ಕಾಶ್ಮೀರಕ್ಕೆ ಮರಳುವ ಪಂಡಿತರಿಗೆ ಸೂಕ್ತ ರಕ್ಷಣೆ ಅವಶ್ಯ

ಸತ್ಯವನ್ನು ಮುಚ್ಚಿಟ್ಟು ಶಾಂತಿ ಸ್ಥಾಪನೆ ಅಸಾಧ್ಯ

Team Udayavani, Apr 12, 2022, 1:37 PM IST

10

ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಭಾರತದ ಬದಲಾವಣೆಗೆ ಬರಲಿಲ್ಲ. ಭಾರತ ದುಸ್ಥಿತಿಗೆ ತಲುಪಿದೆ ಎನ್ನುವ ಕಾರಣಕ್ಕೆ ಅವರ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ್ದು, ಮೂರು ದಶಕಗಳ ಹಿಂದೆ ನರಮೇಧ ನಡೆಸಿದವರ ಮೇಲೆ ಕ್ರಮಕ್ಕೆ ಒತ್ತಾಯಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ನಟ ಹಾಗೂ ನಿರ್ದೇಶಕ ಪ್ರಕಾಶ ಬೆಳವಾಡಿ ಹೇಳಿದರು.

ಸೋಮವಾರ ಸವಾಯಿ ಗಂಧರ್ವ ಹಾಲ್‌ನಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ದಿ ಕಾಶ್ಮೀರ ಫೈಲ್ಸ್‌ ಚಿತ್ರ ಕುರಿತಾದ ಸಂವಾದದಲ್ಲಿ ಅವರು ಮಾತನಾಡಿದರು.

1971ರ ಯುದ್ಧಾನಂತರ ಬಾಂಗ್ಲಾ, ಇನ್ನೊಂದು ಸಂದರ್ಭದಲ್ಲಿ ಟಿಬೆಟಿಯನ್ನರು ಭಾರತಕ್ಕೆ ಬಂದರು. ಅವರಿಗೆ ನಿರಾಶ್ರಿತ ಕೇಂದ್ರಗಳನ್ನು ಆರಂಭಿಸಲಾಯಿತು. ವಿವಿಧ ಸೌಲಭ್ಯ ನೀಡಲಾಯಿತು. ಆದರೆ ಕಾಶ್ಮೀರಿ ಪಂಡಿತರು ಹೊರಬಂದಾಗ ಬಾಳಾಠಾಕ್ರೆ ಅವರು ಶೇ.5 ಮೀಸಲಾತಿ ನೀಡಿದರು. ಆದರೆ ಬೇರೆ ಯಾವ ರಾಜ್ಯಗಳೂ ಮನಸ್ಸು ಮಾಡಲಿಲ್ಲ. ಹಿಂದೆ ಕಳೆದುಕೊಂಡ ಆಸ್ತಿ, ಮನೆ ವಾಪಸ್‌ ಸಿಗುತ್ತದೆಯೋ ಗೊತ್ತಿಲ್ಲ. 32 ವರ್ಷದ ಹಿಂದಿನ ಹಿಂಸೆಗೆ ಸರಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ಸತ್ಯವನ್ನು ಮುಚ್ಚಿಟ್ಟು ಶಾಂತಿ ಸ್ಥಾಪಿಸಲು ಸಾಧ್ಯಕ್ಕೆ ಮರಳುವ ಪಂಡಿತರಿಗೆ ಸೂಕ್ತ ರಕ್ಷಣೆ ಸೌಲಭ್ಯ ನೀಡಬೇಕು ಎಂದರು.

ಕಾಶ್ಮೀರ ಫೈಲ್ಸ್‌ ಚಿತ್ರಕ್ಕೆ ಸುಮಾರು 30 ಕೋಟಿ ರೂ. ಖರ್ಚು ಮಾಡಲಾಗಿತ್ತು. 40 ಕೋಟಿ ರೂ. ಗಳಿಕೆ ನಿರೀಕ್ಷೆ ಇತ್ತು. ಆದರೆ 400 ಕೋಟಿ ರೂ. ಗಳಿಸುವ ಯಾವ ನಿರೀಕ್ಷೆ ಇರಲಿಲ್ಲ. ಸತ್ಯವನ್ನು ಮುಚ್ಚಿಟ್ಟು ಶಾಂತಿ ಸ್ಥಾಪಿಸಲು ಸಾಧ್ಯವಿಲ್ಲ ಎನ್ನುವುದು ಈ ಚಿತ್ರಕ್ಕೆ ಸಿಕ್ಕ ಮನ್ನಣೆ, ಜನಪ್ರಿಯತೆಯೇ ಸಾಕ್ಷಿ. ಇದು ಭಾರತದ ಗೆಲುವಾಗಿದೆ. ವಿವೇಕ ಅಗ್ನಿಹೋತ್ರಿ ಅವರು 700 ಕಾಶ್ಮೀರಿ ಪಂಡಿತರ ಕುಟುಂಬಗಳ ವಿಡಿಯೋ ಸಾಕ್ಷೀಕರಣ ಮಾಡಿ ಅದರ ಆಧಾರದ ಮೇಲೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಐದು ವರ್ಷದ ಹಿಂದೆ ವಿವೇಕ ಅಗ್ನಿಹೋತ್ರಿ ಅವರು ಸ್ಕ್ರಿಪ್ಟ್ ಕಳುಹಿಸಿದಾಗ ಇದೊಂದು ದೊಡ್ಡ ಸಾಹಸ ಎಂದು ಒಪ್ಪಿಕೊಂಡಿದ್ದೆ. ಭಾರತದಲ್ಲಿ ಅದೆಷ್ಟೋ ನಿಗೂಢ ಸಾವುಗಳು ಸಂಭವಿಸಿವೆ. ಮರೆತ ಹಾಗೂ ತಡೆಯಲಾದ ಸತ್ಯಗಳು ನಮ್ಮ ಮುಂದಿವೆ. ಅವುಗಳನ್ನು ಅರಗಿಸಿಕೊಳ್ಳುವುದು ಕಷ್ಟ ಎನ್ನಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜ್ಞಾ ಪ್ರವಾಹ ಸಂಯೋಜಕ ರಘುನಂದನ ಮಾತನಾಡಿ, ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದಾದರೆ ಏನಾಗಿಬಿಡುತ್ತದೆಯೋ ಎನ್ನುವ ಮನಸ್ಥಿತಿಯಿತ್ತು. ರದ್ದಾದ ನಂತರ ಏನೂ ಆಗಲಿಲ್ಲ. ಈ ರಾಜ್ಯವನ್ನು ಪ್ರತ್ಯೇಕ ಎಂದು ಬಿಂಬಿಸಿ ಜನರನ್ನು ನಂಬಿಸಿದ್ದರು. ಬದಲಾದ ನಂತರದಲ್ಲಿ ಅಲ್ಲಿನ ಮುಸ್ಲಿಮರು ರಾಷ್ಟ್ರಧ್ವಜ ಹಾರಿಸಿದ್ದಾರೆ. ಅಲ್ಲಿನ ಮೀಸಲಾತಿ ರದ್ದಾದ ನಂತರ ಪಾಕಿಸ್ತಾನ ಆಕ್ರಮಿತ ಭಾರತ ವಾಪಸ್‌ ಬರಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಅಲ್ಲಿನ ದೇವಸ್ಥಾನಗಳ ಮೇಲೆ ಜಿಹಾದಿಗಳು ಆಕ್ರಮಣ ಮಾಡಿದರೂ ಅದರ ಮೂಲಸ್ವರೂಪ ಉಳಿಸಿಕೊಂಡಿರುವುದು ನಮ್ಮ ಸೈನಿಕರು ಎಂದರು.

ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ| ಮಲ್ಲಿಕಾರ್ಜುನ ಬಾಳಿಕಾಯಿ ಅವರು ಸಂವಾದ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.