ಮನೆ ಬಾಗಿಲಿಗೆ ಪಾಲಿಕೆ ಆಡಳಿತಕ್ಕೆ ಆದ್ಯತೆ


Team Udayavani, May 29, 2022, 9:54 AM IST

2

ಹುಬ್ಬಳ್ಳಿ: ಅವಳಿನಗರದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ಜತೆಗೆ ಮಹಾನಗರ ಪಾಲಿಕೆ ಆಡಳಿತವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ನೂತನ ಮಹಾಪೌರ ಈರೇಶ ಅಂಚಟಗೇರಿ ತಿಳಿಸಿದರು.

ನೂತನ ಮಹಾಪೌರರಾಗಿ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಪಾಲಿಕೆಯಲ್ಲಿ ಚುನಾಯಿತ ಆಡಳಿತ ಮಂಡಳಿ ಇಲ್ಲವಾಗಿದ್ದು, ಇದೀಗ ಅಸ್ತಿತ್ವಕ್ಕೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಸುಂದರ ಮಹಾನಗರ ರೂಪಿಸಲು ಒತ್ತು ನೀಡಲಾಗುವುದು. ಮಹಾನಗರ ಜನರ ಆಶೋತ್ತರಗಳನ್ನು ಈಡೇರಿಸುವ ಹಾಗೂ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಆದ್ಯತೆ ನೀಡಲಾಗುವುದು. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವೆ. ಮಹಾನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ನಿಟ್ಟಿನಲ್ಲಿ ಎಲ್ಲ ಚುನಾಯಿತ ಪ್ರತಿನಿಧಿಗಳ ಸಭೆ ಕರೆದು ಚರ್ಚಿಸುತ್ತೇನೆ ಎಂದರು.

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಡಿಕೆ ನಿಟ್ಟಿನಲ್ಲಿ ಹೋರಾಟಗಾರರೊಂದಿಗೆ ಚರ್ಚಿಸುತ್ತೇನೆ. ಪ್ರತ್ಯೇಕ ಪಾಲಿಕೆ ವಿಚಾರದಲ್ಲಿ ಪಕ್ಷದ ನಿಲುವು ನನ್ನ ನಿಲುವಾಗಿದೆ. ಧಾರವಾಡಕ್ಕೆ ಅನ್ಯಾಯವಾಗಿದೆ ಎಂಬುದು ಹಲವರ ಅನಿಸಿಕೆಯಾಗಿದ್ದು, ಆದನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಉಪ ಮಹಾಪೌರ ಉಮಾ ಮುಕುಂದ ಇದ್ದರು.

ಭ್ರಷ್ಟಾಚಾರ ಕಡಿವಾಣಕ್ಕೆ ಕ್ರಮ: ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ಕುರಿತಾಗಿ ಸಾಕಷ್ಟು ದೂರುಗಳು ಇವೆ. ಇವುಗಳ ಬಗ್ಗೆ ಗಮನ ಹರಿಸುವುದಲ್ಲದೆ, ಭ್ರಷ್ಟಾಚಾರ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಮಹಾಪೌರ ಈರೇಶ ಅಂಚಟಗೇರಿ ಹೇಳಿದರು.

ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಬಗ್ಗೆ ಜನರಿಂದ ದೂರು-ಅನಿಸಿಕೆಗಳಿವೆ. ಅವನ್ನು ನಿವಾರಿಸುವ ಮೂಲಕ ಉತ್ತಮ ಹಾಗೂ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲಾಗುವುದು. ಪಾಲಿಕೆಯ ಉತ್ತಮ ಆಡಳಿತದ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ಕಾರ್ಯಕ್ಕೆ ಒತ್ತು ನೀಡುವುದಾಗಿ ತಿಳಿಸಿದರು.

ಅಂಚಟಗೇರಿ ಹೆಜ್ಜೆಗುರುತು ಧಾರವಾಡ: ಬೆಳಗಾವಿಯ ಲಿಂಗಾಯತ ನೇಕಾರ ಸಮಾಜದ ಮನೆತನದಲ್ಲಿ 1971 ಜ. 9ರಂದು ಜನಿಸಿದ ಈರೇಶ ಅಂಚಟಗೇರಿ ಅವರು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣವನ್ನು ಧಾರವಾಡದಲ್ಲಿಯೇ ಪೂರೈಸಿದ್ದಾರೆ.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ರಾಜಕೀಯ ಶಾಸ್ತ್ರದಲ್ಲಿ ಪದವಿ ಪಡೆದಿದ್ದು, ಸಣ್ಣ ಕೈಗಾರಿಕೋದ್ಯಮಿಯಾಗಿ ಆ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಗುರುತಿಸಿಕೊಂಡಿದ್ದಾರೆ. ಇದಲ್ಲದೇ ಸಮಾಜ ಸೇವೆ ಮಾಡಲು ಹು-ಧಾ ಮಹಾನಗರ ಪಾಲಿಕೆಯ 4ನೇ ವಾರ್ಡ್‌ನಿಂದ ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ. ಇದರ ಜತೆಗೆ ಪ್ರಸ್ತುತ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆ, ಕರ್ನಾಟಕ ಪ್ರಾಂತ ಧಾರವಾಡ ಸಂಸ್ಥೆಯ ಚೇರ್‌ ಮನ್‌ ಹುದ್ದೆಯಲ್ಲಿದ್ದಾರೆ.

1991-1994ರ ಅವಧಿಯಲ್ಲಿ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದು, 1994-1996ರ ಅವಧಿಯಲ್ಲಿ ಬಿಜೆಪಿಯ ಧಾರವಾಡ ನಗರ ಯುವ ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. 1996-1999ರ ಅವಧಿಯಲ್ಲಿ ಬಿಜೆಪಿ ಧಾರವಾಡ ನಗರ ಘಟಕದ ಕಾರ್ಯದರ್ಶಿ, 1999-2002ರ ಅವಧಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2009-2012ರ ಅವಧಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ, 2012-2016ರ ಅವಧಿಯಲ್ಲಿ ಬಿಜೆಪಿ ರಾಜ್ಯ ಸ್ಲಂ ಮೋರ್ಚಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿರುವ ಅಂಚಟಗೇರಿ, 2020ನೇ ಸಾಲಿನಿಂದ ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯನಿರ್ವಾಹಕ ಸದಸ್ಯರಾಗಿದ್ದಾರೆ.

ಇನ್ನು 2001-2006ರ ಅವಧಿಯಲ್ಲಿ ಹು-ಧಾ ಮಹಾನಗರ ಪಾಲಿಕೆಯ 4ನೇ ವಾರ್ಡಿನ ಚುನಾಯಿತ ಸದಸ್ಯರಾಗಿ ಮೊದಲ ಬಾರಿ ಪಾಲಿಕೆ ಪ್ರವೇಶ ಪಡೆದರು. 2007 ರಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ ಮೀಸಲಾತಿ ಬದಲಾದ ಕಾರಣ 5ನೇ ವಾರ್ಡಿನಿಂದ ತಮ್ಮ ತಾಯಿ ಅವರನ್ನು ಗೆಲ್ಲಿಸಿದ್ದರು.

ಇದೀಗ ಮತ್ತೆ 4ನೇ ವಾರ್ಡಿನ ಸದಸ್ಯರಾಗಿ ಆಯ್ಕೆಗೊಂಡು ಮೇಯರ್‌ ಕೂಡ ಆಗಿದ್ದಾರೆ. ನವದೆಹಲಿಯ ಭಾರತ ಸರಕಾರದ ನೆಹರು ಯುವ ಕೇಂದ್ರದಿಂದ ಜಿಲ್ಲಾ ಯುವ ಪ್ರಶಸ್ತಿ-2004 ನೀಡಲಾಗಿದ್ದು, ಲಿಂಗಾಯತ ನೇಕಾರ ಸಮಾಜದ ಉಪಾಧ್ಯಕ್ಷರಾಗಿದ್ದಾರೆ. ಓಂ ಸಾಯಿ ಸ್ಟೋಟ್ಸ್‌ ಕ್ಲಬ್‌ ಅಧ್ಯಕ್ಷ, ಜಿಲ್ಲಾ ಒಲಿಂಪಿಕ್ಸ್‌ ಅಸೋಸಿಯೇಷನ್‌ ಉಪಾಧ್ಯಕ್ಷ ಹಾಗೂ ಜಿಲ್ಲಾ ಹ್ಯಾಂಡ್‌ಬಾಲ್‌ ಸಂಸ್ಥೆಯ ಉಪಾಧ್ಯಕ್ಷರಾಗಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.