತ್ತದಿಂದ ಕಮ್ಮಾರ ಸಾಲು ದೊಡ್ಡ ನಾಲಾ ವರೆಗೆ ಒಂದು ಭಾಗದಲ್ಲಿ ಸಿಸಿ ರಸ್ತೆ ನಿರ್ಮಿಸಿದ್ದು ಇನ್ನೊಂದು ಭಾಗದಲ್ಲಿ ಹಾಗೆ ಬಿಡಲಾಗಿದೆ. ಈ ಕುರಿತು ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಿ ಕೂಡಲೇ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಲಾಗುವುದು. ಇನ್ನು ಹಳೇ ಹುಬ್ಬಳ್ಳಿ ಮುಖ್ಯರಸ್ತೆಗೆ ಪ್ಯಾಚ್‌ವರ್ಕ್‌ ಕೂಡಲೇ ಆರಂಭಿಸಲಾಗುವುದು.
ಪ್ರಸಾದ ಅಬ್ಬಯ್ಯ, ಶಾಸಕ

ಈ ರಸ್ತೆಗಳು ಅನಾಥವಾಗಿವೆಯೇ ಎಂಬುದು ತಿಳಿಯುತ್ತಿಲ್ಲ. ನ್ಯೂ ಇಂಗ್ಲಿಷ್‌ ಸ್ಕೂಲ್‌ ವೃತ್ತದಿಂದ ಕಮ್ಮಾರ ಸಾಲ ರಾಜಕಾಲುವೆವರೆಗೆ ಸಿಸಿ ರಸ್ತೆ ನಿರ್ಮಿಸಬೇಕಾಗಿದ್ದು, ಕಳೆದ 7-8 ತಿಂಗಳ ಹಿಂದೆ ಒಂದು ಭಾಗದಲ್ಲಿ ಸಿಸಿ ರಸ್ತೆ ನಿರ್ಮಿಸಿ ಇನ್ನೊಂದು ಭಾಗದಲ್ಲಿ ಹಾಗೇ ಬಿಟ್ಟಿದ್ದಾರೆ. ಈ ರಸ್ತೆ ಮಾಡುತ್ತಾರೋ ಇಲ್ಲವೋ ಎನ್ನುವುದು ಗೊತ್ತಾಗುತ್ತಿಲ್ಲ. ರಸ್ತೆಯಲ್ಲಿ ಸಂಚರಿಸುವ ನಮಗೆ ನಿತ್ಯ ಸಂಕಷ್ಟ ಎನ್ನುವಂತಾಗಿದೆ.
ಎಂ.ಎ. ಪಾಷಾ, ಕಮ್ಮಾರ ಸಾಲು ನಿವಾಸಿ

ಹಳೆಹುಬ್ಬಳ್ಳಿ ಭಾಗದ ಮುಖ್ಯರಸ್ತೆಯಾಗಿರುವ ಕಸಬಾಪೇಟೆ ಮುಖ್ಯರಸ್ತೆಯ ಗುಂಡಿಗಳನ್ನು ಕಟ್ಟಡ ತ್ಯಾಜ್ಯದಿಂದ ಮುಚ್ಚಲಾಗುತ್ತಿದೆ. ಈ ಹಿಂದೆ ಒಂದು ಬಾರಿ ಗುಂಡಿ ಮುಚ್ಚುವ ಕೆಲಸ ಮಾಡಿದ್ದರು. ಆದರೆ ಅದೆಲ್ಲವೂ ಒಂದೇ ಮಳೆಗೆ ಸಂಪೂರ್ಣವಾಗಿ ಹಾಳಾಗಿ ಹೋಯಿತು. ಈ ರಸ್ತೆ ಸುಧಾರಿಸುವುದು ಯಾವಾಗ ತಿಳಿಯದಾಗಿದೆ.
ನೂರಅಹ್ಮದ್‌, ಎಂ.ಡಿ. ಕಿರಾಣಿ ಅಂಗಡಿ ಮಾಲೀಕ

*ಬಸವರಾಜ ಹೂಗಾರ

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.