ರಾಷ್ಟ್ರದಲ್ಲಿ ದೇವರನ್ನು ಕಾಣುತ್ತಿದ್ದ ಪೇಜಾವರ ಶ್ರೀ

ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳಲ್ಲಿ ದೇವ ಭಕ್ತಿ ದೇಶ ಭಕ್ತಿ ಬೇರೆ ಆಗಿರಲಿಲ್ಲ.

Team Udayavani, Nov 25, 2021, 5:22 PM IST

ರಾಷ್ಟ್ರದಲ್ಲಿ ದೇವರನ್ನು ಕಾಣುತ್ತಿದ್ದ ಪೇಜಾವರ ಶ್ರೀ

ಹುಬ್ಬಳ್ಳಿ: ಉಡುಪಿಯ ಪೇಜಾವರಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳು ದೇವರನ್ನು ರಾಷ್ಟ್ರದಲ್ಲಿ ಕಾಣುತ್ತಿದ್ದರು. ಹೀಗಾಗಿ ಅವರು ಹೋದಲ್ಲೆಲ್ಲ ರಾಷ್ಟ್ರ ದೇವೋಭವ ಎಂಬ ಉಪದೇಶ ಸಾರುತ್ತಿದ್ದರು ಎಂದು ಶ್ರೀ ಆದೋಕ್ಷಜ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳು ಹೇಳಿದರು.

ಇಲ್ಲಿನ ದೇಶಪಾಂಡೆ ನಗರದ ಶ್ರೀಕೃಷ್ಣ ಮಂದಿರದಲ್ಲಿ ಅಖಿಲ ಭಾರತ ಮಾಧ್ವ ಮಹಾಮಂಡಳ ಹುಬ್ಬಳ್ಳಿ ಶಾಖೆ ಹಾಗೂ ದಕ್ಷಿಣ ದ್ರಾವಿಡ ಬ್ರಾಹ್ಮಣ ಸಮಾಜ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪದ್ಮವಿಭೂಷಣ ಪುರಸ್ಕೃತ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರಿಗೆ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು. ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳಲ್ಲಿ ದೇವ ಭಕ್ತಿ ದೇಶ ಭಕ್ತಿ ಬೇರೆ ಆಗಿರಲಿಲ್ಲ. ಹೀಗಾಗಿ ಅವರು ರಾಷ್ಟ್ರ ದೇವೋಭವ ಎಂಬ ಘೋಷಣೆ ಮಾಡಿದ್ದರು ಎಂದು ಹೇಳಿದರು.

ನಮ್ಮ ಸೇವೆ ಕೇವಲ ಗುಡಿ-ಗುಂಡಾರಗಳಲ್ಲಿ ಪೂಜೆ ಮಾಡಿದರೆ ಸಾಲದು. ನಮ್ಮ ಸೇವೆ ಪರಿಪೂರ್ಣವಾಗಬೇಕಾದರೆ ಸಮಾಜದಲ್ಲಿ ತಿರುಗಾಡಬೇಕು. ಎಲ್ಲರಲ್ಲೂ ಭಗವಂತನನ್ನು ಆರಾಧನೆ ಮಾಡಬೇಕು.ಯಾರಿಗೂ ಕೂಡ ಹಿಂಸೆ ಆಗದಂತೆ ಸಮಾಜದಲ್ಲಿ ಬದುಕಬೇಕು. ಎಲ್ಲರೂ ಸಂತೋಷ, ಸುಖದಿಂದ ಇರಬೇಕು. ಅಂದಾಗ ಮಾತ್ರ ಅಂತಹ ಸಮಾಜದಲ್ಲಿ ಸುಖ-ಶಾಂತಿ ನೆಲೆಸಲು ಸಾಧ್ಯವೆಂದು ಶ್ರೀಗಳು ಸಮಾಜದ ಎಲ್ಲರೊಂದಿಗೆ ಬೆರೆತು ಅವರಲ್ಲಿ ಶ್ರೀಕೃಷ್ಣನನ್ನು ಕಂಡರು. ಜೀವನ ಸವೆದರು. ಅಂತಹ ಗುರುಗಳನ್ನು ಪಡೆದ ನಾವೇ ಧನ್ಯರು ಎಂದರು.

ನಮ್ಮಲ್ಲಿ ಮುಖ್ಯವಾಗಿ ಬೇಕಿದ್ದು ದೇಶ ಮತ್ತು ದೇವ ಭಕ್ತಿ. ಆದರೆ ಇಂದು ದೇವ ಮತ್ತು ದೇಶ ಭಕ್ತಿಯಿಲ್ಲ. ಕೇವಲ ದೇಹ ಭಕ್ತಿಯಿದ್ದು, ಎಲ್ಲವೂ ನನಗೆ ಬೇಕು ಎಂಬುದಾಗಿದೆ. ಶ್ರೀಗಳು ದೇಶದುದ್ದಗಲಕ್ಕೂ ಸಂಚರಿಸಿ ಸಂಘಟನೆ ಮಾಡಿ ಸಮಾಜಕ್ಕೆ ಜವಾಬ್ದಾರಿ ಕೊಟ್ಟು ನಿಭಾಯಿಸಿದರು. ಭಾರತ ಸರಕಾರ ಉಡುಪಿ ಪೇಜಾವರಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳಿಗೆ ಅವರ ವ್ಯಕ್ತಿಗತ ಗುಣ ಗುರುತಿಸಿ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದೆ ವಿನಃ ಯಾವುದೋ ಒಂದು ರಂಗದಲ್ಲಿ ಮಾಡಿದ ಸಾಧನೆಗಲ್ಲ ಎಂದರು.

ಶ್ರೀಕೃಷ್ಣ ಸಂಪಗಾಂವಕರ ಸ್ವಾಮೀಜಿ ಮಾತನಾಡಿ, ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳು ಯತಿಗಳು ಸಮಾಜದಲ್ಲಿ ಹೇಗಿರಬೇಕೆಂಬುದನ್ನು ತಮ್ಮ ಕೃತಿಗಳ ಮೂಲಕ ಮಾಡಿ ತೋರಿಸಿದರು. ಶ್ರೀಗಳು ಎಂದೂ ತಮಗಾಗಿ ಬದುಕಲಿಲ್ಲ. ಸಮಾಜದ ಸೇವೆಯಲ್ಲೆ ತಮ್ಮ ಜೀವನ ಕಳೆದರು. ಮಾದರಿ ಸಂತರಾಗಿ ಬಾಳಿದರು ಎಂದರು.

ಧಾರವಾಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಮಾತನಾಡಿ, ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳು ತಮ್ಮ ಜೀವನ ಪೂರ್ತಿ ಧಾರ್ಮಿಕ, ಸಾಮಾಜಿಕ ಕಾರ್ಯ ಮಾಡಿದರು. ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ನೀಡಿದರು ಎಂದರು. ರಾಘವೇಂದ್ರ ಎಡನೀರು ಮಾತನಾಡಿದರು.

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಗೋವಿಂದ ಜೋಶಿ, ಶ್ರೀಕಾಂತ ಕೆಮೂ¤ರ, ಎ.ಸಿ. ಗೋಪಾಲ, ವಿನಾಯಕ ಆಕಳವಾಡಿ, ಗೋಪಾಲ ಜೋಶಿ, ಕೃಷ್ಣರಾಜ ಕೆಮೂ¤ರ, ಶ್ರೀಪಾದ ಸಿಂಗನಮಲ್ಲಿ, ಅನಂತಪದ್ಮನಾಭ ಐತಾಳ, ಗುರುರಾಜ ಬಾಗಲಕೋಟ, ಡಾ|ವಿ.ಜಿ. ನಾಡಗೌಡ, ಪಂ|ಸತ್ಯಮೂರ್ತಿ ಆಚಾರ, ವಸಂತ ನಾಡಜೋಶಿ, ಶಂಕರ ಪಾಟೀಲ, ರಾಘವೇಂದ್ರ ನಂಜನಗೂಡ, ಗೋಪಾಲ ಕುಲಕರ್ಣಿ, ಶ್ರೀಧರ ವಿ.ಎನ್‌., ಮನೋಹರ ಪರ್ವತಿ ಮೊದಲಾದವರಿದ್ದರು.

ಗೀತಾ ಸೋಮೇಶ್ವರ ಪ್ರಾರ್ಥಿಸಿದರು. ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಬದರಿ ಆಚಾರ್ಯ ನಿರೂಪಿಸಿದರು. ಅನಂತರಾಜ ಭಟ್‌ ವಂದಿಸಿದರು. ಸಮಾರಂಭಕ್ಕೂ ಮೊದಲು ದೇಶಪಾಂಡೆ ನಗರದ ಬಾಳಿಗಾ ಕ್ರಾಸ್‌ನಿಂದ ಶ್ರೀಕೃಷ್ಣ ಮಂದಿರವರೆಗೆ ಪದ್ಮ ವಿಭೂಷಣ ಪ್ರಶಸ್ತಿಯೊಂದಿಗೆ ಶೋಭಾಯಾತ್ರೆ ನಡೆಯಿತು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.