ಹಣ-ಅಧಿಕಾರಕ್ಕಿಂತ ಉತ್ಸವ-ಹಬ್ಬಗಳಿಂದ ಸಂತಸ; ರಾಜಯೋಗೀಂದ್ರ ಮಹಾಸ್ವಾಮಿ

ಹಬ್ಬ, ಉತ್ಸವಗಳು ಸಂಸ್ಕೃತಿಯೊಂದಿಗೆ ಜೋಡಿಸುವುದಾಗಿದೆ

Team Udayavani, Mar 30, 2023, 12:11 PM IST

ಹಣ-ಅಧಿಕಾರಕ್ಕಿಂತ ಉತ್ಸವ-ಹಬ್ಬಗಳಿಂದ ಸಂತಸ; ರಾಜಯೋಗೀಂದ್ರ ಮಹಾಸ್ವಾಮಿ

ಹುಬ್ಬಳ್ಳಿ: ಮನುಷ್ಯನಿಗೆ ಹಣ, ಅಧಿಕಾರಕ್ಕಿಂತ ನಮ್ಮ ಸಂಸ್ಕೃತಿ ಸಾರುವ ಉತ್ಸವ-ಹಬ್ಬ-ಕ್ರೀಡೆಗಳು ಬಹಳ ಖುಷಿ-ಸಂತಸ ನೀಡುತ್ತವೆ ಎಂದು ಮೂರುಸಾವಿರ ಮಠದ ಜಗದ್ಗುರು ಡಾ|ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು ಹೇಳಿದರು.

ಇಲ್ಲಿನ ಗೋಕುಲ ರಸ್ತೆಯ ಹೊಟೇಲ್‌ವೊಂದರಲ್ಲಿ ಹುಬ್ಬಳ್ಳಿ ಜಗ್ಗಲಗಿ ಹಬ್ಬ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಜಗ್ಗಲಗಿ ಹಬ್ಬ ಆಚರಿಸುವ ವಿಚಾರ ಮಹೇಶ ಟೆಂಗಿನಕಾಯಿ ಮನದಾಳದಲ್ಲಿ ಬಂದಿದ್ದು ವಿಶೇಷ. ಕಳೆದ 9 ವರ್ಷಗಳಿಂದ ಜಗ್ಗಲಗಿ ಹಬ್ಬ ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿರುವ ಅವರು ನಗರಕ್ಕೆ ಐತಿಹಾಸಿಕ ಸಂದರ್ಭ ತಂದು ಕೊಟ್ಟಿದ್ದಾರೆ. ಇದು ಈಗಾಗಲೇ ಕನ್ನಡ ನಾಡಿನ ಗಮನ ಸೆಳೆದಿದ್ದು, ಮುಂದೆ ಇಡೀ ದೇಶದ ಗಮನ ಸೆಳೆಯಲಿದೆ. ಜಗ್ಗಲಗಿ ಹಬ್ಬ ವೈವಿಧ್ಯತೆಯ ಮೆರಗು ತರಲಿ. ಮುಂದಿನ ವರ್ಷ ಮಹೇಶ ಟೆಂಗಿನಕಾಯಿ ಶಾಸಕರಾಗಿ ಹಬ್ಬ ಆಚರಿಸುವಂತಾಗಲಿ ಎಂದು ಹಾರೈಸಿದರು.

ಉದ್ಯಮಿ ಎಚ್‌.ಎನ್‌. ನಂದಕುಮಾರ ಮಾತನಾಡಿ, ಸಂಸ್ಕೃತಿ ಉಳಿದುಕೊಂಡು ಹೋಗಬೇಕಾದರೆ ಅದರ ಸತ್ವ ಇರಬೇಕು. ಇಂದಿಗೂ ಭಾರತೀಯ ಸಂಸ್ಕೃತಿ ಉಳಿದಿದ್ದೆ ಹಬ್ಬಗಳ ಆಚರಣೆಯಿಂದ. ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ, ಪ್ರಧಾನಿ ಮೋದಿ ಭಾರತೀಯ ಸಂಸ್ಕೃತಿಯ ಆರಾಧಕರಾಗಿದ್ದಾರೆ. ವಿಶ್ವದಲ್ಲಿ ಭಾರತೀಯತೆ ಹಾಗೂ ಸಂಸ್ಕೃತಿಯನ್ನು ಅತ್ಯುನ್ನತ ಮಟ್ಟಕ್ಕೆ ಪ್ರಧಾನಿ ಮೋದಿ ತೆಗೆದುಕೊಂಡು ಹೋಗಿದ್ದಾರೆ.

ಜಗ್ಗಲಗಿ ಹಬ್ಬ ಭಾರತೀಯ ಪರಂಪರೆ, ಸಂಸ್ಕೃತಿಯ ಪ್ರತೀಕ. ಇದನ್ನು ಆಯೋಜಕ ಮಹೇಶ ಟೆಂಗಿನಕಾಯಿ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈ ಹಬ್ಬ ವರ್ಷದಿಂದ ವರ್ಷಕ್ಕೆ ವೈಭವದಿಂದ ನಡೆಯುತ್ತಿದೆ. ಹಬ್ಬ, ಉತ್ಸವಗಳು ಸಂಸ್ಕೃತಿಯೊಂದಿಗೆ ಜೋಡಿಸುವುದಾಗಿದೆ ಎಂದರು.

ಲೆಕ್ಕ ಪರಿಶೋಧಕ ಡಾ|ಎನ್‌.ಎ. ಚರಂತಿಮಠ ಮಾತನಾಡಿ, ಹಬ್ಬ, ಉತ್ಸವಗಳ ಸಂಯೋಜನೆ ಹೆಚ್ಚಾಗಬೇಕು. ಆಗ ನಾವೆಲ್ಲ ಸ್ನೇಹಜೀವಿಗಳಾಗಲು, ವಸುದೇವ ಕುಟುಂಬಕಂ ರೀತಿ ಬಾಳಲು ಸಾಧ್ಯ. ಎಲ್ಲರೂ ಒಂದುಗೂಡಿ ಸಾಗಿದಾಗ ಮಾತ್ರ ನಮ್ಮ ಆಲೋಚನೆಗಳು ಸಾಕಾರಗೊಳ್ಳುತ್ತವೆ ಎಂದರು.

ಹುಬ್ಬಳ್ಳಿ ಜಗ್ಗಲಗಿ ಹಬ್ಬ ಆಯೋಜಕ ಮಹೇಶ ಟೆಂಗಿನಕಾಯಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಹಬ್ಬಗಳ ಆಚರಣೆ ನಶಿಸುತ್ತಲಿವೆ. ಮುಂದಿನ ಪೀಳಿಗೆಗೆ ಉಳಿಸಿ ಪರಿಚಯಿಸುವ ಸಲುವಾಗಿ ಪಕ್ಷಾತೀತವಾಗಿ ಜಗ್ಗಲಗಿ ಹಬ್ಬ ಆಚರಿಸಲಾಗುತ್ತಿದೆ. ಪ್ರತಿವರ್ಷ ಎಲ್ಲ ಸಮಾಜದವರು ತನು, ಮನ, ಧನದಿಂದ ಸಹಾಯ- ಸಹಕಾರ ಮಾಡುತ್ತ ಹಬ್ಬದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರತಿವರ್ಷ 40ಕ್ಕೂ ಹೆಚ್ಚು ಕಲಾ ತಂಡದವರು ಯಾವುದೇ ಅಪೇಕ್ಷೆ ಇಲ್ಲದೆ ಭಾಗವಹಿಸುತ್ತಿದ್ದಾರೆ. ಹೀಗಾಗಿ ಹಬ್ಬಕ್ಕೆ ವರ್ಷದಿಂದ ವರ್ಷಕ್ಕೆ ಹೊಸ ಮೆರಗು-ಸೊಬಗು ಬರುತ್ತಿದೆ ಎಂದರು.

ಶ್ರೀಗಳು ಜಗ್ಗಲಗಿ ಹಬ್ಬದಲ್ಲಿ ಪಾಲ್ಗೊಂಡಿದ್ದ ವಿವಿಧ ತಂಡಗಳ ಕಲಾವಿದರನ್ನು ಸನ್ಮಾನಿಸಿದರು. ಮಾಜಿ ಶಾಸಕ ಅಶೋಕ ಕಾಟವೆ, ಬಿಜೆಪಿ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ, ಮಹೇಂದ್ರ ಸಿಂಘಿ, ರಮೇಶ ಪಾಟೀಲ, ದತ್ತಮೂರ್ತಿ ಕುಲಕರ್ಣಿ, ಶಿವಾನಂದ ಮುತ್ತಣ್ಣವರ, ವೀರೇಶ ಸಂಗಳದ ಮೊದಲಾದವರಿದ್ದರು. ಸತೀಶ ಶೇಜವಾಡಕರ ಪ್ರಾಸ್ತಾವಿಕ ಮಾತನಾಡಿದರು. ಜಗದೀಶ ಬುಳ್ಳಾನವರ ನಿರೂಪಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.